Homeಅಂಕಣಗಳುದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

ದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

- Advertisement -
- Advertisement -

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅಮಾನತುರದ್ದಾಗಿದೆ. ಬರೋಬ್ಬರಿ ಒಂದು ದಶಕ ನಡೆದ ಕುಸ್ತಿಯಲ್ಲಿ ಈ ಜಟ್ಟಿ ಜಯಗಳಿಸಿದ್ದಾರಲ್ಲಾ.

ಅಗ್ರಹಾರದಿಂದ ಬಂದವನಿರಬೇಕು; ಗೋದಿ ಮುದ್ದೆಯಂತಿದ್ದ ಆಕಾರ ಬೇರೆ; ಕೃಷ್ಣಮೂರ್ತಿ ಹೆಸರು, ಈತ ಭೂಸುರೋತ್ತಮನಾದ ವಿಪ್ರನೇ ಇರಬೇಕು ಎಂದು ನಮ್ಮ ಜಾತಿ ಮನಸ್ಸುಗಳಿಗೆ ಸಾಕ್ಷಿಯೊದಗಿಸಿತ್ತು. ಆಗ ನಮಗೆ ಅಗ್ರಹಾರಗಳನ್ನ ಕಂಡರೆ ಆಗುತ್ತಿರಲಿಲ್ಲ. ನಮಗೇ ಏನು, ನಾಯಿ ಹಂದಿಗಳಿಗೂ ಹಿಡಿಸುತ್ತಿರಲಿಲ್ಲ. ಕಾರಣ ಅಲ್ಲಿನ ಅಂಗಳದಲ್ಲಿ ಯಾವ ಮೂಳೆಯೂ ಸಿಗುತ್ತಿರಲಿಲ್ಲ. ಇನ್ನ ಹಂದಿಗಳಿಗಂತೂ ತೊಳೆದು ಎಸೆದಂತಹ ಇಸ್ತ್ರಿ ಎಲೆಯಿಂದ ಏನೂ ಪ್ರಯೋಜನವಾಗದೆ ವಾಪಸ್ಸು ಬರುತ್ತಿದ್ದವು. ಇಂತಹ ನಮ್ಮ ಪೂರ್ವಾಗ್ರಹದ ಕಾಲದಲ್ಲಿ ಲಂಕೇಶರ ಎದುರು ಪ್ರಕಾಶ್ ಬೆಳವಾಡಿಯಿಂದ ಹಿಡಿದು ಮಹಾಬಲ, ಸತ್ಯ, ಸದಾಶಿವ ಇವರೆಲ್ಲ ಕುಳಿತು ಬ್ರಾಹ್ಮಣದ ಟೀಕೆಯನ್ನು ಅನುಮಾನ ಬರದಂತೆ ಸಹಿಸಿಕೊಳ್ಳುತ್ತಿದ್ದರು. ಅಂತವರ ಪೈಕಿ ಅಗ್ರಹಾರದ ಕೃಷ್ಣಮೂರ್ತಿಯೂ ಎಂದು ನಂಬಿದ್ದೆವು. ಲಂಕೇಶರ ವಿಶೇಷ ಪ್ರೀತಿಗೆ ಪಾತ್ರವಾಗಿ ನಮ್ಮಲ್ಲೊಂದಿಷ್ಟು ಅಸಹನೆ ಮೂಡುತ್ತಿರುವಾಗಲೆ ಕೃಷ್ಣಮೂರ್ತಿ ಅಗ್ರಹಾರದಿಂದ ಬಂದ ಅಸಾಮಿಯಲ್ಲ, ಅರಮನೆ ಎದುರು ಮಹಾರಾಜರ ಸಮ್ಮುಖದಲ್ಲಿ ಮುಷ್ಠಿಯಿಂದ ಎದುರಾಳಿಯ ವಿರುದ್ಧ ಹೋರಾಡುವವರೆಂದು ಗೊತ್ತಾಗಿ ಹೋಯ್ತಲ್ಲಾ, ಥೂತ್ತೇರಿ.

*****

ಉನ್ನತ ಸ್ಥಾನಕ್ಕೆ ಹೋದಮೇಲೂ ವಿಪ್ರೋತ್ತಮರು ತಾವು ತಯಾರಾದ ಅಗ್ರಹಾರಕ್ಕೆ ಬಂದು ಹೋಗುವಂತೆ ಕೃಷ್ಣಮೂರ್ತಿ ಲಂಕೇಶರ ವಟಾರಕ್ಕೆ ಬಂದು ಹೋಗುತ್ತಿದ್ದರು. ಆಗ ಚೆನೈನಲ್ಲಿದ್ದ ಪ್ರಾದೇಶಿಕ ಕೇಂದ್ರ ಸಾಹಿತ್ಯ ಅಕಾಡೆಮಿ ಕಚೇರಿಯನ್ನ ಬೆಂಗಳೂರಿಗೆ ತಂದರು. ಸಾಹಿತ್ಯ ಪರಿಷತ್ ಕಾರ್ಯಕ್ರಮಗಳಿಗೆ ಹಣ ಕೊಟ್ಟರು, ಪುಸ್ತಕ ಕೊಟ್ಟರು. ಜರಗನಹಳ್ಳಿ ಶಿವಶಂಕರ್, ಲಂಕೇಶ್ ಶಿಷ್ಯ ದಳವಾಯಿಗೆ ಅಕಾಡೆಮಿ ಪುಸ್ತಕ ಕೊಟ್ಟರು. ದಳವಾಯಿಯಂತೂ ಹೋದವನು ಮತ್ತೆ ಬರಲೇ ಇಲ್ಲ. ತಮ್ಮ ಭಾಷೆ ಮತ್ತು ಪ್ರಾದೇಶಿಕ ಕಾಳಜಿಯ ಬಗ್ಗೆ ಪಕ್ಷಪಾತದ ಆಪಾದನೆ ಬಂದು ಅಗ್ರಹಾರ ತನಿಖೆ ಎದುರಿಸುವ ಸಮಯದಲ್ಲಿ ಫಲಾನುಭವಿಗಳ್ಯಾರೂ ಸಹಾಯಕ್ಕೆ ಬರಲಿಲ್ಲ. ತನಿಖಾಧಿಕಾರಿಗಳಿಗೆ ಒಂದು ಮನವಿಯನ್ನೂ ಕೊಡಲಿಲ್ಲ. ಇಂತಹ ಸಮಯದಲ್ಲಿ ಕವಿ ಸಿ.ಪ.ಶೆಟ್ಟಿಯ ಹಠದಿಂದಾಗಿ ಅಗ್ರಹಾರ ಅಮಾನತುಗೊಂಡರಂತಲ್ಲಾ, ಥೂತ್ತೇರಿ.

*****

ಕನ್ನಡದ ಕೆಲಸಕ್ಕಾಗಿ ಕನ್ನಡಿಗನಿಂದಲೇ ತೊಂದರೆಗೆ ಸಿಕ್ಕಿಕೊಂಡ ಅಗ್ರಹಾರ ಈ ಒಂದು ದಶಕದಲ್ಲಿ ಅರಾಮವಾಗಿಯೇ ಇದ್ದರು. ಪ್ರೆಸ್‌ಕ್ಲಬ್ಬಿನ ಗೆಳೆಯರ ಪಾರ್ಟಿಯ ಬಿಲ್ಲನ್ನು ತಾವೇ ಕೊಡುತ್ತಿದ್ದರು. ನಿವೃತ್ತಿಯ ಸವಲತ್ತುಗಳು ಸಿಗದಿದ್ದರೂ ಬೇಸರ ಮಾಡಿಕೊಳ್ಳದೆ ನಾನೊಬ್ಬ ಕಳಂಕ ಹೊತ್ತವನೆಂದು ಅರಾಮವಾಗಿಯೇ ಹೇಳುತ್ತಿದ್ದರು. ಈ ಜಟ್ಟಿಯ ವಿರುದ್ಧ ಹಠ ಸಾಧಿಸಿದ ಸಿ.ಪ.ಶೆಟ್ಟಿಯ ಒಂದು ಪ್ರಸಂಗ ಹೇಳುವುದಾದರೆ ನಮ್ಮ ಸಂಸ್ಕೃತಿ ಮತ್ತು ರಾಜಕಾರಣದ ನಡುವಿನ ಸೇತುವೆಯಂತಿದ್ದ ಎಂ.ಪಿ. ಪ್ರಕಾಶ್ ಅವರು ಸಿ.ಪ.ಶೆಟ್ಟರ ಕವಿತ್ವಕ್ಕೆ ಮಾರುಹೋಗಿ ಹೂವಿನಡಗಲಿಗೆ ಕರೆದು ಸನ್ಮಾನ ಮಾಡಿದರು. ಜರಿಪೇಟ ಜಗಮಗಿಸುವ ಶಾಲು ಪರಿಮಳ ಭರಿತ ಹಾರ ಹಾಕಿಸಿಕೊಂಡ ಸಿ.ಪ.ಶೆಟ್ಟಿ ’ಈ ಸನ್ಮಾನದ ಗೌರವ ಏನದಾವಲ್ಲ ಇವು ಭಾಳ ವೆಚ್ಚದವು, ಅದಕ ನಾನು ಈ ಸಭೆ ಮುಗಿಯೂ ಮಟ್ಟ ಇವನ್ನ ತೆಗೆಯೂದಿಲ್ಲ, ಹಾಗೇ ಕುಂದರತೀನಿ’ ಎಂದು ಹಾಗೇ ಕುಂತರು. ಆದರೆ ಅವರ ಅಕ್ಕಪಕ್ಕದಲ್ಲಿದ್ದ ಗೌರವಾನ್ವಿತರು ಹಾಗೆ ಮಾಡದೆ ಸನ್ಮಾನಕ್ಕೆ ಗೌರವ ತೋರಿದರು. ಸಭೆ ಗಂಟೆಗಟ್ಟಲೆ ಮುಂದುವರಿದಾಗ ಸಿ.ಪ.ಶೆಟ್ಟರು ಹಾಸ್ಯಸ್ಪದ ವ್ಯಕ್ತಿಯಂತೆ ಕಂಡರಂತಲ್ಲಾ, ಥೂತ್ತೇರಿ.

*****

ಈಗ ಕಾಲ ಬದಲಾಗಿದೆ. ಮುಂದೆ ಅಗ್ರಹಾರನಂತಹ ಕಾರ್ಯದರ್ಶಿ ಸಿ.ಪ.ಶೆಟ್ಟಿಯಂತಹ ಕವಿ ಎಲ್ಲವೂ ಅಪ್ರಸ್ತುತವಾಗಿರುವಂತಹ ಪ್ರಳಯ ಅರಂಭಗೊಂಡಿದೆಯಂತಲ್ಲಾ. ಈವರೆಗಿನ ಕನ್ನಡ ಸಾಹಿತ್ಯಕ್ಕೆ ಬದಲು ರಾಷ್ಟ್ರೋತ್ಥಾನ ಸಾಹಿತ್ಯ ಕನ್ನಡಿಗರ ಮೇಲೆ ಹೇರುವ ಸೂಚನೆಯಾಗಿ, ನಮ್ಮ ಮಕ್ಕಳು ಓದುವ ಪಠ್ಯ ಪುಸ್ತಕದೊಳಕ್ಕೆ ಹೆಡಗೇವಾರ್, ಗೋಳವಲ್‌ಕರ್, ದೀನದಯಾಳು, ಹೊ.ವೆ. ಶೇಷಾದ್ರಿ, ಸಾವರ್ಕರ್ ಸೇರಲಿದ್ದಾರಂತಲ್ಲಾ. ಇದು ಹಾಳುಬಿದ್ದು ಹೋಗಲಿ, ಲಂಕೇಶ್ ನಮ್ಮವರು ಎಂದು ಜಗಳ ಮಾಡುತ್ತಿದ್ದ ಅವರ ಒಂದು ಬಳಗ ಲಂಕೇಶರ ಪಾಠವನ್ನೆ ಕೈಬಿಟ್ಟ ಲಾಟಿ ವೀರರ ಬಗ್ಗೆ ಚಕಾರವೆತ್ತಿಲ್ಲವಂತಲ್ಲಾ. ಇದಕ್ಕೂ ಕಾರಣವಿದೆ. ಲಂಕೇಶ್ ಎಂದೂ ತನ್ನ ಜಾತಿ ಬಗ್ಗೆ ಹೇಳಿಕೊಳ್ಳಲಿಲ್ಲ, ಸ್ವಜಾತಿಯವರಿಗೆ ಸಹಾಯ ಮಾಡಲಿಲ್ಲ, ಹತ್ತಿರವೂ ಸೇರಿಸಲಿಲ್ಲ. ಅದ್ದರಿಂದ ಇವರ ಮೌನ ಸಹಜವಾದುದೆ. ಆದರೆ ಲಂಕೇಶ್ ಸೃಷ್ಟಿಸಿ ಹೋಗಿದ್ದ ಜನ ಈಗ ಮೌನಿಗಳಾಗಿರುವ ಬಗ್ಗೆ ಕೇಳಿದಾಗ “ನೋಡ್ರಿ ಹೆಡಗೆವಾರಲ್ಲ, ಪೆಟ್ಟಿಗೆವಾರನ್ನ ಪಠ್ಯಕ್ಕೆ ಸೇರಿಸಿದರೂ ಏನೂ ಆಗಲ್ಲ. 1969-70ನೇ ಇಸವಿಲಿ ಸರ್ ಎಂ. ವಿಶ್ವೇಶ್ವರಯ್ಯನವರ ಬಗ್ಗೆ ಎರಡೂ ವರ್ಷ ಪಠ್ಯ ಪುಸ್ತಕ ಮಾಡಿದ್ರು, ಏನಾಯ್ತು ಯಾವನಾದ್ರು ಒಬ್ಬ ಇಂಜಿನಿಯರ್ ಬಂದನೇ? ವಿಶ್ವೇಶ್ವರಯ್ಯನವರ ವಿಷಯ ಹೇಳುನೂ, ಅಂಗೆ ಈ ಹೆಡಗೆವಾರ್ ಲಾಟಿ ಲಡ್ಡಿದದು ಹೋಗುತ್ತೆ” ಎಂದರಲ್ಲಾ ಥೂತ್ತೇರಿ.


ಇದನ್ನೂ ಓದಿ:  ಎರಡೂವರೆ ಸಾವಿರ ಕೋಟಿ ಹುಣಸಿ ಪಿಕ್ಕ ಅನಕೊಂಡಿರೇನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...