Homeಅಂಕಣಗಳುದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

ದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

- Advertisement -
- Advertisement -

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅಮಾನತುರದ್ದಾಗಿದೆ. ಬರೋಬ್ಬರಿ ಒಂದು ದಶಕ ನಡೆದ ಕುಸ್ತಿಯಲ್ಲಿ ಈ ಜಟ್ಟಿ ಜಯಗಳಿಸಿದ್ದಾರಲ್ಲಾ.

ಅಗ್ರಹಾರದಿಂದ ಬಂದವನಿರಬೇಕು; ಗೋದಿ ಮುದ್ದೆಯಂತಿದ್ದ ಆಕಾರ ಬೇರೆ; ಕೃಷ್ಣಮೂರ್ತಿ ಹೆಸರು, ಈತ ಭೂಸುರೋತ್ತಮನಾದ ವಿಪ್ರನೇ ಇರಬೇಕು ಎಂದು ನಮ್ಮ ಜಾತಿ ಮನಸ್ಸುಗಳಿಗೆ ಸಾಕ್ಷಿಯೊದಗಿಸಿತ್ತು. ಆಗ ನಮಗೆ ಅಗ್ರಹಾರಗಳನ್ನ ಕಂಡರೆ ಆಗುತ್ತಿರಲಿಲ್ಲ. ನಮಗೇ ಏನು, ನಾಯಿ ಹಂದಿಗಳಿಗೂ ಹಿಡಿಸುತ್ತಿರಲಿಲ್ಲ. ಕಾರಣ ಅಲ್ಲಿನ ಅಂಗಳದಲ್ಲಿ ಯಾವ ಮೂಳೆಯೂ ಸಿಗುತ್ತಿರಲಿಲ್ಲ. ಇನ್ನ ಹಂದಿಗಳಿಗಂತೂ ತೊಳೆದು ಎಸೆದಂತಹ ಇಸ್ತ್ರಿ ಎಲೆಯಿಂದ ಏನೂ ಪ್ರಯೋಜನವಾಗದೆ ವಾಪಸ್ಸು ಬರುತ್ತಿದ್ದವು. ಇಂತಹ ನಮ್ಮ ಪೂರ್ವಾಗ್ರಹದ ಕಾಲದಲ್ಲಿ ಲಂಕೇಶರ ಎದುರು ಪ್ರಕಾಶ್ ಬೆಳವಾಡಿಯಿಂದ ಹಿಡಿದು ಮಹಾಬಲ, ಸತ್ಯ, ಸದಾಶಿವ ಇವರೆಲ್ಲ ಕುಳಿತು ಬ್ರಾಹ್ಮಣದ ಟೀಕೆಯನ್ನು ಅನುಮಾನ ಬರದಂತೆ ಸಹಿಸಿಕೊಳ್ಳುತ್ತಿದ್ದರು. ಅಂತವರ ಪೈಕಿ ಅಗ್ರಹಾರದ ಕೃಷ್ಣಮೂರ್ತಿಯೂ ಎಂದು ನಂಬಿದ್ದೆವು. ಲಂಕೇಶರ ವಿಶೇಷ ಪ್ರೀತಿಗೆ ಪಾತ್ರವಾಗಿ ನಮ್ಮಲ್ಲೊಂದಿಷ್ಟು ಅಸಹನೆ ಮೂಡುತ್ತಿರುವಾಗಲೆ ಕೃಷ್ಣಮೂರ್ತಿ ಅಗ್ರಹಾರದಿಂದ ಬಂದ ಅಸಾಮಿಯಲ್ಲ, ಅರಮನೆ ಎದುರು ಮಹಾರಾಜರ ಸಮ್ಮುಖದಲ್ಲಿ ಮುಷ್ಠಿಯಿಂದ ಎದುರಾಳಿಯ ವಿರುದ್ಧ ಹೋರಾಡುವವರೆಂದು ಗೊತ್ತಾಗಿ ಹೋಯ್ತಲ್ಲಾ, ಥೂತ್ತೇರಿ.

*****

ಉನ್ನತ ಸ್ಥಾನಕ್ಕೆ ಹೋದಮೇಲೂ ವಿಪ್ರೋತ್ತಮರು ತಾವು ತಯಾರಾದ ಅಗ್ರಹಾರಕ್ಕೆ ಬಂದು ಹೋಗುವಂತೆ ಕೃಷ್ಣಮೂರ್ತಿ ಲಂಕೇಶರ ವಟಾರಕ್ಕೆ ಬಂದು ಹೋಗುತ್ತಿದ್ದರು. ಆಗ ಚೆನೈನಲ್ಲಿದ್ದ ಪ್ರಾದೇಶಿಕ ಕೇಂದ್ರ ಸಾಹಿತ್ಯ ಅಕಾಡೆಮಿ ಕಚೇರಿಯನ್ನ ಬೆಂಗಳೂರಿಗೆ ತಂದರು. ಸಾಹಿತ್ಯ ಪರಿಷತ್ ಕಾರ್ಯಕ್ರಮಗಳಿಗೆ ಹಣ ಕೊಟ್ಟರು, ಪುಸ್ತಕ ಕೊಟ್ಟರು. ಜರಗನಹಳ್ಳಿ ಶಿವಶಂಕರ್, ಲಂಕೇಶ್ ಶಿಷ್ಯ ದಳವಾಯಿಗೆ ಅಕಾಡೆಮಿ ಪುಸ್ತಕ ಕೊಟ್ಟರು. ದಳವಾಯಿಯಂತೂ ಹೋದವನು ಮತ್ತೆ ಬರಲೇ ಇಲ್ಲ. ತಮ್ಮ ಭಾಷೆ ಮತ್ತು ಪ್ರಾದೇಶಿಕ ಕಾಳಜಿಯ ಬಗ್ಗೆ ಪಕ್ಷಪಾತದ ಆಪಾದನೆ ಬಂದು ಅಗ್ರಹಾರ ತನಿಖೆ ಎದುರಿಸುವ ಸಮಯದಲ್ಲಿ ಫಲಾನುಭವಿಗಳ್ಯಾರೂ ಸಹಾಯಕ್ಕೆ ಬರಲಿಲ್ಲ. ತನಿಖಾಧಿಕಾರಿಗಳಿಗೆ ಒಂದು ಮನವಿಯನ್ನೂ ಕೊಡಲಿಲ್ಲ. ಇಂತಹ ಸಮಯದಲ್ಲಿ ಕವಿ ಸಿ.ಪ.ಶೆಟ್ಟಿಯ ಹಠದಿಂದಾಗಿ ಅಗ್ರಹಾರ ಅಮಾನತುಗೊಂಡರಂತಲ್ಲಾ, ಥೂತ್ತೇರಿ.

*****

ಕನ್ನಡದ ಕೆಲಸಕ್ಕಾಗಿ ಕನ್ನಡಿಗನಿಂದಲೇ ತೊಂದರೆಗೆ ಸಿಕ್ಕಿಕೊಂಡ ಅಗ್ರಹಾರ ಈ ಒಂದು ದಶಕದಲ್ಲಿ ಅರಾಮವಾಗಿಯೇ ಇದ್ದರು. ಪ್ರೆಸ್‌ಕ್ಲಬ್ಬಿನ ಗೆಳೆಯರ ಪಾರ್ಟಿಯ ಬಿಲ್ಲನ್ನು ತಾವೇ ಕೊಡುತ್ತಿದ್ದರು. ನಿವೃತ್ತಿಯ ಸವಲತ್ತುಗಳು ಸಿಗದಿದ್ದರೂ ಬೇಸರ ಮಾಡಿಕೊಳ್ಳದೆ ನಾನೊಬ್ಬ ಕಳಂಕ ಹೊತ್ತವನೆಂದು ಅರಾಮವಾಗಿಯೇ ಹೇಳುತ್ತಿದ್ದರು. ಈ ಜಟ್ಟಿಯ ವಿರುದ್ಧ ಹಠ ಸಾಧಿಸಿದ ಸಿ.ಪ.ಶೆಟ್ಟಿಯ ಒಂದು ಪ್ರಸಂಗ ಹೇಳುವುದಾದರೆ ನಮ್ಮ ಸಂಸ್ಕೃತಿ ಮತ್ತು ರಾಜಕಾರಣದ ನಡುವಿನ ಸೇತುವೆಯಂತಿದ್ದ ಎಂ.ಪಿ. ಪ್ರಕಾಶ್ ಅವರು ಸಿ.ಪ.ಶೆಟ್ಟರ ಕವಿತ್ವಕ್ಕೆ ಮಾರುಹೋಗಿ ಹೂವಿನಡಗಲಿಗೆ ಕರೆದು ಸನ್ಮಾನ ಮಾಡಿದರು. ಜರಿಪೇಟ ಜಗಮಗಿಸುವ ಶಾಲು ಪರಿಮಳ ಭರಿತ ಹಾರ ಹಾಕಿಸಿಕೊಂಡ ಸಿ.ಪ.ಶೆಟ್ಟಿ ’ಈ ಸನ್ಮಾನದ ಗೌರವ ಏನದಾವಲ್ಲ ಇವು ಭಾಳ ವೆಚ್ಚದವು, ಅದಕ ನಾನು ಈ ಸಭೆ ಮುಗಿಯೂ ಮಟ್ಟ ಇವನ್ನ ತೆಗೆಯೂದಿಲ್ಲ, ಹಾಗೇ ಕುಂದರತೀನಿ’ ಎಂದು ಹಾಗೇ ಕುಂತರು. ಆದರೆ ಅವರ ಅಕ್ಕಪಕ್ಕದಲ್ಲಿದ್ದ ಗೌರವಾನ್ವಿತರು ಹಾಗೆ ಮಾಡದೆ ಸನ್ಮಾನಕ್ಕೆ ಗೌರವ ತೋರಿದರು. ಸಭೆ ಗಂಟೆಗಟ್ಟಲೆ ಮುಂದುವರಿದಾಗ ಸಿ.ಪ.ಶೆಟ್ಟರು ಹಾಸ್ಯಸ್ಪದ ವ್ಯಕ್ತಿಯಂತೆ ಕಂಡರಂತಲ್ಲಾ, ಥೂತ್ತೇರಿ.

*****

ಈಗ ಕಾಲ ಬದಲಾಗಿದೆ. ಮುಂದೆ ಅಗ್ರಹಾರನಂತಹ ಕಾರ್ಯದರ್ಶಿ ಸಿ.ಪ.ಶೆಟ್ಟಿಯಂತಹ ಕವಿ ಎಲ್ಲವೂ ಅಪ್ರಸ್ತುತವಾಗಿರುವಂತಹ ಪ್ರಳಯ ಅರಂಭಗೊಂಡಿದೆಯಂತಲ್ಲಾ. ಈವರೆಗಿನ ಕನ್ನಡ ಸಾಹಿತ್ಯಕ್ಕೆ ಬದಲು ರಾಷ್ಟ್ರೋತ್ಥಾನ ಸಾಹಿತ್ಯ ಕನ್ನಡಿಗರ ಮೇಲೆ ಹೇರುವ ಸೂಚನೆಯಾಗಿ, ನಮ್ಮ ಮಕ್ಕಳು ಓದುವ ಪಠ್ಯ ಪುಸ್ತಕದೊಳಕ್ಕೆ ಹೆಡಗೇವಾರ್, ಗೋಳವಲ್‌ಕರ್, ದೀನದಯಾಳು, ಹೊ.ವೆ. ಶೇಷಾದ್ರಿ, ಸಾವರ್ಕರ್ ಸೇರಲಿದ್ದಾರಂತಲ್ಲಾ. ಇದು ಹಾಳುಬಿದ್ದು ಹೋಗಲಿ, ಲಂಕೇಶ್ ನಮ್ಮವರು ಎಂದು ಜಗಳ ಮಾಡುತ್ತಿದ್ದ ಅವರ ಒಂದು ಬಳಗ ಲಂಕೇಶರ ಪಾಠವನ್ನೆ ಕೈಬಿಟ್ಟ ಲಾಟಿ ವೀರರ ಬಗ್ಗೆ ಚಕಾರವೆತ್ತಿಲ್ಲವಂತಲ್ಲಾ. ಇದಕ್ಕೂ ಕಾರಣವಿದೆ. ಲಂಕೇಶ್ ಎಂದೂ ತನ್ನ ಜಾತಿ ಬಗ್ಗೆ ಹೇಳಿಕೊಳ್ಳಲಿಲ್ಲ, ಸ್ವಜಾತಿಯವರಿಗೆ ಸಹಾಯ ಮಾಡಲಿಲ್ಲ, ಹತ್ತಿರವೂ ಸೇರಿಸಲಿಲ್ಲ. ಅದ್ದರಿಂದ ಇವರ ಮೌನ ಸಹಜವಾದುದೆ. ಆದರೆ ಲಂಕೇಶ್ ಸೃಷ್ಟಿಸಿ ಹೋಗಿದ್ದ ಜನ ಈಗ ಮೌನಿಗಳಾಗಿರುವ ಬಗ್ಗೆ ಕೇಳಿದಾಗ “ನೋಡ್ರಿ ಹೆಡಗೆವಾರಲ್ಲ, ಪೆಟ್ಟಿಗೆವಾರನ್ನ ಪಠ್ಯಕ್ಕೆ ಸೇರಿಸಿದರೂ ಏನೂ ಆಗಲ್ಲ. 1969-70ನೇ ಇಸವಿಲಿ ಸರ್ ಎಂ. ವಿಶ್ವೇಶ್ವರಯ್ಯನವರ ಬಗ್ಗೆ ಎರಡೂ ವರ್ಷ ಪಠ್ಯ ಪುಸ್ತಕ ಮಾಡಿದ್ರು, ಏನಾಯ್ತು ಯಾವನಾದ್ರು ಒಬ್ಬ ಇಂಜಿನಿಯರ್ ಬಂದನೇ? ವಿಶ್ವೇಶ್ವರಯ್ಯನವರ ವಿಷಯ ಹೇಳುನೂ, ಅಂಗೆ ಈ ಹೆಡಗೆವಾರ್ ಲಾಟಿ ಲಡ್ಡಿದದು ಹೋಗುತ್ತೆ” ಎಂದರಲ್ಲಾ ಥೂತ್ತೇರಿ.


ಇದನ್ನೂ ಓದಿ:  ಎರಡೂವರೆ ಸಾವಿರ ಕೋಟಿ ಹುಣಸಿ ಪಿಕ್ಕ ಅನಕೊಂಡಿರೇನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....