Homeಅಂಕಣಗಳುದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

ದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

- Advertisement -
- Advertisement -

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅಮಾನತುರದ್ದಾಗಿದೆ. ಬರೋಬ್ಬರಿ ಒಂದು ದಶಕ ನಡೆದ ಕುಸ್ತಿಯಲ್ಲಿ ಈ ಜಟ್ಟಿ ಜಯಗಳಿಸಿದ್ದಾರಲ್ಲಾ.

ಅಗ್ರಹಾರದಿಂದ ಬಂದವನಿರಬೇಕು; ಗೋದಿ ಮುದ್ದೆಯಂತಿದ್ದ ಆಕಾರ ಬೇರೆ; ಕೃಷ್ಣಮೂರ್ತಿ ಹೆಸರು, ಈತ ಭೂಸುರೋತ್ತಮನಾದ ವಿಪ್ರನೇ ಇರಬೇಕು ಎಂದು ನಮ್ಮ ಜಾತಿ ಮನಸ್ಸುಗಳಿಗೆ ಸಾಕ್ಷಿಯೊದಗಿಸಿತ್ತು. ಆಗ ನಮಗೆ ಅಗ್ರಹಾರಗಳನ್ನ ಕಂಡರೆ ಆಗುತ್ತಿರಲಿಲ್ಲ. ನಮಗೇ ಏನು, ನಾಯಿ ಹಂದಿಗಳಿಗೂ ಹಿಡಿಸುತ್ತಿರಲಿಲ್ಲ. ಕಾರಣ ಅಲ್ಲಿನ ಅಂಗಳದಲ್ಲಿ ಯಾವ ಮೂಳೆಯೂ ಸಿಗುತ್ತಿರಲಿಲ್ಲ. ಇನ್ನ ಹಂದಿಗಳಿಗಂತೂ ತೊಳೆದು ಎಸೆದಂತಹ ಇಸ್ತ್ರಿ ಎಲೆಯಿಂದ ಏನೂ ಪ್ರಯೋಜನವಾಗದೆ ವಾಪಸ್ಸು ಬರುತ್ತಿದ್ದವು. ಇಂತಹ ನಮ್ಮ ಪೂರ್ವಾಗ್ರಹದ ಕಾಲದಲ್ಲಿ ಲಂಕೇಶರ ಎದುರು ಪ್ರಕಾಶ್ ಬೆಳವಾಡಿಯಿಂದ ಹಿಡಿದು ಮಹಾಬಲ, ಸತ್ಯ, ಸದಾಶಿವ ಇವರೆಲ್ಲ ಕುಳಿತು ಬ್ರಾಹ್ಮಣದ ಟೀಕೆಯನ್ನು ಅನುಮಾನ ಬರದಂತೆ ಸಹಿಸಿಕೊಳ್ಳುತ್ತಿದ್ದರು. ಅಂತವರ ಪೈಕಿ ಅಗ್ರಹಾರದ ಕೃಷ್ಣಮೂರ್ತಿಯೂ ಎಂದು ನಂಬಿದ್ದೆವು. ಲಂಕೇಶರ ವಿಶೇಷ ಪ್ರೀತಿಗೆ ಪಾತ್ರವಾಗಿ ನಮ್ಮಲ್ಲೊಂದಿಷ್ಟು ಅಸಹನೆ ಮೂಡುತ್ತಿರುವಾಗಲೆ ಕೃಷ್ಣಮೂರ್ತಿ ಅಗ್ರಹಾರದಿಂದ ಬಂದ ಅಸಾಮಿಯಲ್ಲ, ಅರಮನೆ ಎದುರು ಮಹಾರಾಜರ ಸಮ್ಮುಖದಲ್ಲಿ ಮುಷ್ಠಿಯಿಂದ ಎದುರಾಳಿಯ ವಿರುದ್ಧ ಹೋರಾಡುವವರೆಂದು ಗೊತ್ತಾಗಿ ಹೋಯ್ತಲ್ಲಾ, ಥೂತ್ತೇರಿ.

*****

ಉನ್ನತ ಸ್ಥಾನಕ್ಕೆ ಹೋದಮೇಲೂ ವಿಪ್ರೋತ್ತಮರು ತಾವು ತಯಾರಾದ ಅಗ್ರಹಾರಕ್ಕೆ ಬಂದು ಹೋಗುವಂತೆ ಕೃಷ್ಣಮೂರ್ತಿ ಲಂಕೇಶರ ವಟಾರಕ್ಕೆ ಬಂದು ಹೋಗುತ್ತಿದ್ದರು. ಆಗ ಚೆನೈನಲ್ಲಿದ್ದ ಪ್ರಾದೇಶಿಕ ಕೇಂದ್ರ ಸಾಹಿತ್ಯ ಅಕಾಡೆಮಿ ಕಚೇರಿಯನ್ನ ಬೆಂಗಳೂರಿಗೆ ತಂದರು. ಸಾಹಿತ್ಯ ಪರಿಷತ್ ಕಾರ್ಯಕ್ರಮಗಳಿಗೆ ಹಣ ಕೊಟ್ಟರು, ಪುಸ್ತಕ ಕೊಟ್ಟರು. ಜರಗನಹಳ್ಳಿ ಶಿವಶಂಕರ್, ಲಂಕೇಶ್ ಶಿಷ್ಯ ದಳವಾಯಿಗೆ ಅಕಾಡೆಮಿ ಪುಸ್ತಕ ಕೊಟ್ಟರು. ದಳವಾಯಿಯಂತೂ ಹೋದವನು ಮತ್ತೆ ಬರಲೇ ಇಲ್ಲ. ತಮ್ಮ ಭಾಷೆ ಮತ್ತು ಪ್ರಾದೇಶಿಕ ಕಾಳಜಿಯ ಬಗ್ಗೆ ಪಕ್ಷಪಾತದ ಆಪಾದನೆ ಬಂದು ಅಗ್ರಹಾರ ತನಿಖೆ ಎದುರಿಸುವ ಸಮಯದಲ್ಲಿ ಫಲಾನುಭವಿಗಳ್ಯಾರೂ ಸಹಾಯಕ್ಕೆ ಬರಲಿಲ್ಲ. ತನಿಖಾಧಿಕಾರಿಗಳಿಗೆ ಒಂದು ಮನವಿಯನ್ನೂ ಕೊಡಲಿಲ್ಲ. ಇಂತಹ ಸಮಯದಲ್ಲಿ ಕವಿ ಸಿ.ಪ.ಶೆಟ್ಟಿಯ ಹಠದಿಂದಾಗಿ ಅಗ್ರಹಾರ ಅಮಾನತುಗೊಂಡರಂತಲ್ಲಾ, ಥೂತ್ತೇರಿ.

*****

ಕನ್ನಡದ ಕೆಲಸಕ್ಕಾಗಿ ಕನ್ನಡಿಗನಿಂದಲೇ ತೊಂದರೆಗೆ ಸಿಕ್ಕಿಕೊಂಡ ಅಗ್ರಹಾರ ಈ ಒಂದು ದಶಕದಲ್ಲಿ ಅರಾಮವಾಗಿಯೇ ಇದ್ದರು. ಪ್ರೆಸ್‌ಕ್ಲಬ್ಬಿನ ಗೆಳೆಯರ ಪಾರ್ಟಿಯ ಬಿಲ್ಲನ್ನು ತಾವೇ ಕೊಡುತ್ತಿದ್ದರು. ನಿವೃತ್ತಿಯ ಸವಲತ್ತುಗಳು ಸಿಗದಿದ್ದರೂ ಬೇಸರ ಮಾಡಿಕೊಳ್ಳದೆ ನಾನೊಬ್ಬ ಕಳಂಕ ಹೊತ್ತವನೆಂದು ಅರಾಮವಾಗಿಯೇ ಹೇಳುತ್ತಿದ್ದರು. ಈ ಜಟ್ಟಿಯ ವಿರುದ್ಧ ಹಠ ಸಾಧಿಸಿದ ಸಿ.ಪ.ಶೆಟ್ಟಿಯ ಒಂದು ಪ್ರಸಂಗ ಹೇಳುವುದಾದರೆ ನಮ್ಮ ಸಂಸ್ಕೃತಿ ಮತ್ತು ರಾಜಕಾರಣದ ನಡುವಿನ ಸೇತುವೆಯಂತಿದ್ದ ಎಂ.ಪಿ. ಪ್ರಕಾಶ್ ಅವರು ಸಿ.ಪ.ಶೆಟ್ಟರ ಕವಿತ್ವಕ್ಕೆ ಮಾರುಹೋಗಿ ಹೂವಿನಡಗಲಿಗೆ ಕರೆದು ಸನ್ಮಾನ ಮಾಡಿದರು. ಜರಿಪೇಟ ಜಗಮಗಿಸುವ ಶಾಲು ಪರಿಮಳ ಭರಿತ ಹಾರ ಹಾಕಿಸಿಕೊಂಡ ಸಿ.ಪ.ಶೆಟ್ಟಿ ’ಈ ಸನ್ಮಾನದ ಗೌರವ ಏನದಾವಲ್ಲ ಇವು ಭಾಳ ವೆಚ್ಚದವು, ಅದಕ ನಾನು ಈ ಸಭೆ ಮುಗಿಯೂ ಮಟ್ಟ ಇವನ್ನ ತೆಗೆಯೂದಿಲ್ಲ, ಹಾಗೇ ಕುಂದರತೀನಿ’ ಎಂದು ಹಾಗೇ ಕುಂತರು. ಆದರೆ ಅವರ ಅಕ್ಕಪಕ್ಕದಲ್ಲಿದ್ದ ಗೌರವಾನ್ವಿತರು ಹಾಗೆ ಮಾಡದೆ ಸನ್ಮಾನಕ್ಕೆ ಗೌರವ ತೋರಿದರು. ಸಭೆ ಗಂಟೆಗಟ್ಟಲೆ ಮುಂದುವರಿದಾಗ ಸಿ.ಪ.ಶೆಟ್ಟರು ಹಾಸ್ಯಸ್ಪದ ವ್ಯಕ್ತಿಯಂತೆ ಕಂಡರಂತಲ್ಲಾ, ಥೂತ್ತೇರಿ.

*****

ಈಗ ಕಾಲ ಬದಲಾಗಿದೆ. ಮುಂದೆ ಅಗ್ರಹಾರನಂತಹ ಕಾರ್ಯದರ್ಶಿ ಸಿ.ಪ.ಶೆಟ್ಟಿಯಂತಹ ಕವಿ ಎಲ್ಲವೂ ಅಪ್ರಸ್ತುತವಾಗಿರುವಂತಹ ಪ್ರಳಯ ಅರಂಭಗೊಂಡಿದೆಯಂತಲ್ಲಾ. ಈವರೆಗಿನ ಕನ್ನಡ ಸಾಹಿತ್ಯಕ್ಕೆ ಬದಲು ರಾಷ್ಟ್ರೋತ್ಥಾನ ಸಾಹಿತ್ಯ ಕನ್ನಡಿಗರ ಮೇಲೆ ಹೇರುವ ಸೂಚನೆಯಾಗಿ, ನಮ್ಮ ಮಕ್ಕಳು ಓದುವ ಪಠ್ಯ ಪುಸ್ತಕದೊಳಕ್ಕೆ ಹೆಡಗೇವಾರ್, ಗೋಳವಲ್‌ಕರ್, ದೀನದಯಾಳು, ಹೊ.ವೆ. ಶೇಷಾದ್ರಿ, ಸಾವರ್ಕರ್ ಸೇರಲಿದ್ದಾರಂತಲ್ಲಾ. ಇದು ಹಾಳುಬಿದ್ದು ಹೋಗಲಿ, ಲಂಕೇಶ್ ನಮ್ಮವರು ಎಂದು ಜಗಳ ಮಾಡುತ್ತಿದ್ದ ಅವರ ಒಂದು ಬಳಗ ಲಂಕೇಶರ ಪಾಠವನ್ನೆ ಕೈಬಿಟ್ಟ ಲಾಟಿ ವೀರರ ಬಗ್ಗೆ ಚಕಾರವೆತ್ತಿಲ್ಲವಂತಲ್ಲಾ. ಇದಕ್ಕೂ ಕಾರಣವಿದೆ. ಲಂಕೇಶ್ ಎಂದೂ ತನ್ನ ಜಾತಿ ಬಗ್ಗೆ ಹೇಳಿಕೊಳ್ಳಲಿಲ್ಲ, ಸ್ವಜಾತಿಯವರಿಗೆ ಸಹಾಯ ಮಾಡಲಿಲ್ಲ, ಹತ್ತಿರವೂ ಸೇರಿಸಲಿಲ್ಲ. ಅದ್ದರಿಂದ ಇವರ ಮೌನ ಸಹಜವಾದುದೆ. ಆದರೆ ಲಂಕೇಶ್ ಸೃಷ್ಟಿಸಿ ಹೋಗಿದ್ದ ಜನ ಈಗ ಮೌನಿಗಳಾಗಿರುವ ಬಗ್ಗೆ ಕೇಳಿದಾಗ “ನೋಡ್ರಿ ಹೆಡಗೆವಾರಲ್ಲ, ಪೆಟ್ಟಿಗೆವಾರನ್ನ ಪಠ್ಯಕ್ಕೆ ಸೇರಿಸಿದರೂ ಏನೂ ಆಗಲ್ಲ. 1969-70ನೇ ಇಸವಿಲಿ ಸರ್ ಎಂ. ವಿಶ್ವೇಶ್ವರಯ್ಯನವರ ಬಗ್ಗೆ ಎರಡೂ ವರ್ಷ ಪಠ್ಯ ಪುಸ್ತಕ ಮಾಡಿದ್ರು, ಏನಾಯ್ತು ಯಾವನಾದ್ರು ಒಬ್ಬ ಇಂಜಿನಿಯರ್ ಬಂದನೇ? ವಿಶ್ವೇಶ್ವರಯ್ಯನವರ ವಿಷಯ ಹೇಳುನೂ, ಅಂಗೆ ಈ ಹೆಡಗೆವಾರ್ ಲಾಟಿ ಲಡ್ಡಿದದು ಹೋಗುತ್ತೆ” ಎಂದರಲ್ಲಾ ಥೂತ್ತೇರಿ.


ಇದನ್ನೂ ಓದಿ:  ಎರಡೂವರೆ ಸಾವಿರ ಕೋಟಿ ಹುಣಸಿ ಪಿಕ್ಕ ಅನಕೊಂಡಿರೇನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...