Homeಮುಖಪುಟಉದ್ದಗಲ ಹರಡುತ್ತಿದೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಂಬ ಮನುಷ್ಯ ಸೃಷ್ಟಿಯ ಮಾಯೆ

ಉದ್ದಗಲ ಹರಡುತ್ತಿದೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಂಬ ಮನುಷ್ಯ ಸೃಷ್ಟಿಯ ಮಾಯೆ

- Advertisement -
- Advertisement -

ಕಳೆದ ಕೆಲವು ವಾರಗಳಿಂದ ಇಂಟರ್ನೆಟ್‌ನಲ್ಲಿ ಒಂದೇ ಬಹು ಮುಖ್ಯ ಚರ್ಚೆ. ಚಾಟ್‌ಜಿಪಿಟಿ. ಓಪನ್ ಎಐ ಮುಕ್ತ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ ಚಾಟ್‌ಬಾಟ್ ಇದು. ನೀವು ಯಾವುದೇ ವಿಷಯಕ್ಕೆ ಸಂಧಿಸಿದ ಮಾಹಿತಿಯನ್ನು ಕೇಳಿದರೆ ಕ್ಷಣ ಮಾತ್ರದಲ್ಲಿ ನೀಡುವ ಈ ಬಾಟ್ (ರೋಬಾಟ್), ಗೂಗಲ್‌ಅನ್ನು ಮುಂದೆ ಮೀರಿಸುವಂತೆ ಸಂವಾದ ನಡೆಸುತ್ತದೆ. ಕೇಳಿದ ಪ್ರಶ್ನೆಗೆ ಉತ್ತರ ನೀಡುವುದಷ್ಟೇ ಅಲ್ಲ, ನಿಮಗೆ ಬೇಕಾದ್ದನ್ನು ಬರೆದುಕೊಡುತ್ತದೆ (ಸದ್ಯಕ್ಕೆ ಇಂಗ್ಲಿಷ್‌ನಲ್ಲಿ ಮಾತ್ರ)!

ಕಳೆದ ಒಂದೂವರೆ ದಶಕದಿಂದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಲಯದಲ್ಲಿ ಭಾರಿ ಸಂಶೋಧನೆಗಳು ನಡೆಯುತ್ತಾ ಬಂದಿವೆ. ಆದರೆ ಕಳೆದ ನಾಲ್ಕಾರು ವರ್ಷಗಳಲ್ಲಿ ಆಗಿರುವ ಬೆಳವಣಿಗೆಗಳು ವಿಸ್ಮಯ, ಬೆರಗು ಹುಟ್ಟಿಸುವಂತಹವು. ಅದರ ಜೊತೆಗೆ ಆತಂಕವನ್ನೂ ಹುಟ್ಟಿಸುವಂತಹವು.

ಮನುಷ್ಯನ ಕಲಿಕೆ, ಸಂವಹನ ಹಾಗೂ ಸೇವೆಯ ಸಾಧ್ಯತೆಗಳನ್ನು ಈ ಹೊಸ ಆವಿಷ್ಕಾರದ ಬೆಳವಣಿಗೆ ವಿಸ್ತರಿಸಿದೆ. ತಂತ್ರಜ್ಞಾನ ಹಾಗೂ ಡೇಟಾ ಮೇಳೈಸಿದ ಈ ಕಲ್ಪನೆ ತಾಂತ್ರಿಕವೂ ಯಾಂತ್ರಿಕವೂ ಆಗಿದ್ದ ಪ್ರಕ್ರಿಯೆಗೆ ಸೃಜನಶೀಲತೆಯ ಆಯಾಮವನ್ನು ಒದಗಿಸಿದೆ. ಹಾಗಾಗಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಈಗ ಎಲ್ಲರ ನಾಲಿಗೆಯ ಮೇಲೆ ನುಲಿಯುತ್ತಿದೆ.

ಸ್ಯಾಮ್ ಆಲ್ಟ್‌ಮ್ಯಾನ್ ಮತ್ತು ಇಲಾನ್ ಮಸ್ಕ್ ಕೂಡಿ ಆರಂಭಿಸಿದ ಸ್ವತಂತ್ರ ಸಂಶೋಧನಾ ಸಂಸ್ಥೆ ಓಪನ್ ಎಐ. ನಂತರ ಹಲವು ತಂತ್ರಜ್ಞಾನ ಸಂಸ್ಥೆಗಳು ಇದಕ್ಕೆ ಕೈಜೋಡಿಸಿವೆ. ಈ ಸಂಸ್ಥೆಯ ಮೂಲಕ ಅಭಿವೃದ್ಧಿಪಡಿಸಿದ ಚಾಟ್‌ಬಾಟ್ ಈ ಚಾಟ್‌ಜಿಪಿಟಿ. ಬಿಡುಗಡೆಯಾದ ಒಂದೇ ಒಂದು ವಾರದಲ್ಲಿ 10 ಲಕ್ಷ ಬಳಕೆದಾರರು ಚಾಟ್ ಜಿಪಿಟಿಯ ಜೊತೆಗೆ ಹರಟೆ ಹೊಡೆದಿದ್ದಾರೆ. ಮೈಕ್ರೋಸಾಫ್ಟ್‌ನ ಸಿಇಒಯಿಂದ ಹಿಡಿದು ಸಾಮಾನ್ಯ ಯುವಕ/ಯುವತಿಯೂ ಈ ಚಾಟ್ ಜಿಪಿಟಿಯ ಸೆಳೆತಕ್ಕೆ ಒಳಗಾಗಿದ್ದಾರೆ.

ಚಾಟ್‌ಜಿಪಿಟಿ ಮಾತನಾಡುವುದಿಲ್ಲ. ಆದರೆ ಚಾಟ್ ಮಾಡುತ್ತದೆ. ಕ್ವಾಂಟಂ ಫಿಸಿಕ್ಸ್‌ನಂತಹ ಸಂಕೀರ್ಣ ವಿಷಯವನ್ನು ವಿವರಿಸುವುದೇ ಆಗಿರಲಿ, ಪದ್ಯವನ್ನು ಬರೆಯುವುದೇ ಇರಲಿ ಸಲೀಸಾಗಿ ಮಾಡಿಬಿಡುತ್ತದೆ. ಈ ಲೇಖನ ಬರೆಯುವ ಹೊತ್ತಿಗೆ ಚಾಟ್‌ಜಿಪಿಟಿ ಜನಪ್ರಿಯತೆ ಎಷ್ಟರ ಮಟ್ಟಿಗೆ ಇತ್ತೆಂದರೆ, ಬಳಕೆದಾರರ ಬೇಡಿಕೆ ಪೂರೈಸುವುದಕ್ಕೆ ಕಸರತ್ತು ಪಡುವಷ್ಟು. ಈ ನೆಪದಲ್ಲಿ ತನ್ನ ಮೇಲೆ ತಾನೇ ಒಂದು ಸಾನೆಟ್ ಬರೆದು ಪ್ರಕಟಿಸಿತ್ತು! ಕೇಳಿದರೆ ಜೋಕ್ ಹೇಳುತ್ತದೆ, ಹಾಗೆಯೇ ಯಾವುದಾದರೂ ಖಾದ್ಯ ಮಾಡುವ ವಿಧಾನವನ್ನು ಹೇಳಿಕೊಡುತ್ತದೆ.

ಇವೆಲ್ಲವೂ ನಮಗೆ ಸರ್ಚ್‌ನಲ್ಲಿ ಸಿಗುತ್ತಿರಲಿಲ್ಲವೇ ಅಂದಿರಾ? ಇಷ್ಟು ದಿನ ನಮ್ಮೆಲ್ಲರಿಗೂ ಸಿಗುತ್ತಿದ್ದ ಯಂತ್ರದ ಶುಷ್ಕ ಪ್ರತಿಕ್ರಿಯೆಯ ಬದಲು, ಆಲೋಚಿಸುವ, ಆಪ್ತವಾಗಿ ಸ್ಪಂದಿಸುವ ವ್ಯಕ್ತಿಯೊಂದಿಗಿನ ಸಂವಾದದ ಅನುಭವವನ್ನು ಇದು ನೀಡುತ್ತಿದೆ. ಭಾಷೆಗೆ ಸಂಬಂಧಿಸಿದ ಸೇವೆಯನ್ನು ರೂಪಿಸುವ ನಿಟ್ಟಿನಲ್ಲಿ ಗೂಗಲ್, ಫೇಸ್‌ಬುಕ್ ಸಾಕಷ್ಟು ಕೆಲಸ ಮಾಡಿವೆ. ಆದರೆ ಇಷ್ಟೊಂದು ಸಮರ್ಥವಾದ, ಅಗಾಧ ಸಾಧ್ಯತೆಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸೇವೆಯೊಂದು ಸಾರ್ವಜನಿಕವಾಗಿ ಮುಕ್ತವಾಗಿ ಲಭ್ಯವಾಗಿರುವುದು ಇದೇ ಮೊದಲು.

ಚಾಟ್‌ಜಿಪಿಟಿಯೊಂದೇ ದೊಡ್ಡ ಆವಿಷ್ಕಾರವಲ್ಲ. ಕಳೆದ ವರ್ಷ ಡಾಲ್-ಇ ಎಂಬ, ಇನ್ನೊಂದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆಧರಿಸಿದ ಕಲಾಕೃತಿ ರಚಿಸುವ ಬಾಟ್ ಸದ್ದುಮಾಡಿತ್ತು. ಇದು ವಿಶಿಷ್ಟ ರೀತಿಯಲ್ಲಿ ಕಲಾಕೃತಿಗಳನ್ನು ರಚಿಸಿಕೊಡಲು ಆರಂಭಿಸಿತ್ತು. ನೀವು ನಿಮಗೆ ಅಗತ್ಯವಿರುವ ಚಿತ್ರದ ವಿವರಣೆಯನ್ನು ನೀಡಿದರೆ, ಈ ಬಾಟ್ ಚಿತ್ರವನ್ನು ಸಿದ್ಧಪಡಿಸಿಕೊಡುತ್ತದೆ. ಕಲಾಸೃಷ್ಟಿಯ ಈ ಸಾಧ್ಯತೆಯನ್ನೂ ಸಾಧ್ಯವಾಗಿಸಿರುವುದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್! ತರಹೇವಾರಿ ಶೈಲಿಯ ಕಲಾಕೃತಿಗಳನ್ನ ಈ ಬಾಟ್ ಬಳಸಿ ಸಿದ್ಧಪಡಿಸಿ ಲಕ್ಷಾಂತರ ಬಳಕೆದಾರರು ಬೆರಗಾಗಿಹೋಗಿದ್ದಾರೆ. ಬಳಕೆದಾರರು ನಿರೀಕ್ಷೆಯ ಶೇ. 80ರಷ್ಟು ನಿಖರತೆಯ ಚಿತ್ರಗಳನ್ನು ಇದು ಸಿದ್ಧಪಡಿಸುತ್ತಿದೆ!

ಮೇಲಿನ ಎರಡು ಉದಾಹರಣೆಗಳು ಇತ್ತೀಚಿನವು ಹಾಗೂ ತಂತ್ರಜ್ಞಾನದ ತಿಳಿವಳಿಕೆ ಇಲ್ಲದವರೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೋಡಿಗೆ ಒಳಗಾಗಿರುವುದನ್ನು ವಿವರಿಸುವಂತಹವು.

ಇದನ್ನೂ ಓದಿ: ಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ರೋಗ ಸಾಧ್ಯತೆಯ ಭವಿಷ್ಯ ನುಡಿಯುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಆರೋಗ್ಯ ಕ್ಷೇತ್ರದಲ್ಲಿ ಇದೊಂದು ಕ್ರಾಂತಿಕಾರಿ ಬೆಳವಣಿಗೆ. ಈ ತಂತ್ರಜ್ಞಾನ ಯಾವ ಮಟ್ಟಿಗೆ ಚಾಚಿಕೊಳ್ಳುತ್ತಿದೆ ಎಂದರೆ ವ್ಯಕ್ತಿಗತವಾದ ಔಷಧ ಪದ್ಧತಿಯನ್ನು ರೂಪಿಸಲು ಸಾಧ್ಯವಿದೆ ಎಂಬುದನ್ನು ಕಂಡುಕೊಂಡಿದೆ. ವ್ಯಕ್ತಿಯೊಬ್ಬರ ಆರೋಗ್ಯದ ಇತಿಹಾಸ, ಆಹಾರ ಪದ್ಧತಿ, ಜೀವನ ಶೈಲಿ ಆಧರಿಸಿ ವೈದ್ಯ ಸೇವೆಯನ್ನು ಖಾಸಗಿ ಹಾಗೂ ವ್ಯಕ್ತಿಗತವಾಗಿಸಬಹುದು ಎಂಬುದನ್ನು ಕಂಡುಕೊಳ್ಳಲಾಗಿದೆ.

ಹೀಗೆ ಆಟೋಮೇಷನ್, ಭಾಷೆ, ರೊಬೊಟಿಕ್ಸ್, ಫೇಷಿಯಲ್ ರೆಕಗ್ನಿಷನ್ ಸೇರಿದಂತೆ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ಅನ್ನು ವ್ಯಾಪಕವಾಗಿ ಬಳಸಿ ಪ್ರಯೋಗಕ್ಕೆ ಒಡ್ಡಲಾಗುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅನ್ವಯದ ಪ್ರಮಾಣದ ದುಪ್ಪಟ್ಟಾಗಿದೆ ಎಂದು ಮೆಕೆನ್ಸಿ ವರದಿ ಹೇಳುತ್ತದೆ. ಕೋವಿಡ್ ಸೋಂಕಿನ ನಂತರ ಜಾಗತಿಕವಾಗಿ ಈ ತಂತ್ರಜ್ಞಾನ ವೇಗವಾಗಿ ಬೆಳೆದಿದೆ. ಭಾರತ ಕೂಡ ಈ ತಂತ್ರಜ್ಞಾನದ ಬಹುಮುಖ್ಯ ಭಾಗವಾದ ಅಲ್ಗಾರಿದಮ್, ಡೆಟಾ ಅನಾಲಿಸಿಸ್ ವಿಷಯದಲ್ಲಿ ಮಹತ್ವದ ಪ್ರಗತಿಯನ್ನು ಸಾಧಿಸಿದೆ. ಇಂಟರ್‌ನ್ಯಾಷನಲ್ ಡೆಟಾ ಕಾರ್ಪೊರೇಷನ್ ಸ್ಟಡಿಯ ಪ್ರಕಾರ ಭಾರತ 3.1 ಬಿಲಿಯನ್ ಡಾಲರ್‌ನಷ್ಟಿದ್ದ ಭಾರತದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಉದ್ಯಮ ಈಗ 8 ಬಿಲಿಯನ್ ಡಾಲರ್ ಗಡಿ ಮುಟ್ಟುವತ್ತ ಸಾಗಿದೆ!

ವೈಜ್ಞಾನಿಕ ಸಂಶೋಧನೆ, ಪ್ರಯೋಗಗಳ ವಿಧಾನದಲ್ಲಿಯೇ ಕ್ರಾಂತಿಕಾರಿ ಬದಲಾವಣೆ ತರುವ ಭರವಸೆಯನ್ನು ಈ ತಂತ್ರಜ್ಞಾನ ಮೂಡಿಸಿದೆ. ವಿದೇಶಾಂಗ ವ್ಯವಹಾರಗಳ ನೀತಿಯನ್ನು ರೂಪಿಸುವಲ್ಲೂ ಈ ತಂತ್ರಜ್ಞಾನ ನಿರ್ಣಾಯಕವಾಗುತ್ತಿದೆ ಎಂಬುದು ಈ ತಂತ್ರಜ್ಞಾನಕ್ಕಿರುವ ರಾಜಕೀಯ ಆಯಾಮ. ಅಮೆರಿಕ ಈ ನಿಟ್ಟಿನಲ್ಲಿ ಸಾಕಷ್ಟು ಚಿಂತನೆ ನಡೆಸಿದೆ. ಇನ್ನು ಸಾಮಾನ್ಯ ಬಳಕೆದಾರ ಅಥವಾ ಗ್ರಾಹಕರ ಕೊಳ್ಳುವ ಅನುಭವವನ್ನು ಹಿಗ್ಗಿಸಲಿದೆ ಎಂಬುದು ಮತ್ತೊಂದು ಸಾಧ್ಯತೆ. ಹವಾಮಾನ ವೈಪರೀತ್ಯ ಜಾಗತಿಕವಾಗಿ, ಕೃಷಿ, ಆಹಾರ, ಪರಿಸರ ಸೇರಿದಂತೆ ಹಲವು ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಇದನ್ನು ಅರ್ಥ ಮಾಡಿಕೊಳ್ಳಲು ಮತ್ತು ಪರಿಹಾರ ಕಂಡುಕೊಳ್ಳಲು ಕೂಡ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಪ್ರಮುಖ ಅಸ್ತ್ರವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಮಾಜ ಮತ್ತು ಆರ್ಥಿಕತೆ ಎರಡೂ ವಲಯದಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ ಎಂಬುದು ಈ ತಂತ್ರಜ್ಞಾನದ ಬಗ್ಗೆ ಹೆಚ್ಚಿಸಿರುವ ಕುತೂಹಲ.

ಅಭಿವೃದ್ಧಿ, ಪ್ರಗತಿಯ ಆಯಾಮದಲ್ಲಿ ವಿಸ್ಮಯ ಹುಟ್ಟಿಸಿರುವ ಈ ತಂತ್ರಜ್ಞಾನ ಆತಂಕ ಮತ್ತು ಸವಾಲುಗಳನ್ನೂ ಸೃಷ್ಟಿಸಿದೆ. ಈ ಸವಾಲುಗಳ ಬಗ್ಗೆ ಜಗತ್ತಿನ ಶ್ರೇಷ್ಠ ಚಿಂತಕರಲ್ಲಿ ಒಬ್ಬರಾದ, ನೋಮ್ ಚಾಮ್‌ಸ್ಕಿ ಈ ಕುರಿತು ಅಭಿಪ್ರಾಯಪಟ್ಟಿರುವುದು ಹೀಗೆ: “ಡೀಪ್ ಲನಿಂಗ್ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅವಲಂಬಿತ ಯಂತ್ರಾಧರಿತ ಕಲಿಕೆ) ಹಲವು ಕ್ಷೇತ್ರಗಳಿಗೆ ಉಪಯುಕ್ತವಾದ ಸಾಧನಗಳನ್ನು ಒದಗಿಸಬಹುದು. ಆದರೆ ಈ ಉಪಯುಕ್ತತೆಯ ಆಚೆಗೆ ಒಂದು ನಿರ್ದಿಷ್ಟ ಭಾಷೆಯ ಹಿನ್ನೆಲೆಯಲ್ಲಿ ಗ್ರಹಿಕೆ, ಆಲೋಚನೆಯ ನಿಟ್ಟಿನಲ್ಲಿ ನಮ್ಮ ಕಲಿಕೆ ಏನು? ಇಂತಹ ಕಲಿಕೆ ನಮಗೆ ಅಗಾಧವಾದ ಮಾಹಿತಿ ಕೊಡುತ್ತಿರುವಂತೆಯೇ ಅಗಾಧವಾದ ಸೋಲುಗಳನ್ನು ತಂದು ನಿಲ್ಲಿಸುತ್ತದೆ”.

ಚಾಮ್‌ಸ್ಕಿ ಮಾತಿನಲ್ಲಿರುವ ತಥ್ಯವೆಂದರೆ, ತಾಂತ್ರಿಕವಾಗಿ, ಯಾವುದೇ ಸೇವೆಯ ಚೌಕಟ್ಟನ್ನು ನಿರ್ಧರಿಸಬಹುದು. ಉದಾಹರಣೆಗೆ ಒಂದು ಪಠ್ಯವನ್ನು ಸಿದ್ಧಪಡಿಸಿದರೆ, ಅದರ ವ್ಯಾಕರಣ, ಸರಿಯಾದ ಪದ ಬಳಕೆ ಇತ್ಯಾದಿ ವಿಷಯಗಳಲ್ಲಿ ಸಮರ್ಪಕವಾಗಿರಬಹುದು. ಆದರೆ ತರ್ಕ ಮತ್ತು ಸಂವೇದನೆಯಲ್ಲಿ ಲೋಪಗಳಿರುತ್ತವೆ. ಮೂಲದಲ್ಲಿ ನಾವು ಅವಲಂಬಿಸಬೇಕಿರುವುದೇ ಈ ಅಂಶಗಳ ಮೇಲೆ. ಆದರೆ ಡೇಟಾ ಆಧರಿಸಿ, ನಿರ್ಮಿಸುವ ದೊಡ್ಡದೊಡ್ಡ ಕಾರ್ಯವಿಧಾನಗಳು ಮತ್ತು ಅವುಗಳನ್ನು ಕ್ರಿಯಾಶೀಲವಾಗಿಸಿರುವ ಚಾಣಾಕ್ಷ ಪ್ರೊಗ್ರಾಮಿಂಗ್‌ಗಳಲ್ಲಿ ಈ ಸೂಕ್ಷ್ಮಗಳು ಇರುವುದಿಲ್ಲ ಎಂಬುದನ್ನು ಚಾಮ್‌ಸ್ಕಿ ವಿವರಿಸುತ್ತಾರೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಲ್ಲರೂ ಸೃಜನಶೀಲರಾಗುವಂತೆ ಮಾಡುತ್ತಿದೆ (ಬರವಣಿಗೆಗೆ, ಚಿತ್ರ ರಚನೆಗೆ ಸಹಕರಿಸಿ). ಆದರೆ ಮೂಲಭೂತವಾಗಿ ಅದಕ್ಕೆ ಇರಬೇಕಾದ ಕೌಶಲ್ಯವನ್ನೇ ಕಲಿಸುವುದಿಲ್ಲ!

ಎಲ್ಲ ತಂತ್ರಜ್ಞಾನಗಳಿಗೆ ಇರುವಂತೆಯೇ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ಗೂ ಎರಡು ಆಯಾಮಗಳು ಇವೆ. ಒಂದು ಒಳಿತನದ್ದು, ಇನ್ನೊಂದು ಕೆಡುಕಿನದ್ದು. ಅಸಾಧ್ಯಗಳನ್ನು ಸಾಧಿಸುವ ಹುಮ್ಮಸ್ಸಿನ ತಂತ್ರಜ್ಞಾನ, ಮುಕ್ತ ತಂತ್ರಜ್ಞಾನ ಸಂಪನ್ಮೂಲಗಳನ್ನು ಇನ್ನಷ್ಟು ಮುಕ್ತವಾಗಿಸಬಹುದು. ತಂತ್ರಜ್ಞಾನ ಕ್ಷೇತ್ರದಲ್ಲಿ ವಿಕೇಂದ್ರೀಕರಣಕ್ಕೆ ಇನ್ನಷ್ಟು ಬಲವನ್ನು ಒದಗಿಸಬಹುದು. ಅದರೊಟ್ಟಿಗೆ ಸಮಸ್ಯೆಗಳ ಸಾಗರವನ್ನೇ ಇದು ಸೃಷ್ಟಿಸಬಲ್ಲದು ಎಂದೂ ಪರಿಣಿತರು ಅಭಿಪ್ರಾಯ ಪಡುತ್ತಾರೆ. ಮಾಹಿತಿ ರೂಪದಲ್ಲಿರುವ ಯಾವುದೇ ಸಂಗತಿಯನ್ನು ಒಂದು ನಿರ್ದಿಷ್ಟ ಮಾದರಿಯನ್ನಾಗಿ ಅನುಸರಿಸುವ ಈ ತಂತ್ರಜ್ಞಾನ, ಪೂರ್ವಗ್ರಹಗಳನ್ನು ಕಳಚುವುದು, ಸಾಮಾಜಿಕ ಸೂಕ್ಷ್ಮಗಳನ್ನು ಕಲಿಯುವುದು ಕಷ್ಟವೆಂಬುದು ಅವರ ಕಾಳಜಿ.

ಉಳಿದೆಲ್ಲಾ ಜೀವಿಗಳಿಗಿಂತ ಭಿನ್ನವಾಗಿಸುವ ಮನುಷ್ಯನ ಆಲೋಚನಾ ಶಕ್ತಿಯನ್ನು ಈಗ ಯಂತ್ರಗಳೂ ಪಡೆಯಲಾರಂಭಿಸಿವೆ. ಆದರೂ ಈ ಆಲೋಚನೆಯ ಜೊತೆಗಿರುವ ಕೌಶಲ್ಯ ಮತ್ತು ಸಂವೇದನೆಯನ್ನು ಯಂತ್ರಗಳು ಎಷ್ಟರ ಮಟ್ಟಿಗೆ ನಕಲು ಮಾಡಬಲ್ಲವು ಎಂಬು ಕುತೂಹಲ ಇನ್ನೂ ಉಳಿದಿದೆ.

ಎಸ್ ಕುಮಾರ್
ಹಿರಿಯ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...