Homeಮುಖಪುಟ"ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ"

“ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ”

- Advertisement -
- Advertisement -

ಕೃತಕ ಬುದ್ಧಿಮತ್ತೆ (Artificial Intelligence) ಪ್ರಪಂಚದಾದ್ಯಂತ ಉದ್ಯೋಗ ಭದ್ರತೆಗೆ ದೊಡ್ಡ ಅಪಾಯವನ್ನುಂಟು ಮಾಡಲಿದೆ. ಆದರೆ, ಇದು ಉತ್ಪಾದನಾ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಗತಿಕ ಬೆಳವಣಿಗೆಯನ್ನು ಉತ್ತೇಜಿಸಲು ಅವಕಾಶ ನೀಡಲಿದೆ ಎಂದು ಇಂಟರ್‌ನ್ಯಾಷನ್ ಮಾನಿಟರಿ ಫಂಡ್ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶ್ವ ಆರ್ಥಿಕ ಸಭೆಗೆ ಹೊರಡುವ ಮುನ್ನ ವಾಷಿಂಗ್ಟನ್‌ನಲ್ಲಿ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಧಾರಿತ ಆರ್ಥಿಕತೆಗಳಲ್ಲಿನ 60 ಪ್ರತಿಶತ ಉದ್ಯೋಗಗಳ ಮೇಲೆ ಎಐ ತಂತ್ರಜ್ಞಾನ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಎಐ ಕಡಿಮೆ ಪರಿಣಾಮ ಬೀರಲಿದೆ. ಆದರೆ, ಜಾಗತಿಕವಾಗಿ 40 ಪ್ರತಿಶತದಷ್ಟು ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ” ಎಂದು ಹೊಸ ಐಎಂಎಫ್ ವರದಿಯನ್ನು ಉಲ್ಲೇಖಿಸಿ ಕ್ರಿಸ್ಟಲಿನಾ ಹೇಳಿದ್ದಾರೆ.

ಭಾನುವಾರ ಸಂಜೆ ಪ್ರಕಟಗೊಂಡ ಐಎಂಎಫ್ ವರದಿಯು, ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಅರ್ಧದಷ್ಟು ಮಾತ್ರ ಋಣಾತ್ಮಕ ಪರಿಣಾಮ ಬೀರಲಿದೆ. ಇನ್ನರ್ಧ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ಲಾಭ ಪಡೆಯಲಿದೆ ಎಂದಿದೆ.

ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮ ಬೀರಬಹುದು ಅಥವಾ ಧನಾತ್ಮಕ ಪರಿಣಾಮ ಬೀರಬಹುದು. ಧನಾತ್ಮಕ ಪರಿಣಾಮ ಬೀರಿದರೆ ಉತ್ಪಾದನಾ ಮಟ್ಟ ಹೆಚ್ಚಳಗೊಂಡು ಆದಾಯದ ಮಟ್ಟವು ಹೆಚ್ಚಾಗಬಹುದು ಎಂದು ಜಾರ್ಜಿವಾ ಹೇಳಿದ್ದಾರೆ.

ಕಡಿಮೆ ಆದಾಯದ ದೇಶಗಳು ಕೃತಕ ಬುದ್ದಿಮತ್ತೆಯ ಲಾಭವನ್ನು ಪಡೆಯಲು ನಿರ್ದಿಷ್ಟ ಗುರಿ ತಲುಪಲು ನಾವು ಸಹಾಯ ಮಾಡಬೇಕು ಎಂದು ಜಾರ್ಜಿವಾ ತಿಳಿಸಿದ್ದಾರೆ.

ಉದಯೋನ್ಮುಖ ಮಾರುಕಟ್ಟೆಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿನ ಕಾರ್ಮಿಕ ಮಾರುಕಟ್ಟೆಗಳು ಎಐನಿಂದ ಸಣ್ಣ ಆರಂಭಿಕ ಪರಿಣಾಮವನ್ನು ನೋಡಲಿದೆ. ಆದರೆ, ಕೆಲಸದ ಸ್ಥಳದಲ್ಲಿ ಅದರ ಏಕೀಕರಣದ ಮೂಲಕ ಉಂಟಾಗುವ ವರ್ಧಿತ ಉತ್ಪಾದಕತೆಯಿಂದ ಅವು ಕಡಿಮೆ ಲಾಭವನ್ನು ಪಡೆಯಲಿದೆ ಎಂದು ಐಎಂಎಫ್ ವರದಿ ಭವಿಷ್ಯ ನುಡಿದಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಉಂಟಾದ ಸಾಲದ ಹೊರೆಗಳನ್ನು ನಿಭಾಯಿಸಲು ಮತ್ತು ಖಾಲಿಯಾದ ಆರ್ಥಿಕ ವ್ಯವಸ್ಥೆಯನ್ನು ತುಂಬಲು ದೇಶಗಳು ಯೋಚಿಸುತ್ತಿರುವ ಹಿನ್ನೆಲೆ, ವಿಶ್ವದಾದ್ಯಂತ ಹಣಕಾಸಿನ ನೀತಿಗೆ 2024 “ಬಹಳ ಕಠಿಣ ವರ್ಷ” ಎಂದು ಜಾರ್ಜಿವಾ ಹೇಳಿದ್ದಾರೆ.

ಈ ವರ್ಷ ಜಾಗತಿಕವಾಗಿ ಶತಕೋಟಿ ಜನರು ಚುನಾವಣೆ ಎದುರಿಸಲಿದ್ದಾರೆ. ಜನಬೆಂಬಲವನ್ನು ಗಳಿಸಲು ವೆಚ್ಚ ಹೆಚ್ಚಿಸಲು ಮತ್ತು ತೆರಿಗೆ ಕಡಿತಗೊಳಿಸಲು ಇದು ಸರ್ಕಾರಗಳ ಮೇಲೆ ಒತ್ತಡ ಹೇರಬಹುದು. ಜಗತ್ತಿನ ಸುಮಾರು 80 ದೇಶಗಳಲ್ಲಿ ಚುನಾವಣೆ ನಡೆಯಲಿವೆ. ಚುನಾವಣೆಗಾಗಿ ಪಕ್ಷಗಳು ಮಾಡುವ ಖರ್ಚಿನಿಂದ ಉಂಟಾಗುವ ಒತ್ತಡ ಆರ್ಥಿಕತೆಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುವುದು ನಮಗೆ ಗೊತ್ತಿದೆ ಎಂದು ಜಾರ್ಜಿವಾ ತಿಳಿಸಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ ವರ್ಷ ದೊಡ್ಡ ಮೊತ್ತವನ್ನು ಚುನಾವಣೆಗಾಗಿ ಖರ್ಚು ಮಾಡಲಿವೆ. ಈ ಮೂಲಕ ಹೆಚ್ಚಿನ ಹಣದುಬ್ಬರದ ವಿರುದ್ಧದ ಹೋರಾಟದಲ್ಲಿ ಅವುಗಳು ಸಾಧಿಸಿದ ಕಠಿಣವಾದ ಪ್ರಗತಿಯನ್ನು ದುರ್ಬಲಗೊಳಿಸಲಿವೆ ಎಂದು ಜಾರ್ಜಿವಾ ಹೇಳಿದ್ದಾರೆ.

ಐಎಂಎಫ್‌ನ ಚುಕ್ಕಾಣಿ ಹಿಡಿದು ಜಾರ್ಜಿವಾ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದು, ಈ ವರ್ಷ ಮತ್ತೊಮ್ಮೆ ಆಯ್ಕೆ ಬಯಸಿದ್ದಾರಾ? ಎಂಬುವುದಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

ಇದನ್ನೂ ಓದಿ : ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...