Homeಮುಖಪುಟ"ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ"

“ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ”

- Advertisement -
- Advertisement -

ಕೃತಕ ಬುದ್ಧಿಮತ್ತೆ (Artificial Intelligence) ಪ್ರಪಂಚದಾದ್ಯಂತ ಉದ್ಯೋಗ ಭದ್ರತೆಗೆ ದೊಡ್ಡ ಅಪಾಯವನ್ನುಂಟು ಮಾಡಲಿದೆ. ಆದರೆ, ಇದು ಉತ್ಪಾದನಾ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಗತಿಕ ಬೆಳವಣಿಗೆಯನ್ನು ಉತ್ತೇಜಿಸಲು ಅವಕಾಶ ನೀಡಲಿದೆ ಎಂದು ಇಂಟರ್‌ನ್ಯಾಷನ್ ಮಾನಿಟರಿ ಫಂಡ್ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶ್ವ ಆರ್ಥಿಕ ಸಭೆಗೆ ಹೊರಡುವ ಮುನ್ನ ವಾಷಿಂಗ್ಟನ್‌ನಲ್ಲಿ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಧಾರಿತ ಆರ್ಥಿಕತೆಗಳಲ್ಲಿನ 60 ಪ್ರತಿಶತ ಉದ್ಯೋಗಗಳ ಮೇಲೆ ಎಐ ತಂತ್ರಜ್ಞಾನ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಎಐ ಕಡಿಮೆ ಪರಿಣಾಮ ಬೀರಲಿದೆ. ಆದರೆ, ಜಾಗತಿಕವಾಗಿ 40 ಪ್ರತಿಶತದಷ್ಟು ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ” ಎಂದು ಹೊಸ ಐಎಂಎಫ್ ವರದಿಯನ್ನು ಉಲ್ಲೇಖಿಸಿ ಕ್ರಿಸ್ಟಲಿನಾ ಹೇಳಿದ್ದಾರೆ.

ಭಾನುವಾರ ಸಂಜೆ ಪ್ರಕಟಗೊಂಡ ಐಎಂಎಫ್ ವರದಿಯು, ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಅರ್ಧದಷ್ಟು ಮಾತ್ರ ಋಣಾತ್ಮಕ ಪರಿಣಾಮ ಬೀರಲಿದೆ. ಇನ್ನರ್ಧ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ಲಾಭ ಪಡೆಯಲಿದೆ ಎಂದಿದೆ.

ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮ ಬೀರಬಹುದು ಅಥವಾ ಧನಾತ್ಮಕ ಪರಿಣಾಮ ಬೀರಬಹುದು. ಧನಾತ್ಮಕ ಪರಿಣಾಮ ಬೀರಿದರೆ ಉತ್ಪಾದನಾ ಮಟ್ಟ ಹೆಚ್ಚಳಗೊಂಡು ಆದಾಯದ ಮಟ್ಟವು ಹೆಚ್ಚಾಗಬಹುದು ಎಂದು ಜಾರ್ಜಿವಾ ಹೇಳಿದ್ದಾರೆ.

ಕಡಿಮೆ ಆದಾಯದ ದೇಶಗಳು ಕೃತಕ ಬುದ್ದಿಮತ್ತೆಯ ಲಾಭವನ್ನು ಪಡೆಯಲು ನಿರ್ದಿಷ್ಟ ಗುರಿ ತಲುಪಲು ನಾವು ಸಹಾಯ ಮಾಡಬೇಕು ಎಂದು ಜಾರ್ಜಿವಾ ತಿಳಿಸಿದ್ದಾರೆ.

ಉದಯೋನ್ಮುಖ ಮಾರುಕಟ್ಟೆಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿನ ಕಾರ್ಮಿಕ ಮಾರುಕಟ್ಟೆಗಳು ಎಐನಿಂದ ಸಣ್ಣ ಆರಂಭಿಕ ಪರಿಣಾಮವನ್ನು ನೋಡಲಿದೆ. ಆದರೆ, ಕೆಲಸದ ಸ್ಥಳದಲ್ಲಿ ಅದರ ಏಕೀಕರಣದ ಮೂಲಕ ಉಂಟಾಗುವ ವರ್ಧಿತ ಉತ್ಪಾದಕತೆಯಿಂದ ಅವು ಕಡಿಮೆ ಲಾಭವನ್ನು ಪಡೆಯಲಿದೆ ಎಂದು ಐಎಂಎಫ್ ವರದಿ ಭವಿಷ್ಯ ನುಡಿದಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಉಂಟಾದ ಸಾಲದ ಹೊರೆಗಳನ್ನು ನಿಭಾಯಿಸಲು ಮತ್ತು ಖಾಲಿಯಾದ ಆರ್ಥಿಕ ವ್ಯವಸ್ಥೆಯನ್ನು ತುಂಬಲು ದೇಶಗಳು ಯೋಚಿಸುತ್ತಿರುವ ಹಿನ್ನೆಲೆ, ವಿಶ್ವದಾದ್ಯಂತ ಹಣಕಾಸಿನ ನೀತಿಗೆ 2024 “ಬಹಳ ಕಠಿಣ ವರ್ಷ” ಎಂದು ಜಾರ್ಜಿವಾ ಹೇಳಿದ್ದಾರೆ.

ಈ ವರ್ಷ ಜಾಗತಿಕವಾಗಿ ಶತಕೋಟಿ ಜನರು ಚುನಾವಣೆ ಎದುರಿಸಲಿದ್ದಾರೆ. ಜನಬೆಂಬಲವನ್ನು ಗಳಿಸಲು ವೆಚ್ಚ ಹೆಚ್ಚಿಸಲು ಮತ್ತು ತೆರಿಗೆ ಕಡಿತಗೊಳಿಸಲು ಇದು ಸರ್ಕಾರಗಳ ಮೇಲೆ ಒತ್ತಡ ಹೇರಬಹುದು. ಜಗತ್ತಿನ ಸುಮಾರು 80 ದೇಶಗಳಲ್ಲಿ ಚುನಾವಣೆ ನಡೆಯಲಿವೆ. ಚುನಾವಣೆಗಾಗಿ ಪಕ್ಷಗಳು ಮಾಡುವ ಖರ್ಚಿನಿಂದ ಉಂಟಾಗುವ ಒತ್ತಡ ಆರ್ಥಿಕತೆಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುವುದು ನಮಗೆ ಗೊತ್ತಿದೆ ಎಂದು ಜಾರ್ಜಿವಾ ತಿಳಿಸಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ ವರ್ಷ ದೊಡ್ಡ ಮೊತ್ತವನ್ನು ಚುನಾವಣೆಗಾಗಿ ಖರ್ಚು ಮಾಡಲಿವೆ. ಈ ಮೂಲಕ ಹೆಚ್ಚಿನ ಹಣದುಬ್ಬರದ ವಿರುದ್ಧದ ಹೋರಾಟದಲ್ಲಿ ಅವುಗಳು ಸಾಧಿಸಿದ ಕಠಿಣವಾದ ಪ್ರಗತಿಯನ್ನು ದುರ್ಬಲಗೊಳಿಸಲಿವೆ ಎಂದು ಜಾರ್ಜಿವಾ ಹೇಳಿದ್ದಾರೆ.

ಐಎಂಎಫ್‌ನ ಚುಕ್ಕಾಣಿ ಹಿಡಿದು ಜಾರ್ಜಿವಾ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದು, ಈ ವರ್ಷ ಮತ್ತೊಮ್ಮೆ ಆಯ್ಕೆ ಬಯಸಿದ್ದಾರಾ? ಎಂಬುವುದಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

ಇದನ್ನೂ ಓದಿ : ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...