Homeಮುಖಪುಟ"ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ"

“ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ”

- Advertisement -
- Advertisement -

ಕೃತಕ ಬುದ್ಧಿಮತ್ತೆ (Artificial Intelligence) ಪ್ರಪಂಚದಾದ್ಯಂತ ಉದ್ಯೋಗ ಭದ್ರತೆಗೆ ದೊಡ್ಡ ಅಪಾಯವನ್ನುಂಟು ಮಾಡಲಿದೆ. ಆದರೆ, ಇದು ಉತ್ಪಾದನಾ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಗತಿಕ ಬೆಳವಣಿಗೆಯನ್ನು ಉತ್ತೇಜಿಸಲು ಅವಕಾಶ ನೀಡಲಿದೆ ಎಂದು ಇಂಟರ್‌ನ್ಯಾಷನ್ ಮಾನಿಟರಿ ಫಂಡ್ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶ್ವ ಆರ್ಥಿಕ ಸಭೆಗೆ ಹೊರಡುವ ಮುನ್ನ ವಾಷಿಂಗ್ಟನ್‌ನಲ್ಲಿ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಧಾರಿತ ಆರ್ಥಿಕತೆಗಳಲ್ಲಿನ 60 ಪ್ರತಿಶತ ಉದ್ಯೋಗಗಳ ಮೇಲೆ ಎಐ ತಂತ್ರಜ್ಞಾನ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಎಐ ಕಡಿಮೆ ಪರಿಣಾಮ ಬೀರಲಿದೆ. ಆದರೆ, ಜಾಗತಿಕವಾಗಿ 40 ಪ್ರತಿಶತದಷ್ಟು ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ” ಎಂದು ಹೊಸ ಐಎಂಎಫ್ ವರದಿಯನ್ನು ಉಲ್ಲೇಖಿಸಿ ಕ್ರಿಸ್ಟಲಿನಾ ಹೇಳಿದ್ದಾರೆ.

ಭಾನುವಾರ ಸಂಜೆ ಪ್ರಕಟಗೊಂಡ ಐಎಂಎಫ್ ವರದಿಯು, ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಅರ್ಧದಷ್ಟು ಮಾತ್ರ ಋಣಾತ್ಮಕ ಪರಿಣಾಮ ಬೀರಲಿದೆ. ಇನ್ನರ್ಧ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ಲಾಭ ಪಡೆಯಲಿದೆ ಎಂದಿದೆ.

ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮ ಬೀರಬಹುದು ಅಥವಾ ಧನಾತ್ಮಕ ಪರಿಣಾಮ ಬೀರಬಹುದು. ಧನಾತ್ಮಕ ಪರಿಣಾಮ ಬೀರಿದರೆ ಉತ್ಪಾದನಾ ಮಟ್ಟ ಹೆಚ್ಚಳಗೊಂಡು ಆದಾಯದ ಮಟ್ಟವು ಹೆಚ್ಚಾಗಬಹುದು ಎಂದು ಜಾರ್ಜಿವಾ ಹೇಳಿದ್ದಾರೆ.

ಕಡಿಮೆ ಆದಾಯದ ದೇಶಗಳು ಕೃತಕ ಬುದ್ದಿಮತ್ತೆಯ ಲಾಭವನ್ನು ಪಡೆಯಲು ನಿರ್ದಿಷ್ಟ ಗುರಿ ತಲುಪಲು ನಾವು ಸಹಾಯ ಮಾಡಬೇಕು ಎಂದು ಜಾರ್ಜಿವಾ ತಿಳಿಸಿದ್ದಾರೆ.

ಉದಯೋನ್ಮುಖ ಮಾರುಕಟ್ಟೆಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿನ ಕಾರ್ಮಿಕ ಮಾರುಕಟ್ಟೆಗಳು ಎಐನಿಂದ ಸಣ್ಣ ಆರಂಭಿಕ ಪರಿಣಾಮವನ್ನು ನೋಡಲಿದೆ. ಆದರೆ, ಕೆಲಸದ ಸ್ಥಳದಲ್ಲಿ ಅದರ ಏಕೀಕರಣದ ಮೂಲಕ ಉಂಟಾಗುವ ವರ್ಧಿತ ಉತ್ಪಾದಕತೆಯಿಂದ ಅವು ಕಡಿಮೆ ಲಾಭವನ್ನು ಪಡೆಯಲಿದೆ ಎಂದು ಐಎಂಎಫ್ ವರದಿ ಭವಿಷ್ಯ ನುಡಿದಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಉಂಟಾದ ಸಾಲದ ಹೊರೆಗಳನ್ನು ನಿಭಾಯಿಸಲು ಮತ್ತು ಖಾಲಿಯಾದ ಆರ್ಥಿಕ ವ್ಯವಸ್ಥೆಯನ್ನು ತುಂಬಲು ದೇಶಗಳು ಯೋಚಿಸುತ್ತಿರುವ ಹಿನ್ನೆಲೆ, ವಿಶ್ವದಾದ್ಯಂತ ಹಣಕಾಸಿನ ನೀತಿಗೆ 2024 “ಬಹಳ ಕಠಿಣ ವರ್ಷ” ಎಂದು ಜಾರ್ಜಿವಾ ಹೇಳಿದ್ದಾರೆ.

ಈ ವರ್ಷ ಜಾಗತಿಕವಾಗಿ ಶತಕೋಟಿ ಜನರು ಚುನಾವಣೆ ಎದುರಿಸಲಿದ್ದಾರೆ. ಜನಬೆಂಬಲವನ್ನು ಗಳಿಸಲು ವೆಚ್ಚ ಹೆಚ್ಚಿಸಲು ಮತ್ತು ತೆರಿಗೆ ಕಡಿತಗೊಳಿಸಲು ಇದು ಸರ್ಕಾರಗಳ ಮೇಲೆ ಒತ್ತಡ ಹೇರಬಹುದು. ಜಗತ್ತಿನ ಸುಮಾರು 80 ದೇಶಗಳಲ್ಲಿ ಚುನಾವಣೆ ನಡೆಯಲಿವೆ. ಚುನಾವಣೆಗಾಗಿ ಪಕ್ಷಗಳು ಮಾಡುವ ಖರ್ಚಿನಿಂದ ಉಂಟಾಗುವ ಒತ್ತಡ ಆರ್ಥಿಕತೆಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುವುದು ನಮಗೆ ಗೊತ್ತಿದೆ ಎಂದು ಜಾರ್ಜಿವಾ ತಿಳಿಸಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ ವರ್ಷ ದೊಡ್ಡ ಮೊತ್ತವನ್ನು ಚುನಾವಣೆಗಾಗಿ ಖರ್ಚು ಮಾಡಲಿವೆ. ಈ ಮೂಲಕ ಹೆಚ್ಚಿನ ಹಣದುಬ್ಬರದ ವಿರುದ್ಧದ ಹೋರಾಟದಲ್ಲಿ ಅವುಗಳು ಸಾಧಿಸಿದ ಕಠಿಣವಾದ ಪ್ರಗತಿಯನ್ನು ದುರ್ಬಲಗೊಳಿಸಲಿವೆ ಎಂದು ಜಾರ್ಜಿವಾ ಹೇಳಿದ್ದಾರೆ.

ಐಎಂಎಫ್‌ನ ಚುಕ್ಕಾಣಿ ಹಿಡಿದು ಜಾರ್ಜಿವಾ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದು, ಈ ವರ್ಷ ಮತ್ತೊಮ್ಮೆ ಆಯ್ಕೆ ಬಯಸಿದ್ದಾರಾ? ಎಂಬುವುದಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

ಇದನ್ನೂ ಓದಿ : ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...