Homeಮುಖಪುಟ"ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ"

“ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ”

- Advertisement -
- Advertisement -

ಕೃತಕ ಬುದ್ಧಿಮತ್ತೆ (Artificial Intelligence) ಪ್ರಪಂಚದಾದ್ಯಂತ ಉದ್ಯೋಗ ಭದ್ರತೆಗೆ ದೊಡ್ಡ ಅಪಾಯವನ್ನುಂಟು ಮಾಡಲಿದೆ. ಆದರೆ, ಇದು ಉತ್ಪಾದನಾ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಗತಿಕ ಬೆಳವಣಿಗೆಯನ್ನು ಉತ್ತೇಜಿಸಲು ಅವಕಾಶ ನೀಡಲಿದೆ ಎಂದು ಇಂಟರ್‌ನ್ಯಾಷನ್ ಮಾನಿಟರಿ ಫಂಡ್ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶ್ವ ಆರ್ಥಿಕ ಸಭೆಗೆ ಹೊರಡುವ ಮುನ್ನ ವಾಷಿಂಗ್ಟನ್‌ನಲ್ಲಿ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಧಾರಿತ ಆರ್ಥಿಕತೆಗಳಲ್ಲಿನ 60 ಪ್ರತಿಶತ ಉದ್ಯೋಗಗಳ ಮೇಲೆ ಎಐ ತಂತ್ರಜ್ಞಾನ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಎಐ ಕಡಿಮೆ ಪರಿಣಾಮ ಬೀರಲಿದೆ. ಆದರೆ, ಜಾಗತಿಕವಾಗಿ 40 ಪ್ರತಿಶತದಷ್ಟು ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ” ಎಂದು ಹೊಸ ಐಎಂಎಫ್ ವರದಿಯನ್ನು ಉಲ್ಲೇಖಿಸಿ ಕ್ರಿಸ್ಟಲಿನಾ ಹೇಳಿದ್ದಾರೆ.

ಭಾನುವಾರ ಸಂಜೆ ಪ್ರಕಟಗೊಂಡ ಐಎಂಎಫ್ ವರದಿಯು, ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಅರ್ಧದಷ್ಟು ಮಾತ್ರ ಋಣಾತ್ಮಕ ಪರಿಣಾಮ ಬೀರಲಿದೆ. ಇನ್ನರ್ಧ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ಲಾಭ ಪಡೆಯಲಿದೆ ಎಂದಿದೆ.

ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮ ಬೀರಬಹುದು ಅಥವಾ ಧನಾತ್ಮಕ ಪರಿಣಾಮ ಬೀರಬಹುದು. ಧನಾತ್ಮಕ ಪರಿಣಾಮ ಬೀರಿದರೆ ಉತ್ಪಾದನಾ ಮಟ್ಟ ಹೆಚ್ಚಳಗೊಂಡು ಆದಾಯದ ಮಟ್ಟವು ಹೆಚ್ಚಾಗಬಹುದು ಎಂದು ಜಾರ್ಜಿವಾ ಹೇಳಿದ್ದಾರೆ.

ಕಡಿಮೆ ಆದಾಯದ ದೇಶಗಳು ಕೃತಕ ಬುದ್ದಿಮತ್ತೆಯ ಲಾಭವನ್ನು ಪಡೆಯಲು ನಿರ್ದಿಷ್ಟ ಗುರಿ ತಲುಪಲು ನಾವು ಸಹಾಯ ಮಾಡಬೇಕು ಎಂದು ಜಾರ್ಜಿವಾ ತಿಳಿಸಿದ್ದಾರೆ.

ಉದಯೋನ್ಮುಖ ಮಾರುಕಟ್ಟೆಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿನ ಕಾರ್ಮಿಕ ಮಾರುಕಟ್ಟೆಗಳು ಎಐನಿಂದ ಸಣ್ಣ ಆರಂಭಿಕ ಪರಿಣಾಮವನ್ನು ನೋಡಲಿದೆ. ಆದರೆ, ಕೆಲಸದ ಸ್ಥಳದಲ್ಲಿ ಅದರ ಏಕೀಕರಣದ ಮೂಲಕ ಉಂಟಾಗುವ ವರ್ಧಿತ ಉತ್ಪಾದಕತೆಯಿಂದ ಅವು ಕಡಿಮೆ ಲಾಭವನ್ನು ಪಡೆಯಲಿದೆ ಎಂದು ಐಎಂಎಫ್ ವರದಿ ಭವಿಷ್ಯ ನುಡಿದಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಉಂಟಾದ ಸಾಲದ ಹೊರೆಗಳನ್ನು ನಿಭಾಯಿಸಲು ಮತ್ತು ಖಾಲಿಯಾದ ಆರ್ಥಿಕ ವ್ಯವಸ್ಥೆಯನ್ನು ತುಂಬಲು ದೇಶಗಳು ಯೋಚಿಸುತ್ತಿರುವ ಹಿನ್ನೆಲೆ, ವಿಶ್ವದಾದ್ಯಂತ ಹಣಕಾಸಿನ ನೀತಿಗೆ 2024 “ಬಹಳ ಕಠಿಣ ವರ್ಷ” ಎಂದು ಜಾರ್ಜಿವಾ ಹೇಳಿದ್ದಾರೆ.

ಈ ವರ್ಷ ಜಾಗತಿಕವಾಗಿ ಶತಕೋಟಿ ಜನರು ಚುನಾವಣೆ ಎದುರಿಸಲಿದ್ದಾರೆ. ಜನಬೆಂಬಲವನ್ನು ಗಳಿಸಲು ವೆಚ್ಚ ಹೆಚ್ಚಿಸಲು ಮತ್ತು ತೆರಿಗೆ ಕಡಿತಗೊಳಿಸಲು ಇದು ಸರ್ಕಾರಗಳ ಮೇಲೆ ಒತ್ತಡ ಹೇರಬಹುದು. ಜಗತ್ತಿನ ಸುಮಾರು 80 ದೇಶಗಳಲ್ಲಿ ಚುನಾವಣೆ ನಡೆಯಲಿವೆ. ಚುನಾವಣೆಗಾಗಿ ಪಕ್ಷಗಳು ಮಾಡುವ ಖರ್ಚಿನಿಂದ ಉಂಟಾಗುವ ಒತ್ತಡ ಆರ್ಥಿಕತೆಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುವುದು ನಮಗೆ ಗೊತ್ತಿದೆ ಎಂದು ಜಾರ್ಜಿವಾ ತಿಳಿಸಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ ವರ್ಷ ದೊಡ್ಡ ಮೊತ್ತವನ್ನು ಚುನಾವಣೆಗಾಗಿ ಖರ್ಚು ಮಾಡಲಿವೆ. ಈ ಮೂಲಕ ಹೆಚ್ಚಿನ ಹಣದುಬ್ಬರದ ವಿರುದ್ಧದ ಹೋರಾಟದಲ್ಲಿ ಅವುಗಳು ಸಾಧಿಸಿದ ಕಠಿಣವಾದ ಪ್ರಗತಿಯನ್ನು ದುರ್ಬಲಗೊಳಿಸಲಿವೆ ಎಂದು ಜಾರ್ಜಿವಾ ಹೇಳಿದ್ದಾರೆ.

ಐಎಂಎಫ್‌ನ ಚುಕ್ಕಾಣಿ ಹಿಡಿದು ಜಾರ್ಜಿವಾ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದು, ಈ ವರ್ಷ ಮತ್ತೊಮ್ಮೆ ಆಯ್ಕೆ ಬಯಸಿದ್ದಾರಾ? ಎಂಬುವುದಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

ಇದನ್ನೂ ಓದಿ : ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...