Homeಮುಖಪುಟ"ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ"

“ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ”

- Advertisement -
- Advertisement -

ಕೃತಕ ಬುದ್ಧಿಮತ್ತೆ (Artificial Intelligence) ಪ್ರಪಂಚದಾದ್ಯಂತ ಉದ್ಯೋಗ ಭದ್ರತೆಗೆ ದೊಡ್ಡ ಅಪಾಯವನ್ನುಂಟು ಮಾಡಲಿದೆ. ಆದರೆ, ಇದು ಉತ್ಪಾದನಾ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಗತಿಕ ಬೆಳವಣಿಗೆಯನ್ನು ಉತ್ತೇಜಿಸಲು ಅವಕಾಶ ನೀಡಲಿದೆ ಎಂದು ಇಂಟರ್‌ನ್ಯಾಷನ್ ಮಾನಿಟರಿ ಫಂಡ್ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶ್ವ ಆರ್ಥಿಕ ಸಭೆಗೆ ಹೊರಡುವ ಮುನ್ನ ವಾಷಿಂಗ್ಟನ್‌ನಲ್ಲಿ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಧಾರಿತ ಆರ್ಥಿಕತೆಗಳಲ್ಲಿನ 60 ಪ್ರತಿಶತ ಉದ್ಯೋಗಗಳ ಮೇಲೆ ಎಐ ತಂತ್ರಜ್ಞಾನ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಎಐ ಕಡಿಮೆ ಪರಿಣಾಮ ಬೀರಲಿದೆ. ಆದರೆ, ಜಾಗತಿಕವಾಗಿ 40 ಪ್ರತಿಶತದಷ್ಟು ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ” ಎಂದು ಹೊಸ ಐಎಂಎಫ್ ವರದಿಯನ್ನು ಉಲ್ಲೇಖಿಸಿ ಕ್ರಿಸ್ಟಲಿನಾ ಹೇಳಿದ್ದಾರೆ.

ಭಾನುವಾರ ಸಂಜೆ ಪ್ರಕಟಗೊಂಡ ಐಎಂಎಫ್ ವರದಿಯು, ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಅರ್ಧದಷ್ಟು ಮಾತ್ರ ಋಣಾತ್ಮಕ ಪರಿಣಾಮ ಬೀರಲಿದೆ. ಇನ್ನರ್ಧ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ಲಾಭ ಪಡೆಯಲಿದೆ ಎಂದಿದೆ.

ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮ ಬೀರಬಹುದು ಅಥವಾ ಧನಾತ್ಮಕ ಪರಿಣಾಮ ಬೀರಬಹುದು. ಧನಾತ್ಮಕ ಪರಿಣಾಮ ಬೀರಿದರೆ ಉತ್ಪಾದನಾ ಮಟ್ಟ ಹೆಚ್ಚಳಗೊಂಡು ಆದಾಯದ ಮಟ್ಟವು ಹೆಚ್ಚಾಗಬಹುದು ಎಂದು ಜಾರ್ಜಿವಾ ಹೇಳಿದ್ದಾರೆ.

ಕಡಿಮೆ ಆದಾಯದ ದೇಶಗಳು ಕೃತಕ ಬುದ್ದಿಮತ್ತೆಯ ಲಾಭವನ್ನು ಪಡೆಯಲು ನಿರ್ದಿಷ್ಟ ಗುರಿ ತಲುಪಲು ನಾವು ಸಹಾಯ ಮಾಡಬೇಕು ಎಂದು ಜಾರ್ಜಿವಾ ತಿಳಿಸಿದ್ದಾರೆ.

ಉದಯೋನ್ಮುಖ ಮಾರುಕಟ್ಟೆಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿನ ಕಾರ್ಮಿಕ ಮಾರುಕಟ್ಟೆಗಳು ಎಐನಿಂದ ಸಣ್ಣ ಆರಂಭಿಕ ಪರಿಣಾಮವನ್ನು ನೋಡಲಿದೆ. ಆದರೆ, ಕೆಲಸದ ಸ್ಥಳದಲ್ಲಿ ಅದರ ಏಕೀಕರಣದ ಮೂಲಕ ಉಂಟಾಗುವ ವರ್ಧಿತ ಉತ್ಪಾದಕತೆಯಿಂದ ಅವು ಕಡಿಮೆ ಲಾಭವನ್ನು ಪಡೆಯಲಿದೆ ಎಂದು ಐಎಂಎಫ್ ವರದಿ ಭವಿಷ್ಯ ನುಡಿದಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಉಂಟಾದ ಸಾಲದ ಹೊರೆಗಳನ್ನು ನಿಭಾಯಿಸಲು ಮತ್ತು ಖಾಲಿಯಾದ ಆರ್ಥಿಕ ವ್ಯವಸ್ಥೆಯನ್ನು ತುಂಬಲು ದೇಶಗಳು ಯೋಚಿಸುತ್ತಿರುವ ಹಿನ್ನೆಲೆ, ವಿಶ್ವದಾದ್ಯಂತ ಹಣಕಾಸಿನ ನೀತಿಗೆ 2024 “ಬಹಳ ಕಠಿಣ ವರ್ಷ” ಎಂದು ಜಾರ್ಜಿವಾ ಹೇಳಿದ್ದಾರೆ.

ಈ ವರ್ಷ ಜಾಗತಿಕವಾಗಿ ಶತಕೋಟಿ ಜನರು ಚುನಾವಣೆ ಎದುರಿಸಲಿದ್ದಾರೆ. ಜನಬೆಂಬಲವನ್ನು ಗಳಿಸಲು ವೆಚ್ಚ ಹೆಚ್ಚಿಸಲು ಮತ್ತು ತೆರಿಗೆ ಕಡಿತಗೊಳಿಸಲು ಇದು ಸರ್ಕಾರಗಳ ಮೇಲೆ ಒತ್ತಡ ಹೇರಬಹುದು. ಜಗತ್ತಿನ ಸುಮಾರು 80 ದೇಶಗಳಲ್ಲಿ ಚುನಾವಣೆ ನಡೆಯಲಿವೆ. ಚುನಾವಣೆಗಾಗಿ ಪಕ್ಷಗಳು ಮಾಡುವ ಖರ್ಚಿನಿಂದ ಉಂಟಾಗುವ ಒತ್ತಡ ಆರ್ಥಿಕತೆಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುವುದು ನಮಗೆ ಗೊತ್ತಿದೆ ಎಂದು ಜಾರ್ಜಿವಾ ತಿಳಿಸಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ ವರ್ಷ ದೊಡ್ಡ ಮೊತ್ತವನ್ನು ಚುನಾವಣೆಗಾಗಿ ಖರ್ಚು ಮಾಡಲಿವೆ. ಈ ಮೂಲಕ ಹೆಚ್ಚಿನ ಹಣದುಬ್ಬರದ ವಿರುದ್ಧದ ಹೋರಾಟದಲ್ಲಿ ಅವುಗಳು ಸಾಧಿಸಿದ ಕಠಿಣವಾದ ಪ್ರಗತಿಯನ್ನು ದುರ್ಬಲಗೊಳಿಸಲಿವೆ ಎಂದು ಜಾರ್ಜಿವಾ ಹೇಳಿದ್ದಾರೆ.

ಐಎಂಎಫ್‌ನ ಚುಕ್ಕಾಣಿ ಹಿಡಿದು ಜಾರ್ಜಿವಾ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದು, ಈ ವರ್ಷ ಮತ್ತೊಮ್ಮೆ ಆಯ್ಕೆ ಬಯಸಿದ್ದಾರಾ? ಎಂಬುವುದಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

ಇದನ್ನೂ ಓದಿ : ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...