Homeಮುಖಪುಟಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

- Advertisement -
- Advertisement -

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದ್ದಾರೆ.

ವರದಿಗಳ ಪ್ರಕಾರ, ಎಐ ಶೃಂಗಸಭೆಯ ಪ್ರತಿಭಟನೆಗೆ ಸಂಬಂಧಪಟ್ಟಂತೆ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರಾದ ಸೌರಭ್, ಅರ್ಬಾಝ್ ಮತ್ತು ಸಿದ್ಧಾರ್ಥ್ ಎಂಬವರನ್ನು ಬಂಧಿಸಿ ಕರೆತರಲು ದೆಹಲಿ ಪೊಲೀಸರು ಬುಧವಾರ (ಫೆ.25) ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರೋಹ್ರು ಪಟ್ಟಣಕ್ಕೆ ಹೋಗಿದ್ದರು.

ಅಲ್ಲಿನ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ಸಿವಿಲ್ ಡ್ರೆಸ್‌ನಲ್ಲಿ ರೆಸಾರ್ಟ್‌ವೊಂದಕ್ಕೆ ನುಗ್ಗಿದ ದೆಹಲಿ ಪೊಲೀಸರು, ಆರೋಪಿಗಳಾದ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದರು ಮತ್ತು ರೆಸಾರ್ಟ್‌ನ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದಿದ್ದರು. ಬಳಿಕ ಬಂಧಿತರು ಮತ್ತು ಸಿಸಿಟಿವಿ ಡಿವಿಆರ್ ಜೊತೆ ಕಾರಿನಲ್ಲಿ ದೆಹಲಿಗೆ ಹೊರಟ್ಟಿದ್ದರು.

ಈ ವೇಳೆ ರೋಹ್ರು ಪಟ್ಟಣ ಸಮೀಪದ ಚೆಕ್ ಪೋಸ್ಟ್‌ನಲ್ಲಿ ಅವರನ್ನು ತಡೆದ ಸ್ಥಳೀಯ ಪೊಲೀಸರು, ಕಾಂಗ್ರೆಸ್ ಕಾರ್ಯಕರ್ತರನ್ನು ಅಪಹರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ದೆಹಲಿ ಪೊಲೀಸ್ ತಂಡದಲ್ಲಿದ್ದ ಸುಮಾರು 20 ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ. ನಂತರ ಅವರನ್ನು ಸ್ಥಳೀಯ ಧಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ಸಿವಿಲ್ ಡ್ರೆಸ್‌ನಲ್ಲಿ ಬಂದು ಕಾಂಗ್ರೆಸ್‌ ಕಾರ್ಯಕರ್ತರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 365 (ಅಪಹರಣ) ಮತ್ತು 452 (ಅತಿಕ್ರಮಣ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಆ ಬಳಿಕ, ದೆಹಲಿ ಪೊಲೀಸರು ನಿಜವಾಗಿಯೂ ಅಧಿಕೃತ ಕಾರ್ಯದ ಮೇಲೆ ಬಂದಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರ ಗುರುತಿನ ಚೀಟಿಗಳನ್ನು ತಪಾಸಣೆ ಮಾಡಿದ್ದಾರೆ. ಸುಮಾರು 10-12 ಗಂಟೆಗಳ ಕಾಲ ಅವರನ್ನು ಠಾಣೆಯಲ್ಲೇ ಇರಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

ಇದಾದ ಬಳಿಕ, ದೆಹಲಿ ಪೊಲೀಸರು ಬಂಧಿಸಿದ್ದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದ ಸ್ಥಳೀಯ ಪೊಲೀಸರು, ಮಧ್ಯರಾತ್ರಿಯೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ದೆಹಲಿ ಪೊಲೀಸರು ಇವರನ್ನು ಕರೆದೊಯ್ಯಬೇಕಾದರೆ ಕಾನೂನುಬದ್ಧವಾಗಿ ‘ಟ್ರಾನ್ಸಿಟ್ ರಿಮಾಂಡ್’ ಪಡೆಯಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ದೆಹಲಿ ಪೊಲೀಸರು ರೆಸಾರ್ಟ್‌ನಿಂದ ಕಾನೂನುಬಾಹಿರವಾಗಿ ವಶಪಡಿಸಿಕೊಂಡಿದ್ದರು ಎನ್ನಲಾದ ಸಿಸಿಟಿವಿ ಡಿವಿಆರ್ ಮತ್ತು ಇತರ ದಾಖಲೆಗಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ ಮತ್ತು ಅದರ ಬಗ್ಗೆ ಅಧಿಕೃತ ದಾಖಲೆ ನೀಡುವಂತೆ ಒತ್ತಾಯಿಸಿದ್ದಾರೆ.

ಅಂತಿಮವಾಗಿ, ತಡರಾತ್ರಿ ಸುಮಾರು 1:30ಕ್ಕೆ ನ್ಯಾಯಾಲಯವು ದೆಹಲಿ ಪೊಲೀಸರಿಗೆ ‘ಟ್ರಾನ್ಸಿಟ್ ರಿಮಾಂಡ್’ ನೀಡಿತು. ಅದರ ನಂತರ ದೆಹಲಿ ಪೊಲೀಸರು ಆರೋಪಿಗಳೊಂದಿಗೆ ಶಿಮ್ಲಾದಿಂದ ಹೊರಟರು. ಆದರೆ, ಅವರನ್ನು ಶಿಮ್ಲಾ ಹೊರವಲಯದ ಕನ್ಲೋಗ್ ಮತ್ತು ಶೋಗಿ ಎಂಬಲ್ಲಿ ಶಿಮ್ಲಾ ಪೊಲೀಸರು ಎರಡನೇ ಬಾರಿ ತಡೆದರು.

ಈ ಬಾರಿ ಶಿಮ್ಲಾ ಪೊಲೀಸರು ಕೇವಲ ತಡೆಯಲಿಲ್ಲ, ಬದಲಿಗೆ ದೆಹಲಿ ಪೊಲೀಸರ ವಾಹನಗಳ ಮುಂದೆ ಮತ್ತು ಹಿಂದೆ ತಮ್ಮ ಪೊಲೀಸ್ ವಾಹನಗಳನ್ನು ನಿಲ್ಲಿಸಿ ರಸ್ತೆಯನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಿದರು.

ದೆಹಲಿ ಪೊಲೀಸರು ರೋಹ್ರು ರೆಸಾರ್ಟ್‌ನಿಂದ ಸಿಸಿಟಿವಿ ಡಿವಿಆರ್ ಮತ್ತು ಇತರ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. “ನಮ್ಮ ರಾಜ್ಯದ ವ್ಯಾಪ್ತಿಯಲ್ಲಿ ನೀವು ವಶಪಡಿಸಿಕೊಂಡ ವಸ್ತುಗಳ ಬಗ್ಗೆ ನಮಗೆ ಅಧಿಕೃತ ದಾಖಲೆ ನೀಡದೆ ನೀವು ಹೋಗುವಂತಿಲ್ಲ” ಎಂದು ಸ್ಥಳೀಯರು ಪೊಲೀಸರು ಪಟ್ಟು ಹಿಡಿದರು.

ನ್ಯಾಯಾಲಯದ ಆದೇಶ ಕೈಯಲ್ಲಿದ್ದರೂ ಸಹ, ದೆಹಲಿ ಪೊಲೀಸರನ್ನು ಸುಮಾರು 5 ಗಂಟೆಗಳ ಕಾಲ ರಸ್ತೆಯಲ್ಲೇ ತಡೆಹಿಡಿಯಲಾಗಿತ್ತು. ದೆಹಲಿ ಪೊಲೀಸರು ಮತ್ತು ಶಿಮ್ಲಾ ಪೊಲೀಸರ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲೇ ತೀವ್ರ ವಾಗ್ವಾದ ನಡೆಯಿತು.

ಕೊನೆಗೆ ದೆಹಲಿ ಪೊಲೀಸರು ತಾವು ವಶಪಡಿಸಿಕೊಂಡ ವಸ್ತುಗಳ ಪಟ್ಟಿಯನ್ನು ಶಿಮ್ಲಾ ಪೊಲೀಸರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು. ಈ ಪ್ರಕ್ರಿಯೆ ಮುಗಿದ ನಂತರ, ಅಂದರೆ ಗುರುವಾರ (ಫೆ.26) ಮುಂಜಾನೆ ಸುಮಾರು 6:50ಕ್ಕೆ ದೆಹಲಿ ಪೊಲೀಸರು ಹಿಮಾಚಲ ಪ್ರದೇಶದ ಗಡಿ ದಾಟಲು ಅನುಮತಿ ನೀಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...