Homeಮುಖಪುಟಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

- Advertisement -
- Advertisement -

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದ್ದಾರೆ.

ವರದಿಗಳ ಪ್ರಕಾರ, ಎಐ ಶೃಂಗಸಭೆಯ ಪ್ರತಿಭಟನೆಗೆ ಸಂಬಂಧಪಟ್ಟಂತೆ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರಾದ ಸೌರಭ್, ಅರ್ಬಾಝ್ ಮತ್ತು ಸಿದ್ಧಾರ್ಥ್ ಎಂಬವರನ್ನು ಬಂಧಿಸಿ ಕರೆತರಲು ದೆಹಲಿ ಪೊಲೀಸರು ಬುಧವಾರ (ಫೆ.25) ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರೋಹ್ರು ಪಟ್ಟಣಕ್ಕೆ ಹೋಗಿದ್ದರು.

ಅಲ್ಲಿನ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ಸಿವಿಲ್ ಡ್ರೆಸ್‌ನಲ್ಲಿ ರೆಸಾರ್ಟ್‌ವೊಂದಕ್ಕೆ ನುಗ್ಗಿದ ದೆಹಲಿ ಪೊಲೀಸರು, ಆರೋಪಿಗಳಾದ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದರು ಮತ್ತು ರೆಸಾರ್ಟ್‌ನ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದಿದ್ದರು. ಬಳಿಕ ಬಂಧಿತರು ಮತ್ತು ಸಿಸಿಟಿವಿ ಡಿವಿಆರ್ ಜೊತೆ ಕಾರಿನಲ್ಲಿ ದೆಹಲಿಗೆ ಹೊರಟ್ಟಿದ್ದರು.

ಈ ವೇಳೆ ರೋಹ್ರು ಪಟ್ಟಣ ಸಮೀಪದ ಚೆಕ್ ಪೋಸ್ಟ್‌ನಲ್ಲಿ ಅವರನ್ನು ತಡೆದ ಸ್ಥಳೀಯ ಪೊಲೀಸರು, ಕಾಂಗ್ರೆಸ್ ಕಾರ್ಯಕರ್ತರನ್ನು ಅಪಹರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ದೆಹಲಿ ಪೊಲೀಸ್ ತಂಡದಲ್ಲಿದ್ದ ಸುಮಾರು 20 ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ. ನಂತರ ಅವರನ್ನು ಸ್ಥಳೀಯ ಧಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ಸಿವಿಲ್ ಡ್ರೆಸ್‌ನಲ್ಲಿ ಬಂದು ಕಾಂಗ್ರೆಸ್‌ ಕಾರ್ಯಕರ್ತರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 365 (ಅಪಹರಣ) ಮತ್ತು 452 (ಅತಿಕ್ರಮಣ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಆ ಬಳಿಕ, ದೆಹಲಿ ಪೊಲೀಸರು ನಿಜವಾಗಿಯೂ ಅಧಿಕೃತ ಕಾರ್ಯದ ಮೇಲೆ ಬಂದಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರ ಗುರುತಿನ ಚೀಟಿಗಳನ್ನು ತಪಾಸಣೆ ಮಾಡಿದ್ದಾರೆ. ಸುಮಾರು 10-12 ಗಂಟೆಗಳ ಕಾಲ ಅವರನ್ನು ಠಾಣೆಯಲ್ಲೇ ಇರಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

ಇದಾದ ಬಳಿಕ, ದೆಹಲಿ ಪೊಲೀಸರು ಬಂಧಿಸಿದ್ದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದ ಸ್ಥಳೀಯ ಪೊಲೀಸರು, ಮಧ್ಯರಾತ್ರಿಯೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ದೆಹಲಿ ಪೊಲೀಸರು ಇವರನ್ನು ಕರೆದೊಯ್ಯಬೇಕಾದರೆ ಕಾನೂನುಬದ್ಧವಾಗಿ ‘ಟ್ರಾನ್ಸಿಟ್ ರಿಮಾಂಡ್’ ಪಡೆಯಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ದೆಹಲಿ ಪೊಲೀಸರು ರೆಸಾರ್ಟ್‌ನಿಂದ ಕಾನೂನುಬಾಹಿರವಾಗಿ ವಶಪಡಿಸಿಕೊಂಡಿದ್ದರು ಎನ್ನಲಾದ ಸಿಸಿಟಿವಿ ಡಿವಿಆರ್ ಮತ್ತು ಇತರ ದಾಖಲೆಗಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ ಮತ್ತು ಅದರ ಬಗ್ಗೆ ಅಧಿಕೃತ ದಾಖಲೆ ನೀಡುವಂತೆ ಒತ್ತಾಯಿಸಿದ್ದಾರೆ.

ಅಂತಿಮವಾಗಿ, ತಡರಾತ್ರಿ ಸುಮಾರು 1:30ಕ್ಕೆ ನ್ಯಾಯಾಲಯವು ದೆಹಲಿ ಪೊಲೀಸರಿಗೆ ‘ಟ್ರಾನ್ಸಿಟ್ ರಿಮಾಂಡ್’ ನೀಡಿತು. ಅದರ ನಂತರ ದೆಹಲಿ ಪೊಲೀಸರು ಆರೋಪಿಗಳೊಂದಿಗೆ ಶಿಮ್ಲಾದಿಂದ ಹೊರಟರು. ಆದರೆ, ಅವರನ್ನು ಶಿಮ್ಲಾ ಹೊರವಲಯದ ಕನ್ಲೋಗ್ ಮತ್ತು ಶೋಗಿ ಎಂಬಲ್ಲಿ ಶಿಮ್ಲಾ ಪೊಲೀಸರು ಎರಡನೇ ಬಾರಿ ತಡೆದರು.

ಈ ಬಾರಿ ಶಿಮ್ಲಾ ಪೊಲೀಸರು ಕೇವಲ ತಡೆಯಲಿಲ್ಲ, ಬದಲಿಗೆ ದೆಹಲಿ ಪೊಲೀಸರ ವಾಹನಗಳ ಮುಂದೆ ಮತ್ತು ಹಿಂದೆ ತಮ್ಮ ಪೊಲೀಸ್ ವಾಹನಗಳನ್ನು ನಿಲ್ಲಿಸಿ ರಸ್ತೆಯನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಿದರು.

ದೆಹಲಿ ಪೊಲೀಸರು ರೋಹ್ರು ರೆಸಾರ್ಟ್‌ನಿಂದ ಸಿಸಿಟಿವಿ ಡಿವಿಆರ್ ಮತ್ತು ಇತರ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. “ನಮ್ಮ ರಾಜ್ಯದ ವ್ಯಾಪ್ತಿಯಲ್ಲಿ ನೀವು ವಶಪಡಿಸಿಕೊಂಡ ವಸ್ತುಗಳ ಬಗ್ಗೆ ನಮಗೆ ಅಧಿಕೃತ ದಾಖಲೆ ನೀಡದೆ ನೀವು ಹೋಗುವಂತಿಲ್ಲ” ಎಂದು ಸ್ಥಳೀಯರು ಪೊಲೀಸರು ಪಟ್ಟು ಹಿಡಿದರು.

ನ್ಯಾಯಾಲಯದ ಆದೇಶ ಕೈಯಲ್ಲಿದ್ದರೂ ಸಹ, ದೆಹಲಿ ಪೊಲೀಸರನ್ನು ಸುಮಾರು 5 ಗಂಟೆಗಳ ಕಾಲ ರಸ್ತೆಯಲ್ಲೇ ತಡೆಹಿಡಿಯಲಾಗಿತ್ತು. ದೆಹಲಿ ಪೊಲೀಸರು ಮತ್ತು ಶಿಮ್ಲಾ ಪೊಲೀಸರ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲೇ ತೀವ್ರ ವಾಗ್ವಾದ ನಡೆಯಿತು.

ಕೊನೆಗೆ ದೆಹಲಿ ಪೊಲೀಸರು ತಾವು ವಶಪಡಿಸಿಕೊಂಡ ವಸ್ತುಗಳ ಪಟ್ಟಿಯನ್ನು ಶಿಮ್ಲಾ ಪೊಲೀಸರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು. ಈ ಪ್ರಕ್ರಿಯೆ ಮುಗಿದ ನಂತರ, ಅಂದರೆ ಗುರುವಾರ (ಫೆ.26) ಮುಂಜಾನೆ ಸುಮಾರು 6:50ಕ್ಕೆ ದೆಹಲಿ ಪೊಲೀಸರು ಹಿಮಾಚಲ ಪ್ರದೇಶದ ಗಡಿ ದಾಟಲು ಅನುಮತಿ ನೀಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...