Homeಮುಖಪುಟಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

- Advertisement -
- Advertisement -

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ದೆಹಲಿ ಪೊಲೀಸರು ಆರೋಪಿಗಳ ಕಸ್ಟಡಿ (ರಿಮಾಂಡ್) ಕೋರುವಾಗ, ಅವರು ನೇಪಾಳದಲ್ಲಿ ನಡೆದ ಪ್ರತಿಭಟನೆಯ ಮಾದರಿಯಲ್ಲೇ ಇಲ್ಲೂ ಪ್ರತಿಭಟನೆ ನಡೆಸಿದ್ದಾರೆ. ಇದು ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಮಾನಿಸುವ ಪಿತೂರಿಯಾಗಿದೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಭಾರತ- ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸುವ ವೇಳೆ ಆರೋಪಿಗಳು ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಸಂದೇಶಗಳಿದ್ದ ಟಿ-ಶರ್ಟ್‌ಗಳನ್ನು ಧರಿಸಿದ್ದರು ಎಂದು ಸಾರ್ವಜನಿಕ ಅಭಿಯೋಜಕರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಪ್ರತಿಭಟನೆಯ ಹಿಂದೆ ದೊಡ್ಡ ಪಿತೂರಿ ಅಡಗಿದೆ. ಇತರ ಕೆಲ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣದ ಸಮಗ್ರ ತನಿಖೆಗಾಗಿ ಬಂಧಿತರ ಕಸ್ಟಡಿ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಪ್ರತಿಭಟನೆ ತಡೆಯುವ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಪ್ರತಿಭಟನೆಗೆ ಹಣಕಾಸಿನ ನೆರವು ಎಲ್ಲಿಂದ ಬಂದಿದೆ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಆರೋಪಿಗಳ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳುವ ಅಗತ್ಯವಿದೆ ಎಂದಿರುವ ಪೊಲೀಸರು, ನಾಲ್ಕು ವಿಭಿನ್ನ ಸ್ಥಳಗಳಿಂದ ಬಂದ ನಾಲ್ವರು ವ್ಯಕ್ತಿಗಳು ಒಟ್ಟಾಗಿ ಈ ಟಿ-ಶರ್ಟ್‌ಗಳನ್ನು ಮುದ್ರಿಸಿದ್ದರು ಎಂಬ ಅಂಶವನ್ನೂ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ ಎಂದು ವರದಿಗಳು ಹೇಳಿವೆ.

ಈ ನಡುವೆ ಆರೋಪಿಗಳ ಪರ ವಕೀಲರು, ಆರೋಪಿಗಳು ವಿರೋಧ ಪಕ್ಷಕ್ಕೆ ಸೇರಿದವರಾಗಿರುವುದರಿಂದ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಗಳು ಎಲ್ಲೆಡೆ ನಡೆಯುತ್ತಿವೆ ಮತ್ತು ಪ್ರತಿಭಟನೆ ಮಾಡುವುದು ಅವರ ಹಕ್ಕು ಎಂದು ವಾದಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯವನ್ನು ಈ ರೀತಿ ಹತ್ತಿಕ್ಕಬಾರದು ಎಂದು ಹೇಳಿದ್ದಾರೆ.

ಸುಮಾರು 15 ಜನರು ಎಐ ಶೃಂಗಸಭೆಯ ಹಾಲ್ ಸಂಖ್ಯೆ 5ರ ಲಾಬಿ ಪ್ರದೇಶಕ್ಕೆ ಪ್ರವೇಶಿಸಿ, ಶರ್ಟ್‌ಗಳ ಒಳಗೆ ಧರಿಸಿದ್ದ ಟಿ-ಶರ್ಟ್‌ಗಳನ್ನು ತೆಗೆದು ಘೋಷಣೆಗಳನ್ನು ಕೂಗಿದ್ದಾರೆ ಎಂದು ಎಸಿಪಿ (ನವದೆಹಲಿ) ದೇವೇಶ್ ಮಹ್ಲಾ ಹೇಳಿದ್ದಾರೆ. ಪ್ರತಿಭಟನೆಯ ನಂತರ ದೆಹಲಿ ಪೊಲೀಸರು ಆರಂಭದಲ್ಲಿ ಸುಮಾರು 10 ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದರು.

ಬಂಧಿತ ನಾಲ್ವರು ಆರೋಪಿಗಳನ್ನು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು; ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದ್ದು, ಅದರಲ್ಲಿ ಹಲವು ಗಂಭೀರ ಆರೋಪಗಳನ್ನು ಹೊರಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದರು.

ಅಪರಾಧಿಗಳು ಕಾರ್ಯಕ್ರಮದ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ಸುದೀರ್ಘವಾದ ಸಂಘರ್ಷ ಅಥವಾ ನೂಕಾಟದಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...