Homeಮುಖಪುಟಆರ್‌ಎಸ್‌ಎಸ್‌ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕನನ್ನು ಪಕ್ಷದ ಪ್ರಮುಖ ಹುದ್ದೆಯಿಂದ ಕೈಬಿಟ್ಟ ಎಐಎಡಿಎಂಕೆ

ಆರ್‌ಎಸ್‌ಎಸ್‌ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕನನ್ನು ಪಕ್ಷದ ಪ್ರಮುಖ ಹುದ್ದೆಯಿಂದ ಕೈಬಿಟ್ಟ ಎಐಎಡಿಎಂಕೆ

- Advertisement -
- Advertisement -

ಆರ್‌ಎಸ್‌ಎಸ್ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿದ್ದ ಕನ್ಯಾಕುಮಾರಿ ಶಾಸಕ ಎನ್ ತಲವೈ ಸುಂದರಂ ಅವರನ್ನು ಎಐಎಡಿಎಂಕೆ ಪಕ್ಷದ ಕನ್ಯಾಕುಮಾರಿ (ಪೂರ್ವ) ಜಿಲ್ಲಾ ಘಟಕದ ಕಾರ್ಯದರ್ಶಿ ಮತ್ತು ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಮಂಗಳವಾರ ‘ತಾತ್ಕಾಲಿಕವಾಗಿ’ ಕೈ ಬಿಡಲಾಗಿದೆ.

ಜೆ ಜಯಲಲಿತಾ ಸಂಪುಟದ ಮಾಜಿ ಸಚಿವ ಹಾಗೂ ಎಐಎಡಿಎಂಕೆಯ ಹಿರಿಯ ನಾಯಕ ತಲವೈ ಸುಂದರಂ ಅವರು ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡ ಕಾರಣ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಲವೈ ಸುಂದರಂ ಅವರು ಎಐಎಡಿಎಂಕೆಯ ಹಿರಿಯ ಎರಡನೇ ಹಂತದ ನಾಯಕರಲ್ಲಿ ಒಬ್ಬರು, ಸಚಿವರಾಗಿ, ರಾಜ್ಯಸಭಾ ಸಂಸದರಾಗಿ ಮತ್ತು ನವದೆಹಲಿಗೆ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ವಿವಿಧ ಹುದ್ದೆಗಳನ್ನು ಅವರು ನಿಭಾಯಿಸಿದ್ದಾರೆ. ಅವರು ಕನ್ಯಾಕುಮಾರಿ ಜಿಲ್ಲೆಯ ಏಕೈಕ ಎಐಎಡಿಎಂಕೆ ಶಾಸಕರಾಗಿದ್ದಾರೆ.

ಆರ್‌ಎಸ್‌ಎಸ್ ಸ್ಥಾಪನೆಯ 100ನೇ ವರ್ಷದ ಸ್ಮರಣಾರ್ಥ ಕನ್ಯಾಕುಮಾರಿಯಲ್ಲಿ ಆರ್‌ಎಸ್‌ಎಸ್ ಆಯೋಜಿಸಿದ್ದ ಕಾಲ್ನಡಿಗೆ ಜಾಥಾಗೆ ತಲವೈ ಸುಂದರಂ ಚಾಲನೆ ನೀಡಿದ ಎರಡು ದಿನಗಳ ನಂತರ ಪಕ್ಷ ಅವರ ವಿರುದ್ದ ಕ್ರಮ ಕೈಗೊಂಡಿದೆ.

2026 ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಎದುರಿಸಲು ಎಐಎಡಿಎಂಕೆ ತಯಾರಿ ನಡೆಸುತ್ತಿದ್ದು, ಬಿಜೆಪಿಯಿಂದ ಹೆಚ್ಚು ಅಂತರ ಕಾಯ್ದುಕೊಳ್ಳುತ್ತಿದೆ. ಈ ಸಮಯದಲ್ಲಿ ತಲವೈ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಪಕ್ಷದೊಳಗೆ ವಿರೋಧಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಭಾಗವಾಗಿದ್ದ ಎಐಎಡಿಎಂಕೆ ಪಕ್ಷ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈಯ ನಿರ್ಧಾರಗಳನ್ನು ವಿರೋಧಿಸಿ 2023ರಲ್ಲಿ ಒಕ್ಕೂಟದಿಂದ ಹೊರ ಬಂದಿತ್ತು. ಆ ಬಳಿಕ ಬಿಜೆಪಿ-ಆರ್‌ಎಸ್‌ಎಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿದೆ.

ತನ್ನನ್ನು ಪಕ್ಷದ ಹುದ್ದೆಗಳಿಂದ ಕೆಳಗಿಳಿಸಿದ ಬಗ್ಗೆ ಮಾತನಾಡಿರುವ ತಲವೈ ಸುಂದರಂ ಅವರು ” ನನ್ನ ವಿರುದ್ದದ ಕ್ರಮಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಕಳೆದ ಕೆಲ ವರ್ಷಗಳಿಂದ ಆರ್‌ಎಸ್‌ಎಸ್‌ ಜಾಥಾಗೆ ಚಾಲನೆ ಕೊಡುತ್ತಿದ್ದೇನೆ. ಕನ್ಯಾಕುಮಾರಿ ಶಾಸಕ ಎಂಬ ನೆಲೆಯಲ್ಲಿ ನನ್ನನ್ನು ಅವರು ಆಹ್ವಾನಿಸಿದ್ದರು. ಅದಕ್ಕೆ ಹೋಗಿದ್ದೆ. ನಾನು ನನ್ನ ಕ್ಷೇತ್ರದ ಕೆಲಸ ಮಾಡಿದ್ದೇನೆ. ಆರ್‌ಎಸ್‌ಎಸ್‌ ಜಾಥಾಗೆ ಚಾಲನೆ ನೀಡಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಆರ್‌ಎಸ್‌ಎಸ್‌, ಹಿಂದುತ್ವದ ಜೊತೆ ಸಖ್ಯ ಬೆಳೆಸಿದರೆ ತಮಿಳುನಾಡಿನಲ್ಲಿ ರಾಜಕೀಯ ನಡೆಸಲು ಸಾಧ್ಯವಿಲ್ಲ ಎಂಬುವುದು ಎಐಎಡಿಎಂಕೆಗ ಅರಿವಾಗಿದೆ. ಆದ್ದರಿಂದ ಅದು ಹಿಂದುತ್ವ ಗುಂಪಿನಿಂದ ಅಂತರ ಕಾಯ್ದುಕೊಂಡು ಮುಂದಿನ ಚುನಾವಣೆಗೆ ತಯಾರಿ ನಡೆಸುತ್ತಿದೆ.

ಇದನ್ನೂ ಓದಿ : ಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...