Homeಮುಖಪುಟಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

- Advertisement -
- Advertisement -

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ.

ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ 2000 ರೂಪಾಯಿ ನೇರವಾಗಿ ಜಮೆ ಮಾಡುವ ‘ಕುಲವಿಳಕ್ಕು ಯೋಜನೆ’ ಪ್ರಣಾಳಿಕೆಯ ಪ್ರಮುಖ ಭರವಸೆಯಾಗಿದೆ.

ಗಮನಾರ್ಹವಾಗಿ, ನಗರ ಬಸ್‌ಗಳಲ್ಲಿ ಪುರುಷರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿಗೆ ತರಲಾಗುವುದು, ಮಹಿಳೆಯರಿಗೆ ಅಸ್ತಿತ್ವದಲ್ಲಿರುವ ಉಚಿತ ಪ್ರಯಾಣ ಯೋಜನೆ ಮುಂದುವರಿಯಲಿದೆ ಎಂದು ಎಐಎಡಿಎಂಕೆ ಹೇಳಿದೆ.

ಗ್ರಾಮೀಣ ಪ್ರದೇಶಗಳಲ್ಲಿ ‘ಅಮ್ಮ ಇಲ್ಲಮ್’ ಯೋಜನೆಯಡಿಯಲ್ಲಿ, ಸರ್ಕಾರವು ಭೂಮಿಯನ್ನು ಖರೀದಿಸಿ, ಸ್ವಂತ ಮನೆ ಇಲ್ಲದವರಿಗೆ ಕಾಂಕ್ರೀಟ್ ಮನೆಗಳನ್ನು ನಿರ್ಮಿಸಿಕೊಡಲಿದೆ. ನಗರ ಪ್ರದೇಶಗಳಲ್ಲಿ ಸ್ವಂತ ಮನೆ ಇಲ್ಲದವರಿಗೆ ಸರ್ಕಾರವು ಭೂಮಿಯನ್ನು ಖರೀದಿಸಿ ಅಪಾರ್ಟ್‌ಮೆಂಟ್‌ ಕಟ್ಟಡಗಳನ್ನು ಕಟ್ಟಲಿದೆ. ಇದರಲ್ಲಿ ‘ಅಮ್ಮ ಇಲ್ಲಮ್ ಯೋಜನೆ’ಯಡಿಯಲ್ಲಿ ಉಚಿತವಾಗಿ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಭರವಸೆ ನೀಡಲಾಗಿದೆ.

ಕೇಂದ್ರ ಸರ್ಕಾರವು ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಕೆಲಸವನ್ನು 125 ದಿನಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದರಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ಎಐಎಡಿಎಂಕೆ, ಅಧಿಕಾರಕ್ಕೆ ಬಂದರೆ ಗ್ರಾಮೀಣಾಭಿವೃದ್ಧಿ ಯೋಜನೆಯಡಿ 150 ದಿನಗಳ ಕೆಲಸ ಒದಗಿಸುವುದಾಗಿ ಭರವಸೆ ನೀಡಿದೆ.

ಅಮ್ಮ ದ್ವಿಚಕ್ರ ವಾಹನ ಯೋಜನೆಯಡಿಯಲ್ಲಿ 5 ಲಕ್ಷ ಮಹಿಳಾ ಫಲಾನುಭವಿಗಳಿಗೆ ಪ್ರತಿಯೊಬ್ಬರಿಗೆ 25,000 ರೂ. ಸರ್ಕಾರಿ ಸಬ್ಸಿಡಿಯೊಂದಿಗೆ ದ್ವಿಚಕ್ರ ವಾಹನಗಳನ್ನು ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ರಾಜ್ಯದ ಮೇಲಿನ ಸಾಲದ ಹೊರೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ.ಗಳನ್ನು ಹೇಗೆ ಒದಗಿಸುವುದು ಎಂದು ಕೇಳಿದಾಗ ಪಳನಿಸ್ವಾಮಿ, “ಅವರು (ಡಿಎಂಕೆ) ಅಸಮರ್ಥರು; ನಾವು ನಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದೇವೆ” ಎಂದು ಹೇಳಿದ್ದಾರೆ.

2021ರ ವಿಧಾನಸಭಾ ಚುನಾವಣೆಯಲ್ಲಿ, ಆರ್ಥಿಕ ಸಮಾನತೆಯನ್ನು ಸೃಷ್ಟಿಸುವ ಉದ್ದೇಶದಿಂದ ಎಐಎಡಿಎಂಕೆ ಗೃಹಿಣಿಯರಿಗೆ ತಿಂಗಳಿಗೆ 1,500 ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಇದಲ್ಲದೆ, ವರ್ಷಕ್ಕೆ ಆರು ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವುದಾಗಿಯೂ ಹೇಳಿತ್ತು.

ಪುರುಷರಿಗೆ ಉಚಿತ ಬಸ್ ಪ್ರಯಾಣ ಒದಗಿಸುವುದರಿಂದ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಇನ್ನಷ್ಟು ಹದಗೆಡುದಿಲ್ಲವೇ? ಎಂದು ವರದಿಗಾರರು ಕೇಳಿದಾಗ, ಪಳನಿಸ್ವಾಮಿ, “ಆಡಳಿತಾತ್ಮಕ ಸಾಮರ್ಥ್ಯವಿದ್ದರೆ ಅದನ್ನು ಮಾಡಬಹುದು” ಎಂದು ಹೇಳಿದ್ದಾರೆ.

ಪ್ರಣಾಳಿಕೆ ಬಿಡುಗಡೆಗೂ ಮುನ್ನ, ಪಳನಿಸ್ವಾಮಿ ಮತ್ತು ಪಕ್ಷದ ಹಿರಿಯ ನಾಯಕರು ಚೆನ್ನೈನಲ್ಲಿರುವ ಎಐಎಡಿಎಂಕೆ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಅಲ್ಲಿ ನೆರೆದಿದ್ದ ಜನರಿಗೆ ಸಿಹಿತಿಂಡಿಗಳನ್ನು ವಿತರಿಸಿದರು.

2021ರ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಎಐಎಡಿಎಂಕೆ ನೇತೃತ್ವದಲ್ಲಿ ಎನ್‌ಡಿಎ ತಮಿಳುನಾಡಿನಲ್ಲಿ ಮತ್ತೆ ಅಧಿಕಾರಕ್ಕೇರುವ ಗುರಿಯನ್ನು ಹೊಂದಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಹೊರತಾಗಿಯೂ, 2023ರಲ್ಲಿ ಸಂಬಂಧಗಳನ್ನು ಕಡಿದುಕೊಂಡ ನಂತರ ಎಐಎಡಿಎಂಕೆ ಬಿಜೆಪಿಯೊಂದಿಗೆ ಮತ್ತೆ ಸಖ್ಯ ಬೆಳೆಸಿದೆ.

ಈ ನಡುವೆ, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಮತ್ತು 2024ರ ಸಂಸತ್ ಚುನಾವಣೆಯಲ್ಲಿ ತನ್ನ ಉತ್ತಮ ಪ್ರದರ್ಶನದ ನಂತರ ವಿಶ್ವಾಸದಿಂದ ಚುನಾವಣಾ ಸ್ಪರ್ಧೆಗೆ ಪ್ರವೇಶಿಸುತ್ತಿದೆ.

ಈ ವರ್ಷದ ಮೊದಲಾರ್ಧದಲ್ಲಿ ತಮಿಳುನಾಡು ಚುನಾವಣೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....