Homeಮುಖಪುಟಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

- Advertisement -
- Advertisement -

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ.

ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ 2000 ರೂಪಾಯಿ ನೇರವಾಗಿ ಜಮೆ ಮಾಡುವ ‘ಕುಲವಿಳಕ್ಕು ಯೋಜನೆ’ ಪ್ರಣಾಳಿಕೆಯ ಪ್ರಮುಖ ಭರವಸೆಯಾಗಿದೆ.

ಗಮನಾರ್ಹವಾಗಿ, ನಗರ ಬಸ್‌ಗಳಲ್ಲಿ ಪುರುಷರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿಗೆ ತರಲಾಗುವುದು, ಮಹಿಳೆಯರಿಗೆ ಅಸ್ತಿತ್ವದಲ್ಲಿರುವ ಉಚಿತ ಪ್ರಯಾಣ ಯೋಜನೆ ಮುಂದುವರಿಯಲಿದೆ ಎಂದು ಎಐಎಡಿಎಂಕೆ ಹೇಳಿದೆ.

ಗ್ರಾಮೀಣ ಪ್ರದೇಶಗಳಲ್ಲಿ ‘ಅಮ್ಮ ಇಲ್ಲಮ್’ ಯೋಜನೆಯಡಿಯಲ್ಲಿ, ಸರ್ಕಾರವು ಭೂಮಿಯನ್ನು ಖರೀದಿಸಿ, ಸ್ವಂತ ಮನೆ ಇಲ್ಲದವರಿಗೆ ಕಾಂಕ್ರೀಟ್ ಮನೆಗಳನ್ನು ನಿರ್ಮಿಸಿಕೊಡಲಿದೆ. ನಗರ ಪ್ರದೇಶಗಳಲ್ಲಿ ಸ್ವಂತ ಮನೆ ಇಲ್ಲದವರಿಗೆ ಸರ್ಕಾರವು ಭೂಮಿಯನ್ನು ಖರೀದಿಸಿ ಅಪಾರ್ಟ್‌ಮೆಂಟ್‌ ಕಟ್ಟಡಗಳನ್ನು ಕಟ್ಟಲಿದೆ. ಇದರಲ್ಲಿ ‘ಅಮ್ಮ ಇಲ್ಲಮ್ ಯೋಜನೆ’ಯಡಿಯಲ್ಲಿ ಉಚಿತವಾಗಿ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಭರವಸೆ ನೀಡಲಾಗಿದೆ.

ಕೇಂದ್ರ ಸರ್ಕಾರವು ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಕೆಲಸವನ್ನು 125 ದಿನಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದರಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ಎಐಎಡಿಎಂಕೆ, ಅಧಿಕಾರಕ್ಕೆ ಬಂದರೆ ಗ್ರಾಮೀಣಾಭಿವೃದ್ಧಿ ಯೋಜನೆಯಡಿ 150 ದಿನಗಳ ಕೆಲಸ ಒದಗಿಸುವುದಾಗಿ ಭರವಸೆ ನೀಡಿದೆ.

ಅಮ್ಮ ದ್ವಿಚಕ್ರ ವಾಹನ ಯೋಜನೆಯಡಿಯಲ್ಲಿ 5 ಲಕ್ಷ ಮಹಿಳಾ ಫಲಾನುಭವಿಗಳಿಗೆ ಪ್ರತಿಯೊಬ್ಬರಿಗೆ 25,000 ರೂ. ಸರ್ಕಾರಿ ಸಬ್ಸಿಡಿಯೊಂದಿಗೆ ದ್ವಿಚಕ್ರ ವಾಹನಗಳನ್ನು ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ರಾಜ್ಯದ ಮೇಲಿನ ಸಾಲದ ಹೊರೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ.ಗಳನ್ನು ಹೇಗೆ ಒದಗಿಸುವುದು ಎಂದು ಕೇಳಿದಾಗ ಪಳನಿಸ್ವಾಮಿ, “ಅವರು (ಡಿಎಂಕೆ) ಅಸಮರ್ಥರು; ನಾವು ನಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದೇವೆ” ಎಂದು ಹೇಳಿದ್ದಾರೆ.

2021ರ ವಿಧಾನಸಭಾ ಚುನಾವಣೆಯಲ್ಲಿ, ಆರ್ಥಿಕ ಸಮಾನತೆಯನ್ನು ಸೃಷ್ಟಿಸುವ ಉದ್ದೇಶದಿಂದ ಎಐಎಡಿಎಂಕೆ ಗೃಹಿಣಿಯರಿಗೆ ತಿಂಗಳಿಗೆ 1,500 ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಇದಲ್ಲದೆ, ವರ್ಷಕ್ಕೆ ಆರು ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವುದಾಗಿಯೂ ಹೇಳಿತ್ತು.

ಪುರುಷರಿಗೆ ಉಚಿತ ಬಸ್ ಪ್ರಯಾಣ ಒದಗಿಸುವುದರಿಂದ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಇನ್ನಷ್ಟು ಹದಗೆಡುದಿಲ್ಲವೇ? ಎಂದು ವರದಿಗಾರರು ಕೇಳಿದಾಗ, ಪಳನಿಸ್ವಾಮಿ, “ಆಡಳಿತಾತ್ಮಕ ಸಾಮರ್ಥ್ಯವಿದ್ದರೆ ಅದನ್ನು ಮಾಡಬಹುದು” ಎಂದು ಹೇಳಿದ್ದಾರೆ.

ಪ್ರಣಾಳಿಕೆ ಬಿಡುಗಡೆಗೂ ಮುನ್ನ, ಪಳನಿಸ್ವಾಮಿ ಮತ್ತು ಪಕ್ಷದ ಹಿರಿಯ ನಾಯಕರು ಚೆನ್ನೈನಲ್ಲಿರುವ ಎಐಎಡಿಎಂಕೆ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಅಲ್ಲಿ ನೆರೆದಿದ್ದ ಜನರಿಗೆ ಸಿಹಿತಿಂಡಿಗಳನ್ನು ವಿತರಿಸಿದರು.

2021ರ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಎಐಎಡಿಎಂಕೆ ನೇತೃತ್ವದಲ್ಲಿ ಎನ್‌ಡಿಎ ತಮಿಳುನಾಡಿನಲ್ಲಿ ಮತ್ತೆ ಅಧಿಕಾರಕ್ಕೇರುವ ಗುರಿಯನ್ನು ಹೊಂದಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಹೊರತಾಗಿಯೂ, 2023ರಲ್ಲಿ ಸಂಬಂಧಗಳನ್ನು ಕಡಿದುಕೊಂಡ ನಂತರ ಎಐಎಡಿಎಂಕೆ ಬಿಜೆಪಿಯೊಂದಿಗೆ ಮತ್ತೆ ಸಖ್ಯ ಬೆಳೆಸಿದೆ.

ಈ ನಡುವೆ, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಮತ್ತು 2024ರ ಸಂಸತ್ ಚುನಾವಣೆಯಲ್ಲಿ ತನ್ನ ಉತ್ತಮ ಪ್ರದರ್ಶನದ ನಂತರ ವಿಶ್ವಾಸದಿಂದ ಚುನಾವಣಾ ಸ್ಪರ್ಧೆಗೆ ಪ್ರವೇಶಿಸುತ್ತಿದೆ.

ಈ ವರ್ಷದ ಮೊದಲಾರ್ಧದಲ್ಲಿ ತಮಿಳುನಾಡು ಚುನಾವಣೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....