Homeಮುಖಪುಟಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

- Advertisement -
- Advertisement -

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ.

ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ 2000 ರೂಪಾಯಿ ನೇರವಾಗಿ ಜಮೆ ಮಾಡುವ ‘ಕುಲವಿಳಕ್ಕು ಯೋಜನೆ’ ಪ್ರಣಾಳಿಕೆಯ ಪ್ರಮುಖ ಭರವಸೆಯಾಗಿದೆ.

ಗಮನಾರ್ಹವಾಗಿ, ನಗರ ಬಸ್‌ಗಳಲ್ಲಿ ಪುರುಷರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿಗೆ ತರಲಾಗುವುದು, ಮಹಿಳೆಯರಿಗೆ ಅಸ್ತಿತ್ವದಲ್ಲಿರುವ ಉಚಿತ ಪ್ರಯಾಣ ಯೋಜನೆ ಮುಂದುವರಿಯಲಿದೆ ಎಂದು ಎಐಎಡಿಎಂಕೆ ಹೇಳಿದೆ.

ಗ್ರಾಮೀಣ ಪ್ರದೇಶಗಳಲ್ಲಿ ‘ಅಮ್ಮ ಇಲ್ಲಮ್’ ಯೋಜನೆಯಡಿಯಲ್ಲಿ, ಸರ್ಕಾರವು ಭೂಮಿಯನ್ನು ಖರೀದಿಸಿ, ಸ್ವಂತ ಮನೆ ಇಲ್ಲದವರಿಗೆ ಕಾಂಕ್ರೀಟ್ ಮನೆಗಳನ್ನು ನಿರ್ಮಿಸಿಕೊಡಲಿದೆ. ನಗರ ಪ್ರದೇಶಗಳಲ್ಲಿ ಸ್ವಂತ ಮನೆ ಇಲ್ಲದವರಿಗೆ ಸರ್ಕಾರವು ಭೂಮಿಯನ್ನು ಖರೀದಿಸಿ ಅಪಾರ್ಟ್‌ಮೆಂಟ್‌ ಕಟ್ಟಡಗಳನ್ನು ಕಟ್ಟಲಿದೆ. ಇದರಲ್ಲಿ ‘ಅಮ್ಮ ಇಲ್ಲಮ್ ಯೋಜನೆ’ಯಡಿಯಲ್ಲಿ ಉಚಿತವಾಗಿ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಭರವಸೆ ನೀಡಲಾಗಿದೆ.

ಕೇಂದ್ರ ಸರ್ಕಾರವು ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಕೆಲಸವನ್ನು 125 ದಿನಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದರಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ಎಐಎಡಿಎಂಕೆ, ಅಧಿಕಾರಕ್ಕೆ ಬಂದರೆ ಗ್ರಾಮೀಣಾಭಿವೃದ್ಧಿ ಯೋಜನೆಯಡಿ 150 ದಿನಗಳ ಕೆಲಸ ಒದಗಿಸುವುದಾಗಿ ಭರವಸೆ ನೀಡಿದೆ.

ಅಮ್ಮ ದ್ವಿಚಕ್ರ ವಾಹನ ಯೋಜನೆಯಡಿಯಲ್ಲಿ 5 ಲಕ್ಷ ಮಹಿಳಾ ಫಲಾನುಭವಿಗಳಿಗೆ ಪ್ರತಿಯೊಬ್ಬರಿಗೆ 25,000 ರೂ. ಸರ್ಕಾರಿ ಸಬ್ಸಿಡಿಯೊಂದಿಗೆ ದ್ವಿಚಕ್ರ ವಾಹನಗಳನ್ನು ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ರಾಜ್ಯದ ಮೇಲಿನ ಸಾಲದ ಹೊರೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ.ಗಳನ್ನು ಹೇಗೆ ಒದಗಿಸುವುದು ಎಂದು ಕೇಳಿದಾಗ ಪಳನಿಸ್ವಾಮಿ, “ಅವರು (ಡಿಎಂಕೆ) ಅಸಮರ್ಥರು; ನಾವು ನಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದೇವೆ” ಎಂದು ಹೇಳಿದ್ದಾರೆ.

2021ರ ವಿಧಾನಸಭಾ ಚುನಾವಣೆಯಲ್ಲಿ, ಆರ್ಥಿಕ ಸಮಾನತೆಯನ್ನು ಸೃಷ್ಟಿಸುವ ಉದ್ದೇಶದಿಂದ ಎಐಎಡಿಎಂಕೆ ಗೃಹಿಣಿಯರಿಗೆ ತಿಂಗಳಿಗೆ 1,500 ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಇದಲ್ಲದೆ, ವರ್ಷಕ್ಕೆ ಆರು ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವುದಾಗಿಯೂ ಹೇಳಿತ್ತು.

ಪುರುಷರಿಗೆ ಉಚಿತ ಬಸ್ ಪ್ರಯಾಣ ಒದಗಿಸುವುದರಿಂದ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಇನ್ನಷ್ಟು ಹದಗೆಡುದಿಲ್ಲವೇ? ಎಂದು ವರದಿಗಾರರು ಕೇಳಿದಾಗ, ಪಳನಿಸ್ವಾಮಿ, “ಆಡಳಿತಾತ್ಮಕ ಸಾಮರ್ಥ್ಯವಿದ್ದರೆ ಅದನ್ನು ಮಾಡಬಹುದು” ಎಂದು ಹೇಳಿದ್ದಾರೆ.

ಪ್ರಣಾಳಿಕೆ ಬಿಡುಗಡೆಗೂ ಮುನ್ನ, ಪಳನಿಸ್ವಾಮಿ ಮತ್ತು ಪಕ್ಷದ ಹಿರಿಯ ನಾಯಕರು ಚೆನ್ನೈನಲ್ಲಿರುವ ಎಐಎಡಿಎಂಕೆ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಅಲ್ಲಿ ನೆರೆದಿದ್ದ ಜನರಿಗೆ ಸಿಹಿತಿಂಡಿಗಳನ್ನು ವಿತರಿಸಿದರು.

2021ರ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಎಐಎಡಿಎಂಕೆ ನೇತೃತ್ವದಲ್ಲಿ ಎನ್‌ಡಿಎ ತಮಿಳುನಾಡಿನಲ್ಲಿ ಮತ್ತೆ ಅಧಿಕಾರಕ್ಕೇರುವ ಗುರಿಯನ್ನು ಹೊಂದಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಹೊರತಾಗಿಯೂ, 2023ರಲ್ಲಿ ಸಂಬಂಧಗಳನ್ನು ಕಡಿದುಕೊಂಡ ನಂತರ ಎಐಎಡಿಎಂಕೆ ಬಿಜೆಪಿಯೊಂದಿಗೆ ಮತ್ತೆ ಸಖ್ಯ ಬೆಳೆಸಿದೆ.

ಈ ನಡುವೆ, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಮತ್ತು 2024ರ ಸಂಸತ್ ಚುನಾವಣೆಯಲ್ಲಿ ತನ್ನ ಉತ್ತಮ ಪ್ರದರ್ಶನದ ನಂತರ ವಿಶ್ವಾಸದಿಂದ ಚುನಾವಣಾ ಸ್ಪರ್ಧೆಗೆ ಪ್ರವೇಶಿಸುತ್ತಿದೆ.

ಈ ವರ್ಷದ ಮೊದಲಾರ್ಧದಲ್ಲಿ ತಮಿಳುನಾಡು ಚುನಾವಣೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...