Homeಮುಖಪುಟಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

- Advertisement -
- Advertisement -

ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜಯಲಲಿತ ಅವರ ಪಕ್ಷವಾದ ಎಐಎಡಿಎಂಕೆ ನಾಯಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ ಬುಧವಾರ ತೀರ್ಪು ನೀಡಿದ್ದು, ಇ.ಪಳನಿಸ್ವಾಮಿ(EPS) ಅವರಿಗೆ ಹಿನ್ನಡೆಯಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ಅವರ ನೇಮಕವು ಮಾನ್ಯವಾಗಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಪಳನಿಸ್ವಾಮಿ ಅವರ ವಿರುದ್ಧ ತೀವ್ರವಾದ ಅಧಿಕಾರದ ಹಗ್ಗಜಗ್ಗಾಟ ನಡೆಸಿದ್ದ ಓ.ಪನ್ನೀರಸೆಲ್ವಂ(OPS) ಅವರಿಗೆ ಈ ತೀರ್ಪು ಮುನ್ನಡೆಯಾಗಿ ಪರಿಣಮಿಸಲಿದೆ ಎನ್ನಲಾಗಿದೆ.

ಪಕ್ಷದ ನಾಯಕತ್ವದ ವಿಷಯದ ಕುರಿತು ನೀಡಿರುವ ತೀರ್ಪಿನಲ್ಲಿ ಜೂನ್ 23 ರ ಮೊದಲಿನಂತೆಯೇ ಯಥಾಸ್ಥಿತಿ ಕಾಪಾಡುವಂತೆ ನ್ಯಾಯಾಲಯ ಆದೇಶಿಸಿದೆ. ಅದರಂತೆ ಪಕ್ಷವು ಜಂಟಿ ನಾಯಕತ್ವದಲ್ಲಿ ಮುಂದುವರೆಯಲಿದ್ದು, ಪನ್ನೀರಸೆಲ್ವಂ ಸಂಯೋಜಕರಾಗಿ ಮತ್ತು ಪಳನಿಸ್ವಾಮಿ ಅವರ ಉಪಸಂಯೋಜಕರಾಗಿ ಇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಳನಿಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದ ಜನರಲ್ ಕೌನ್ಸಿಲ್ ಸಭೆಯು ಕಾನೂನುಬಾಹಿರವಾಗಿದೆ ಎಂದು ಪನ್ನೀರಸೆಲ್ವಂ ಅವರು ನ್ಯಾಯಾಲಯದ ಮುಂದೆ ವಾದಿಸಿದ್ದರು. ಅಂತಹ ಸಭೆಯನ್ನು ಜಂಟಿಯಾಗಿ ಕರೆಯಬೇಕು ಎಂಬ ಪಕ್ಷದ ಬೈಲಾಗಳನ್ನು ಉಲ್ಲಂಘಿಸಿ ಪಳನಿಸ್ವಾಮಿ ಅವರು ಸಭೆಯನ್ನು ಕರೆದಿದ್ದಾರೆ ಎಂದು ಅವರು ವಾದಿಸಿದ್ದರು.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

“ಪಳನಿಸ್ವಾಮಿ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವುದು ಅಪ್ರಸ್ತುತವಾಗುತ್ತದೆ. ಇಬ್ಬರು ನಾಯಕರೂ ಒಟ್ಟಾಗಿ ಕೆಲಸ ಮಾಡಬೇಕು” ಎಂದು ಪನ್ನೀರಸೆಲ್ವಂ ಪರ ವಕೀಲ ತಮಿಳ್‌ ಮಾರನ್ ಅವರು ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಓ.ಪನ್ನೀರಸೆಲ್ವಂ ಅವರನ್ನು ಪಕ್ಷದಿಂದ ಹೊರಹಾಕಲು ಪ್ರಯತ್ನಿಸಿದ ಇ.ಪಳನಿಸ್ವಾಮಿ ಅವರ ಬೆಂಬಲವನ್ನು ಮರಳಿ ಪಡೆಯಲು ಪನ್ನೀರ್‌ಸೆಲ್ವಂ ಮುಂದಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ತಮಿಳ್‌ಮಾರನ್‌, “ಅವರು ಪಕ್ಷದ ದೊಡ್ಡ ಸಂಖ್ಯೆತ ಕಾರ್ಯಕರ್ತರ ಬೆಂಬಲವನ್ನು ಹೊಂದಿದ್ದಾರೆ. ಅವರು ಡಿಎಂಕೆಯನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡಬೇಕು” ಎಂದು ಹೇಳಿದ್ದಾರೆ.

ಜೂನ್ 23 ರಂದು ನಡೆದ ಜನರಲ್ ಕೌನ್ಸಿಲ್ ಸಭೆಯು ಚುನಾವಣೆಯನ್ನು ಅನುಮೋದಿಸದ ಕಾರಣ ತಾನು ಮತ್ತು ಒ.ಪನ್ನೀರ್‌‌ಸೆಲ್ವಂ ಅವರು ಜಂಟಿ ನಾಯಕತ್ವದ ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಇ.ಪಳನಿಸ್ವಾಮಿ ಅವರು ಹೈಕೋರ್ಟ್‌ನಲ್ಲಿ ಹೇಳಿದ್ದರು. ಪ್ರಧಾನ ಕಚೇರಿಯ ಕಾರ್ಯದರ್ಶಿಯಾಗಿ ನಾಯಕತ್ವದ ಅನುಪಸ್ಥಿತಿಯಲ್ಲಿ ಸಭೆಯನ್ನು ಕರೆಯುವ ಅಧಿಕಾರವನ್ನು ತಾನು ಹೊಂದಿದ್ದಾಗಿ ಅವರು ಹೇಳಿದ್ದರು.

ಇದನ್ನೂ ಓದಿ: ಧಾರ್ಮಿಕ ನಂಬಿಕೆಗಳಲ್ಲಿ ಹಸ್ತಕ್ಷೇಪವಿಲ್ಲ, ಆದರೆ ತಮಿಳರನ್ನು ವಿಭಜಿಸಲು ಧರ್ಮ ಬಳಸಿದರೆ ವಿರೋಧಿಸುತ್ತೇವೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್

ದಿವಂಗತ ಮುಖ್ಯಮಂತ್ರಿ, ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು ನ್ಯಾಯಾಲಯದ ಶಿಕ್ಷೆಯ ನಂತರ ರಾಜೀನಾಮೆ ನೀಡಬೇಕಾಗಿ ಬಂದಾಗ ಎರಡು ಬಾರಿ ಓ.ಪನ್ನೀರಸೆಲ್ವಂ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದ್ದರು. ಅಲ್ಲದೆ ಅವರು ಜಯಲಲಿತಾ ಸಾವಿಗೂ ಮುನ್ನ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

ಜಯಲಲಿತ ಸಾವಿನ ನಂತರ ಸ್ವಲ್ಪ ಸಮಯದವರೆಗೆ ಪಕ್ಷದ ನೇತೃತ್ವ ವಹಿಸಿದ್ದ, ಅವರ ಆಪ್ತ ಸಹಾಯಕಿ ಶಶಿಕಲಾ ಅವರು ಇ.ಪಳನಿಸ್ವಾಮಿ ಅವರನ್ನು ಮುಖ್ಯಮಂತ್ರಿ ಕುರ್ಚಿಗೆ ಆಯ್ಕೆ ಮಾಡಿದ್ದರು. ಜಯಲಲಿತಾ ಅವರು ಪ್ರಧಾನ ಆರೋಪಿಯಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಅವರು ಜೈಲಿಗೆ ಹೋಗುವ ಮುನ್ನ ಮುಖ್ಯಮಂತ್ರಿಯಾಗುವ ಶಶಿಕಲಾ ಅವರ ಪ್ರಯತ್ನದ ವಿರುದ್ಧ ಓ.ಪನ್ನೀರಸೆಲ್ವಂ ಬಂಡಾಯವೆದ್ದಿದ್ದರು.

ಶಶಿಕಲಾ ಅವರು ಬೆಂಗಳೂರಿನ ಜೈಲಿನಲ್ಲಿದ್ದಾಗ ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಓ.ಪನ್ನೀರಸೆಲ್ವಂ ಜೊತೆ ಹೊಂದಾಣಿಕೆ ಮಾಡಿಕೊಂಡು ಶಶಿಕಲಾ ಅವರನ್ನು ಪಕ್ಷದಿಂದ ಹೊರಹಾಕಿದ್ದರು. ನಂತರ ಇಬ್ಬರು ನಾಯಕರು ಉಭಯ ನಾಯಕತ್ವದ ಮಾದರಿಯನ್ನು ರೂಪಿಸಿದರು. ಅದರಂತೆ ಇ.ಪಳನಿಸ್ವಾಮಿ ಸರ್ಕಾರದಲ್ಲಿ  ಓ.ಪನ್ನೀರಸೆಲ್ವಂ ಉಪ ಮುಖ್ಯಮಂತ್ರಿಯಾಗಿದ್ದರು. ಪಕ್ಷದ ಅಧಿಕಾರದಲ್ಲಿ ಓ.ಪನ್ನೀರಸೆಲ್ವಂ ಸಂಯೋಜಕರಾದರೆ ಇ.ಪಳನಿಸ್ವಾಮಿ ಜಂಟಿ ಸಂಯೋಜಕರಾದರು.

ಇದನ್ನೂ ಓದಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಂಟಿ ನಾಯಕತ್ವದ ಎಐಎಡಿಎಂಕೆ ಸತತ ಮೂರು ಚುನಾವಣಾ ಸೋಲುಗಳನ್ನು ಅನುಭವಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...