Homeಮುಖಪುಟಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

- Advertisement -
- Advertisement -

ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜಯಲಲಿತ ಅವರ ಪಕ್ಷವಾದ ಎಐಎಡಿಎಂಕೆ ನಾಯಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ ಬುಧವಾರ ತೀರ್ಪು ನೀಡಿದ್ದು, ಇ.ಪಳನಿಸ್ವಾಮಿ(EPS) ಅವರಿಗೆ ಹಿನ್ನಡೆಯಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ಅವರ ನೇಮಕವು ಮಾನ್ಯವಾಗಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಪಳನಿಸ್ವಾಮಿ ಅವರ ವಿರುದ್ಧ ತೀವ್ರವಾದ ಅಧಿಕಾರದ ಹಗ್ಗಜಗ್ಗಾಟ ನಡೆಸಿದ್ದ ಓ.ಪನ್ನೀರಸೆಲ್ವಂ(OPS) ಅವರಿಗೆ ಈ ತೀರ್ಪು ಮುನ್ನಡೆಯಾಗಿ ಪರಿಣಮಿಸಲಿದೆ ಎನ್ನಲಾಗಿದೆ.

ಪಕ್ಷದ ನಾಯಕತ್ವದ ವಿಷಯದ ಕುರಿತು ನೀಡಿರುವ ತೀರ್ಪಿನಲ್ಲಿ ಜೂನ್ 23 ರ ಮೊದಲಿನಂತೆಯೇ ಯಥಾಸ್ಥಿತಿ ಕಾಪಾಡುವಂತೆ ನ್ಯಾಯಾಲಯ ಆದೇಶಿಸಿದೆ. ಅದರಂತೆ ಪಕ್ಷವು ಜಂಟಿ ನಾಯಕತ್ವದಲ್ಲಿ ಮುಂದುವರೆಯಲಿದ್ದು, ಪನ್ನೀರಸೆಲ್ವಂ ಸಂಯೋಜಕರಾಗಿ ಮತ್ತು ಪಳನಿಸ್ವಾಮಿ ಅವರ ಉಪಸಂಯೋಜಕರಾಗಿ ಇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಳನಿಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದ ಜನರಲ್ ಕೌನ್ಸಿಲ್ ಸಭೆಯು ಕಾನೂನುಬಾಹಿರವಾಗಿದೆ ಎಂದು ಪನ್ನೀರಸೆಲ್ವಂ ಅವರು ನ್ಯಾಯಾಲಯದ ಮುಂದೆ ವಾದಿಸಿದ್ದರು. ಅಂತಹ ಸಭೆಯನ್ನು ಜಂಟಿಯಾಗಿ ಕರೆಯಬೇಕು ಎಂಬ ಪಕ್ಷದ ಬೈಲಾಗಳನ್ನು ಉಲ್ಲಂಘಿಸಿ ಪಳನಿಸ್ವಾಮಿ ಅವರು ಸಭೆಯನ್ನು ಕರೆದಿದ್ದಾರೆ ಎಂದು ಅವರು ವಾದಿಸಿದ್ದರು.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

“ಪಳನಿಸ್ವಾಮಿ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವುದು ಅಪ್ರಸ್ತುತವಾಗುತ್ತದೆ. ಇಬ್ಬರು ನಾಯಕರೂ ಒಟ್ಟಾಗಿ ಕೆಲಸ ಮಾಡಬೇಕು” ಎಂದು ಪನ್ನೀರಸೆಲ್ವಂ ಪರ ವಕೀಲ ತಮಿಳ್‌ ಮಾರನ್ ಅವರು ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಓ.ಪನ್ನೀರಸೆಲ್ವಂ ಅವರನ್ನು ಪಕ್ಷದಿಂದ ಹೊರಹಾಕಲು ಪ್ರಯತ್ನಿಸಿದ ಇ.ಪಳನಿಸ್ವಾಮಿ ಅವರ ಬೆಂಬಲವನ್ನು ಮರಳಿ ಪಡೆಯಲು ಪನ್ನೀರ್‌ಸೆಲ್ವಂ ಮುಂದಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ತಮಿಳ್‌ಮಾರನ್‌, “ಅವರು ಪಕ್ಷದ ದೊಡ್ಡ ಸಂಖ್ಯೆತ ಕಾರ್ಯಕರ್ತರ ಬೆಂಬಲವನ್ನು ಹೊಂದಿದ್ದಾರೆ. ಅವರು ಡಿಎಂಕೆಯನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡಬೇಕು” ಎಂದು ಹೇಳಿದ್ದಾರೆ.

ಜೂನ್ 23 ರಂದು ನಡೆದ ಜನರಲ್ ಕೌನ್ಸಿಲ್ ಸಭೆಯು ಚುನಾವಣೆಯನ್ನು ಅನುಮೋದಿಸದ ಕಾರಣ ತಾನು ಮತ್ತು ಒ.ಪನ್ನೀರ್‌‌ಸೆಲ್ವಂ ಅವರು ಜಂಟಿ ನಾಯಕತ್ವದ ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಇ.ಪಳನಿಸ್ವಾಮಿ ಅವರು ಹೈಕೋರ್ಟ್‌ನಲ್ಲಿ ಹೇಳಿದ್ದರು. ಪ್ರಧಾನ ಕಚೇರಿಯ ಕಾರ್ಯದರ್ಶಿಯಾಗಿ ನಾಯಕತ್ವದ ಅನುಪಸ್ಥಿತಿಯಲ್ಲಿ ಸಭೆಯನ್ನು ಕರೆಯುವ ಅಧಿಕಾರವನ್ನು ತಾನು ಹೊಂದಿದ್ದಾಗಿ ಅವರು ಹೇಳಿದ್ದರು.

ಇದನ್ನೂ ಓದಿ: ಧಾರ್ಮಿಕ ನಂಬಿಕೆಗಳಲ್ಲಿ ಹಸ್ತಕ್ಷೇಪವಿಲ್ಲ, ಆದರೆ ತಮಿಳರನ್ನು ವಿಭಜಿಸಲು ಧರ್ಮ ಬಳಸಿದರೆ ವಿರೋಧಿಸುತ್ತೇವೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್

ದಿವಂಗತ ಮುಖ್ಯಮಂತ್ರಿ, ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು ನ್ಯಾಯಾಲಯದ ಶಿಕ್ಷೆಯ ನಂತರ ರಾಜೀನಾಮೆ ನೀಡಬೇಕಾಗಿ ಬಂದಾಗ ಎರಡು ಬಾರಿ ಓ.ಪನ್ನೀರಸೆಲ್ವಂ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದ್ದರು. ಅಲ್ಲದೆ ಅವರು ಜಯಲಲಿತಾ ಸಾವಿಗೂ ಮುನ್ನ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

ಜಯಲಲಿತ ಸಾವಿನ ನಂತರ ಸ್ವಲ್ಪ ಸಮಯದವರೆಗೆ ಪಕ್ಷದ ನೇತೃತ್ವ ವಹಿಸಿದ್ದ, ಅವರ ಆಪ್ತ ಸಹಾಯಕಿ ಶಶಿಕಲಾ ಅವರು ಇ.ಪಳನಿಸ್ವಾಮಿ ಅವರನ್ನು ಮುಖ್ಯಮಂತ್ರಿ ಕುರ್ಚಿಗೆ ಆಯ್ಕೆ ಮಾಡಿದ್ದರು. ಜಯಲಲಿತಾ ಅವರು ಪ್ರಧಾನ ಆರೋಪಿಯಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಅವರು ಜೈಲಿಗೆ ಹೋಗುವ ಮುನ್ನ ಮುಖ್ಯಮಂತ್ರಿಯಾಗುವ ಶಶಿಕಲಾ ಅವರ ಪ್ರಯತ್ನದ ವಿರುದ್ಧ ಓ.ಪನ್ನೀರಸೆಲ್ವಂ ಬಂಡಾಯವೆದ್ದಿದ್ದರು.

ಶಶಿಕಲಾ ಅವರು ಬೆಂಗಳೂರಿನ ಜೈಲಿನಲ್ಲಿದ್ದಾಗ ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಓ.ಪನ್ನೀರಸೆಲ್ವಂ ಜೊತೆ ಹೊಂದಾಣಿಕೆ ಮಾಡಿಕೊಂಡು ಶಶಿಕಲಾ ಅವರನ್ನು ಪಕ್ಷದಿಂದ ಹೊರಹಾಕಿದ್ದರು. ನಂತರ ಇಬ್ಬರು ನಾಯಕರು ಉಭಯ ನಾಯಕತ್ವದ ಮಾದರಿಯನ್ನು ರೂಪಿಸಿದರು. ಅದರಂತೆ ಇ.ಪಳನಿಸ್ವಾಮಿ ಸರ್ಕಾರದಲ್ಲಿ  ಓ.ಪನ್ನೀರಸೆಲ್ವಂ ಉಪ ಮುಖ್ಯಮಂತ್ರಿಯಾಗಿದ್ದರು. ಪಕ್ಷದ ಅಧಿಕಾರದಲ್ಲಿ ಓ.ಪನ್ನೀರಸೆಲ್ವಂ ಸಂಯೋಜಕರಾದರೆ ಇ.ಪಳನಿಸ್ವಾಮಿ ಜಂಟಿ ಸಂಯೋಜಕರಾದರು.

ಇದನ್ನೂ ಓದಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಂಟಿ ನಾಯಕತ್ವದ ಎಐಎಡಿಎಂಕೆ ಸತತ ಮೂರು ಚುನಾವಣಾ ಸೋಲುಗಳನ್ನು ಅನುಭವಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...