Homeಮುಖಪುಟಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

- Advertisement -
- Advertisement -

ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜಯಲಲಿತ ಅವರ ಪಕ್ಷವಾದ ಎಐಎಡಿಎಂಕೆ ನಾಯಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ ಬುಧವಾರ ತೀರ್ಪು ನೀಡಿದ್ದು, ಇ.ಪಳನಿಸ್ವಾಮಿ(EPS) ಅವರಿಗೆ ಹಿನ್ನಡೆಯಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ಅವರ ನೇಮಕವು ಮಾನ್ಯವಾಗಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಪಳನಿಸ್ವಾಮಿ ಅವರ ವಿರುದ್ಧ ತೀವ್ರವಾದ ಅಧಿಕಾರದ ಹಗ್ಗಜಗ್ಗಾಟ ನಡೆಸಿದ್ದ ಓ.ಪನ್ನೀರಸೆಲ್ವಂ(OPS) ಅವರಿಗೆ ಈ ತೀರ್ಪು ಮುನ್ನಡೆಯಾಗಿ ಪರಿಣಮಿಸಲಿದೆ ಎನ್ನಲಾಗಿದೆ.

ಪಕ್ಷದ ನಾಯಕತ್ವದ ವಿಷಯದ ಕುರಿತು ನೀಡಿರುವ ತೀರ್ಪಿನಲ್ಲಿ ಜೂನ್ 23 ರ ಮೊದಲಿನಂತೆಯೇ ಯಥಾಸ್ಥಿತಿ ಕಾಪಾಡುವಂತೆ ನ್ಯಾಯಾಲಯ ಆದೇಶಿಸಿದೆ. ಅದರಂತೆ ಪಕ್ಷವು ಜಂಟಿ ನಾಯಕತ್ವದಲ್ಲಿ ಮುಂದುವರೆಯಲಿದ್ದು, ಪನ್ನೀರಸೆಲ್ವಂ ಸಂಯೋಜಕರಾಗಿ ಮತ್ತು ಪಳನಿಸ್ವಾಮಿ ಅವರ ಉಪಸಂಯೋಜಕರಾಗಿ ಇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಳನಿಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದ ಜನರಲ್ ಕೌನ್ಸಿಲ್ ಸಭೆಯು ಕಾನೂನುಬಾಹಿರವಾಗಿದೆ ಎಂದು ಪನ್ನೀರಸೆಲ್ವಂ ಅವರು ನ್ಯಾಯಾಲಯದ ಮುಂದೆ ವಾದಿಸಿದ್ದರು. ಅಂತಹ ಸಭೆಯನ್ನು ಜಂಟಿಯಾಗಿ ಕರೆಯಬೇಕು ಎಂಬ ಪಕ್ಷದ ಬೈಲಾಗಳನ್ನು ಉಲ್ಲಂಘಿಸಿ ಪಳನಿಸ್ವಾಮಿ ಅವರು ಸಭೆಯನ್ನು ಕರೆದಿದ್ದಾರೆ ಎಂದು ಅವರು ವಾದಿಸಿದ್ದರು.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

“ಪಳನಿಸ್ವಾಮಿ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವುದು ಅಪ್ರಸ್ತುತವಾಗುತ್ತದೆ. ಇಬ್ಬರು ನಾಯಕರೂ ಒಟ್ಟಾಗಿ ಕೆಲಸ ಮಾಡಬೇಕು” ಎಂದು ಪನ್ನೀರಸೆಲ್ವಂ ಪರ ವಕೀಲ ತಮಿಳ್‌ ಮಾರನ್ ಅವರು ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಓ.ಪನ್ನೀರಸೆಲ್ವಂ ಅವರನ್ನು ಪಕ್ಷದಿಂದ ಹೊರಹಾಕಲು ಪ್ರಯತ್ನಿಸಿದ ಇ.ಪಳನಿಸ್ವಾಮಿ ಅವರ ಬೆಂಬಲವನ್ನು ಮರಳಿ ಪಡೆಯಲು ಪನ್ನೀರ್‌ಸೆಲ್ವಂ ಮುಂದಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ತಮಿಳ್‌ಮಾರನ್‌, “ಅವರು ಪಕ್ಷದ ದೊಡ್ಡ ಸಂಖ್ಯೆತ ಕಾರ್ಯಕರ್ತರ ಬೆಂಬಲವನ್ನು ಹೊಂದಿದ್ದಾರೆ. ಅವರು ಡಿಎಂಕೆಯನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡಬೇಕು” ಎಂದು ಹೇಳಿದ್ದಾರೆ.

ಜೂನ್ 23 ರಂದು ನಡೆದ ಜನರಲ್ ಕೌನ್ಸಿಲ್ ಸಭೆಯು ಚುನಾವಣೆಯನ್ನು ಅನುಮೋದಿಸದ ಕಾರಣ ತಾನು ಮತ್ತು ಒ.ಪನ್ನೀರ್‌‌ಸೆಲ್ವಂ ಅವರು ಜಂಟಿ ನಾಯಕತ್ವದ ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಇ.ಪಳನಿಸ್ವಾಮಿ ಅವರು ಹೈಕೋರ್ಟ್‌ನಲ್ಲಿ ಹೇಳಿದ್ದರು. ಪ್ರಧಾನ ಕಚೇರಿಯ ಕಾರ್ಯದರ್ಶಿಯಾಗಿ ನಾಯಕತ್ವದ ಅನುಪಸ್ಥಿತಿಯಲ್ಲಿ ಸಭೆಯನ್ನು ಕರೆಯುವ ಅಧಿಕಾರವನ್ನು ತಾನು ಹೊಂದಿದ್ದಾಗಿ ಅವರು ಹೇಳಿದ್ದರು.

ಇದನ್ನೂ ಓದಿ: ಧಾರ್ಮಿಕ ನಂಬಿಕೆಗಳಲ್ಲಿ ಹಸ್ತಕ್ಷೇಪವಿಲ್ಲ, ಆದರೆ ತಮಿಳರನ್ನು ವಿಭಜಿಸಲು ಧರ್ಮ ಬಳಸಿದರೆ ವಿರೋಧಿಸುತ್ತೇವೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್

ದಿವಂಗತ ಮುಖ್ಯಮಂತ್ರಿ, ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು ನ್ಯಾಯಾಲಯದ ಶಿಕ್ಷೆಯ ನಂತರ ರಾಜೀನಾಮೆ ನೀಡಬೇಕಾಗಿ ಬಂದಾಗ ಎರಡು ಬಾರಿ ಓ.ಪನ್ನೀರಸೆಲ್ವಂ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದ್ದರು. ಅಲ್ಲದೆ ಅವರು ಜಯಲಲಿತಾ ಸಾವಿಗೂ ಮುನ್ನ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

ಜಯಲಲಿತ ಸಾವಿನ ನಂತರ ಸ್ವಲ್ಪ ಸಮಯದವರೆಗೆ ಪಕ್ಷದ ನೇತೃತ್ವ ವಹಿಸಿದ್ದ, ಅವರ ಆಪ್ತ ಸಹಾಯಕಿ ಶಶಿಕಲಾ ಅವರು ಇ.ಪಳನಿಸ್ವಾಮಿ ಅವರನ್ನು ಮುಖ್ಯಮಂತ್ರಿ ಕುರ್ಚಿಗೆ ಆಯ್ಕೆ ಮಾಡಿದ್ದರು. ಜಯಲಲಿತಾ ಅವರು ಪ್ರಧಾನ ಆರೋಪಿಯಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಅವರು ಜೈಲಿಗೆ ಹೋಗುವ ಮುನ್ನ ಮುಖ್ಯಮಂತ್ರಿಯಾಗುವ ಶಶಿಕಲಾ ಅವರ ಪ್ರಯತ್ನದ ವಿರುದ್ಧ ಓ.ಪನ್ನೀರಸೆಲ್ವಂ ಬಂಡಾಯವೆದ್ದಿದ್ದರು.

ಶಶಿಕಲಾ ಅವರು ಬೆಂಗಳೂರಿನ ಜೈಲಿನಲ್ಲಿದ್ದಾಗ ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಓ.ಪನ್ನೀರಸೆಲ್ವಂ ಜೊತೆ ಹೊಂದಾಣಿಕೆ ಮಾಡಿಕೊಂಡು ಶಶಿಕಲಾ ಅವರನ್ನು ಪಕ್ಷದಿಂದ ಹೊರಹಾಕಿದ್ದರು. ನಂತರ ಇಬ್ಬರು ನಾಯಕರು ಉಭಯ ನಾಯಕತ್ವದ ಮಾದರಿಯನ್ನು ರೂಪಿಸಿದರು. ಅದರಂತೆ ಇ.ಪಳನಿಸ್ವಾಮಿ ಸರ್ಕಾರದಲ್ಲಿ  ಓ.ಪನ್ನೀರಸೆಲ್ವಂ ಉಪ ಮುಖ್ಯಮಂತ್ರಿಯಾಗಿದ್ದರು. ಪಕ್ಷದ ಅಧಿಕಾರದಲ್ಲಿ ಓ.ಪನ್ನೀರಸೆಲ್ವಂ ಸಂಯೋಜಕರಾದರೆ ಇ.ಪಳನಿಸ್ವಾಮಿ ಜಂಟಿ ಸಂಯೋಜಕರಾದರು.

ಇದನ್ನೂ ಓದಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಂಟಿ ನಾಯಕತ್ವದ ಎಐಎಡಿಎಂಕೆ ಸತತ ಮೂರು ಚುನಾವಣಾ ಸೋಲುಗಳನ್ನು ಅನುಭವಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...