Homeಮುಖಪುಟಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

- Advertisement -
- Advertisement -

ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜಯಲಲಿತ ಅವರ ಪಕ್ಷವಾದ ಎಐಎಡಿಎಂಕೆ ನಾಯಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ ಬುಧವಾರ ತೀರ್ಪು ನೀಡಿದ್ದು, ಇ.ಪಳನಿಸ್ವಾಮಿ(EPS) ಅವರಿಗೆ ಹಿನ್ನಡೆಯಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ಅವರ ನೇಮಕವು ಮಾನ್ಯವಾಗಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಪಳನಿಸ್ವಾಮಿ ಅವರ ವಿರುದ್ಧ ತೀವ್ರವಾದ ಅಧಿಕಾರದ ಹಗ್ಗಜಗ್ಗಾಟ ನಡೆಸಿದ್ದ ಓ.ಪನ್ನೀರಸೆಲ್ವಂ(OPS) ಅವರಿಗೆ ಈ ತೀರ್ಪು ಮುನ್ನಡೆಯಾಗಿ ಪರಿಣಮಿಸಲಿದೆ ಎನ್ನಲಾಗಿದೆ.

ಪಕ್ಷದ ನಾಯಕತ್ವದ ವಿಷಯದ ಕುರಿತು ನೀಡಿರುವ ತೀರ್ಪಿನಲ್ಲಿ ಜೂನ್ 23 ರ ಮೊದಲಿನಂತೆಯೇ ಯಥಾಸ್ಥಿತಿ ಕಾಪಾಡುವಂತೆ ನ್ಯಾಯಾಲಯ ಆದೇಶಿಸಿದೆ. ಅದರಂತೆ ಪಕ್ಷವು ಜಂಟಿ ನಾಯಕತ್ವದಲ್ಲಿ ಮುಂದುವರೆಯಲಿದ್ದು, ಪನ್ನೀರಸೆಲ್ವಂ ಸಂಯೋಜಕರಾಗಿ ಮತ್ತು ಪಳನಿಸ್ವಾಮಿ ಅವರ ಉಪಸಂಯೋಜಕರಾಗಿ ಇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಳನಿಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದ ಜನರಲ್ ಕೌನ್ಸಿಲ್ ಸಭೆಯು ಕಾನೂನುಬಾಹಿರವಾಗಿದೆ ಎಂದು ಪನ್ನೀರಸೆಲ್ವಂ ಅವರು ನ್ಯಾಯಾಲಯದ ಮುಂದೆ ವಾದಿಸಿದ್ದರು. ಅಂತಹ ಸಭೆಯನ್ನು ಜಂಟಿಯಾಗಿ ಕರೆಯಬೇಕು ಎಂಬ ಪಕ್ಷದ ಬೈಲಾಗಳನ್ನು ಉಲ್ಲಂಘಿಸಿ ಪಳನಿಸ್ವಾಮಿ ಅವರು ಸಭೆಯನ್ನು ಕರೆದಿದ್ದಾರೆ ಎಂದು ಅವರು ವಾದಿಸಿದ್ದರು.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

“ಪಳನಿಸ್ವಾಮಿ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವುದು ಅಪ್ರಸ್ತುತವಾಗುತ್ತದೆ. ಇಬ್ಬರು ನಾಯಕರೂ ಒಟ್ಟಾಗಿ ಕೆಲಸ ಮಾಡಬೇಕು” ಎಂದು ಪನ್ನೀರಸೆಲ್ವಂ ಪರ ವಕೀಲ ತಮಿಳ್‌ ಮಾರನ್ ಅವರು ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಓ.ಪನ್ನೀರಸೆಲ್ವಂ ಅವರನ್ನು ಪಕ್ಷದಿಂದ ಹೊರಹಾಕಲು ಪ್ರಯತ್ನಿಸಿದ ಇ.ಪಳನಿಸ್ವಾಮಿ ಅವರ ಬೆಂಬಲವನ್ನು ಮರಳಿ ಪಡೆಯಲು ಪನ್ನೀರ್‌ಸೆಲ್ವಂ ಮುಂದಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ತಮಿಳ್‌ಮಾರನ್‌, “ಅವರು ಪಕ್ಷದ ದೊಡ್ಡ ಸಂಖ್ಯೆತ ಕಾರ್ಯಕರ್ತರ ಬೆಂಬಲವನ್ನು ಹೊಂದಿದ್ದಾರೆ. ಅವರು ಡಿಎಂಕೆಯನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡಬೇಕು” ಎಂದು ಹೇಳಿದ್ದಾರೆ.

ಜೂನ್ 23 ರಂದು ನಡೆದ ಜನರಲ್ ಕೌನ್ಸಿಲ್ ಸಭೆಯು ಚುನಾವಣೆಯನ್ನು ಅನುಮೋದಿಸದ ಕಾರಣ ತಾನು ಮತ್ತು ಒ.ಪನ್ನೀರ್‌‌ಸೆಲ್ವಂ ಅವರು ಜಂಟಿ ನಾಯಕತ್ವದ ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಇ.ಪಳನಿಸ್ವಾಮಿ ಅವರು ಹೈಕೋರ್ಟ್‌ನಲ್ಲಿ ಹೇಳಿದ್ದರು. ಪ್ರಧಾನ ಕಚೇರಿಯ ಕಾರ್ಯದರ್ಶಿಯಾಗಿ ನಾಯಕತ್ವದ ಅನುಪಸ್ಥಿತಿಯಲ್ಲಿ ಸಭೆಯನ್ನು ಕರೆಯುವ ಅಧಿಕಾರವನ್ನು ತಾನು ಹೊಂದಿದ್ದಾಗಿ ಅವರು ಹೇಳಿದ್ದರು.

ಇದನ್ನೂ ಓದಿ: ಧಾರ್ಮಿಕ ನಂಬಿಕೆಗಳಲ್ಲಿ ಹಸ್ತಕ್ಷೇಪವಿಲ್ಲ, ಆದರೆ ತಮಿಳರನ್ನು ವಿಭಜಿಸಲು ಧರ್ಮ ಬಳಸಿದರೆ ವಿರೋಧಿಸುತ್ತೇವೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್

ದಿವಂಗತ ಮುಖ್ಯಮಂತ್ರಿ, ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು ನ್ಯಾಯಾಲಯದ ಶಿಕ್ಷೆಯ ನಂತರ ರಾಜೀನಾಮೆ ನೀಡಬೇಕಾಗಿ ಬಂದಾಗ ಎರಡು ಬಾರಿ ಓ.ಪನ್ನೀರಸೆಲ್ವಂ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದ್ದರು. ಅಲ್ಲದೆ ಅವರು ಜಯಲಲಿತಾ ಸಾವಿಗೂ ಮುನ್ನ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

ಜಯಲಲಿತ ಸಾವಿನ ನಂತರ ಸ್ವಲ್ಪ ಸಮಯದವರೆಗೆ ಪಕ್ಷದ ನೇತೃತ್ವ ವಹಿಸಿದ್ದ, ಅವರ ಆಪ್ತ ಸಹಾಯಕಿ ಶಶಿಕಲಾ ಅವರು ಇ.ಪಳನಿಸ್ವಾಮಿ ಅವರನ್ನು ಮುಖ್ಯಮಂತ್ರಿ ಕುರ್ಚಿಗೆ ಆಯ್ಕೆ ಮಾಡಿದ್ದರು. ಜಯಲಲಿತಾ ಅವರು ಪ್ರಧಾನ ಆರೋಪಿಯಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಅವರು ಜೈಲಿಗೆ ಹೋಗುವ ಮುನ್ನ ಮುಖ್ಯಮಂತ್ರಿಯಾಗುವ ಶಶಿಕಲಾ ಅವರ ಪ್ರಯತ್ನದ ವಿರುದ್ಧ ಓ.ಪನ್ನೀರಸೆಲ್ವಂ ಬಂಡಾಯವೆದ್ದಿದ್ದರು.

ಶಶಿಕಲಾ ಅವರು ಬೆಂಗಳೂರಿನ ಜೈಲಿನಲ್ಲಿದ್ದಾಗ ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಓ.ಪನ್ನೀರಸೆಲ್ವಂ ಜೊತೆ ಹೊಂದಾಣಿಕೆ ಮಾಡಿಕೊಂಡು ಶಶಿಕಲಾ ಅವರನ್ನು ಪಕ್ಷದಿಂದ ಹೊರಹಾಕಿದ್ದರು. ನಂತರ ಇಬ್ಬರು ನಾಯಕರು ಉಭಯ ನಾಯಕತ್ವದ ಮಾದರಿಯನ್ನು ರೂಪಿಸಿದರು. ಅದರಂತೆ ಇ.ಪಳನಿಸ್ವಾಮಿ ಸರ್ಕಾರದಲ್ಲಿ  ಓ.ಪನ್ನೀರಸೆಲ್ವಂ ಉಪ ಮುಖ್ಯಮಂತ್ರಿಯಾಗಿದ್ದರು. ಪಕ್ಷದ ಅಧಿಕಾರದಲ್ಲಿ ಓ.ಪನ್ನೀರಸೆಲ್ವಂ ಸಂಯೋಜಕರಾದರೆ ಇ.ಪಳನಿಸ್ವಾಮಿ ಜಂಟಿ ಸಂಯೋಜಕರಾದರು.

ಇದನ್ನೂ ಓದಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಂಟಿ ನಾಯಕತ್ವದ ಎಐಎಡಿಎಂಕೆ ಸತತ ಮೂರು ಚುನಾವಣಾ ಸೋಲುಗಳನ್ನು ಅನುಭವಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...