Homeಮುಖಪುಟಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

- Advertisement -
- Advertisement -

ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜಯಲಲಿತ ಅವರ ಪಕ್ಷವಾದ ಎಐಎಡಿಎಂಕೆ ನಾಯಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ ಬುಧವಾರ ತೀರ್ಪು ನೀಡಿದ್ದು, ಇ.ಪಳನಿಸ್ವಾಮಿ(EPS) ಅವರಿಗೆ ಹಿನ್ನಡೆಯಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ಅವರ ನೇಮಕವು ಮಾನ್ಯವಾಗಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಪಳನಿಸ್ವಾಮಿ ಅವರ ವಿರುದ್ಧ ತೀವ್ರವಾದ ಅಧಿಕಾರದ ಹಗ್ಗಜಗ್ಗಾಟ ನಡೆಸಿದ್ದ ಓ.ಪನ್ನೀರಸೆಲ್ವಂ(OPS) ಅವರಿಗೆ ಈ ತೀರ್ಪು ಮುನ್ನಡೆಯಾಗಿ ಪರಿಣಮಿಸಲಿದೆ ಎನ್ನಲಾಗಿದೆ.

ಪಕ್ಷದ ನಾಯಕತ್ವದ ವಿಷಯದ ಕುರಿತು ನೀಡಿರುವ ತೀರ್ಪಿನಲ್ಲಿ ಜೂನ್ 23 ರ ಮೊದಲಿನಂತೆಯೇ ಯಥಾಸ್ಥಿತಿ ಕಾಪಾಡುವಂತೆ ನ್ಯಾಯಾಲಯ ಆದೇಶಿಸಿದೆ. ಅದರಂತೆ ಪಕ್ಷವು ಜಂಟಿ ನಾಯಕತ್ವದಲ್ಲಿ ಮುಂದುವರೆಯಲಿದ್ದು, ಪನ್ನೀರಸೆಲ್ವಂ ಸಂಯೋಜಕರಾಗಿ ಮತ್ತು ಪಳನಿಸ್ವಾಮಿ ಅವರ ಉಪಸಂಯೋಜಕರಾಗಿ ಇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಳನಿಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದ ಜನರಲ್ ಕೌನ್ಸಿಲ್ ಸಭೆಯು ಕಾನೂನುಬಾಹಿರವಾಗಿದೆ ಎಂದು ಪನ್ನೀರಸೆಲ್ವಂ ಅವರು ನ್ಯಾಯಾಲಯದ ಮುಂದೆ ವಾದಿಸಿದ್ದರು. ಅಂತಹ ಸಭೆಯನ್ನು ಜಂಟಿಯಾಗಿ ಕರೆಯಬೇಕು ಎಂಬ ಪಕ್ಷದ ಬೈಲಾಗಳನ್ನು ಉಲ್ಲಂಘಿಸಿ ಪಳನಿಸ್ವಾಮಿ ಅವರು ಸಭೆಯನ್ನು ಕರೆದಿದ್ದಾರೆ ಎಂದು ಅವರು ವಾದಿಸಿದ್ದರು.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

“ಪಳನಿಸ್ವಾಮಿ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವುದು ಅಪ್ರಸ್ತುತವಾಗುತ್ತದೆ. ಇಬ್ಬರು ನಾಯಕರೂ ಒಟ್ಟಾಗಿ ಕೆಲಸ ಮಾಡಬೇಕು” ಎಂದು ಪನ್ನೀರಸೆಲ್ವಂ ಪರ ವಕೀಲ ತಮಿಳ್‌ ಮಾರನ್ ಅವರು ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಓ.ಪನ್ನೀರಸೆಲ್ವಂ ಅವರನ್ನು ಪಕ್ಷದಿಂದ ಹೊರಹಾಕಲು ಪ್ರಯತ್ನಿಸಿದ ಇ.ಪಳನಿಸ್ವಾಮಿ ಅವರ ಬೆಂಬಲವನ್ನು ಮರಳಿ ಪಡೆಯಲು ಪನ್ನೀರ್‌ಸೆಲ್ವಂ ಮುಂದಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ತಮಿಳ್‌ಮಾರನ್‌, “ಅವರು ಪಕ್ಷದ ದೊಡ್ಡ ಸಂಖ್ಯೆತ ಕಾರ್ಯಕರ್ತರ ಬೆಂಬಲವನ್ನು ಹೊಂದಿದ್ದಾರೆ. ಅವರು ಡಿಎಂಕೆಯನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡಬೇಕು” ಎಂದು ಹೇಳಿದ್ದಾರೆ.

ಜೂನ್ 23 ರಂದು ನಡೆದ ಜನರಲ್ ಕೌನ್ಸಿಲ್ ಸಭೆಯು ಚುನಾವಣೆಯನ್ನು ಅನುಮೋದಿಸದ ಕಾರಣ ತಾನು ಮತ್ತು ಒ.ಪನ್ನೀರ್‌‌ಸೆಲ್ವಂ ಅವರು ಜಂಟಿ ನಾಯಕತ್ವದ ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಇ.ಪಳನಿಸ್ವಾಮಿ ಅವರು ಹೈಕೋರ್ಟ್‌ನಲ್ಲಿ ಹೇಳಿದ್ದರು. ಪ್ರಧಾನ ಕಚೇರಿಯ ಕಾರ್ಯದರ್ಶಿಯಾಗಿ ನಾಯಕತ್ವದ ಅನುಪಸ್ಥಿತಿಯಲ್ಲಿ ಸಭೆಯನ್ನು ಕರೆಯುವ ಅಧಿಕಾರವನ್ನು ತಾನು ಹೊಂದಿದ್ದಾಗಿ ಅವರು ಹೇಳಿದ್ದರು.

ಇದನ್ನೂ ಓದಿ: ಧಾರ್ಮಿಕ ನಂಬಿಕೆಗಳಲ್ಲಿ ಹಸ್ತಕ್ಷೇಪವಿಲ್ಲ, ಆದರೆ ತಮಿಳರನ್ನು ವಿಭಜಿಸಲು ಧರ್ಮ ಬಳಸಿದರೆ ವಿರೋಧಿಸುತ್ತೇವೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್

ದಿವಂಗತ ಮುಖ್ಯಮಂತ್ರಿ, ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು ನ್ಯಾಯಾಲಯದ ಶಿಕ್ಷೆಯ ನಂತರ ರಾಜೀನಾಮೆ ನೀಡಬೇಕಾಗಿ ಬಂದಾಗ ಎರಡು ಬಾರಿ ಓ.ಪನ್ನೀರಸೆಲ್ವಂ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದ್ದರು. ಅಲ್ಲದೆ ಅವರು ಜಯಲಲಿತಾ ಸಾವಿಗೂ ಮುನ್ನ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

ಜಯಲಲಿತ ಸಾವಿನ ನಂತರ ಸ್ವಲ್ಪ ಸಮಯದವರೆಗೆ ಪಕ್ಷದ ನೇತೃತ್ವ ವಹಿಸಿದ್ದ, ಅವರ ಆಪ್ತ ಸಹಾಯಕಿ ಶಶಿಕಲಾ ಅವರು ಇ.ಪಳನಿಸ್ವಾಮಿ ಅವರನ್ನು ಮುಖ್ಯಮಂತ್ರಿ ಕುರ್ಚಿಗೆ ಆಯ್ಕೆ ಮಾಡಿದ್ದರು. ಜಯಲಲಿತಾ ಅವರು ಪ್ರಧಾನ ಆರೋಪಿಯಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಅವರು ಜೈಲಿಗೆ ಹೋಗುವ ಮುನ್ನ ಮುಖ್ಯಮಂತ್ರಿಯಾಗುವ ಶಶಿಕಲಾ ಅವರ ಪ್ರಯತ್ನದ ವಿರುದ್ಧ ಓ.ಪನ್ನೀರಸೆಲ್ವಂ ಬಂಡಾಯವೆದ್ದಿದ್ದರು.

ಶಶಿಕಲಾ ಅವರು ಬೆಂಗಳೂರಿನ ಜೈಲಿನಲ್ಲಿದ್ದಾಗ ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಓ.ಪನ್ನೀರಸೆಲ್ವಂ ಜೊತೆ ಹೊಂದಾಣಿಕೆ ಮಾಡಿಕೊಂಡು ಶಶಿಕಲಾ ಅವರನ್ನು ಪಕ್ಷದಿಂದ ಹೊರಹಾಕಿದ್ದರು. ನಂತರ ಇಬ್ಬರು ನಾಯಕರು ಉಭಯ ನಾಯಕತ್ವದ ಮಾದರಿಯನ್ನು ರೂಪಿಸಿದರು. ಅದರಂತೆ ಇ.ಪಳನಿಸ್ವಾಮಿ ಸರ್ಕಾರದಲ್ಲಿ  ಓ.ಪನ್ನೀರಸೆಲ್ವಂ ಉಪ ಮುಖ್ಯಮಂತ್ರಿಯಾಗಿದ್ದರು. ಪಕ್ಷದ ಅಧಿಕಾರದಲ್ಲಿ ಓ.ಪನ್ನೀರಸೆಲ್ವಂ ಸಂಯೋಜಕರಾದರೆ ಇ.ಪಳನಿಸ್ವಾಮಿ ಜಂಟಿ ಸಂಯೋಜಕರಾದರು.

ಇದನ್ನೂ ಓದಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಂಟಿ ನಾಯಕತ್ವದ ಎಐಎಡಿಎಂಕೆ ಸತತ ಮೂರು ಚುನಾವಣಾ ಸೋಲುಗಳನ್ನು ಅನುಭವಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...