Homeಕರ್ನಾಟಕಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ರಾಹುಲ್ ಗಾಂಧಿ 'ನ್ಯಾಯ ಯೋಧ' ಎಂದು ಕೊಂಡಾಡಿದ ಸಭೆ

- Advertisement -
- Advertisement -

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಮೊದಲ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ಸದಸ್ಯರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಣಯಗಳನ್ನು ಪ್ರಕಟಿಸಿದರು. ಅವುಗಳು ಹೀಗಿವೆ…

  • ಭಾರತೀಯ ಜನಗಣತಿ ಆಯೋಗದಿಂದ ರಾಷ್ಟ್ರೀಯ ಮಟ್ಟದ ಜಾತಿ ಜನಗಣತಿ ನಡೆಯಬೇಕು. ಈ ಜನಗಣತಿಯು ಪ್ರತಿಯೊಬ್ಬ ವ್ಯಕ್ತಿ ಮತ್ತು ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ ಮತ್ತು ರಾಜಕೀಯ ಅಂಶಗಳನ್ನು ಒಳಗೊಂಡಿರಬೇಕು. ಇದಕ್ಕೆ ತೆಲಂಗಾಣ ಮಾದರಿಯನ್ನು ಅನುಸರಿಸಬೇಕು.
  • ಮೀಸಲಾತಿ ಮಿತಿ ಶೇಕಡ 50 ಅನ್ನು ತೆಗೆದು ಹಾಕಬೇಕು. ಈ ಮೂಲಕ ಶಿಕ್ಷಣ, ಸೇವೆ, ರಾಜಕೀಯ ಮತ್ತು ಇತರ ಕ್ಷೇತ್ರಗಳಲ್ಲಿ ಒಬಿಸಿಗಳಿಗೆ ಸೂಕ್ತ ಮೀಸಲಾತಿಯನ್ನು ಒದಗಿಸಬೇಕು.
  • ಸಂವಿಧಾನದ ವಿಧಿ 15(5) ರ ಪ್ರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡಬೇಕು.

ಸಮಾಜದ ಅಂಚಿನಲ್ಲಿರುವ ವರ್ಗಗಳ ಸಾಮಾಜಿಕ ನ್ಯಾಯದ ಪರವಾಗಿ ಧೈರ್ಯದಿಂದ ಹೋರಾಡಿದ್ದಕ್ಕಾಗಿ ಮತ್ತು ವಿಶೇಷವಾಗಿ ಹಿಂದುಳಿದ ವರ್ಗಗಳ ಪರವಾಗಿ ನಿಂತಿದ್ದಕ್ಕಾಗಿ ‘ನ್ಯಾಯ ಯೋಧ ರಾಹುಲ್ ಗಾಂಧಿ’ ಅವರಿಗೆ ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆಯು ಸರ್ವಾನುಮತದಿಂದ ಧನ್ಯವಾದಗಳನ್ನು ಅರ್ಪಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಹುಲ್ ಗಾಂಧಿಯವರ ದೃಢ ಸಂಕಲ್ಪವು ಜಾತಿ ಜನಗಣತಿಯ ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಗೆ ಮನುವಾದಿ ಮೋದಿ ಸರ್ಕಾರ ಮಣಿಯುವಂತೆ ಮಾಡಿತು. ಭಾರತದ ಎಲ್ಲಾ ಹಿಂದುಳಿದ ವರ್ಗಗಳ ಪರವಾಗಿ, ಈ ಐತಿಹಾಸಿಕ ಸಾಧನೆಗೆ ರಾಹುಲ್ ಗಾಂಧಿಯವರಿಗೆ ಮಂಡಳಿಯು ಹೃತ್ಪೂರ್ವಕ ಕೃತಜ್ಞತೆ ಮತ್ತು ಗೌರವವನ್ನು ಸಲ್ಲಿಸುತ್ತದೆ ಎಂದು ಹೇಳಿದರು.

ಇದು ಒಂದು ಮೈಲಿಗಲ್ಲು ಆಗಿದ್ದರೂ, ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರು ಸಾಮಾಜಿಕ ನ್ಯಾಯವನ್ನು ಖಾತರಿಪಡಿಸುವಲ್ಲಿ ಇದು ಒಂದು ಸಣ್ಣ ಹೆಜ್ಜೆಯಾಗಿದೆ. ನಮ್ಮ ನ್ಯಾಯಯೋಧ ರಾಹುಲ್ ಗಾಂಧಿಯವರ ಧೈರ್ಯಶಾಲಿ ಮತ್ತು ಅಚಲ ನಾಯಕತ್ವದಲ್ಲಿ, ನಮ್ಮ ಮಹಾನ್ ರಾಷ್ಟ್ರದಲ್ಲಿ ಸಮಾನತೆ ಮತ್ತು ಸಮ ಸಮಾಜಕ್ಕೆ ಕಾರಣವಾಗುವ ಸಾಮಾಜಿಕ ಪರಿವರ್ತನೆಯ ಅಂತಿಮ ಸಾಂವಿಧಾನಿಕ ಉದ್ದೇಶವನ್ನು ಭಾರತವು ಸಾಕಾರಗೊಳಿಸುವ ಮತ್ತು ಸಾಧಿಸುವ ಗುರಿಯನ್ನು ಹೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ನ್ಯಾಯ ಯೋಧ ರಾಹುಲ್ ಗಾಂಧಿಯವರ ಧೈರ್ಯಶಾಲಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ನಮ್ಮ ಕೈಯಲ್ಲಿ ಹಿಡಿದುಕೊಂಡು, ಎಲ್ಲರಿಗೂ ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸಲು ನಾವು ಇಲ್ಲಿ ಸಂಕಲ್ಪ ಮಾಡಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಲಹಾ ಮಂಡಳಿ ಸಂಚಾಲಕ ಅನಿಲ್ ಜೈ ಹಿಂದ್, ಎಂ. ವೀರಪ್ಪ ಮೊಯಿಲಿ, ಬಿ.ಕೆ. ಹರಿಪ್ರಸಾದ್‌ ಮತ್ತಿತರರು ಇದ್ದರು.

ದೇವನಹಳ್ಳಿ ಗೆಲುವು ಪ್ರಜಾಪ್ರಭುತ್ವದ ವಿಜಯ: ಸಂಯುಕ್ತ ಕಿಸಾನ್ ಮೋರ್ಚಾದಿಂದ ಅಭಿನಂದನೆ, ದೇಶಾದ್ಯಂತ ವಿಜಯೋತ್ಸವ ಆಚರಣೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...