Homeಕರ್ನಾಟಕಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ರಾಹುಲ್ ಗಾಂಧಿ 'ನ್ಯಾಯ ಯೋಧ' ಎಂದು ಕೊಂಡಾಡಿದ ಸಭೆ

- Advertisement -
- Advertisement -

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಮೊದಲ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ಸದಸ್ಯರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಣಯಗಳನ್ನು ಪ್ರಕಟಿಸಿದರು. ಅವುಗಳು ಹೀಗಿವೆ…

  • ಭಾರತೀಯ ಜನಗಣತಿ ಆಯೋಗದಿಂದ ರಾಷ್ಟ್ರೀಯ ಮಟ್ಟದ ಜಾತಿ ಜನಗಣತಿ ನಡೆಯಬೇಕು. ಈ ಜನಗಣತಿಯು ಪ್ರತಿಯೊಬ್ಬ ವ್ಯಕ್ತಿ ಮತ್ತು ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ ಮತ್ತು ರಾಜಕೀಯ ಅಂಶಗಳನ್ನು ಒಳಗೊಂಡಿರಬೇಕು. ಇದಕ್ಕೆ ತೆಲಂಗಾಣ ಮಾದರಿಯನ್ನು ಅನುಸರಿಸಬೇಕು.
  • ಮೀಸಲಾತಿ ಮಿತಿ ಶೇಕಡ 50 ಅನ್ನು ತೆಗೆದು ಹಾಕಬೇಕು. ಈ ಮೂಲಕ ಶಿಕ್ಷಣ, ಸೇವೆ, ರಾಜಕೀಯ ಮತ್ತು ಇತರ ಕ್ಷೇತ್ರಗಳಲ್ಲಿ ಒಬಿಸಿಗಳಿಗೆ ಸೂಕ್ತ ಮೀಸಲಾತಿಯನ್ನು ಒದಗಿಸಬೇಕು.
  • ಸಂವಿಧಾನದ ವಿಧಿ 15(5) ರ ಪ್ರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡಬೇಕು.

ಸಮಾಜದ ಅಂಚಿನಲ್ಲಿರುವ ವರ್ಗಗಳ ಸಾಮಾಜಿಕ ನ್ಯಾಯದ ಪರವಾಗಿ ಧೈರ್ಯದಿಂದ ಹೋರಾಡಿದ್ದಕ್ಕಾಗಿ ಮತ್ತು ವಿಶೇಷವಾಗಿ ಹಿಂದುಳಿದ ವರ್ಗಗಳ ಪರವಾಗಿ ನಿಂತಿದ್ದಕ್ಕಾಗಿ ‘ನ್ಯಾಯ ಯೋಧ ರಾಹುಲ್ ಗಾಂಧಿ’ ಅವರಿಗೆ ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆಯು ಸರ್ವಾನುಮತದಿಂದ ಧನ್ಯವಾದಗಳನ್ನು ಅರ್ಪಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಹುಲ್ ಗಾಂಧಿಯವರ ದೃಢ ಸಂಕಲ್ಪವು ಜಾತಿ ಜನಗಣತಿಯ ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಗೆ ಮನುವಾದಿ ಮೋದಿ ಸರ್ಕಾರ ಮಣಿಯುವಂತೆ ಮಾಡಿತು. ಭಾರತದ ಎಲ್ಲಾ ಹಿಂದುಳಿದ ವರ್ಗಗಳ ಪರವಾಗಿ, ಈ ಐತಿಹಾಸಿಕ ಸಾಧನೆಗೆ ರಾಹುಲ್ ಗಾಂಧಿಯವರಿಗೆ ಮಂಡಳಿಯು ಹೃತ್ಪೂರ್ವಕ ಕೃತಜ್ಞತೆ ಮತ್ತು ಗೌರವವನ್ನು ಸಲ್ಲಿಸುತ್ತದೆ ಎಂದು ಹೇಳಿದರು.

ಇದು ಒಂದು ಮೈಲಿಗಲ್ಲು ಆಗಿದ್ದರೂ, ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರು ಸಾಮಾಜಿಕ ನ್ಯಾಯವನ್ನು ಖಾತರಿಪಡಿಸುವಲ್ಲಿ ಇದು ಒಂದು ಸಣ್ಣ ಹೆಜ್ಜೆಯಾಗಿದೆ. ನಮ್ಮ ನ್ಯಾಯಯೋಧ ರಾಹುಲ್ ಗಾಂಧಿಯವರ ಧೈರ್ಯಶಾಲಿ ಮತ್ತು ಅಚಲ ನಾಯಕತ್ವದಲ್ಲಿ, ನಮ್ಮ ಮಹಾನ್ ರಾಷ್ಟ್ರದಲ್ಲಿ ಸಮಾನತೆ ಮತ್ತು ಸಮ ಸಮಾಜಕ್ಕೆ ಕಾರಣವಾಗುವ ಸಾಮಾಜಿಕ ಪರಿವರ್ತನೆಯ ಅಂತಿಮ ಸಾಂವಿಧಾನಿಕ ಉದ್ದೇಶವನ್ನು ಭಾರತವು ಸಾಕಾರಗೊಳಿಸುವ ಮತ್ತು ಸಾಧಿಸುವ ಗುರಿಯನ್ನು ಹೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ನ್ಯಾಯ ಯೋಧ ರಾಹುಲ್ ಗಾಂಧಿಯವರ ಧೈರ್ಯಶಾಲಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ನಮ್ಮ ಕೈಯಲ್ಲಿ ಹಿಡಿದುಕೊಂಡು, ಎಲ್ಲರಿಗೂ ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸಲು ನಾವು ಇಲ್ಲಿ ಸಂಕಲ್ಪ ಮಾಡಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಲಹಾ ಮಂಡಳಿ ಸಂಚಾಲಕ ಅನಿಲ್ ಜೈ ಹಿಂದ್, ಎಂ. ವೀರಪ್ಪ ಮೊಯಿಲಿ, ಬಿ.ಕೆ. ಹರಿಪ್ರಸಾದ್‌ ಮತ್ತಿತರರು ಇದ್ದರು.

ದೇವನಹಳ್ಳಿ ಗೆಲುವು ಪ್ರಜಾಪ್ರಭುತ್ವದ ವಿಜಯ: ಸಂಯುಕ್ತ ಕಿಸಾನ್ ಮೋರ್ಚಾದಿಂದ ಅಭಿನಂದನೆ, ದೇಶಾದ್ಯಂತ ವಿಜಯೋತ್ಸವ ಆಚರಣೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...