Homeಕರ್ನಾಟಕ‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

- Advertisement -
- Advertisement -

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಖರ್ಗೆ ಹೊಲೆಯ ಸಮುದಾಯದವರು. ಅವರು ಒಳಮೀಸಲಾತಿ ಜಾರಿಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಗೆ ಬಿಡುತ್ತಿಲ್ಲ’ ಎಂದುಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಳಮೀಸಲಾತಿ ಅನುಷ್ಠಾನದ ನೇತಾರ, ಹೋರಾಟಗಾರ ಮಂದಕೃಷ್ಣ ಮಾದಿಗ ಆರೋಪಿಸಿದರು. 

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಒಳಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಇದೇ ಬಲಗೈ ಸಮುದಾಯದ ಪರಮೇಶ್ವರ್, ಮಹದೇವಪ್ಪ ಹಾಗೂ ಪ್ರಿಯಾಂಕ್ ಖರ್ಗೆ ಬಿಡುತ್ತಿಲ್ಲ ಎಂದು ಅವರು ಹೇಳಿದರು.

“ಇಂದು ಒಂದು ಸಂತೋಷ ಮತ್ತು ಒಂದು ದುಖಃ ನನ್ನನ್ನು ಕಾಡುತ್ತಿದೆ. ಸಂತೋಷ ಏನೆಂದರೆ ಕರ್ನಾಟಕದ ಎಲ್ಲಾ ಒಳಮೀಸಲಾತಿ ಹೋರಾಟಗಾರರು ಒಂದೇ ವೇದಿಕೆಗೆ ಬಂದು ನಮಗೆ ಗುಂಪುಗಳು ಮುಖ್ಯವಲ್ಲ, ಸಮುದಾಯದ ಹಕ್ಕುಗಳನ್ನುಪಡೆದುಕೊಳ್ಳುವುದೇ ನಮಗೆ ಮುಖ್ಯ ಎಂದು ಒಂದೇ ವೇದಿಕೆಗೆ ಬಂದಿರುವುದು. ದುಖಃದ ವಿಚಾರವೆಂದರೆ, ಇಷ್ಟೆಲ್ಲ ಒತ್ತಡ ಬರುತ್ತಿದ್ದರೂ ಕರ್ನಾಟಕ ಸರ್ಕಾರ ಒಳಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡದೇ ಇರುವುದು” ಎಂದರು. 

“ಕರ್ನಾಟಕದಲ್ಲಿ 15 ರಷ್ಟು ಮೀಸಲಾತಿಯಲ್ಲಿ ಬಹುತೇಕ ಮೀಸಲಾತಿಯನ್ನು ಹೊಲೆಯ ಸಮುದಾಯವೇ ಅನುಭವಿಸಿದೆ, ಇದು ಕರ್ನಾಟಕ ಮಾತ್ರವಲ್ಲ, ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಪರಿಸ್ಥಿತಿ ಇದೇ ಆಗಿದೆ. 1965ರಲ್ಲೆ ಕೇಂದ್ರ ಸರ್ಕಾರ ಲೋಕೂರ್ ಕಮಿಟಿ, ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಯಾಗಬೇಕೆಂದು ಶಿಫಾರಸ್ಸು ಮಾಡಿತ್ತು, ಏಕೆಂದರೆ ಕಾಂಗ್ರೆಸ್ ನಲ್ಲಿ ಅಂದಿನಿಂದ ಹೊಲೆಯ ಸಮುದಾಯದ ಮೇಲಾಧಿಪತ್ಯ ಕಾರಣದಿಂದಾಗಿ ಇದನ್ನು ಜಾರಿಯಾಗುವುದನ್ನು ತಡೆಹಿಡಿಯಾಲಾಯಿತು” ಎಂದು ಮಂದಕೃಷ್ಣ ಮಾದಿಗ ಹೇಳಿದರು. 

“1996ರಲ್ಲಿ ಶುರು ಮಾಡಿದ ಹೋರಾಟ ಇಂದು ಮಾದಿಗ ಮೀಸಲಾತಿ ಇಲ್ಲಿಗೆ ತಂದು ನಿಲ್ಲಿಸಿದೆ. ನಮ್ಮ ಒಳಮೀಸಲಾತಿ ಹೋರಾಟದಲ್ಲಿ ನ್ಯಾಯವಿದೆ, ಧರ್ಮವಿದೆ. ತೆಲಂಗಾಣದಲ್ಲಿ ಎಲ್ಲ  ಪಕ್ಷಗಳು ನಮಗೆ ಬಂಬಲಿಸಿದ್ದರು, ತಮಿಳುನಾಡಿನಲ್ಲೂ ಕೂಡಾ ಒಳಮೀಸಲಾತಿಯ ಪರವಾಗಿದೆ ಎಂದು ಹೇಳುತ್ತಿದೆ. ಕರ್ನಾಟಕದಲ್ಲೂ ಕೂಡಾ ಎಲ್ಲ ಪಕ್ಷಗಳು ನಮ್ಮ ಒಳಮೀಸಲಾತಿ ಪರವಾಗಿ ಇವೆ ಎಂದು ಹೇಳುತ್ತಿವೆ. ನಮ್ಮ ಹೋರಾಟದಲ್ಲಿ ನ್ಯಾಯ ಇಲ್ಲದಿದ್ದರೆ, ಧರ್ಮ ಇಲ್ಲದಿದ್ದರೆ ಈ ಎಲ್ಲ ಪಕ್ಷಗಳು ಏಕೆ ಒಳಮೀಸಲಾತಿ ಜಾರಿಯಾಗಬೆಕೆಂದು ಬಯಸುತ್ತಿದ್ದವು ಎಂದು ಪ್ರಶ್ನಿಸಿದರು. 

ಎಲ್ಲಿ ಒಳಮೀಸಲಾತಿ ಕೂಗು, ಹೋರಾಟ ಹೆಚ್ಚಾಗಿ ಕೇಳಿಬರುತ್ತಿವೆಯೋ ಆ ರಾಜ್ಯಗಳಲ್ಲಿನ ಪಕ್ಷಗಳೆಲ್ಲವೂ ಒಳಮೀಸಲಾತಿ ಪರವಾಗಿ ನಿಲುವು ತೆಗೆದುಕೊಳ್ಳುತ್ತಿವೆ. ಎಲ್ಲ ಆಯೋಗಗಳೂ ಒಳಮೀಸಲಾತಿ ಜಾರಿಯಾಗಬೇಕೆಂದು ವರದಿ ನೀಡುತ್ತಿದೆ” ಎಂದರು.

“ಹರಿಯಾಣದಲ್ಲಿ 2024 ಆಗಸ್ಟ್ ತೀರ್ಪು ಬಂದ ನಂತರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಆಂದ್ರ ಪ್ರದೇಶದಲ್ಲಿ ಒಳಮಿಸಲಾತಗಾಗಿ ಆಗ್ರಹಿಸಿ ಶುರುವಾದ ಹೋರಾಟದಲ್ಲಿ ಹಲವು ಏಳುಬೀಳುಗಳು ಕಂಡಿವೆ. 

ಚಂದ್ರಬಾಬು ಸರ್ಕಾರ ಒಳಮೀಸಲಾತಿ ಜಾರಿ  ಮಾಡಿ ಆದೇಶ ಮಾಡಿತ್ತು ಅಂದು ಮಾಲಾ ಜಾತಿಗಳು ಒಳಮೀಸಲಾತಿಯ ವಿರುದ್ದ ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದ್ದವು. 2004ರಲ್ಲಿ ಕೇಂದ್ರ ಸರ್ಕಾರ ಒಳಮೀಸಲಾತಿ ಪರವಾಗಿ ಅಫೀಡವಿಟ್ ಹಾಕದಿದ್ದ ಕಾರಣದಿಂದಾಗಿ ಅಂದು ಸುಪ್ರೀಂ ಕೋರ್ಟ್ ಒಳಮಿಸಲಾತಿ ವಿರುದ್ದ ತೀರ್ಪು ನೀಡಿತ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ನಿರಂತರವಾಗಿ ಒಳಮೀಸಲಾತಿ ವಿರುದ್ದ ನಿಲುವು ತೆಗೆದುಕೊಂಡಿದ್ದ ಕಾರಣದಿಂದಾಗಿ ಉಷಾ ಮೆಹ್ರಾ ಸಮಿತಿ ಸೇರಿದಂತೆ ಹಲವು ಸಮಿತಿಗಳ ರಚಿಸುವ ಮೂಲಕ ಒಳಮೀಸಲಾತಿಯನ್ನು ಸಂಕಷ್ಟಕ್ಕೆ ದೂಡಿದವರು” ಎಂದು ಆರೋಪಿಸಿದರು. 

“ಆಂದ್ರದಲ್ಲಿ 2023ರಲ್ಲಿ ಮಾದಿಗ ವಿಶ್ವರೂಪಂ ಕಾರ್ಯಕ್ರಮ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಮೀಸಲಾತಿ ಪರವಾಗಿ ಅಫಿಡವಿಟ್ ಹಾಕುವಂತೆ ಒತ್ತಡ ತರಲಾಯಿತು. ಅದರಂತೆಯೇ ನರೇಂದ್ರ ಮೋದಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಒಳಮೀಸಲಾತಿ ಪರವಾಗಿ ಅಫಿಡವಿಟ್ ಹಾಕಿದ್ದರು. ಆ ಕಾರಣದಿಂದಾಗಿಯೇ ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ಆದೇಶ ನೀಡಲು ಸಾದ್ಯವಾಯಿತು.

ಆಂಧ್ರ ಪ್ರದೇಶದಲ್ಲಿ ರಾಜೀವ್ ರಂಜಮಿಶ್ರನ್ ಸಮಿತಿ ರಚಿಸುವ ಮೂಲಕ ಒಳಮೀಸಲಾತಿ ಜಾರಿಯಾಗುತ್ತಿದೆ. ತೆಲಂಗಾಣದಲ್ಲಿಯೂ ಒಳಮೀಸಲಾತಿ ಜಾರಿಯಾಗಿದೆ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಅರುಂಧತಿಯಾರ್ ಸಮುದಾಯಕ್ಕೆ 3% ರಷ್ಟು ಒಳಮೀಸಲಾತಿ ನೀಡಿದೆ.

ಎಲ್ಲ ರಾಜ್ಯಗಳಲ್ಲೂ ಒಳಮೀಸಲಾತಿ ಬಹತೇಕ ಬಗೆಹರಿಯುವ ಹಂತಕ್ಕೆ ಬಂದಿದೆ. ಆದರೆ ಕರ್ನಾಟಕದಲ್ಲಿ ಒಳಮೀಸಲಾತಿಯನ್ನು ನಿಧಾನಗತಿ ಧೋರಣೆ ಅನುಸರಿಸುತ್ತಿರುವ ಕಾರಣದಿಂದಾಗಿ ನನಗೆ ಅತೀವ ದುಖಃ ತಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕರ್ನಾಟಕದಲ್ಲಿ ಎ.ಜೆ ಸದಾಶಿವ ಸಮಿತಿ ಒಳಮೀಸಲಾತಿ ಪರವಾಗಿ ತೀರ್ಪು ನೀಡಿದ್ದವು. ಮಾದುಸ್ವಾಮಿ ಸಮಿತಿಯೂ ಕೂಡಾ ಒಳಮೀಸಲಾತಿ ಪರವಾಗಿ ವರದಿನೀಡಿದ್ದವು. ಇವೆಲ್ಲಾ ಸುಪ್ರೀಂ ಕೋರ್ಟ್ ತೀರ್ಪು ಬರುವ ಮುಂಚೆ ಎಂದುಕೊಂಡರೆ ಇದೇ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ನೀವೇ ರಚಿಸಿದ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯೂ ಕೂಡಾ ಒಳಮೀಸಲಾತಿ ಜಾರಿಮಾಡಬೇಕೆಂದು ವರದಿ ನೀಡಿವೆ ಮತ್ತೇಕೆ ಜಾರಿ ಮಾಡುತ್ತಿಲ್ಲ” ಎಂದು ಪ್ರಶ್ನಿಸಿದರು.

“ತಮಿಳುನಾಡಿನಲ್ಲಿ, ಆಂಧ್ರದಲ್ಲಿ, ತೆಲಂಗಾಣದಲ್ಲಿ ಒಂದೇ ಸಮಿತಿ ವರದಿ ಅನುಸಾರ ಒಳಮೀಸಲಾತಿ ಜಾರಿ ಮಾಡಿವೆ. ಆದರೆ ಕರ್ನಾಟಕದಲ್ಲಿ 3 ಸಮಿತಿಗಳ ವರದಿ ಇದ್ದರೂ ಒಳಮೀಸಲಾತಿ ಜಾರಿ ಮಾಡದಿರುವುದು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಒಳಮೀಸಲಾತಿ ವಿರುದ್ದ ನಿಲುವು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. 

ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಪರವಾಗಿ ಇದೆ ಎಂದು ಘೋಷಿಸಿದರೂ ಕಾಂಗ್ರೆಸ್ ಪಕ್ಷದಲ್ಲಿ ಹೊಲೆಯ ಸಮುದಾಯಕ್ಕೆ ಇರುವ ಪ್ರಾಧಾನ್ಯತೆ ಮಾದಿಗರಿಗಿಲ್ಲ ಎಂದು ಇದರ ಮೂಲಕ ತಿಳಿಯುತ್ತದೆ. ಇಂದು ಕರ್ನಾಟಕದ ಕಾಂಗ್ರೆಸ್ ಪಕ್ಷದಲ್ಲಿ ಹೊಲೆಯ ಸಮುದಾಯದ ಪ್ರಭಾವಕ್ಕೆ ಹೆದರುತ್ತಿದೆ. ಆದರೆ ಮಾದಿಗ ಸಮುದಾಯದ ಆಕ್ರೋಶ, ನೋವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂದು ಕಿಡಿಕಾರಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...