Homeಕರ್ನಾಟಕ‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

- Advertisement -
- Advertisement -

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಖರ್ಗೆ ಹೊಲೆಯ ಸಮುದಾಯದವರು. ಅವರು ಒಳಮೀಸಲಾತಿ ಜಾರಿಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಗೆ ಬಿಡುತ್ತಿಲ್ಲ’ ಎಂದುಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಳಮೀಸಲಾತಿ ಅನುಷ್ಠಾನದ ನೇತಾರ, ಹೋರಾಟಗಾರ ಮಂದಕೃಷ್ಣ ಮಾದಿಗ ಆರೋಪಿಸಿದರು. 

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಒಳಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಇದೇ ಬಲಗೈ ಸಮುದಾಯದ ಪರಮೇಶ್ವರ್, ಮಹದೇವಪ್ಪ ಹಾಗೂ ಪ್ರಿಯಾಂಕ್ ಖರ್ಗೆ ಬಿಡುತ್ತಿಲ್ಲ ಎಂದು ಅವರು ಹೇಳಿದರು.

“ಇಂದು ಒಂದು ಸಂತೋಷ ಮತ್ತು ಒಂದು ದುಖಃ ನನ್ನನ್ನು ಕಾಡುತ್ತಿದೆ. ಸಂತೋಷ ಏನೆಂದರೆ ಕರ್ನಾಟಕದ ಎಲ್ಲಾ ಒಳಮೀಸಲಾತಿ ಹೋರಾಟಗಾರರು ಒಂದೇ ವೇದಿಕೆಗೆ ಬಂದು ನಮಗೆ ಗುಂಪುಗಳು ಮುಖ್ಯವಲ್ಲ, ಸಮುದಾಯದ ಹಕ್ಕುಗಳನ್ನುಪಡೆದುಕೊಳ್ಳುವುದೇ ನಮಗೆ ಮುಖ್ಯ ಎಂದು ಒಂದೇ ವೇದಿಕೆಗೆ ಬಂದಿರುವುದು. ದುಖಃದ ವಿಚಾರವೆಂದರೆ, ಇಷ್ಟೆಲ್ಲ ಒತ್ತಡ ಬರುತ್ತಿದ್ದರೂ ಕರ್ನಾಟಕ ಸರ್ಕಾರ ಒಳಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡದೇ ಇರುವುದು” ಎಂದರು. 

“ಕರ್ನಾಟಕದಲ್ಲಿ 15 ರಷ್ಟು ಮೀಸಲಾತಿಯಲ್ಲಿ ಬಹುತೇಕ ಮೀಸಲಾತಿಯನ್ನು ಹೊಲೆಯ ಸಮುದಾಯವೇ ಅನುಭವಿಸಿದೆ, ಇದು ಕರ್ನಾಟಕ ಮಾತ್ರವಲ್ಲ, ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಪರಿಸ್ಥಿತಿ ಇದೇ ಆಗಿದೆ. 1965ರಲ್ಲೆ ಕೇಂದ್ರ ಸರ್ಕಾರ ಲೋಕೂರ್ ಕಮಿಟಿ, ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಯಾಗಬೇಕೆಂದು ಶಿಫಾರಸ್ಸು ಮಾಡಿತ್ತು, ಏಕೆಂದರೆ ಕಾಂಗ್ರೆಸ್ ನಲ್ಲಿ ಅಂದಿನಿಂದ ಹೊಲೆಯ ಸಮುದಾಯದ ಮೇಲಾಧಿಪತ್ಯ ಕಾರಣದಿಂದಾಗಿ ಇದನ್ನು ಜಾರಿಯಾಗುವುದನ್ನು ತಡೆಹಿಡಿಯಾಲಾಯಿತು” ಎಂದು ಮಂದಕೃಷ್ಣ ಮಾದಿಗ ಹೇಳಿದರು. 

“1996ರಲ್ಲಿ ಶುರು ಮಾಡಿದ ಹೋರಾಟ ಇಂದು ಮಾದಿಗ ಮೀಸಲಾತಿ ಇಲ್ಲಿಗೆ ತಂದು ನಿಲ್ಲಿಸಿದೆ. ನಮ್ಮ ಒಳಮೀಸಲಾತಿ ಹೋರಾಟದಲ್ಲಿ ನ್ಯಾಯವಿದೆ, ಧರ್ಮವಿದೆ. ತೆಲಂಗಾಣದಲ್ಲಿ ಎಲ್ಲ  ಪಕ್ಷಗಳು ನಮಗೆ ಬಂಬಲಿಸಿದ್ದರು, ತಮಿಳುನಾಡಿನಲ್ಲೂ ಕೂಡಾ ಒಳಮೀಸಲಾತಿಯ ಪರವಾಗಿದೆ ಎಂದು ಹೇಳುತ್ತಿದೆ. ಕರ್ನಾಟಕದಲ್ಲೂ ಕೂಡಾ ಎಲ್ಲ ಪಕ್ಷಗಳು ನಮ್ಮ ಒಳಮೀಸಲಾತಿ ಪರವಾಗಿ ಇವೆ ಎಂದು ಹೇಳುತ್ತಿವೆ. ನಮ್ಮ ಹೋರಾಟದಲ್ಲಿ ನ್ಯಾಯ ಇಲ್ಲದಿದ್ದರೆ, ಧರ್ಮ ಇಲ್ಲದಿದ್ದರೆ ಈ ಎಲ್ಲ ಪಕ್ಷಗಳು ಏಕೆ ಒಳಮೀಸಲಾತಿ ಜಾರಿಯಾಗಬೆಕೆಂದು ಬಯಸುತ್ತಿದ್ದವು ಎಂದು ಪ್ರಶ್ನಿಸಿದರು. 

ಎಲ್ಲಿ ಒಳಮೀಸಲಾತಿ ಕೂಗು, ಹೋರಾಟ ಹೆಚ್ಚಾಗಿ ಕೇಳಿಬರುತ್ತಿವೆಯೋ ಆ ರಾಜ್ಯಗಳಲ್ಲಿನ ಪಕ್ಷಗಳೆಲ್ಲವೂ ಒಳಮೀಸಲಾತಿ ಪರವಾಗಿ ನಿಲುವು ತೆಗೆದುಕೊಳ್ಳುತ್ತಿವೆ. ಎಲ್ಲ ಆಯೋಗಗಳೂ ಒಳಮೀಸಲಾತಿ ಜಾರಿಯಾಗಬೇಕೆಂದು ವರದಿ ನೀಡುತ್ತಿದೆ” ಎಂದರು.

“ಹರಿಯಾಣದಲ್ಲಿ 2024 ಆಗಸ್ಟ್ ತೀರ್ಪು ಬಂದ ನಂತರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಆಂದ್ರ ಪ್ರದೇಶದಲ್ಲಿ ಒಳಮಿಸಲಾತಗಾಗಿ ಆಗ್ರಹಿಸಿ ಶುರುವಾದ ಹೋರಾಟದಲ್ಲಿ ಹಲವು ಏಳುಬೀಳುಗಳು ಕಂಡಿವೆ. 

ಚಂದ್ರಬಾಬು ಸರ್ಕಾರ ಒಳಮೀಸಲಾತಿ ಜಾರಿ  ಮಾಡಿ ಆದೇಶ ಮಾಡಿತ್ತು ಅಂದು ಮಾಲಾ ಜಾತಿಗಳು ಒಳಮೀಸಲಾತಿಯ ವಿರುದ್ದ ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದ್ದವು. 2004ರಲ್ಲಿ ಕೇಂದ್ರ ಸರ್ಕಾರ ಒಳಮೀಸಲಾತಿ ಪರವಾಗಿ ಅಫೀಡವಿಟ್ ಹಾಕದಿದ್ದ ಕಾರಣದಿಂದಾಗಿ ಅಂದು ಸುಪ್ರೀಂ ಕೋರ್ಟ್ ಒಳಮಿಸಲಾತಿ ವಿರುದ್ದ ತೀರ್ಪು ನೀಡಿತ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ನಿರಂತರವಾಗಿ ಒಳಮೀಸಲಾತಿ ವಿರುದ್ದ ನಿಲುವು ತೆಗೆದುಕೊಂಡಿದ್ದ ಕಾರಣದಿಂದಾಗಿ ಉಷಾ ಮೆಹ್ರಾ ಸಮಿತಿ ಸೇರಿದಂತೆ ಹಲವು ಸಮಿತಿಗಳ ರಚಿಸುವ ಮೂಲಕ ಒಳಮೀಸಲಾತಿಯನ್ನು ಸಂಕಷ್ಟಕ್ಕೆ ದೂಡಿದವರು” ಎಂದು ಆರೋಪಿಸಿದರು. 

“ಆಂದ್ರದಲ್ಲಿ 2023ರಲ್ಲಿ ಮಾದಿಗ ವಿಶ್ವರೂಪಂ ಕಾರ್ಯಕ್ರಮ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಮೀಸಲಾತಿ ಪರವಾಗಿ ಅಫಿಡವಿಟ್ ಹಾಕುವಂತೆ ಒತ್ತಡ ತರಲಾಯಿತು. ಅದರಂತೆಯೇ ನರೇಂದ್ರ ಮೋದಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಒಳಮೀಸಲಾತಿ ಪರವಾಗಿ ಅಫಿಡವಿಟ್ ಹಾಕಿದ್ದರು. ಆ ಕಾರಣದಿಂದಾಗಿಯೇ ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ಆದೇಶ ನೀಡಲು ಸಾದ್ಯವಾಯಿತು.

ಆಂಧ್ರ ಪ್ರದೇಶದಲ್ಲಿ ರಾಜೀವ್ ರಂಜಮಿಶ್ರನ್ ಸಮಿತಿ ರಚಿಸುವ ಮೂಲಕ ಒಳಮೀಸಲಾತಿ ಜಾರಿಯಾಗುತ್ತಿದೆ. ತೆಲಂಗಾಣದಲ್ಲಿಯೂ ಒಳಮೀಸಲಾತಿ ಜಾರಿಯಾಗಿದೆ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಅರುಂಧತಿಯಾರ್ ಸಮುದಾಯಕ್ಕೆ 3% ರಷ್ಟು ಒಳಮೀಸಲಾತಿ ನೀಡಿದೆ.

ಎಲ್ಲ ರಾಜ್ಯಗಳಲ್ಲೂ ಒಳಮೀಸಲಾತಿ ಬಹತೇಕ ಬಗೆಹರಿಯುವ ಹಂತಕ್ಕೆ ಬಂದಿದೆ. ಆದರೆ ಕರ್ನಾಟಕದಲ್ಲಿ ಒಳಮೀಸಲಾತಿಯನ್ನು ನಿಧಾನಗತಿ ಧೋರಣೆ ಅನುಸರಿಸುತ್ತಿರುವ ಕಾರಣದಿಂದಾಗಿ ನನಗೆ ಅತೀವ ದುಖಃ ತಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕರ್ನಾಟಕದಲ್ಲಿ ಎ.ಜೆ ಸದಾಶಿವ ಸಮಿತಿ ಒಳಮೀಸಲಾತಿ ಪರವಾಗಿ ತೀರ್ಪು ನೀಡಿದ್ದವು. ಮಾದುಸ್ವಾಮಿ ಸಮಿತಿಯೂ ಕೂಡಾ ಒಳಮೀಸಲಾತಿ ಪರವಾಗಿ ವರದಿನೀಡಿದ್ದವು. ಇವೆಲ್ಲಾ ಸುಪ್ರೀಂ ಕೋರ್ಟ್ ತೀರ್ಪು ಬರುವ ಮುಂಚೆ ಎಂದುಕೊಂಡರೆ ಇದೇ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ನೀವೇ ರಚಿಸಿದ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯೂ ಕೂಡಾ ಒಳಮೀಸಲಾತಿ ಜಾರಿಮಾಡಬೇಕೆಂದು ವರದಿ ನೀಡಿವೆ ಮತ್ತೇಕೆ ಜಾರಿ ಮಾಡುತ್ತಿಲ್ಲ” ಎಂದು ಪ್ರಶ್ನಿಸಿದರು.

“ತಮಿಳುನಾಡಿನಲ್ಲಿ, ಆಂಧ್ರದಲ್ಲಿ, ತೆಲಂಗಾಣದಲ್ಲಿ ಒಂದೇ ಸಮಿತಿ ವರದಿ ಅನುಸಾರ ಒಳಮೀಸಲಾತಿ ಜಾರಿ ಮಾಡಿವೆ. ಆದರೆ ಕರ್ನಾಟಕದಲ್ಲಿ 3 ಸಮಿತಿಗಳ ವರದಿ ಇದ್ದರೂ ಒಳಮೀಸಲಾತಿ ಜಾರಿ ಮಾಡದಿರುವುದು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಒಳಮೀಸಲಾತಿ ವಿರುದ್ದ ನಿಲುವು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. 

ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಪರವಾಗಿ ಇದೆ ಎಂದು ಘೋಷಿಸಿದರೂ ಕಾಂಗ್ರೆಸ್ ಪಕ್ಷದಲ್ಲಿ ಹೊಲೆಯ ಸಮುದಾಯಕ್ಕೆ ಇರುವ ಪ್ರಾಧಾನ್ಯತೆ ಮಾದಿಗರಿಗಿಲ್ಲ ಎಂದು ಇದರ ಮೂಲಕ ತಿಳಿಯುತ್ತದೆ. ಇಂದು ಕರ್ನಾಟಕದ ಕಾಂಗ್ರೆಸ್ ಪಕ್ಷದಲ್ಲಿ ಹೊಲೆಯ ಸಮುದಾಯದ ಪ್ರಭಾವಕ್ಕೆ ಹೆದರುತ್ತಿದೆ. ಆದರೆ ಮಾದಿಗ ಸಮುದಾಯದ ಆಕ್ರೋಶ, ನೋವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂದು ಕಿಡಿಕಾರಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...