Homeಕರ್ನಾಟಕ‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

- Advertisement -
- Advertisement -

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಖರ್ಗೆ ಹೊಲೆಯ ಸಮುದಾಯದವರು. ಅವರು ಒಳಮೀಸಲಾತಿ ಜಾರಿಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಗೆ ಬಿಡುತ್ತಿಲ್ಲ’ ಎಂದುಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಳಮೀಸಲಾತಿ ಅನುಷ್ಠಾನದ ನೇತಾರ, ಹೋರಾಟಗಾರ ಮಂದಕೃಷ್ಣ ಮಾದಿಗ ಆರೋಪಿಸಿದರು. 

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಒಳಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಇದೇ ಬಲಗೈ ಸಮುದಾಯದ ಪರಮೇಶ್ವರ್, ಮಹದೇವಪ್ಪ ಹಾಗೂ ಪ್ರಿಯಾಂಕ್ ಖರ್ಗೆ ಬಿಡುತ್ತಿಲ್ಲ ಎಂದು ಅವರು ಹೇಳಿದರು.

“ಇಂದು ಒಂದು ಸಂತೋಷ ಮತ್ತು ಒಂದು ದುಖಃ ನನ್ನನ್ನು ಕಾಡುತ್ತಿದೆ. ಸಂತೋಷ ಏನೆಂದರೆ ಕರ್ನಾಟಕದ ಎಲ್ಲಾ ಒಳಮೀಸಲಾತಿ ಹೋರಾಟಗಾರರು ಒಂದೇ ವೇದಿಕೆಗೆ ಬಂದು ನಮಗೆ ಗುಂಪುಗಳು ಮುಖ್ಯವಲ್ಲ, ಸಮುದಾಯದ ಹಕ್ಕುಗಳನ್ನುಪಡೆದುಕೊಳ್ಳುವುದೇ ನಮಗೆ ಮುಖ್ಯ ಎಂದು ಒಂದೇ ವೇದಿಕೆಗೆ ಬಂದಿರುವುದು. ದುಖಃದ ವಿಚಾರವೆಂದರೆ, ಇಷ್ಟೆಲ್ಲ ಒತ್ತಡ ಬರುತ್ತಿದ್ದರೂ ಕರ್ನಾಟಕ ಸರ್ಕಾರ ಒಳಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡದೇ ಇರುವುದು” ಎಂದರು. 

“ಕರ್ನಾಟಕದಲ್ಲಿ 15 ರಷ್ಟು ಮೀಸಲಾತಿಯಲ್ಲಿ ಬಹುತೇಕ ಮೀಸಲಾತಿಯನ್ನು ಹೊಲೆಯ ಸಮುದಾಯವೇ ಅನುಭವಿಸಿದೆ, ಇದು ಕರ್ನಾಟಕ ಮಾತ್ರವಲ್ಲ, ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಪರಿಸ್ಥಿತಿ ಇದೇ ಆಗಿದೆ. 1965ರಲ್ಲೆ ಕೇಂದ್ರ ಸರ್ಕಾರ ಲೋಕೂರ್ ಕಮಿಟಿ, ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಯಾಗಬೇಕೆಂದು ಶಿಫಾರಸ್ಸು ಮಾಡಿತ್ತು, ಏಕೆಂದರೆ ಕಾಂಗ್ರೆಸ್ ನಲ್ಲಿ ಅಂದಿನಿಂದ ಹೊಲೆಯ ಸಮುದಾಯದ ಮೇಲಾಧಿಪತ್ಯ ಕಾರಣದಿಂದಾಗಿ ಇದನ್ನು ಜಾರಿಯಾಗುವುದನ್ನು ತಡೆಹಿಡಿಯಾಲಾಯಿತು” ಎಂದು ಮಂದಕೃಷ್ಣ ಮಾದಿಗ ಹೇಳಿದರು. 

“1996ರಲ್ಲಿ ಶುರು ಮಾಡಿದ ಹೋರಾಟ ಇಂದು ಮಾದಿಗ ಮೀಸಲಾತಿ ಇಲ್ಲಿಗೆ ತಂದು ನಿಲ್ಲಿಸಿದೆ. ನಮ್ಮ ಒಳಮೀಸಲಾತಿ ಹೋರಾಟದಲ್ಲಿ ನ್ಯಾಯವಿದೆ, ಧರ್ಮವಿದೆ. ತೆಲಂಗಾಣದಲ್ಲಿ ಎಲ್ಲ  ಪಕ್ಷಗಳು ನಮಗೆ ಬಂಬಲಿಸಿದ್ದರು, ತಮಿಳುನಾಡಿನಲ್ಲೂ ಕೂಡಾ ಒಳಮೀಸಲಾತಿಯ ಪರವಾಗಿದೆ ಎಂದು ಹೇಳುತ್ತಿದೆ. ಕರ್ನಾಟಕದಲ್ಲೂ ಕೂಡಾ ಎಲ್ಲ ಪಕ್ಷಗಳು ನಮ್ಮ ಒಳಮೀಸಲಾತಿ ಪರವಾಗಿ ಇವೆ ಎಂದು ಹೇಳುತ್ತಿವೆ. ನಮ್ಮ ಹೋರಾಟದಲ್ಲಿ ನ್ಯಾಯ ಇಲ್ಲದಿದ್ದರೆ, ಧರ್ಮ ಇಲ್ಲದಿದ್ದರೆ ಈ ಎಲ್ಲ ಪಕ್ಷಗಳು ಏಕೆ ಒಳಮೀಸಲಾತಿ ಜಾರಿಯಾಗಬೆಕೆಂದು ಬಯಸುತ್ತಿದ್ದವು ಎಂದು ಪ್ರಶ್ನಿಸಿದರು. 

ಎಲ್ಲಿ ಒಳಮೀಸಲಾತಿ ಕೂಗು, ಹೋರಾಟ ಹೆಚ್ಚಾಗಿ ಕೇಳಿಬರುತ್ತಿವೆಯೋ ಆ ರಾಜ್ಯಗಳಲ್ಲಿನ ಪಕ್ಷಗಳೆಲ್ಲವೂ ಒಳಮೀಸಲಾತಿ ಪರವಾಗಿ ನಿಲುವು ತೆಗೆದುಕೊಳ್ಳುತ್ತಿವೆ. ಎಲ್ಲ ಆಯೋಗಗಳೂ ಒಳಮೀಸಲಾತಿ ಜಾರಿಯಾಗಬೇಕೆಂದು ವರದಿ ನೀಡುತ್ತಿದೆ” ಎಂದರು.

“ಹರಿಯಾಣದಲ್ಲಿ 2024 ಆಗಸ್ಟ್ ತೀರ್ಪು ಬಂದ ನಂತರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಆಂದ್ರ ಪ್ರದೇಶದಲ್ಲಿ ಒಳಮಿಸಲಾತಗಾಗಿ ಆಗ್ರಹಿಸಿ ಶುರುವಾದ ಹೋರಾಟದಲ್ಲಿ ಹಲವು ಏಳುಬೀಳುಗಳು ಕಂಡಿವೆ. 

ಚಂದ್ರಬಾಬು ಸರ್ಕಾರ ಒಳಮೀಸಲಾತಿ ಜಾರಿ  ಮಾಡಿ ಆದೇಶ ಮಾಡಿತ್ತು ಅಂದು ಮಾಲಾ ಜಾತಿಗಳು ಒಳಮೀಸಲಾತಿಯ ವಿರುದ್ದ ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದ್ದವು. 2004ರಲ್ಲಿ ಕೇಂದ್ರ ಸರ್ಕಾರ ಒಳಮೀಸಲಾತಿ ಪರವಾಗಿ ಅಫೀಡವಿಟ್ ಹಾಕದಿದ್ದ ಕಾರಣದಿಂದಾಗಿ ಅಂದು ಸುಪ್ರೀಂ ಕೋರ್ಟ್ ಒಳಮಿಸಲಾತಿ ವಿರುದ್ದ ತೀರ್ಪು ನೀಡಿತ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ನಿರಂತರವಾಗಿ ಒಳಮೀಸಲಾತಿ ವಿರುದ್ದ ನಿಲುವು ತೆಗೆದುಕೊಂಡಿದ್ದ ಕಾರಣದಿಂದಾಗಿ ಉಷಾ ಮೆಹ್ರಾ ಸಮಿತಿ ಸೇರಿದಂತೆ ಹಲವು ಸಮಿತಿಗಳ ರಚಿಸುವ ಮೂಲಕ ಒಳಮೀಸಲಾತಿಯನ್ನು ಸಂಕಷ್ಟಕ್ಕೆ ದೂಡಿದವರು” ಎಂದು ಆರೋಪಿಸಿದರು. 

“ಆಂದ್ರದಲ್ಲಿ 2023ರಲ್ಲಿ ಮಾದಿಗ ವಿಶ್ವರೂಪಂ ಕಾರ್ಯಕ್ರಮ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಮೀಸಲಾತಿ ಪರವಾಗಿ ಅಫಿಡವಿಟ್ ಹಾಕುವಂತೆ ಒತ್ತಡ ತರಲಾಯಿತು. ಅದರಂತೆಯೇ ನರೇಂದ್ರ ಮೋದಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಒಳಮೀಸಲಾತಿ ಪರವಾಗಿ ಅಫಿಡವಿಟ್ ಹಾಕಿದ್ದರು. ಆ ಕಾರಣದಿಂದಾಗಿಯೇ ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ಆದೇಶ ನೀಡಲು ಸಾದ್ಯವಾಯಿತು.

ಆಂಧ್ರ ಪ್ರದೇಶದಲ್ಲಿ ರಾಜೀವ್ ರಂಜಮಿಶ್ರನ್ ಸಮಿತಿ ರಚಿಸುವ ಮೂಲಕ ಒಳಮೀಸಲಾತಿ ಜಾರಿಯಾಗುತ್ತಿದೆ. ತೆಲಂಗಾಣದಲ್ಲಿಯೂ ಒಳಮೀಸಲಾತಿ ಜಾರಿಯಾಗಿದೆ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಅರುಂಧತಿಯಾರ್ ಸಮುದಾಯಕ್ಕೆ 3% ರಷ್ಟು ಒಳಮೀಸಲಾತಿ ನೀಡಿದೆ.

ಎಲ್ಲ ರಾಜ್ಯಗಳಲ್ಲೂ ಒಳಮೀಸಲಾತಿ ಬಹತೇಕ ಬಗೆಹರಿಯುವ ಹಂತಕ್ಕೆ ಬಂದಿದೆ. ಆದರೆ ಕರ್ನಾಟಕದಲ್ಲಿ ಒಳಮೀಸಲಾತಿಯನ್ನು ನಿಧಾನಗತಿ ಧೋರಣೆ ಅನುಸರಿಸುತ್ತಿರುವ ಕಾರಣದಿಂದಾಗಿ ನನಗೆ ಅತೀವ ದುಖಃ ತಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕರ್ನಾಟಕದಲ್ಲಿ ಎ.ಜೆ ಸದಾಶಿವ ಸಮಿತಿ ಒಳಮೀಸಲಾತಿ ಪರವಾಗಿ ತೀರ್ಪು ನೀಡಿದ್ದವು. ಮಾದುಸ್ವಾಮಿ ಸಮಿತಿಯೂ ಕೂಡಾ ಒಳಮೀಸಲಾತಿ ಪರವಾಗಿ ವರದಿನೀಡಿದ್ದವು. ಇವೆಲ್ಲಾ ಸುಪ್ರೀಂ ಕೋರ್ಟ್ ತೀರ್ಪು ಬರುವ ಮುಂಚೆ ಎಂದುಕೊಂಡರೆ ಇದೇ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ನೀವೇ ರಚಿಸಿದ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯೂ ಕೂಡಾ ಒಳಮೀಸಲಾತಿ ಜಾರಿಮಾಡಬೇಕೆಂದು ವರದಿ ನೀಡಿವೆ ಮತ್ತೇಕೆ ಜಾರಿ ಮಾಡುತ್ತಿಲ್ಲ” ಎಂದು ಪ್ರಶ್ನಿಸಿದರು.

“ತಮಿಳುನಾಡಿನಲ್ಲಿ, ಆಂಧ್ರದಲ್ಲಿ, ತೆಲಂಗಾಣದಲ್ಲಿ ಒಂದೇ ಸಮಿತಿ ವರದಿ ಅನುಸಾರ ಒಳಮೀಸಲಾತಿ ಜಾರಿ ಮಾಡಿವೆ. ಆದರೆ ಕರ್ನಾಟಕದಲ್ಲಿ 3 ಸಮಿತಿಗಳ ವರದಿ ಇದ್ದರೂ ಒಳಮೀಸಲಾತಿ ಜಾರಿ ಮಾಡದಿರುವುದು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಒಳಮೀಸಲಾತಿ ವಿರುದ್ದ ನಿಲುವು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. 

ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಪರವಾಗಿ ಇದೆ ಎಂದು ಘೋಷಿಸಿದರೂ ಕಾಂಗ್ರೆಸ್ ಪಕ್ಷದಲ್ಲಿ ಹೊಲೆಯ ಸಮುದಾಯಕ್ಕೆ ಇರುವ ಪ್ರಾಧಾನ್ಯತೆ ಮಾದಿಗರಿಗಿಲ್ಲ ಎಂದು ಇದರ ಮೂಲಕ ತಿಳಿಯುತ್ತದೆ. ಇಂದು ಕರ್ನಾಟಕದ ಕಾಂಗ್ರೆಸ್ ಪಕ್ಷದಲ್ಲಿ ಹೊಲೆಯ ಸಮುದಾಯದ ಪ್ರಭಾವಕ್ಕೆ ಹೆದರುತ್ತಿದೆ. ಆದರೆ ಮಾದಿಗ ಸಮುದಾಯದ ಆಕ್ರೋಶ, ನೋವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂದು ಕಿಡಿಕಾರಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...