Homeಕರ್ನಾಟಕಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್...

ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಗೆ 2 ವರ್ಷಗಳು ಬಾಕಿ ಇರುವಂತೆಯೇ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಪದವಿಗೆ ರೇಸ್ ಅರಂಭವಾದಂತೆ ಕಾಣುತ್ತದೆ. ಇದುವರೆಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿದ್ದ ಮುಸುಕಿ ಗುದ್ದಾಟ ಈಗ ಬೀದಿಗೆ ಬಂದಿದೆ. ಇದಕ್ಕೆ ಸ್ಪಷ್ಟ ನಿದರ್ಶನಗಳಂತೆ ಕರ್ನಾಟಕದ ಹಲವು ಶಾಸಕರು ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಈಗಾಗಲೇ ಬಿಂಬಿಸತೊಡಗಿದ್ದರೆ, ಇದಕ್ಕೆ ವಿರುದ್ಧವಾಗಿ ಇನ್ನೊಂದು ಬಣ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರಚಾರ ಆರಂಭಿಸಿದ್ದಾರೆ. ಶಿವಕುಮಾರ್ ಅಥವಾ ಸಿದ್ದರಾಮಯ್ಯನವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲವಾದರೂ ಪರೋಕ್ಷವಾಗಿ ತಾವು ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಸಿದ್ಧರಾಮಯ್ಯ ಅಪ್ತವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್‌ ಮುಖಂಡ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಭಾನುವಾರ ಸಿದ್ಧರಾಮಯ್ಯನವರೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದು ಭವಿಷ್ಯ ನುಡಿದಿದ್ದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನಾನು ಸಿದ್ಧರಾಮಯ್ಯನವರನ್ನು ಮಾಜಿ ಮುಖ್ಯಮಂತ್ರಿ ಎಂದು ಕರೆಯಲು ಇಷ್ಟಪಡುವುದಿಲ್ಲ. ಅವರು ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದರು. ಅದೇ ರೀತಿಯಲ್ಲಿ ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ್ ಕೂಡ ಸಿದ್ದು ಪರ ಬ್ಯಾಟ್ ಬೀಸಿದ್ದರು. ಜಮೀರ್ ಮತ್ತು ಹಿಟ್ನಾಳ್‌ ಅವರ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಅವರ ಬಣಗಳು ಮುಖ್ಯಮಂತ್ರಿ ಅಭ್ಯರ್ಥಿ ವಿಷಯಕ್ಕೆ ಸಂಬಂಧಿಸಿದಂತೆ ಪರಸ್ಪರ ಹೇಳಿಕೆಗಳಲ್ಲಿ ತೊಡಗಿದ್ದರು. ಪಕ್ಷದಲ್ಲಿನ ಮುಖ್ಯಮಂತ್ರಿ ಗೊಂದಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿದ್ದೆಗೆಡಿಸಿದ್ದು ಅವರು ಭಾನುವಾರ ಸಂಜೆಯೇ ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಮತ್ತು AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಇಂದು ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇಂದು ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವನ್ನು ಬಹಿರಂಗವಾಗಿ ಚರ್ಚಿಸದೇ ಹೈಕಮಾಂಡ್ ಗಮನಕ್ಕೆ ಬಿಡಬೇಕೆಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿರುವುದಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ 2 ವರ್ಷವಿದ್ದು ಈಗಾಗಲೇ ನಾಯಕತ್ವದ ಚರ್ಚೆ ಬೇಡ. ರಾಜ್ಯದಲ್ಲಿ ಕೆಲವು ನಾಯಕರು ನಿರ್ದಿಷ್ಟ ವ್ಯಕ್ತಿಗಳನ್ನು ಮುಖ್ಯಮಂತ್ರಿಯನ್ನಾಗಿ ಬಿಂಬಿಸಲು ಯತ್ನಿಸುತ್ತಿರುವುದು ಮತ್ತು ಹೇಳಿಕೆಯನ್ನು ನೀಡುತ್ತಿರುವುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಮೊದಲು ಚುನಾಣೆಯನ್ನು ಗೆಲ್ಲುವ ಕಡೆ ಗಮನ ಹರಿಸಲಿ. ನಾಯಕತ್ವ ವಿಚಾರವನ್ನು ಹೈಕಮಾಂಡ್ ಮತ್ತು ಶಾಸಕರು ನೋಡಿಕೊಳ್ಳುತ್ತಾರೆ ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ತಿಳಿಸಿದ್ದಾರೆ.

ದೇಶದ ಆರ್ಥಿಕ ಸ್ಥಿತಿಯ ಚೇತರಿಕೆ ಮತ್ತು ಕೃಷಿ ಕ್ಷೇತ್ರದ ಸುಧಾರಣೆಗೆ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಕೊರೋನಾದಿಂದ ಕುಸಿದಿರುವ ದೇಶದ ಅಭಿವೃದ್ಧಿಗಾಗಿ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳ ಕಾಂಗ್ರೆಸ್‌ ನಾಯಕರು ಒಟ್ಟಾಗಿ ಹೋರಾಟ ನಡೆಸಬೇಕು. ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರಬಲವಾದ ಹೋರಾಟವನ್ನು ನಡೆಸುತ್ತಿದೆ. ಕಾಂಗ್ರೆಸ್‌ನ ಸ್ಥಳೀಯ ನಾಯಕರು ಆ ನಿಟ್ಟಿನಲ್ಲಿಯೇ ಕಾರ್ಯ ನಿರ್ವಹಿಸಬೇಕು ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದಿಪ್ ಸಿಂಗ್ ಸುರ್ಜೆವಾಲ ಹೇಳಿಕೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಳೆ ದೆಹಲಿಯಿಂದ ಬೆಂಗಳೂರಿಗೆ ಮರಳಲಿದ್ದಾರೆ. ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಬಂದ ನಂತರ ಮುಖ್ಯಮಂತ್ರಿ ವಿಷಯವನ್ನು ಪ್ರಸ್ತಾಪಿಸುತ್ತಿರುವ ಜಮೀರ್ ಅಹ್ಮದ್ ಮತ್ತು ರಾಘವೇಂದ್ರ ಹಿಟ್ನಾಳ್ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ. ಹಾಗೇ ಮುಖ್ಯಮಂತ್ರಿ ವಿಷಯವನ್ನು ಪ್ರಸ್ತಾಪಿಸದಂತೆ ರಾಜ್ಯ ನಾಯಕರಿಗೆ ಮೌಕಿಕ ಆದೇಶವನ್ನು ಅಥವಾ ನೋಟಿಸ್ ನೀಡಬಹುದು. ಈಗಲೇ ಈ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.


ಇದನ್ನೂ ಓದಿ :ಶರದ್ ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ 2 ನೇ ಭೇಟಿ; 2024 ರ ಚುನಾವಣೆಗೆ ವಿರೋಧ ಪಕ್ಷಗಳು ಸಜ್ಜು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...