Homeಕರ್ನಾಟಕಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್...

ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಗೆ 2 ವರ್ಷಗಳು ಬಾಕಿ ಇರುವಂತೆಯೇ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಪದವಿಗೆ ರೇಸ್ ಅರಂಭವಾದಂತೆ ಕಾಣುತ್ತದೆ. ಇದುವರೆಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿದ್ದ ಮುಸುಕಿ ಗುದ್ದಾಟ ಈಗ ಬೀದಿಗೆ ಬಂದಿದೆ. ಇದಕ್ಕೆ ಸ್ಪಷ್ಟ ನಿದರ್ಶನಗಳಂತೆ ಕರ್ನಾಟಕದ ಹಲವು ಶಾಸಕರು ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಈಗಾಗಲೇ ಬಿಂಬಿಸತೊಡಗಿದ್ದರೆ, ಇದಕ್ಕೆ ವಿರುದ್ಧವಾಗಿ ಇನ್ನೊಂದು ಬಣ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರಚಾರ ಆರಂಭಿಸಿದ್ದಾರೆ. ಶಿವಕುಮಾರ್ ಅಥವಾ ಸಿದ್ದರಾಮಯ್ಯನವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲವಾದರೂ ಪರೋಕ್ಷವಾಗಿ ತಾವು ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಸಿದ್ಧರಾಮಯ್ಯ ಅಪ್ತವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್‌ ಮುಖಂಡ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಭಾನುವಾರ ಸಿದ್ಧರಾಮಯ್ಯನವರೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದು ಭವಿಷ್ಯ ನುಡಿದಿದ್ದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನಾನು ಸಿದ್ಧರಾಮಯ್ಯನವರನ್ನು ಮಾಜಿ ಮುಖ್ಯಮಂತ್ರಿ ಎಂದು ಕರೆಯಲು ಇಷ್ಟಪಡುವುದಿಲ್ಲ. ಅವರು ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದರು. ಅದೇ ರೀತಿಯಲ್ಲಿ ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ್ ಕೂಡ ಸಿದ್ದು ಪರ ಬ್ಯಾಟ್ ಬೀಸಿದ್ದರು. ಜಮೀರ್ ಮತ್ತು ಹಿಟ್ನಾಳ್‌ ಅವರ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಅವರ ಬಣಗಳು ಮುಖ್ಯಮಂತ್ರಿ ಅಭ್ಯರ್ಥಿ ವಿಷಯಕ್ಕೆ ಸಂಬಂಧಿಸಿದಂತೆ ಪರಸ್ಪರ ಹೇಳಿಕೆಗಳಲ್ಲಿ ತೊಡಗಿದ್ದರು. ಪಕ್ಷದಲ್ಲಿನ ಮುಖ್ಯಮಂತ್ರಿ ಗೊಂದಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿದ್ದೆಗೆಡಿಸಿದ್ದು ಅವರು ಭಾನುವಾರ ಸಂಜೆಯೇ ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಮತ್ತು AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಇಂದು ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇಂದು ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವನ್ನು ಬಹಿರಂಗವಾಗಿ ಚರ್ಚಿಸದೇ ಹೈಕಮಾಂಡ್ ಗಮನಕ್ಕೆ ಬಿಡಬೇಕೆಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿರುವುದಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ 2 ವರ್ಷವಿದ್ದು ಈಗಾಗಲೇ ನಾಯಕತ್ವದ ಚರ್ಚೆ ಬೇಡ. ರಾಜ್ಯದಲ್ಲಿ ಕೆಲವು ನಾಯಕರು ನಿರ್ದಿಷ್ಟ ವ್ಯಕ್ತಿಗಳನ್ನು ಮುಖ್ಯಮಂತ್ರಿಯನ್ನಾಗಿ ಬಿಂಬಿಸಲು ಯತ್ನಿಸುತ್ತಿರುವುದು ಮತ್ತು ಹೇಳಿಕೆಯನ್ನು ನೀಡುತ್ತಿರುವುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಮೊದಲು ಚುನಾಣೆಯನ್ನು ಗೆಲ್ಲುವ ಕಡೆ ಗಮನ ಹರಿಸಲಿ. ನಾಯಕತ್ವ ವಿಚಾರವನ್ನು ಹೈಕಮಾಂಡ್ ಮತ್ತು ಶಾಸಕರು ನೋಡಿಕೊಳ್ಳುತ್ತಾರೆ ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ತಿಳಿಸಿದ್ದಾರೆ.

ದೇಶದ ಆರ್ಥಿಕ ಸ್ಥಿತಿಯ ಚೇತರಿಕೆ ಮತ್ತು ಕೃಷಿ ಕ್ಷೇತ್ರದ ಸುಧಾರಣೆಗೆ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಕೊರೋನಾದಿಂದ ಕುಸಿದಿರುವ ದೇಶದ ಅಭಿವೃದ್ಧಿಗಾಗಿ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳ ಕಾಂಗ್ರೆಸ್‌ ನಾಯಕರು ಒಟ್ಟಾಗಿ ಹೋರಾಟ ನಡೆಸಬೇಕು. ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರಬಲವಾದ ಹೋರಾಟವನ್ನು ನಡೆಸುತ್ತಿದೆ. ಕಾಂಗ್ರೆಸ್‌ನ ಸ್ಥಳೀಯ ನಾಯಕರು ಆ ನಿಟ್ಟಿನಲ್ಲಿಯೇ ಕಾರ್ಯ ನಿರ್ವಹಿಸಬೇಕು ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದಿಪ್ ಸಿಂಗ್ ಸುರ್ಜೆವಾಲ ಹೇಳಿಕೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಳೆ ದೆಹಲಿಯಿಂದ ಬೆಂಗಳೂರಿಗೆ ಮರಳಲಿದ್ದಾರೆ. ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಬಂದ ನಂತರ ಮುಖ್ಯಮಂತ್ರಿ ವಿಷಯವನ್ನು ಪ್ರಸ್ತಾಪಿಸುತ್ತಿರುವ ಜಮೀರ್ ಅಹ್ಮದ್ ಮತ್ತು ರಾಘವೇಂದ್ರ ಹಿಟ್ನಾಳ್ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ. ಹಾಗೇ ಮುಖ್ಯಮಂತ್ರಿ ವಿಷಯವನ್ನು ಪ್ರಸ್ತಾಪಿಸದಂತೆ ರಾಜ್ಯ ನಾಯಕರಿಗೆ ಮೌಕಿಕ ಆದೇಶವನ್ನು ಅಥವಾ ನೋಟಿಸ್ ನೀಡಬಹುದು. ಈಗಲೇ ಈ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.


ಇದನ್ನೂ ಓದಿ :ಶರದ್ ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ 2 ನೇ ಭೇಟಿ; 2024 ರ ಚುನಾವಣೆಗೆ ವಿರೋಧ ಪಕ್ಷಗಳು ಸಜ್ಜು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...