Homeಕರ್ನಾಟಕಎಐಸಿಸಿ ಸೆಂಟ್ರಲ್‌ ವಾರ್‌ರೂಂ ಅಧ್ಯಕ್ಷರಾಗಿ ಶಶಿಕಾಂತ್‌ ಸೆಂಥಿಲ್‌ ನೇಮಕ

ಎಐಸಿಸಿ ಸೆಂಟ್ರಲ್‌ ವಾರ್‌ರೂಂ ಅಧ್ಯಕ್ಷರಾಗಿ ಶಶಿಕಾಂತ್‌ ಸೆಂಥಿಲ್‌ ನೇಮಕ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಪಕ್ಷವು ಸೆಂಟ್ರಲ್‌ ವಾರ್‌ರೂಂನ್ನು ರಚಿಸಿದ್ದು, ‘ಸಂಘಟನಾ’ ವಾರ್‌ರೂಂ ಅಧ್ಯಕ್ಷರಾಗಿ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರು ನೇಮಕಗೊಂಡಿದ್ದಾರೆ.

ತಮಿಳುನಾಡು ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ಶಶಿಕಾತ್‌ ಸೆಂಥಿಲ್‌, ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು. ಇತ್ತೀಚಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೆಂಥಿಲ್ ಪ್ರಮುಖ ಚುನಾವಣಾ ತಂತ್ರಗಾರರಲ್ಲಿ ಒಬ್ಬರಾಗಿದ್ದರು. ಕೆಪಿಸಿಸಿಯ ವಾರ್‌ ರೂಂನ್ನು ಯಶಸ್ವಿಯಾಗಿ ನಿಭಾಯಿಸಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿನಲ್ಲಿ ಪಾತ್ರ ವಹಿಸಿದ್ದರು.

ವೈಭವ್ ವಾಲಿಯಾ ಅವರು ಸೆಂಟ್ರಲ್‌ ಸಂವಹನ ವಾರ್ ರೂಮ್‌ನ ಮುಖ್ಯಸ್ಥರನ್ನಾಗಿ ನೇಮಕಗೊಂಡಿದ್ದು, ಸಸಿಕಾಂತ್ ಸೆಂಥಿಲ್ ಅವರನ್ನು ‘ಸಂಘಟನಾ’ ವಾರ್ ರೂಮ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಗೋಕುಲ್ ಬುತೈಲ್, ನವೀನ್ ಶರ್ಮ, ವರುಣ್ ಸಂತೋಷ್, ಅರವಿಂದ್ ಕುಮಾರ್‌ರನ್ನು ವಾರ್‌ರೂಂ ಉಪಾಧ್ಯಕ್ಷರುಗಳಾಗಿ ಆಯ್ಕೆ ಮಾಡಲಾಗಿದೆ.

ಎಐಸಿಸಿ ಕೋಶಾಧಿಕಾರಿ ಅಜಯ್ ಮಾಕೆನ್ ಅವರ ಸಂಚಾಲಕತ್ವದಲ್ಲಿ ಪ್ರಚಾರ ಸಮಿತಿಯನ್ನು ರಚಿಸಿದೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಮತ್ತು ಕೆ ಸಿ ವೇಣುಗೋಪಾಲ್, ಎಐಸಿಸಿ ಆಡಳಿತ ಉಸ್ತುವಾರಿ ಗುರುದೀಪ್ ಸಿಂಗ್ ಸಪ್ಪಲ್, ಮಾದ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮತ್ತು ಸಾಮಾಜಿಕ ಮಾಧ್ಯಮದ ಮುಖ್ಯಸ್ಥೆ ಸುಪ್ರಿಯಾ ಶ್ರೀನತೆ ಅವರು ಸಮಿತಿಯ ಭಾಗವಾಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಸಾರ್ವತ್ರಿಕ ಚುನಾವಣೆಗೆ ಪ್ರಚಾರ ಸಮಿತಿಯನ್ನು ರಚಿಸಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಖಜಾಂಚಿ ಅಜಯ್ ಮಾಕೆನ್ ಸಂಚಾಲಕರಾಗಿದ್ದಾರೆ ಎಂದು ಹೇಳಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ ವಿಭಾಗ), ಎಐಸಿಸಿ ಆಡಳಿತದ ಉಸ್ತುವಾರಿ, ಎಐಸಿಸಿ ಮಾದ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷರು ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರು ಪ್ರಚಾರ ಸಮತಿಯ ಸದಸ್ಯರಾಗಿರುತ್ತಾರೆ.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲು ಕಾಂಗ್ರೆಸ್ ಐದು ಸ್ಕ್ರೀನಿಂಗ್ ಕಮಿಟಿಗಳನ್ನು ರಚಿಸಿದ ಒಂದು ದಿನದ ನಂತರ ಈ ನೇಮಕಾತಿಗಳು ನಡೆದಿದೆ.

ಇದಲ್ಲದೆ ಎಐಸಿಸಿ ಇಂದು ರಾಜಸ್ಥಾನ, ಕೇರಳ, ತೆಲಂಗಾಣ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮತ್ತು ತ್ರಿಪುರಾ, ಮಧ್ಯಪ್ರದೇಶಕ್ಕೆ ಚುನಾವಣಾ ಸಮಿತಿಗಳನ್ನು ರಚಿಸಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದರು.

ಇದನ್ನು ಓದಿ: 8 ರಾಜ್ಯಗಳಿಗೆ ಚುನಾವಣಾ ಸಮಿತಿಗಳನ್ನು ನೇಮಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...