Homeಕರ್ನಾಟಕಸ್ವಮೂತ್ರದಿಂದ ಏಡ್ಸ್‌ ವಾಸಿ, ಗೋಮೂತ್ರದಿಂದ ಮಧುಮೇಹ ಚಿಕಿತ್ಸೆ: ಅವೈಜ್ಞಾನಿಕ ಕೃತಿ ಓದಲು ಮೈಸೂರು ವಿವಿ ಸಲಹೆ!

ಸ್ವಮೂತ್ರದಿಂದ ಏಡ್ಸ್‌ ವಾಸಿ, ಗೋಮೂತ್ರದಿಂದ ಮಧುಮೇಹ ಚಿಕಿತ್ಸೆ: ಅವೈಜ್ಞಾನಿಕ ಕೃತಿ ಓದಲು ಮೈಸೂರು ವಿವಿ ಸಲಹೆ!

ಸ್ವಪ್ನ ಬುಕ್‌ಹೌಸ್‌ ಪ್ರಕಟಿಸಿರುವ ‘ವೈದ್ಯಕೀಯ ಸಮಾಜಶಾಸ್ತ್ರ’ ಪುಸ್ತಕ ರೆಫರ್‌‌ ಮಾಡಿ ಎಂದ ಮೈಸೂರು ವಿವಿ

- Advertisement -
- Advertisement -

“ಸ್ವಮೂತ್ರದಿಂದ ಕ್ಯಾನ್ಸರ್‌, ಏಡ್ಸ್‌ ಗುಣಪಡಿಸಬಹುದು, ಗೋಮೂತ್ರ ಸೇವನೆಯಿಂದ ಮಧುಮೇಹ ವಾಸಿಯಾಗುತ್ತದೆ” ಎಂಬ ಅಂಶಗಳಿರುವ ಕೃತಿಯನ್ನೇ ಮೈಸೂರು ವಿಶ್ವವಿದ್ಯಾನಿಲಯವು ಸಮಾಜಶಾಸ್ತ್ರ ಪದವಿ ವಿದ್ಯಾರ್ಥಿಗಳಿಗೆ ರೆಫರೆನ್ಸ್‌ (ಆಕಾರ ಕೃತಿ) ಆಗಿ ನೀಡಿರುವುದು ಟೀಕೆಗೆ ಗುರಿಯಾಗಿದೆ.

ನೂತನ ಶಿಕ್ಷಣ ನೀತಿ (ಎನ್‌ಇಪಿ) ಅನ್ವಯ ಮೈಸೂರು ವಿವಿಯು ಐದನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ‘ವೈದ್ಯಕೀಯ ಸಮಾಜಶಾಸ್ತ್ರ’ (ಮೆಡಿಕಲ್ ಸೋಷಿಯಾಲಜಿ) ಪಠ್ಯವನ್ನು ರೂಪಿಸಿದೆ. ಆದರೆ ವಿದ್ಯಾರ್ಥಿಗಳಿಗೆ ರೆಫರೆನ್ಸ್‌ ನೀಡಲಾಗಿರುವ ಕನ್ನಡ ಕೃತಿಯಲ್ಲಿ ಅವೈಜ್ಞಾನಿಕ ವಿಚಾರಗಳಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಭೈರಪ್ಪ ಅವರು ಬರೆದಿರುವ, ‘ಸ್ವಪ್ನ ಬುಕ್‌ಹೌಸ್‌’ ಪ್ರಕಟಿಸಿರುವ ‘ವೈದ್ಯಕೀಯ ಸಮಾಜಶಾಸ್ತ್ರ’ ಕೃತಿಯನ್ನು ರೆಫರೆನ್ಸ್‌ ಪುಸ್ತಕಗಳ ಪಟ್ಟಿಯಲ್ಲಿ ನೀಡಲಾಗಿದೆ. ಅದರಲ್ಲಿರುವ ಒಂದು ಅಧ್ಯಾಯದಲ್ಲಿ ಮೂತ್ರಚಿಕಿತ್ಸೆ, ಗೋಮೂತ್ರ ಚಿಕಿತ್ಸೆ, ಶಂಖ ಚಿಕಿತ್ಸೆ, ತೈಲ ಚಿಕಿತ್ಸೆ, ಚುಟ್ಕಿ ಚಿಕಿತ್ಸೆ, ಸಿದ್ಧ ವೈದ್ಯ ಪದ್ಧತಿ, ಜ್ಯೂಸ್‌ ಚಿಕಿತ್ಸೆ ಇತ್ಯಾದಿ ಅಂಶಗಳಿವೆ. ಇವುಗಳಿಗೆ ನೀಡಲಾಗಿರುವ ವಿವರಣೆಗಳು ಅವೈಜ್ಞಾನಿಕವಾಗಿವೆ.

ಮೈಸೂರು ವಿವಿ ರೂಪಿಸಿರುವ ‘ವೈದ್ಯಕೀಯ ಸಮಾಜಶಾಸ್ತ್ರ’ ಪಠ್ಯವಿದು. ರೆಫರೆನ್ಸ್‌ ಪಟ್ಟಿಯಲ್ಲಿ ಕೆ.ಭೈರಪ್ಪ ಅವರ ‘ವೈದ್ಯಕೀಯ ಸಮಾಜಶಾಸ್ತ್ರ’ ಕೃತಿ ಇದೆ.

ಅವೈಜ್ಞಾನಿಕ ವಿಚಾರಗಳೇನು?

ಪ್ರಕೃತಿಯು ರೋಗನಿರೋಧಕ ಶಕ್ತಿಯನ್ನು ಮನುಷ್ಯನಿಗೆ ಆತನ ದೇಹದಲ್ಲಿಯೇ ಒದಗಿಸಿದೆ. ಅದೆಂದರೆ ಮೂತ್ರ. ಸಹಸ್ರಾರು ವರ್ಷಗಳಿಂದ ಯೋಗಿಗಳು ಮೂತ್ರ ಸೇವಿಸುತ್ತಿದ್ದರು ಎಂಬ ವಿಚಾರವಿದೆ. ಸಂಸ್ಕೃತ ಸಾಹಿತ್ಯ ನಿಧಿಯಲ್ಲಿ ‘ಶಿವಾಂಬು ಸಂಹಿತೆ’ಯಲ್ಲಿ ಈ ಬಗ್ಗೆ ಮಾಹಿತಿ ಇದೆ. ಬೈಬಲ್ ಗ್ರಂಥದಲ್ಲಿ “ನಿಮ್ಮ ಆರೋಗ್ಯ ರಕ್ಷಣೆಗಾಗಿ ನಿಮ್ಮ ದೇಹವನ್ನು ಅವಲಂಬಿಸಿ” ಎಂಬ ಉಲ್ಲೇಖವಿದೆ. ಆರ್ಮ್‌‌ಸ್ಟ್ರಾಂಗ್‌ರವರು ಬರೆದಿರುವ ‘ವಾಟರ್‌ ಆಫ್‌ ಲೈಫ್‌’ ಎಂಬ ಪುಸ್ತಕದಲ್ಲಿ ಈ ಬಗ್ಗೆ ವಿವರಣೆ ಇದೆ. ಮೂತ್ರ ಚಿಕಿತ್ಸೆಯಿಂದ ಅಂದರೆ ಸ್ವಮೂತ್ರ ಪಾನ ಮತ್ತು ಲೇಪನದಿಂದದಿಂದ ಸಿಹಿಮೂತ್ರ ರೋಗ, ಏಡ್ಸ್‌, ಕ್ಯಾನ್ಸರ್‌, ಕಣ್ಣು, ಕಿವಿ, ಹಲ್ಲು, ಚರ್ಮರೋಗಗಳನ್ನು ನಿಯಂತ್ರಿಸಬಹುದಾಗಿದೆ.

ಗೋಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗ. ಹಿಂದೂಗಳಲ್ಲಿ ಗೋಮೂತ್ರವನ್ನು ಸೇವಿಸುವುದು ಪವಿತ್ರವೆಂದು ತಿಳಿದಿರುವುದಿದೆ. ಅದನ್ನು ಧಾರ್ಮಿಕ ವಿಧಿವಿಧಾನಗಳಲ್ಲಿ ಸೇವಿಸುವುದಿದೆ. ಗೋವಿನ ಹಾಲು, ಮೊಸರು, ಬೆಣ್ಣೆ, ತುಪ್ಪ ಮತ್ತು ಮೂತ್ರದಿಂದ ಕೂಡಿದ ಪಂಚಗವ್ಯ ಹಿಂದೂಗಳಲ್ಲಿ ಹೆಚ್ಚು ಪರಿಚಿತ ಪದಾರ್ಥವಾಗಿದೆ. ಇದಕ್ಕೆ ಕ್ಯಾನ್ಸರ್‌, ಮೈಗ್ರೇನ್‌, ಅಸ್ತಮಾ, ಅರ್ಥೈಟಿಸ್, ಮಧುಮೇಹ ಮುಂತಾದ ರೋಗಗಳನ್ನು ನಿವಾರಣೆ ಮಾಡುವ ಶಕ್ತಿ ಇದೆ.- ಇತ್ಯಾದಿ ಅವೈಜ್ಞಾನಿಕವಾದ ಅಂಶಗಳನ್ನು ಈ ಪುಸ್ತಕದಲ್ಲಿ ಬರೆಯಲಾಗಿದೆ.

‘ಪ್ರಜಾವಾಣಿ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸಮಾಜಶಾಸ್ತ್ರ ಪಠ್ಯಕ್ರಮ ರಚನಾ ಮಂಡಳಿ ಅಧ್ಯಕ್ಷ ಪ್ರೊ.ಎ.ರಾಮೇಗೌಡ, “ಎನ್‌ಇಪಿ ಪಠ್ಯಕ್ರಮದಂತೆ ಆರೋಗ್ಯ ಸಮಾಜಶಾಸ್ತ್ರ ಪರಿಚಯಿಸಲಾಗಿದೆ. ಆದರೆ ಪೂರ್ಣ ಪಠ್ಯಕ್ರಮ ಅಂತಿಮವಾಗಿಲ್ಲ. ಲೇಖಕರು ಏಕೆ ಹಾಗೆ ಬರೆದಿದ್ದಾರೆ ಎನ್ನುವ ಮಾಹಿತಿ ಇಲ್ಲ” ಎಂದಿದ್ದಾರೆ.

ಆದರೆ ಈಗ ಸಾರ್ವಜನಿಕವಾಗಿ ಲಭ್ಯವಿರುವ ಮೈಸೂರು ವಿವಿ ಪಠ್ಯದಲ್ಲಿ ಪ್ರೊ.ಕೆ.ಭೈರಪ್ಪ ಅವರ ಕೃತಿಯನ್ನು ರೆಫರೆನ್ಸ್ ಆಗಿ ನೀಡಿದ್ದು ಹೇಗೆ? ಇದರಲ್ಲಿ ಅವೈಜ್ಞಾನಿಕ ವಿಷಯಗಳಿವೆ ಎಂಬ ಎಚ್ಚರಿಕೆ ಪಠ್ಯ ರೂಪಿಸಿದವರಿಗೆ ಇರಲಿಲ್ಲವೇ? ಕನ್ನಡದಲ್ಲಿ ಪಠ್ಯವನ್ನು ಓದಲು ಬಯಸುವ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾನಿಲಯವೇ ದಾರಿತಪ್ಪಿಸಿದಂತೆ ಅಲ್ಲವೇ? ಎಂಬ ಪ್ರಶ್ನೆಗಳು ಮುನ್ನೆಲೆಗೆ ಬಂದಿವೆ.

ಶಿಕ್ಷಣತಜ್ಞರಾದ ಶ್ರೀಪಾದ್ ಭಟ್ ಈ ಕುರಿತು ಪ್ರತಿಕ್ರಿಯಿಸಿದ್ದು, “ಅನೇಕ ವಿದ್ಯಾರ್ಥಿಗಳು ಇದನ್ನು ಓದುತ್ತಿದ್ದಾರೆ, ಈ ಪುಸ್ತಕದ ಅಧಿಕೃತವಾಗಿದೆಯೇ ಎಂದು ಕಾಲೇಜು ಶಿಕ್ಷಣ ಇಲಾಖೆಗೆ ಫೋನ್ ಮಾಡಿ ವಿಚಾರಿಸಿದರೆ ಅವರಿಂದ ಪ್ರತ್ಯುತ್ತರ ಬರಲಿಲ್ಲ. ಈ ಪುಸ್ತಕವನ್ನು ಅವರು ಅನುಮೋದಿಸಿದ್ದಾರೆಯೇ? ಹೌದಾಗಿದ್ದರೆ ಯಾವ ಆಧಾರದಲ್ಲಿ? ಇಲ್ಲ ಎಂದಾದರೆ ಸಂಬಂಧಿಸಿದ ಲೇಖಕರು ಈ ಪುಸ್ತಕದ ಮುಖಪುಟದ ಮೇಲೆ ಮೈಸೂರು ವಿವಿ, 5ನೇ ಸೆಮಿಸ್ಟರ್, ಎನ್‌ಇಪಿ ಇತ್ಯಾದಿ ಹೇಗೆ ಬರೆಯಲು ಸಾಧ್ಯವಾಯಿತು? ನಿಮ್ಮ ಕ್ರಮವೇನು? ಎನ್ನುವ ಪ್ರಶ್ನೆಗೆ ಉತ್ತರಗಳಿಲ್ಲ” ಎಂದು ತಿಳಿಸಿದ್ದಾರೆ.

ಮೈಸೂರು ವಿವಿ ಸಮಾಜಶಾಸ್ತ್ರ ಪ್ರಾಧ್ಯಾಪಕಿಯೊಬ್ಬರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಪ್ರಾಧ್ಯಾಪಕರೆಲ್ಲರೂ ಇದನ್ನೇ ಚರ್ಚೆ ಮಾಡುತ್ತಿದ್ದೇವೆ. ರೆಫರೆನ್ಸ್ ಕೊಟ್ಟು ಇದರಲ್ಲಿ ಪಾಠ ಮಾಡಿ ಎಂದರೆ ಏನರ್ಥ? ನಾವು ಯಾವುದನ್ನು ರೆಫರ್‌ ಮಾಡುತ್ತೇವೆ ಎಂಬುದು ನಮ್ಮ ವಿವೇಚನೆಗೆ ಬಿಟ್ಟಿರುತ್ತದೆ ಎಂಬುದೂ ನಿಜ. ಆದರೆ ನೂತನ ಪಠ್ಯದ ಹೆಸರಲ್ಲಿ ಯಾವುದೋ ಪಕ್ಷದ ಸಿದ್ಧಾಂತವನ್ನು ಹೇರುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಕನ್ನಡದಲ್ಲಿ ಓದುವ ವಿದ್ಯಾರ್ಥಿಗಳು ಈ ಪುಸ್ತಕವನ್ನೇ ಖರೀದಿಸಿದರೆ ಕಷ್ಟವಾಗುತ್ತದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ತಮಿಳು ವೀರರನ್ನು ಎರವಲು ತಂದು ಇಲ್ಲದ ‘ಉರಿಗೌಡ, ನಂಜೇಗೌಡ’ರನ್ನು ಸೃಷ್ಟಿಸಿದ ವಾಟ್ಸಾಪ್‌ ವಿವಿ!

ಸಮಾಜದ ಭಾವನೆಗಳನ್ನು ಉಲ್ಲೇಖಿಸಿದ್ದೇನೆ: ಪ್ರೊ.ಕೆ.ಭೈರಪ್ಪ

‘ವೈದ್ಯಕೀಯ ಸಮಾಜಶಾಸ್ತ್ರ’ ಕೃತಿಯ ಲೇಖಕರಾದ ಪ್ರೊ.ಕೆ.ಭೈರಪ್ಪ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು. “ನಾನು ಎಲ್ಲವನ್ನೂ ಮುಕ್ತವಾಗಿ ನೋಡುತ್ತೇನೆ. ನನಗಿಂತ ಕಿರಿಯರು ಹೇಳಿದ್ದನ್ನೂ ಸ್ವೀಕರಿಸುತ್ತೇನೆ. ಭಾರತೀಯ ಸಮಾಜದಲ್ಲಿ ಈ ರೀತಿಯ ಭಾವನೆಗಳಿವೆ ಎಂದು ಉಲ್ಲೇಖಿಸಿದ್ದೇನೆ. ಹಾಗೆಂದು ನಾನು ಬರಿದ್ದದ್ದೇ ಅಂತಿಮವೆಂದು ಹೇಳುತ್ತಿಲ್ಲ. ಈಗಾಗಲೇ ಇರುವ ಹಲವು ಕೃತಿಗಳಲ್ಲಿನ ಉಲ್ಲೇಖಗಳನ್ನು ಆಧರಿಸಿ ಈ ಪುಸ್ತಕ ಬರೆದಿದ್ದೇನೆ. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಥರದ ಪ್ರಾಜ್ಞರೇ ಸ್ವಮೂತ್ರ ಚಿಕಿತ್ಸೆಯನ್ನು ಅನುಸರಿಸಿದ ಉದಾಹರಣೆಗಳಿವೆ. ಅದನ್ನು ಕೃತಿಯಲ್ಲಿ ಉಲ್ಲೇಖಿಸಿದ್ದೇನೆ” ಎಂದು ವಿವರಿಸಿದರು.

“ಮೆಡಿಕಲ್ ಸೋಷಿಯಾಲಜಿ ಬಗ್ಗೆ ಬರೆಯುವಾಗ ಬೆಂಗಳೂರು ವಿವಿಯ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರನ್ನು ಭೇಟಿಯಾಗಿ ಅಗತ್ಯವಾಗಿ ಬೇಕಾದ ಆಕರ ಕೃತಿಗಳನ್ನು ಪಡೆದಿದ್ದೇನೆ. ಮೈಸೂರು ವಿವಿ ಸಿಲಬಸ್‌ನಲ್ಲಿ ಪಟ್ಟಿ ಮಾಡಲಾದ ಕೃತಿಗಳನ್ನು ರೆಫರ್‌ ಮಾಡಿದ್ದೇನೆ. ಇಲ್ಲಿ ಕೃತಿಯಲ್ಲಿ ಬರೆದಿರುವುದೆಲ್ಲವೂ ಅಧಿಕೃತ ಎನ್ನಲು ಸಾಧ್ಯವಿಲ್ಲ. ನನಗೆ ತೋಚಿದ ರೀತಿಯಲ್ಲಿ, ರೆಫರೆನ್ಸ್‌ ಮಾಡಿದ್ದನ್ನು ಆಧರಿಸಿ ಬರೆದಿದ್ದೇನೆ. ಜಾನಪದೀಯ, ಸಾಂಪ್ರದಾಯಿಕ ಔಷಧಿಗಳ ಕುರಿತು ಬರೆಯುತ್ತಾ ಇವುಗಳನ್ನು ಉಲ್ಲೇಖಿಸಿದ್ದೇನೆ. ಸಮಾಜದಲ್ಲಿ ಈ ಆಚರಣೆಗಳು, ಭಾವನೆಗಳಿವೆ ಎಂಬುದನ್ನು ಹೇಳಲು ಯತ್ನಿಸಿದ್ದೇನೆ. ಇವು ಅವೈಜ್ಞಾನಿವಾಗಿವೆಯೇ ಎಂಬುದನ್ನು ಚರ್ಚಿಸಬೇಕಿದೆ. ಆದರೆ ಇವುಗಳನ್ನು ಉಲ್ಲೇಖಿಸುವುದೇ ಅಪರಾಧವೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...