Homeಕರ್ನಾಟಕಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

ಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

- Advertisement -
- Advertisement -

ಎನ್‌ಇಪಿ -2020 (ರಾಷ್ಟ್ರೀಯ ಶಿಕ್ಷಣ ನೀತಿ) ವಿರೋಧಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಷನ್‌‌ (ಎಐಡಿಎಸ್‌ಒ) ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದೆ.

ಎನ್‌ಇಪಿ ಅನುಷ್ಠಾನದ ವಿರುದ್ಧ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ, ಹಲವು ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿರೋಧದ ನಡುವೆಯೂ ಈ ನೀತಿಯನ್ನು ಇದೀಗ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕ ಶಿಕ್ಷಣವನ್ನು ನಾಶಗೊಳಿಸಿ, ಶಿಕ್ಷಣ ಕ್ಷೇತ್ರದ ಸಂಪೂರ್ಣ ವ್ಯಾಪಾರೀಕರಣ ಗೊಳಿಸುವ ಉದ್ದೇಶದಿಂದಲೇ ಎನ್.ಇ.ಪಿಯನ್ನು ಅಪ್ರಜಾತಾಂತ್ರಿಕವಾಗಿ ಹೇರಲಾಗುತ್ತಿದೆ ಎಂದು ಎಐಡಿಎಸ್‌ಒ  ಅಭಿಪ್ರಾಯಪಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಿಂದಲೂ ಈ ಕರಾಳ ನೀತಿಯನ್ನು AIDSO ವಿರೋಧಿಸುತ್ತಾ ಬಂದಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ AIDSO ಅಖಿಲ ಭಾರತ ಸಮಿತಿಯ ನಾಯಕತ್ವದಲ್ಲಿ ದೇಶಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ ಎಂದು ಸಂಘಟನೆ ತಿಳಿಸಿದೆ.

ಸಹಿ ಸಂಗ್ರಹ ಅಭಿಯಾನಕ್ಕೆ ರಾಜ್ಯದ ಹಲವು ಗಣ್ಯರು, ಶಿಕ್ಷಣ ತಜ್ಞರು, ಸಾಹಿತಿಗಳು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು, ಎಸ್.ಜಿ. ಸಿದ್ದರಾಮಯ್ಯ ಹಾಗೂ ಪುರುಷೋತ್ತಮ ಬಿಳಿಮಲೆ ಅವರು ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಕೆಯ ಸಂದೇಶ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಹಮ್ಮಿಕೊಂಡಿರುವ ಅಭಿಯಾನವನ್ನು ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್‌‌ನಲ್ಲಿ ಎಐಡಿಎಸ್‌ಒ ರಾಜ್ಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಎಐಡಿಎಸ್‌ಒ ಅಧ್ಯಕ್ಷರಾದ ಕೆ.ಎಸ್.ಅಶ್ವಿನಿ, “ಎನ್.ಇ.ಪಿ.ಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಕರ್ನಾಟಕ ಸರ್ಕಾರ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಜಾರಿ ಮಾಡಿತು. ಆದರೆ, ಪರೀಕ್ಷೆಗಳಿಗೆ ಇನ್ನು ಒಂದು ತಿಂಗಳು ಮಾತ್ರ ಉಳಿದಿದೆ ಎಂದಾಗಲೂ ಸರ್ಕಾರ ಮತ್ತು ವಿವಿಗಳು ನೂತನ ಕೋರ್ಸ್‌ಗೆ ಪೂರಕವಾದ ಪಠ್ಯಕ್ರಮ, ಎಲ್ಲ ವಿಷಯಗಳಿಗೂ ಸಂಬಂಧಪಟ್ಟಂತೆ ಪಠ್ಯಪಸ್ತಕಗಳು ತಯಾರಿ ಮಾಡಿರಲಿಲ್ಲ” ಎಂದು ವಿವಾದಿಸಿದರು.

“ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳ ಕೊರತೆ, ತರಗತಿಗಳ ಕೊರತೆಯಿಂದಾಗಿ, ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ನಡೆದಿರಲಿಲ್ಲ. ಈ ಹಠಾತ್ ಹೇರಿಕೆಯು ರಾಜ್ಯದ ಪದವಿ ಶಿಕ್ಷಣದಲ್ಲಿ ಅತ್ಯಂತ ಗೊಂದಲ ಹಾಗೂ ಸಮಸ್ಯೆಗಳನ್ನು ಸೃಷ್ಟಿಸಿದೆ. ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ” ಎಂದು ಹೇಳಿದರು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಂತರದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತಾಡಿದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, “ಎನ್.ಇ.ಪಿ.ಯು ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತ, ಅದಕ್ಕೆ ಪೂರಕವಾದ ಪ್ರಸ್ತಾವನೆಗಳನ್ನು ನೀಡಿದೆ. ಉದಾ: ‘ಶಾಲೆಗಳ ವಿಲೀನ’ದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್.ಇ.ಪಿ ಯಲ್ಲಿದೆ” ಎಂದು ಎಚ್ಚರಿಸಿದರು.

“ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ. ಮಹಾನ್ ವ್ಯಕ್ತಿಗಳ, ಹೋರಾಟಗಾರರ ತ್ಯಾಗ ಬಲಿದಾನಗಳಿಂದ ದೊರಕಿರುವ ಶಿಕ್ಷಣವು ಕೆಲವೇ ಜನರ ಸ್ವತ್ತಾಗಲು ನಾವು ವಿದ್ಯಾರ್ಥಿಗಳು ಬಿಡಬಾರದು. ಇಂತಹ ಕರಾಳ ನೀತಿಗಳನ್ನು ವಿರೋಧಿಸಿ, ಸಾರ್ವಜನಿಕ ಶಿಕ್ಷಣ ಉಳಿಸಲು ಪ್ರಬಲ ಆಂದೋಲನ ಬೆಳೆಸಬೇಕು” ಎಂದು ಮನವಿ ಮಾಡಿದರು.

ಬೆಂಗಳೂರಿನ ಜಿಲ್ಲಾ ಅಧ್ಯಕ್ಷರಾದ ಅಭಯ ದಿವಾಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...