Homeಕರ್ನಾಟಕಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

ಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

- Advertisement -
- Advertisement -

ಎನ್‌ಇಪಿ -2020 (ರಾಷ್ಟ್ರೀಯ ಶಿಕ್ಷಣ ನೀತಿ) ವಿರೋಧಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಷನ್‌‌ (ಎಐಡಿಎಸ್‌ಒ) ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದೆ.

ಎನ್‌ಇಪಿ ಅನುಷ್ಠಾನದ ವಿರುದ್ಧ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ, ಹಲವು ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿರೋಧದ ನಡುವೆಯೂ ಈ ನೀತಿಯನ್ನು ಇದೀಗ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕ ಶಿಕ್ಷಣವನ್ನು ನಾಶಗೊಳಿಸಿ, ಶಿಕ್ಷಣ ಕ್ಷೇತ್ರದ ಸಂಪೂರ್ಣ ವ್ಯಾಪಾರೀಕರಣ ಗೊಳಿಸುವ ಉದ್ದೇಶದಿಂದಲೇ ಎನ್.ಇ.ಪಿಯನ್ನು ಅಪ್ರಜಾತಾಂತ್ರಿಕವಾಗಿ ಹೇರಲಾಗುತ್ತಿದೆ ಎಂದು ಎಐಡಿಎಸ್‌ಒ  ಅಭಿಪ್ರಾಯಪಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಿಂದಲೂ ಈ ಕರಾಳ ನೀತಿಯನ್ನು AIDSO ವಿರೋಧಿಸುತ್ತಾ ಬಂದಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ AIDSO ಅಖಿಲ ಭಾರತ ಸಮಿತಿಯ ನಾಯಕತ್ವದಲ್ಲಿ ದೇಶಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ ಎಂದು ಸಂಘಟನೆ ತಿಳಿಸಿದೆ.

ಸಹಿ ಸಂಗ್ರಹ ಅಭಿಯಾನಕ್ಕೆ ರಾಜ್ಯದ ಹಲವು ಗಣ್ಯರು, ಶಿಕ್ಷಣ ತಜ್ಞರು, ಸಾಹಿತಿಗಳು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು, ಎಸ್.ಜಿ. ಸಿದ್ದರಾಮಯ್ಯ ಹಾಗೂ ಪುರುಷೋತ್ತಮ ಬಿಳಿಮಲೆ ಅವರು ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಕೆಯ ಸಂದೇಶ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಹಮ್ಮಿಕೊಂಡಿರುವ ಅಭಿಯಾನವನ್ನು ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್‌‌ನಲ್ಲಿ ಎಐಡಿಎಸ್‌ಒ ರಾಜ್ಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಎಐಡಿಎಸ್‌ಒ ಅಧ್ಯಕ್ಷರಾದ ಕೆ.ಎಸ್.ಅಶ್ವಿನಿ, “ಎನ್.ಇ.ಪಿ.ಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಕರ್ನಾಟಕ ಸರ್ಕಾರ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಜಾರಿ ಮಾಡಿತು. ಆದರೆ, ಪರೀಕ್ಷೆಗಳಿಗೆ ಇನ್ನು ಒಂದು ತಿಂಗಳು ಮಾತ್ರ ಉಳಿದಿದೆ ಎಂದಾಗಲೂ ಸರ್ಕಾರ ಮತ್ತು ವಿವಿಗಳು ನೂತನ ಕೋರ್ಸ್‌ಗೆ ಪೂರಕವಾದ ಪಠ್ಯಕ್ರಮ, ಎಲ್ಲ ವಿಷಯಗಳಿಗೂ ಸಂಬಂಧಪಟ್ಟಂತೆ ಪಠ್ಯಪಸ್ತಕಗಳು ತಯಾರಿ ಮಾಡಿರಲಿಲ್ಲ” ಎಂದು ವಿವಾದಿಸಿದರು.

“ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳ ಕೊರತೆ, ತರಗತಿಗಳ ಕೊರತೆಯಿಂದಾಗಿ, ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ನಡೆದಿರಲಿಲ್ಲ. ಈ ಹಠಾತ್ ಹೇರಿಕೆಯು ರಾಜ್ಯದ ಪದವಿ ಶಿಕ್ಷಣದಲ್ಲಿ ಅತ್ಯಂತ ಗೊಂದಲ ಹಾಗೂ ಸಮಸ್ಯೆಗಳನ್ನು ಸೃಷ್ಟಿಸಿದೆ. ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ” ಎಂದು ಹೇಳಿದರು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಂತರದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತಾಡಿದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, “ಎನ್.ಇ.ಪಿ.ಯು ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತ, ಅದಕ್ಕೆ ಪೂರಕವಾದ ಪ್ರಸ್ತಾವನೆಗಳನ್ನು ನೀಡಿದೆ. ಉದಾ: ‘ಶಾಲೆಗಳ ವಿಲೀನ’ದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್.ಇ.ಪಿ ಯಲ್ಲಿದೆ” ಎಂದು ಎಚ್ಚರಿಸಿದರು.

“ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ. ಮಹಾನ್ ವ್ಯಕ್ತಿಗಳ, ಹೋರಾಟಗಾರರ ತ್ಯಾಗ ಬಲಿದಾನಗಳಿಂದ ದೊರಕಿರುವ ಶಿಕ್ಷಣವು ಕೆಲವೇ ಜನರ ಸ್ವತ್ತಾಗಲು ನಾವು ವಿದ್ಯಾರ್ಥಿಗಳು ಬಿಡಬಾರದು. ಇಂತಹ ಕರಾಳ ನೀತಿಗಳನ್ನು ವಿರೋಧಿಸಿ, ಸಾರ್ವಜನಿಕ ಶಿಕ್ಷಣ ಉಳಿಸಲು ಪ್ರಬಲ ಆಂದೋಲನ ಬೆಳೆಸಬೇಕು” ಎಂದು ಮನವಿ ಮಾಡಿದರು.

ಬೆಂಗಳೂರಿನ ಜಿಲ್ಲಾ ಅಧ್ಯಕ್ಷರಾದ ಅಭಯ ದಿವಾಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

‘ಪಿಡಿಪಿ-ಬಿಜೆಪಿ ಮೈತ್ರಿಯು ಅಖಂಡವಾಗಿ ಉಳಿದಿದೆಯೇ..?’; ಮುಫ್ತಿ ವಿರುದ್ಧ ಒಮರ್ ಅಬ್ದುಲ್ಲಾ ಕಿಡಿ

0
ಅನಂತನಾಗ್ ರಜೌರಿ ಸಂಸದೀಯ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಮತ ನೀಡುವಂತೆ, ಬಿಜೆಪಿ ಪ್ರಮುಖ ನಾಯಕರೊಬ್ಬರು ತಮ್ಮ ಪಹಾರಿ ಸಮುದಾಯದ ಸದಸ್ಯರನ್ನು ಕೇಳಿದ್ದು, ಮಾಜಿ ಮುಖ್ಯಮಂತ್ರಿ...