Homeಕರ್ನಾಟಕಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

ಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

- Advertisement -
- Advertisement -

ಎನ್‌ಇಪಿ -2020 (ರಾಷ್ಟ್ರೀಯ ಶಿಕ್ಷಣ ನೀತಿ) ವಿರೋಧಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಷನ್‌‌ (ಎಐಡಿಎಸ್‌ಒ) ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದೆ.

ಎನ್‌ಇಪಿ ಅನುಷ್ಠಾನದ ವಿರುದ್ಧ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ, ಹಲವು ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿರೋಧದ ನಡುವೆಯೂ ಈ ನೀತಿಯನ್ನು ಇದೀಗ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕ ಶಿಕ್ಷಣವನ್ನು ನಾಶಗೊಳಿಸಿ, ಶಿಕ್ಷಣ ಕ್ಷೇತ್ರದ ಸಂಪೂರ್ಣ ವ್ಯಾಪಾರೀಕರಣ ಗೊಳಿಸುವ ಉದ್ದೇಶದಿಂದಲೇ ಎನ್.ಇ.ಪಿಯನ್ನು ಅಪ್ರಜಾತಾಂತ್ರಿಕವಾಗಿ ಹೇರಲಾಗುತ್ತಿದೆ ಎಂದು ಎಐಡಿಎಸ್‌ಒ  ಅಭಿಪ್ರಾಯಪಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಿಂದಲೂ ಈ ಕರಾಳ ನೀತಿಯನ್ನು AIDSO ವಿರೋಧಿಸುತ್ತಾ ಬಂದಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ AIDSO ಅಖಿಲ ಭಾರತ ಸಮಿತಿಯ ನಾಯಕತ್ವದಲ್ಲಿ ದೇಶಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ ಎಂದು ಸಂಘಟನೆ ತಿಳಿಸಿದೆ.

ಸಹಿ ಸಂಗ್ರಹ ಅಭಿಯಾನಕ್ಕೆ ರಾಜ್ಯದ ಹಲವು ಗಣ್ಯರು, ಶಿಕ್ಷಣ ತಜ್ಞರು, ಸಾಹಿತಿಗಳು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು, ಎಸ್.ಜಿ. ಸಿದ್ದರಾಮಯ್ಯ ಹಾಗೂ ಪುರುಷೋತ್ತಮ ಬಿಳಿಮಲೆ ಅವರು ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಕೆಯ ಸಂದೇಶ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಹಮ್ಮಿಕೊಂಡಿರುವ ಅಭಿಯಾನವನ್ನು ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್‌‌ನಲ್ಲಿ ಎಐಡಿಎಸ್‌ಒ ರಾಜ್ಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಎಐಡಿಎಸ್‌ಒ ಅಧ್ಯಕ್ಷರಾದ ಕೆ.ಎಸ್.ಅಶ್ವಿನಿ, “ಎನ್.ಇ.ಪಿ.ಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಕರ್ನಾಟಕ ಸರ್ಕಾರ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಜಾರಿ ಮಾಡಿತು. ಆದರೆ, ಪರೀಕ್ಷೆಗಳಿಗೆ ಇನ್ನು ಒಂದು ತಿಂಗಳು ಮಾತ್ರ ಉಳಿದಿದೆ ಎಂದಾಗಲೂ ಸರ್ಕಾರ ಮತ್ತು ವಿವಿಗಳು ನೂತನ ಕೋರ್ಸ್‌ಗೆ ಪೂರಕವಾದ ಪಠ್ಯಕ್ರಮ, ಎಲ್ಲ ವಿಷಯಗಳಿಗೂ ಸಂಬಂಧಪಟ್ಟಂತೆ ಪಠ್ಯಪಸ್ತಕಗಳು ತಯಾರಿ ಮಾಡಿರಲಿಲ್ಲ” ಎಂದು ವಿವಾದಿಸಿದರು.

“ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳ ಕೊರತೆ, ತರಗತಿಗಳ ಕೊರತೆಯಿಂದಾಗಿ, ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ನಡೆದಿರಲಿಲ್ಲ. ಈ ಹಠಾತ್ ಹೇರಿಕೆಯು ರಾಜ್ಯದ ಪದವಿ ಶಿಕ್ಷಣದಲ್ಲಿ ಅತ್ಯಂತ ಗೊಂದಲ ಹಾಗೂ ಸಮಸ್ಯೆಗಳನ್ನು ಸೃಷ್ಟಿಸಿದೆ. ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ” ಎಂದು ಹೇಳಿದರು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಂತರದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತಾಡಿದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, “ಎನ್.ಇ.ಪಿ.ಯು ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತ, ಅದಕ್ಕೆ ಪೂರಕವಾದ ಪ್ರಸ್ತಾವನೆಗಳನ್ನು ನೀಡಿದೆ. ಉದಾ: ‘ಶಾಲೆಗಳ ವಿಲೀನ’ದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್.ಇ.ಪಿ ಯಲ್ಲಿದೆ” ಎಂದು ಎಚ್ಚರಿಸಿದರು.

“ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ. ಮಹಾನ್ ವ್ಯಕ್ತಿಗಳ, ಹೋರಾಟಗಾರರ ತ್ಯಾಗ ಬಲಿದಾನಗಳಿಂದ ದೊರಕಿರುವ ಶಿಕ್ಷಣವು ಕೆಲವೇ ಜನರ ಸ್ವತ್ತಾಗಲು ನಾವು ವಿದ್ಯಾರ್ಥಿಗಳು ಬಿಡಬಾರದು. ಇಂತಹ ಕರಾಳ ನೀತಿಗಳನ್ನು ವಿರೋಧಿಸಿ, ಸಾರ್ವಜನಿಕ ಶಿಕ್ಷಣ ಉಳಿಸಲು ಪ್ರಬಲ ಆಂದೋಲನ ಬೆಳೆಸಬೇಕು” ಎಂದು ಮನವಿ ಮಾಡಿದರು.

ಬೆಂಗಳೂರಿನ ಜಿಲ್ಲಾ ಅಧ್ಯಕ್ಷರಾದ ಅಭಯ ದಿವಾಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...