Homeಕರ್ನಾಟಕಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

ಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

- Advertisement -
- Advertisement -

ಎನ್‌ಇಪಿ -2020 (ರಾಷ್ಟ್ರೀಯ ಶಿಕ್ಷಣ ನೀತಿ) ವಿರೋಧಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಷನ್‌‌ (ಎಐಡಿಎಸ್‌ಒ) ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದೆ.

ಎನ್‌ಇಪಿ ಅನುಷ್ಠಾನದ ವಿರುದ್ಧ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ, ಹಲವು ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿರೋಧದ ನಡುವೆಯೂ ಈ ನೀತಿಯನ್ನು ಇದೀಗ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕ ಶಿಕ್ಷಣವನ್ನು ನಾಶಗೊಳಿಸಿ, ಶಿಕ್ಷಣ ಕ್ಷೇತ್ರದ ಸಂಪೂರ್ಣ ವ್ಯಾಪಾರೀಕರಣ ಗೊಳಿಸುವ ಉದ್ದೇಶದಿಂದಲೇ ಎನ್.ಇ.ಪಿಯನ್ನು ಅಪ್ರಜಾತಾಂತ್ರಿಕವಾಗಿ ಹೇರಲಾಗುತ್ತಿದೆ ಎಂದು ಎಐಡಿಎಸ್‌ಒ  ಅಭಿಪ್ರಾಯಪಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಿಂದಲೂ ಈ ಕರಾಳ ನೀತಿಯನ್ನು AIDSO ವಿರೋಧಿಸುತ್ತಾ ಬಂದಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ AIDSO ಅಖಿಲ ಭಾರತ ಸಮಿತಿಯ ನಾಯಕತ್ವದಲ್ಲಿ ದೇಶಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ ಎಂದು ಸಂಘಟನೆ ತಿಳಿಸಿದೆ.

ಸಹಿ ಸಂಗ್ರಹ ಅಭಿಯಾನಕ್ಕೆ ರಾಜ್ಯದ ಹಲವು ಗಣ್ಯರು, ಶಿಕ್ಷಣ ತಜ್ಞರು, ಸಾಹಿತಿಗಳು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು, ಎಸ್.ಜಿ. ಸಿದ್ದರಾಮಯ್ಯ ಹಾಗೂ ಪುರುಷೋತ್ತಮ ಬಿಳಿಮಲೆ ಅವರು ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಕೆಯ ಸಂದೇಶ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಹಮ್ಮಿಕೊಂಡಿರುವ ಅಭಿಯಾನವನ್ನು ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್‌‌ನಲ್ಲಿ ಎಐಡಿಎಸ್‌ಒ ರಾಜ್ಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಎಐಡಿಎಸ್‌ಒ ಅಧ್ಯಕ್ಷರಾದ ಕೆ.ಎಸ್.ಅಶ್ವಿನಿ, “ಎನ್.ಇ.ಪಿ.ಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಕರ್ನಾಟಕ ಸರ್ಕಾರ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಜಾರಿ ಮಾಡಿತು. ಆದರೆ, ಪರೀಕ್ಷೆಗಳಿಗೆ ಇನ್ನು ಒಂದು ತಿಂಗಳು ಮಾತ್ರ ಉಳಿದಿದೆ ಎಂದಾಗಲೂ ಸರ್ಕಾರ ಮತ್ತು ವಿವಿಗಳು ನೂತನ ಕೋರ್ಸ್‌ಗೆ ಪೂರಕವಾದ ಪಠ್ಯಕ್ರಮ, ಎಲ್ಲ ವಿಷಯಗಳಿಗೂ ಸಂಬಂಧಪಟ್ಟಂತೆ ಪಠ್ಯಪಸ್ತಕಗಳು ತಯಾರಿ ಮಾಡಿರಲಿಲ್ಲ” ಎಂದು ವಿವಾದಿಸಿದರು.

“ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳ ಕೊರತೆ, ತರಗತಿಗಳ ಕೊರತೆಯಿಂದಾಗಿ, ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ನಡೆದಿರಲಿಲ್ಲ. ಈ ಹಠಾತ್ ಹೇರಿಕೆಯು ರಾಜ್ಯದ ಪದವಿ ಶಿಕ್ಷಣದಲ್ಲಿ ಅತ್ಯಂತ ಗೊಂದಲ ಹಾಗೂ ಸಮಸ್ಯೆಗಳನ್ನು ಸೃಷ್ಟಿಸಿದೆ. ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ” ಎಂದು ಹೇಳಿದರು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಂತರದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತಾಡಿದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, “ಎನ್.ಇ.ಪಿ.ಯು ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತ, ಅದಕ್ಕೆ ಪೂರಕವಾದ ಪ್ರಸ್ತಾವನೆಗಳನ್ನು ನೀಡಿದೆ. ಉದಾ: ‘ಶಾಲೆಗಳ ವಿಲೀನ’ದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್.ಇ.ಪಿ ಯಲ್ಲಿದೆ” ಎಂದು ಎಚ್ಚರಿಸಿದರು.

“ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ. ಮಹಾನ್ ವ್ಯಕ್ತಿಗಳ, ಹೋರಾಟಗಾರರ ತ್ಯಾಗ ಬಲಿದಾನಗಳಿಂದ ದೊರಕಿರುವ ಶಿಕ್ಷಣವು ಕೆಲವೇ ಜನರ ಸ್ವತ್ತಾಗಲು ನಾವು ವಿದ್ಯಾರ್ಥಿಗಳು ಬಿಡಬಾರದು. ಇಂತಹ ಕರಾಳ ನೀತಿಗಳನ್ನು ವಿರೋಧಿಸಿ, ಸಾರ್ವಜನಿಕ ಶಿಕ್ಷಣ ಉಳಿಸಲು ಪ್ರಬಲ ಆಂದೋಲನ ಬೆಳೆಸಬೇಕು” ಎಂದು ಮನವಿ ಮಾಡಿದರು.

ಬೆಂಗಳೂರಿನ ಜಿಲ್ಲಾ ಅಧ್ಯಕ್ಷರಾದ ಅಭಯ ದಿವಾಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...