Homeಕರ್ನಾಟಕಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

- Advertisement -
- Advertisement -

ಪ್ರವೇಶ ಶುಲ್ಕ, ಸ್ಕಾಲರ್ಶಿಪ್ ಹಾಗೂ ಮಹಾರಾಣಿ ಕಾಲೇಜು ಕುಸಿದಿರುವ ಘಟನೆಯನ್ನು ಮುಂದಿಟ್ಟುಕೊಂಡು AIDSO ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು ಮೈಸೂರು ವಿಶ್ವವಿದ್ಯಾನಿಲಯದ ಎದುರುಗಡೆ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಈಗಾಗಲೇ ಕಾಲೇಜುಗಳ ಪ್ರವೇಶಾತಿ ಪ್ರಾರಂಭವಾಗಿದ್ದು, ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳಿಗೂ ಒಂದನೇ, ಎರಡನೇ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ವಿಶ್ವವಿದ್ಯಾಲಯದ ಈ ತೀರ್ಮಾನವನ್ನು ವಿರೋಧಿಸಿರುವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಾರಾಣಿ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.16,000, ಮಹಾರಾಜ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.30000 ಹಾಗೂ ಯುವರಾಜ ಕಾಲೇಜಿನಲ್ಲಿ 30 ರಿಂದ 60 ಸಾವಿರ ಶುಲ್ಕವನ್ನು ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ” ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.

ಇದನ್ನೂ ಓದಿ: ಮೈಸೂರು: ಅಲೆಮಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆಯೇ ವ್ಯವಸ್ಥೆ?

AIDSO ವಿದ್ಯಾರ್ಥಿ ಸಂಘಟನೆಯ ಮೈಸೂರು ಜಿಲ್ಲಾಧ್ಯಕ್ಷರಾದ ಸುಭಾಷ್ ಮಾತನಾಡಿ, “ಎಷ್ಟೋ ವಿದ್ಯಾರ್ಥಿಗಳಿಗೆ ಸರಿಯಾದ ವಿದ್ಯಾರ್ಥಿ ವೇತನ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಏಕಾಏಕಿ ಸಾವಿರಾರು ರೂಪಾಯಿ ಪ್ರವೇಶ ಶುಲ್ಕವನ್ನು ಕಟ್ಟಿ ಎಂದು ಒತ್ತಡ ಹೇರುತ್ತಿರುವುದು ವಿದ್ಯಾರ್ಥಿ ವಿರೋಧಿ ನಿಲುವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ವಿದ್ಯಾರ್ಥಿಗಳು ಬಡ ರೈತ-ಕೂಲಿ-ಕಾರ್ಮಿಕರ ಮಕ್ಕಳು. ಇವರಿಗೆ ಏಕಾಏಕಿ ಸಾವಿರಾರು ರೂಪಾಯಿ ಸುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ ಕಟ್ಟುವುದು” ಎಂದು ಪ್ರಶ್ನಿಸಿದ ಅವರು, ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಈ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಆಗ್ರಹ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡುವುದಾಗಿ AIDSO ಎಚ್ಚರಿಸಿದೆ.

ಮಹಾರಾಣಿ ವಿಜ್ಞಾನ ಕಾಲೇಜಿನ ಕಟ್ಟಡ ಕುಸಿದಿರುವುದರ ಬಗ್ಗೆ ಮಾತನಾಡಿ ಅವರು,“ಬೇಜವಾಬ್ದಾರಿತನದಿಂದ ಹಳೆಯ ಕಟ್ಟಡಗಳನ್ನು ದುರಸ್ತಿ ಮಾಡದೆ, ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳದೆ ಇರುವುದು
ಸರ್ಕಾರ ಹಾಗೂ ಆಡಳಿತ ಮಂಡಳಿಯ ವೈಫಲ್ಯ” ಎಂದು ಸುಭಾಷ್ ಟೀಕಿಸಿದ್ದಾರೆ. ಈ ಕೂಡಲೇ ಹಳೆಯ ಕಟ್ಟಡಗಳಲ್ಲಿ ಯಾವುದೇ ತರಗತಿಗಳು ನಡೆಯಬಾರದು ಹಾಗೂ ಕಟ್ಟಡಗಳನ್ನು ದುರಸ್ತಿ ಮಾಡಬೇಕು, ಹೊಸ ಕಟ್ಟಡಗಳನ್ನು ಕಟ್ಟಿ ಅಭಿವೃದ್ಧಿ ಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಪ್ರತಿಭಟನೆಯಲ್ಲಿ AIDSO ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ನಿತಿನ್, ಸ್ವಾತಿ, ಚಂದ್ರಿಕಾ, ಚಂದನ, ಹೇಮಾ, ವಿದ್ಯಾರ್ಥಿಗಳಾದ ಹರ್ಷಿತಾ, ಅಂಕಿತ, ಸುಚಿತ್ರ, ರಮ್ಯಾ, ಸಂಧ್ಯಾ ದೀಪಿಕಾ, ಸಂಗೀತ, ಕಾವ್ಯ, ಅಂಜಲಿ ಐಶ್ವರ್ಯ, ನಿರ್ಮಲ, ವೀರೇಶ್, ಅಭಿಷೇಕ್ ಮುಂತಾದವರು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...