Homeಕರ್ನಾಟಕಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

- Advertisement -
- Advertisement -

ಪ್ರವೇಶ ಶುಲ್ಕ, ಸ್ಕಾಲರ್ಶಿಪ್ ಹಾಗೂ ಮಹಾರಾಣಿ ಕಾಲೇಜು ಕುಸಿದಿರುವ ಘಟನೆಯನ್ನು ಮುಂದಿಟ್ಟುಕೊಂಡು AIDSO ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು ಮೈಸೂರು ವಿಶ್ವವಿದ್ಯಾನಿಲಯದ ಎದುರುಗಡೆ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಈಗಾಗಲೇ ಕಾಲೇಜುಗಳ ಪ್ರವೇಶಾತಿ ಪ್ರಾರಂಭವಾಗಿದ್ದು, ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳಿಗೂ ಒಂದನೇ, ಎರಡನೇ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ವಿಶ್ವವಿದ್ಯಾಲಯದ ಈ ತೀರ್ಮಾನವನ್ನು ವಿರೋಧಿಸಿರುವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಾರಾಣಿ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.16,000, ಮಹಾರಾಜ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.30000 ಹಾಗೂ ಯುವರಾಜ ಕಾಲೇಜಿನಲ್ಲಿ 30 ರಿಂದ 60 ಸಾವಿರ ಶುಲ್ಕವನ್ನು ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ” ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.

ಇದನ್ನೂ ಓದಿ: ಮೈಸೂರು: ಅಲೆಮಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆಯೇ ವ್ಯವಸ್ಥೆ?

AIDSO ವಿದ್ಯಾರ್ಥಿ ಸಂಘಟನೆಯ ಮೈಸೂರು ಜಿಲ್ಲಾಧ್ಯಕ್ಷರಾದ ಸುಭಾಷ್ ಮಾತನಾಡಿ, “ಎಷ್ಟೋ ವಿದ್ಯಾರ್ಥಿಗಳಿಗೆ ಸರಿಯಾದ ವಿದ್ಯಾರ್ಥಿ ವೇತನ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಏಕಾಏಕಿ ಸಾವಿರಾರು ರೂಪಾಯಿ ಪ್ರವೇಶ ಶುಲ್ಕವನ್ನು ಕಟ್ಟಿ ಎಂದು ಒತ್ತಡ ಹೇರುತ್ತಿರುವುದು ವಿದ್ಯಾರ್ಥಿ ವಿರೋಧಿ ನಿಲುವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ವಿದ್ಯಾರ್ಥಿಗಳು ಬಡ ರೈತ-ಕೂಲಿ-ಕಾರ್ಮಿಕರ ಮಕ್ಕಳು. ಇವರಿಗೆ ಏಕಾಏಕಿ ಸಾವಿರಾರು ರೂಪಾಯಿ ಸುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ ಕಟ್ಟುವುದು” ಎಂದು ಪ್ರಶ್ನಿಸಿದ ಅವರು, ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಈ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಆಗ್ರಹ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡುವುದಾಗಿ AIDSO ಎಚ್ಚರಿಸಿದೆ.

ಮಹಾರಾಣಿ ವಿಜ್ಞಾನ ಕಾಲೇಜಿನ ಕಟ್ಟಡ ಕುಸಿದಿರುವುದರ ಬಗ್ಗೆ ಮಾತನಾಡಿ ಅವರು,“ಬೇಜವಾಬ್ದಾರಿತನದಿಂದ ಹಳೆಯ ಕಟ್ಟಡಗಳನ್ನು ದುರಸ್ತಿ ಮಾಡದೆ, ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳದೆ ಇರುವುದು
ಸರ್ಕಾರ ಹಾಗೂ ಆಡಳಿತ ಮಂಡಳಿಯ ವೈಫಲ್ಯ” ಎಂದು ಸುಭಾಷ್ ಟೀಕಿಸಿದ್ದಾರೆ. ಈ ಕೂಡಲೇ ಹಳೆಯ ಕಟ್ಟಡಗಳಲ್ಲಿ ಯಾವುದೇ ತರಗತಿಗಳು ನಡೆಯಬಾರದು ಹಾಗೂ ಕಟ್ಟಡಗಳನ್ನು ದುರಸ್ತಿ ಮಾಡಬೇಕು, ಹೊಸ ಕಟ್ಟಡಗಳನ್ನು ಕಟ್ಟಿ ಅಭಿವೃದ್ಧಿ ಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಪ್ರತಿಭಟನೆಯಲ್ಲಿ AIDSO ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ನಿತಿನ್, ಸ್ವಾತಿ, ಚಂದ್ರಿಕಾ, ಚಂದನ, ಹೇಮಾ, ವಿದ್ಯಾರ್ಥಿಗಳಾದ ಹರ್ಷಿತಾ, ಅಂಕಿತ, ಸುಚಿತ್ರ, ರಮ್ಯಾ, ಸಂಧ್ಯಾ ದೀಪಿಕಾ, ಸಂಗೀತ, ಕಾವ್ಯ, ಅಂಜಲಿ ಐಶ್ವರ್ಯ, ನಿರ್ಮಲ, ವೀರೇಶ್, ಅಭಿಷೇಕ್ ಮುಂತಾದವರು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...