Homeಚಳವಳಿದಲಿತ-ದಮನಿತರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ: ಸ್ಕಾಲರ್‌ಶಿಪ್ ನಿಲ್ಲಿಸಿದ ಕೇಂದ್ರದ ಕ್ರಮಕ್ಕೆ AIFRTE ಖಂಡನೆ

ದಲಿತ-ದಮನಿತರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ: ಸ್ಕಾಲರ್‌ಶಿಪ್ ನಿಲ್ಲಿಸಿದ ಕೇಂದ್ರದ ಕ್ರಮಕ್ಕೆ AIFRTE ಖಂಡನೆ

- Advertisement -
- Advertisement -

ಕೇಂದ್ರ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನಿಲ್ಲಿಸಿರುವುದು ದಲಿತ-ದಮನಿತರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ ಎಂದು ಶಿಕ್ಷಣದ ಹಕ್ಕಿಗಾಗಿ ಅಖಿಲ ಭಾರತ ವೇದಿಕೆ (AIFRTE) ಅಭಿಪ್ರಾಯಪಟ್ಟಿದೆ.

ಎಂಟು ಲಕ್ಷ ಆದಾಯ ಹೊಂದಿರುವ ಮೇಲ್ಜಾತಿ ಕುಟುಂಬಗಳಿಗೆ ‘ಮೀಸಲಾತಿ’ ನೀಡಿದ ಕೇಂದ್ರ ಸರ್ಕಾರವು, ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಸಂಪೂರ್ಣವಾಗಿ ನಿಲ್ಲಿಸಿರುವುದನ್ನು ಒಪ್ಪುವುದಿಲ್ಲ ಎಂದಿದೆ.

ಶಿಕ್ಷಣ ಹಕ್ಕು ಕಾಯ್ದೆ – 2009 ಅಡಿಯಲ್ಲಿ 8 ನೇ ತರಗತಿಯ ವರೆಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಉಚಿತವಾಗಿರುವ ಕಾರಣ ವಿದ್ಯಾರ್ಥಿ ವೇತನ ನಿಲ್ಲಿಸುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದು, ಐತಿಹಾಸಿಕವಾಗಿ ತುಳಿತಕ್ಕೊಳಗಾದ ಸಮುದಾಯಗಳ ಬಡ ಕುಟುಂಬಗಳಿಂದ ಬರುವ ಮಕ್ಕಳ ಶಿಕ್ಷಣದ ಹಕ್ಕಿನ ಮೇಲಿನ ದಾಳಿಯಾಗಿದೆ. ಶಾಲಾ ಸಮವಸ್ತ್ರ, ಪಠ್ಯಪುಸ್ತಕಗಳ ಇನ್ನಿತರೆ ಖರ್ಚುಗಳನ್ನು ತೋಗಿಸಲು ಈ ವಿದ್ಯಾರ್ಥಿವೇತನಗಳು ಮುಖ್ಯವಾಗಿದ್ದವು. ಈಗ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿರುವ ಕಾರಣದಿಂದ ಅವರು ಶಿಕ್ಷಣದಿಂದ ವಂಚಿತರಾಗಿ ಬಾಲ ಕಾರ್ಮಿಕರಾಗಿ ದುಡಿಯುವ ನಿಟ್ಟಿನಲ್ಲಿ ಅವರನ್ನು ದೂಡಲಾತ್ತಿದೆ ಎಂದು AIFRTE ಅಧ್ಯಕ್ಷ ಜಗಮೋಹನ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಇಲ್ಲಿಯವರೆಗೂ, ಈ ವಿದ್ಯಾರ್ಥಿವೇತನದ ಒಟ್ಟು ಮೊತ್ತವನ್ನು 75-25ರ ಅನುಪಾತದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತಿದ್ದವು. ರಾಜ್ಯಗಳೊಟ್ಟಿಗೆ ಚರ್ಚಿಸದೆಯೇ ತೆಗೆದುಕೊಳ್ಳಲಾಗಿರುವ ಈ ನಿರ್ಧಾರವನ್ನು ಈಗ ರಾಜ್ಯ ಸರ್ಕಾರಗಳು ಒಪ್ಪಲೇಬೇಕಾದ ಪರಿಸ್ಥಿತಿಯನ್ನು ನಿರ್ಮಿಸಲಾಗಿದೆ. ಇದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದಿದ್ದಾರೆ.

ಈಗಾಗಲೇ ಸರ್ಕಾರಿ ಶಾಲೆಗಳಿಗೆ ಮಕ್ಕಳೇ ಬರುತ್ತಿಲ್ಲ ಎಂದು ನಂಬಿಸಿ, ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ, ಮುಚ್ಚುವ ಕಾರ್ಯತಂತ್ರವು ದೇಶದೆಲ್ಲೆಡೆ ಜಾರಿಯಲ್ಲಿದೆ. ವಿದ್ಯಾರ್ಥಿವೇತನವನ್ನು ನಿಲ್ಲಿಸಲಾಗುತ್ತಿರುವ ಕಾರಣ ಮಕ್ಕಳು ಶಾಲೆಗಳಿಗೆ ಬರಲು ಅಸಾಧ್ಯವಾದಾಗ, ಕನಿಷ್ಠ ದಾಖಲಾತಿಯೂ ಆಗುತ್ತಿಲ್ಲವೆಂದು ನೆಪವೊಡ್ಡಿ ನೆರೆಹೊರೆಯ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಅಥವಾ ಸಂಪೂರ್ಣವಾಗಿ ಮುಚ್ಚಿ, ಸರ್ಕಾರಿ ಶಾಲೆಗಳ ಆಸ್ತಿಗಳನ್ನೂ, ಜಾಗವನ್ನು ಸೇರಿದಂತೆ ಒಟ್ಟಿನಲ್ಲಿ ಇಡೀ ಶಿಕ್ಷಣ ಕ್ಷೇತ್ರವನ್ನೇ ಖಾಸಗಿಯವರ ಮಡಿಲಿಗೆ ಹಾಕುವುದು ಇದರ ಹಿಂದಿನ ಹುನ್ನಾರ ಎಂದು AIFRTEಯ ವಕ್ತಾರರಾದ ಪ್ರೊ. ಮಧು ಪ್ರಸಾದ್ ಅಭಿಪ್ರಾಯ ಪಟ್ಟಿದ್ದಾರೆ.

ಭಾರತ ಸರ್ಕಾರವು ಈ ಕೂಡಲೇ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕೆಂದು ಆಗ್ರಹಿಸುತ್ತೇವೆ. ಅಲ್ಲದೇ, ಒಂದರಿಂದ ಎಂಟನೇ ತರಗತಿಯವರೆಗೆ ನೀಡಲಾಗುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಸಧ್ಯದ ಹಣದುಬ್ಬರವನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ಅವರು ಹೇಳಿದ್ದರೆ.

ಇದನ್ನೂ ಓದಿ: NDTV ರಾಜೀನಾಮೆ ಬೆನ್ನಲ್ಲೆ ಯೂಟ್ಯೂಬ್ ಚಾನೆಲ್ ತೆರೆದ ರವೀಶ್ ಕುಮಾರ್: ಈಗಾಗಲೇ 10 ಲಕ್ಷದಷ್ಟು ಚಂದಾದಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...