Homeಮುಖಪುಟರಾಮಮಂದಿರ ಉದ್ಘಾಟನೆ: ಜನಾಕ್ರೋಶದ ಬೆನ್ನಲ್ಲಿ ಅರ್ಧ ದಿನ ರಜೆ ಆದೇಶ ಹಿಂಪಡೆದ ದೆಹಲಿ ಏಮ್ಸ್

ರಾಮಮಂದಿರ ಉದ್ಘಾಟನೆ: ಜನಾಕ್ರೋಶದ ಬೆನ್ನಲ್ಲಿ ಅರ್ಧ ದಿನ ರಜೆ ಆದೇಶ ಹಿಂಪಡೆದ ದೆಹಲಿ ಏಮ್ಸ್

- Advertisement -
- Advertisement -

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್) ಕೂಡ ಸೋಮವಾರ ಮಧ್ಯಾಹ್ನ 2.30ರವರೆಗೆ ರಜೆ ನೀಡಿ ಆದೇಶ ಹೊರಡಿಸಿತ್ತು. ಈ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾದ ಬೆನ್ನಲ್ಲಿ ಏಮ್ಸ್ ತನ್ನ ಆದೇಶವನ್ನು ಹಿಂಪಡೆದುಕೊಂಡಿದೆ.

22.01.2024 ರಂದು ಮಧ್ಯಾಹ್ನ 02.30 ಗಂಟೆಗಳವರೆಗೆ ಸಂಸ್ಥೆಯು ಅರ್ಧ ದಿನ ಮುಚ್ಚಿರುತ್ತದೆ ಎಂದು ಎಲ್ಲಾ ಉದ್ಯೋಗಿಗಳ ಮಾಹಿತಿಗಾಗಿ ಸೂಚಿಸಲಾಗಿದೆ. ಎಲ್ಲಾ ವಿಭಾಗಗಳ ಮುಖ್ಯಸ್ಥರು, ಘಟಕಗಳು ಮತ್ತು ಶಾಖಾ ಅಧಿಕಾರಿಗಳು, ತಮ್ಮ ಅಧೀನದಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಗಮನಕ್ಕೆ ತರಬೇಕು ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಲಾಗಿತ್ತು.

ದಿನಾಂಕ 20.01.24ರ ಸುತ್ತೋಲೆ ನಂ. NO.F.13-1 /2006-Genlಕ್ಕೆ ಸಂಬಂಧಿಸಿ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ ಹೊರರೋಗಿ ವಿಭಾಗವು ಯಾವುದೇ ಅನಾನುಕೂಲತೆಯನ್ನು ತಡೆಗಟ್ಟಲು ತೆರೆದಿರುತ್ತದೆ ಮತ್ತು ಅಪಾಯಿಂಟ್‌ಮೆಂಟ್ ಹೊಂದಿರುವ ರೋಗಿಗಳಿಗೆ ಸೇವೆ ನೀಡಲು ತೆರೆದಿರುತ್ತದೆ. ಎಲ್ಲಾ ಕ್ಲಿನಿಕಲ್ ಸೇವೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಎಲ್ಲಾ ವಿಭಾಗಗಳ ಮುಖ್ಯಸ್ಥರು, ಘಟಕಗಳು ಮತ್ತು ಶಾಖಾಧಿಕಾರಿಗಳು ತಮ್ಮಅಧೀನದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಗಳ ಗಮನಕ್ಕೆ ಇದನ್ನು ತರಲು ವಿನಂತಿಸಲಾಗಿದೆ ಎಂದ ಏಮ್ಸ್‌ನ ಆಡಳಿತಾಧಿಕಾರಿ ಸಹಿ ಮಾಡಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ಸರ್ಕಾರವು ಅರ್ಧ ದಿನದ ರಜೆಯನ್ನು ಘೋಷಿಸಿದೆ ಎಂದು ದೆಹಲಿಯ ಏಮ್ಸ್‌ನ ಅಧಿಕೃತ ಪತ್ರವು ಈ ಹಿಂದೆ ತಿಳಿಸಿತ್ತು. ಇದರ ಬೆನ್ನಲ್ಲೇ ವ್ಯಾಪಕವಾದ ಜನಾಕ್ರೋಶ ವ್ಯಕ್ತವಾಗಿತ್ತು. ಆಸ್ಪತ್ರೆಗಳಂತಹ ತುರ್ತು ಸೇವಾ ಘಟಕಗಳು ರಾಮಮಂದಿರ ಉದ್ಘಾಟನೆ ನೆಪದಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ಮೊಟಕುಗೊಳಿಸಿರುವುದನ್ನು ವಿರೋಧಿಸಿತ್ತು. ಏಮ್ಸ್‌ನ ಅರ್ಧ ದಿನದ ರಜೆ ಆದೇಶವನ್ನು ವಿರೋಧ ಪಕ್ಷದ ಹಲವು ನಾಯಕರು ಟೀಕಿಸಿದ್ದರು. ಈ ನಿರ್ಧಾರದಿಂದಾಗಿ ಆರೋಗ್ಯ ಸೇವೆಗಳು ಅಸ್ತವ್ಯಸ್ತಗೊಳ್ಳುತ್ತವೆ ಎಂದು ಹೇಳಿದ್ದರು.

ಶಿವಸೇನಾ(ಉದ್ದವ್‌ ಬಣ) ಪ್ರಿಯಾಂಕಾ ಚತುರ್ವೇದಿ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ದಯವಿಟ್ಟು  ಜ. 22ರಂದು ನೀವು ತುರ್ತು ವೈದ್ಯಕೀಯ ಚಿಕಿತ್ಸೆಗೆ ಹೋಗಬೇಡಿ, ಹೋಗುವುದನ್ನು ನಿಗದಿಪಡಿಸಿದ್ದರೆ ಅದನ್ನು ಮಧ್ಯಾಹ್ನ 2 ಗಂಟೆಯ ನಂತರಕ್ಕೆ ಮುಂದುವರಿಸಿ, ಏಮ್ಸ್‌ ದೆಹಲಿ, ಮರ್ಯಾದಾ ಪುರುಷೋತ್ತಮ್ ರಾಮ್ ಅವರನ್ನು ಸ್ವಾಗತಿಸಲು ಸಮಯ ತೆಗೆದುಕೊಳ್ಳುತ್ತಿದೆ. ರಾಮನನ್ನು ಸ್ವಾಗತಿಸಲು ಆರೋಗ್ಯ ಸೇವೆಗಳಿಗೆ ಅಡ್ಡಿಮಾಡಿರುವುದನ್ನು ಭಗವಾನ್ ರಾಮ ಒಪ್ಪುತ್ತಾರೆಯೇ ಎಂದು ನಾನು ಆಶ್ಚರ್ಯ ಪಡುತ್ತೇನೆ ಎಂದು ಹೇಳಿದ್ದರು.

ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರು ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದು, ಜನರು ಅಪಾಯಿಂಟ್‌ಮೆಂಟ್‌ಗಾಗಿ ಕಾಯುತ್ತಾ ಏಮ್ಸ್‌ ಗೇಟ್‌ಗಳ ಹೊರಗೆ ಚಳಿಯಲ್ಲಿ ಮಲಗಿದ್ದಾರೆ. ಬಡವರು ಮತ್ತು ಸಾಯುತ್ತಿರುವವರು ಕಾಯಬಹುದು, ಏಕೆಂದರೆ ಮೋದಿಯ ಪ್ರಚಾರಕ್ಕೆ ಆದ್ಯತೆ ನೀಡಲಾಗುತ್ತಿದೆಯಲ್ಲಾ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ ‘ಉದ್ಯೋಗ’ ಕಸಿದುಕೊಂಡ ಬಿಜೆಪಿ ಸರಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...