Homeಮುಖಪುಟರಾಮಮಂದಿರ ಉದ್ಘಾಟನೆ: ಜನಾಕ್ರೋಶದ ಬೆನ್ನಲ್ಲಿ ಅರ್ಧ ದಿನ ರಜೆ ಆದೇಶ ಹಿಂಪಡೆದ ದೆಹಲಿ ಏಮ್ಸ್

ರಾಮಮಂದಿರ ಉದ್ಘಾಟನೆ: ಜನಾಕ್ರೋಶದ ಬೆನ್ನಲ್ಲಿ ಅರ್ಧ ದಿನ ರಜೆ ಆದೇಶ ಹಿಂಪಡೆದ ದೆಹಲಿ ಏಮ್ಸ್

- Advertisement -
- Advertisement -

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್) ಕೂಡ ಸೋಮವಾರ ಮಧ್ಯಾಹ್ನ 2.30ರವರೆಗೆ ರಜೆ ನೀಡಿ ಆದೇಶ ಹೊರಡಿಸಿತ್ತು. ಈ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾದ ಬೆನ್ನಲ್ಲಿ ಏಮ್ಸ್ ತನ್ನ ಆದೇಶವನ್ನು ಹಿಂಪಡೆದುಕೊಂಡಿದೆ.

22.01.2024 ರಂದು ಮಧ್ಯಾಹ್ನ 02.30 ಗಂಟೆಗಳವರೆಗೆ ಸಂಸ್ಥೆಯು ಅರ್ಧ ದಿನ ಮುಚ್ಚಿರುತ್ತದೆ ಎಂದು ಎಲ್ಲಾ ಉದ್ಯೋಗಿಗಳ ಮಾಹಿತಿಗಾಗಿ ಸೂಚಿಸಲಾಗಿದೆ. ಎಲ್ಲಾ ವಿಭಾಗಗಳ ಮುಖ್ಯಸ್ಥರು, ಘಟಕಗಳು ಮತ್ತು ಶಾಖಾ ಅಧಿಕಾರಿಗಳು, ತಮ್ಮ ಅಧೀನದಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಗಮನಕ್ಕೆ ತರಬೇಕು ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಲಾಗಿತ್ತು.

ದಿನಾಂಕ 20.01.24ರ ಸುತ್ತೋಲೆ ನಂ. NO.F.13-1 /2006-Genlಕ್ಕೆ ಸಂಬಂಧಿಸಿ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ ಹೊರರೋಗಿ ವಿಭಾಗವು ಯಾವುದೇ ಅನಾನುಕೂಲತೆಯನ್ನು ತಡೆಗಟ್ಟಲು ತೆರೆದಿರುತ್ತದೆ ಮತ್ತು ಅಪಾಯಿಂಟ್‌ಮೆಂಟ್ ಹೊಂದಿರುವ ರೋಗಿಗಳಿಗೆ ಸೇವೆ ನೀಡಲು ತೆರೆದಿರುತ್ತದೆ. ಎಲ್ಲಾ ಕ್ಲಿನಿಕಲ್ ಸೇವೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಎಲ್ಲಾ ವಿಭಾಗಗಳ ಮುಖ್ಯಸ್ಥರು, ಘಟಕಗಳು ಮತ್ತು ಶಾಖಾಧಿಕಾರಿಗಳು ತಮ್ಮಅಧೀನದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಗಳ ಗಮನಕ್ಕೆ ಇದನ್ನು ತರಲು ವಿನಂತಿಸಲಾಗಿದೆ ಎಂದ ಏಮ್ಸ್‌ನ ಆಡಳಿತಾಧಿಕಾರಿ ಸಹಿ ಮಾಡಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ಸರ್ಕಾರವು ಅರ್ಧ ದಿನದ ರಜೆಯನ್ನು ಘೋಷಿಸಿದೆ ಎಂದು ದೆಹಲಿಯ ಏಮ್ಸ್‌ನ ಅಧಿಕೃತ ಪತ್ರವು ಈ ಹಿಂದೆ ತಿಳಿಸಿತ್ತು. ಇದರ ಬೆನ್ನಲ್ಲೇ ವ್ಯಾಪಕವಾದ ಜನಾಕ್ರೋಶ ವ್ಯಕ್ತವಾಗಿತ್ತು. ಆಸ್ಪತ್ರೆಗಳಂತಹ ತುರ್ತು ಸೇವಾ ಘಟಕಗಳು ರಾಮಮಂದಿರ ಉದ್ಘಾಟನೆ ನೆಪದಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ಮೊಟಕುಗೊಳಿಸಿರುವುದನ್ನು ವಿರೋಧಿಸಿತ್ತು. ಏಮ್ಸ್‌ನ ಅರ್ಧ ದಿನದ ರಜೆ ಆದೇಶವನ್ನು ವಿರೋಧ ಪಕ್ಷದ ಹಲವು ನಾಯಕರು ಟೀಕಿಸಿದ್ದರು. ಈ ನಿರ್ಧಾರದಿಂದಾಗಿ ಆರೋಗ್ಯ ಸೇವೆಗಳು ಅಸ್ತವ್ಯಸ್ತಗೊಳ್ಳುತ್ತವೆ ಎಂದು ಹೇಳಿದ್ದರು.

ಶಿವಸೇನಾ(ಉದ್ದವ್‌ ಬಣ) ಪ್ರಿಯಾಂಕಾ ಚತುರ್ವೇದಿ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ದಯವಿಟ್ಟು  ಜ. 22ರಂದು ನೀವು ತುರ್ತು ವೈದ್ಯಕೀಯ ಚಿಕಿತ್ಸೆಗೆ ಹೋಗಬೇಡಿ, ಹೋಗುವುದನ್ನು ನಿಗದಿಪಡಿಸಿದ್ದರೆ ಅದನ್ನು ಮಧ್ಯಾಹ್ನ 2 ಗಂಟೆಯ ನಂತರಕ್ಕೆ ಮುಂದುವರಿಸಿ, ಏಮ್ಸ್‌ ದೆಹಲಿ, ಮರ್ಯಾದಾ ಪುರುಷೋತ್ತಮ್ ರಾಮ್ ಅವರನ್ನು ಸ್ವಾಗತಿಸಲು ಸಮಯ ತೆಗೆದುಕೊಳ್ಳುತ್ತಿದೆ. ರಾಮನನ್ನು ಸ್ವಾಗತಿಸಲು ಆರೋಗ್ಯ ಸೇವೆಗಳಿಗೆ ಅಡ್ಡಿಮಾಡಿರುವುದನ್ನು ಭಗವಾನ್ ರಾಮ ಒಪ್ಪುತ್ತಾರೆಯೇ ಎಂದು ನಾನು ಆಶ್ಚರ್ಯ ಪಡುತ್ತೇನೆ ಎಂದು ಹೇಳಿದ್ದರು.

ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರು ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದು, ಜನರು ಅಪಾಯಿಂಟ್‌ಮೆಂಟ್‌ಗಾಗಿ ಕಾಯುತ್ತಾ ಏಮ್ಸ್‌ ಗೇಟ್‌ಗಳ ಹೊರಗೆ ಚಳಿಯಲ್ಲಿ ಮಲಗಿದ್ದಾರೆ. ಬಡವರು ಮತ್ತು ಸಾಯುತ್ತಿರುವವರು ಕಾಯಬಹುದು, ಏಕೆಂದರೆ ಮೋದಿಯ ಪ್ರಚಾರಕ್ಕೆ ಆದ್ಯತೆ ನೀಡಲಾಗುತ್ತಿದೆಯಲ್ಲಾ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ ‘ಉದ್ಯೋಗ’ ಕಸಿದುಕೊಂಡ ಬಿಜೆಪಿ ಸರಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...