Homeಕರೋನಾ ತಲ್ಲಣಏಮ್ಸ್ ನರ್ಸ್‌ಗಳ ಅನಿರ್ದಿಷ್ಟ ಮುಷ್ಕರ: ಕೆಲಸಕ್ಕೆ ಬರುವಂತೆ ಏಮ್ಸ್ ನಿರ್ದೇಶಕರ ಮನವಿ

ಏಮ್ಸ್ ನರ್ಸ್‌ಗಳ ಅನಿರ್ದಿಷ್ಟ ಮುಷ್ಕರ: ಕೆಲಸಕ್ಕೆ ಬರುವಂತೆ ಏಮ್ಸ್ ನಿರ್ದೇಶಕರ ಮನವಿ

ಏಮ್ಸ್‌ ಉದ್ಯೋಗದ ನಿಯಮಗಳನ್ನು ಖಾಯಂ ಕೆಲಸದಿಂದ ಗುತ್ತಿಗೆ ಆಧಾರಕ್ಕೆ ಪರಿವರ್ತಿಸಿದೆ ಎಂದು ನರ್ಸ್ ಯೂನಿಯನ್ ಆರೋಪಿಸಿದೆ.

- Advertisement -
- Advertisement -

ದೀರ್ಘಕಾಲದ ಬೇಡಿಕೆಗಳನ್ನು  ಈಡೇರಿಸುವಂತೆ ಒತ್ತಾಯಿಸಿ ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನರ್ಸ್‌ಗಳು ಮಧ್ಯಾಹ್ನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಂಸ್ಥೆ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ನರ್ಸ್‌ಗಳಿಗೆ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ.

ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ 23 ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಪ್ರಧಾನ ವೈದ್ಯಕೀಯ ಸಂಸ್ಥೆಯ ಉದ್ಯೋಗದ ನಿಯಮಗಳನ್ನು ಖಾಯಂ ಕೆಲಸದಿಂದ ಗುತ್ತಿಗೆ ಆಧಾರಕ್ಕೆ ಪರಿವರ್ತಿಸಿದೆ ಎಂದು ಆರೋಪಿಸಲಾಗಿದೆ.

“ಕೊರೊನಾ ಅವಧಿಯಲ್ಲಿ ಮಾಡಿದ ಅದ್ಭುತ ಕಾರ್ಯಗಳಿಗಾಗಿ ಏಮ್ಸ್ ಕುಟುಂಬದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ರಾಷ್ಟ್ರವು ಹೆಮ್ಮೆಪಡುತ್ತದೆ. ದುರದೃಷ್ಟವಶಾತ್, ಈ ಸಾಂಕ್ರಾಮಿಕ ಸಮಯದಲ್ಲಿ, ದಾದಿಯರ ಸಂಘವು ಮುಷ್ಕರ ನಡೆಸುತ್ತಿದೆ. ಒಕ್ಕೂಟವು ಮಂಡಿಸಿರುವ 23 ಬೇಡಿಕೆಗಳಲ್ಲಿ ಬಹುತೇಕ ಎಲ್ಲಾ ಬೇಡಿಕೆಗಳನ್ನು ಏಮ್ಸ್ ಆಡಳಿತ ಮತ್ತು ಸರ್ಕಾರ ಈಡೇರಿಸಿದೆ” ಎಂದು ಏಮ್ಸ್ ನಿರ್ದೇಶಕ ಪ್ರೊ.ರಂದೀಪ್ ಗುಲೇರಿಯಾ ಏಮ್ಸ್ ನರ್ಸಸ್ ಯೂನಿಯನ್‌ಗೆ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2022ರ ವರೆಗೆ ಕೊರೊನಾ ವ್ಯಾಕ್ಸಿನ್ ಸಿಗಲ್ಲ: ಏಮ್ಸ್ ನಿರ್ದೇಶಕ ಡಾ. ಗುಲೇರಿಯಾ

ಆದರೆ, ಏಮ್ಸ್ ನರ್ಸ್‌ಗಳು ಈ ಬೇಡಿಕೆಗಳನ್ನು ಬಹಳ ಸಮಯದಿಂದ ಮುಂದಿಡುತ್ತಿದ್ದಾರೆ ಎಂದು ಯೂನಿಯನ್‌ನ ವಕ್ತಾರರು ತಿಳಿಸಿದ್ದಾರೆ. ಕಳೆದ ವರ್ಷ, ಸರ್ಕಾರವು ಅವರನ್ನು ಸಭೆಗೆ ಕರೆದು ಅವರ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಭರವಸೆ ನೀಡಿದ್ದರು’ ಎಂದಿದ್ದಾರೆ.

“ಇತ್ತೀಚಿನವರೆಗೂ, ನಮ್ಮ ಬೇಡಿಕೆಗಳನ್ನು ಪರಿಗಣಿಸಲಾಗುತ್ತಿದೆ ಎಂದು ನಮಗೆ ತಿಳಿಸಲಾಯಿತು. ಅವುಗಳಲ್ಲಿ ಪ್ರಮುಖವಾದವು ಆರನೇ ವೇತನ ಆಯೋಗದ ವೇತನ ನೀಡುವುದು ಮತ್ತು ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸಿಕೊಳ್ಳುವುದು” ಎಂದು ನರ್ಸಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಫಮೀರ್ ಸಿಕೆ ಮಾಹಿತಿ ನೀಡಿದ್ದಾರೆ.

“ಪ್ರೊಫೆಸರ್ ರಂದೀಪ್ ಗುಲೇರಿಯಾ ಅವರ ಬಗ್ಗೆ ನಮಗೆ ಅತ್ಯಂತ ಗೌರವವಿದೆ. ಆದರೆ ನಮ್ಮ ಎಲ್ಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಾಗಾದರೆ ಈಗೀನ ಈ ಎಲ್ಲಾ ಭರವಸೆಗಳು ಯಾವುವು..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

“6 ನೇ ವೇತನ ಆಯೋಗದ ಶಿಫಾರಸುಗಳ ಬಗ್ಗೆ ನರ್ಸ್‌ಗಳಲ್ಲಿ ತಪ್ಪು ಭಾವನೆ ಇದೆ ಇದರ ಬಗ್ಗೆ ಒಕ್ಕೂಟದೊಂದಿಗೆ ಅನೇಕ ಸಭೆಗಳನ್ನು ನಡೆಸಿ, ವಿವರಿಸಲಾಗಿದೆ. ಅದೇನೇ ಇದ್ದರೂ, ಅವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಮತ್ತೆ ಹೊಸದಾಗಿ ಪರಿಗಣಿಸಲು ಸರ್ಕಾರ ಸಿದ್ಧವಿದೆ ಎಂದು ಗುಲೇರಿಯಾ ಹೇಳಿದ್ದಾರೆ.

“ಆದಾಗ್ಯೂ, ಒಂದು ದೇಶವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವಾಗ, ನರ್ಸ್ ಯೂನಿಯನ್ ಮುಷ್ಕರ ನಡೆಸಲು ನಿರ್ಧರಿಸಿದೆ ಎಂಬುದು ಸೂಕ್ತವಲ್ಲವೆಂದು ತೋರುತ್ತದೆ. ನಿಮ್ಮೆಲ್ಲರಿಗೂ ಕೆಲಸಕ್ಕೆ ಮರಳಲು ಮತ್ತು ನಿಜವಾಗಿಯೂ ನಮಗೆ ಸಹಾಯ ಮಾಡಲು ನಾನು ಮನವಿ ಮಾಡುತ್ತೇನೆ” ಎಂದು ಪ್ರೊಫೆಸರ್ ಗುಲೇರಿಯಾ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...