Homeಕರೋನಾ ತಲ್ಲಣಬ್ಲಾಕ್ ಫಂಗಸ್‌ಗೆ ಏಮ್ಸ್‌ನಿಂದ ಚಿಕಿತ್ಸಾ ಮಾರ್ಗಸೂಚಿ ಸಿದ್ಧತೆ

ಬ್ಲಾಕ್ ಫಂಗಸ್‌ಗೆ ಏಮ್ಸ್‌ನಿಂದ ಚಿಕಿತ್ಸಾ ಮಾರ್ಗಸೂಚಿ ಸಿದ್ಧತೆ

- Advertisement -
- Advertisement -

ದೇಶದಲ್ಲಿ ಕೊರೊನಾ ಜೊತೆ ಜೊತೆಗೆ ಭೀತಿ ಸೃಷ್ಟಿಸಿರುವ ಕಪ್ಪು ಶಿಲೀಂಧ್ರ (ಬ್ಲಾಕ್ ಫಂಗಸ್) ಸೋಂಕಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಚಿಕಿತ್ಸಾ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

ಮಹಾರಾಷ್ಟ್ರ, ಗುಜರಾತ್, ಕರ್ನಾಟಕ, ಉತ್ತರಾಖಂಡ, ತೆಲಂಗಾಣ, ಒಡಿಶಾ, ಮಧ್ಯಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ವರದಿಯಾಗಿವೆ.

ಬ್ಲಾಕ್ ಫಂಗಸ್ ಅಥವಾ ಕಪ್ಪು ಶಿಲೀಂಧ್ರ ಎಂದರೇನು?

ಬ್ಲಾಕ್ ಫಂಗಸ್ ಅಥವಾ ಕಪ್ಪು ಶಿಲೀಂಧ್ರವು ಶಿಲೀಂಧ್ರಗಳ ಸೋಂಕಿನಿಂದ ಉಂಟಾಗುವ ಒಂದು ಸಮಸ್ಯೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ರಾಜ್ಯದ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಕಪ್ಪು ಶಿಲೀಂಧ್ರಕ್ಕೆ ಕಾರಣವೇನು?

ಈ ಕಾಯಿಲೆಯು ಮ್ಯೂಕೋರ್ಮೈಸೆಟ್ಸ್ (mucormycetes) ಎಂದು ಕರೆಯಲ್ಪಡುವ ಸೂಕ್ಷ್ಮ ಜೀವಿಗಳ ಗುಂಪಿನಿಂದ ಉಂಟಾಗುತ್ತದೆ. ಈ ಸೂಕ್ಷ್ಮ ಜೀವಿಗಳು ಪರಿಸರದಲ್ಲಿ ನೈಸರ್ಗಿಕವಾಗಿ ಇರುತ್ತವೆ. ಹೆಚ್ಚಾಗಿ ಮಣ್ಣಿನಲ್ಲಿ ಮತ್ತು ಕೊಳೆಯುತ್ತಿರುವ ಎಲೆಗಳು, ಕಾಂಪೋಸ್ಟ್ ಮತ್ತು ರಾಶಿಗಳಂತಹ  ವಸ್ತುಗಳಲ್ಲಿ ಕಂಡುಬರುತ್ತವೆ.

ಚರ್ಮದಲ್ಲಿ ಗಾಯ, ಸುಟ್ಟಗಾಯ ಇತರೆ ಚರ್ಮದ ಮೂಲಕ ಈ ಸೋಂಕು ದೇಹದ ಒಳಗೆ ಪ್ರವೇಶಿಸುತ್ತದೆ. ಅಲ್ಲದೆ ಗಾಳಿಯ ಮುಖಾಂತರವೂ ಇದು ಹರಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಳಿಕ ಇದ ಚರ್ಮದ ಮೇಲೆ ಬೆಳೆದು, ಸೋಂಕಿತರಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ‘ಎಚ್ಚರಿಕೆ; ಬೇಕಾಬಿಟ್ಟಿ ಬಿಸಿ ನೀರಿನ ಆವಿ (ಸ್ಟೀಮ್‌) ಪಡೆಯದಿರಿ’-ತಮಿಳುನಾಡು ವೈದ್ಯಕೀಯ ಸಚಿವ

ಕಪ್ಪು ಶಿಲೀಂಧ್ರವನ್ನು ಹೇಗೆ ಹಿಡಿಯುತ್ತಾರೆ?

ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಅಥವಾ ಚೇತರಿಸಿಕೊಂಡ ರೋಗಿಗಳಲ್ಲಿ ಈ ರೋಗವನ್ನು ಕಂಡುಹಿಡಿಯಲಾಗುತ್ತಿದೆ. ಇದಲ್ಲದೆ, ಮಧುಮೇಹ ಮತ್ತು ಅವರ ರೋಗ ನಿರೋಧಕ ಶಕ್ತಿ ಸರಿಯಾಗಿ ಕಾರ್ಯನಿರ್ವಹಿಸದ ಯಾರಾದರೂ ಈ ಸೋಂಕಿಗೆ ತುತ್ತಾಗಬಲ್ಲರು.

ಬ್ಲಾಕ್ ಫಂಗಸ್‌ಗೆ ಚಿಕಿತ್ಸೆಗೆ ಡೆಕ್ಸಮೆಥಾಸೊನ್‌ನಂತಹ (dexamethasone) ಔಷಧಿಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...