Homeಮುಖಪುಟಜನವರಿ 8 ರಂದು ’ಗ್ರಾಮೀಣ ಭಾರತ ಬಂದ್‌’ಗೆ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನಿರ್ಧಾರ..

ಜನವರಿ 8 ರಂದು ’ಗ್ರಾಮೀಣ ಭಾರತ ಬಂದ್‌’ಗೆ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನಿರ್ಧಾರ..

- Advertisement -
- Advertisement -

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು (ಎಐಕೆಎಸ್‌ಸಿಸಿ) ಜನವರಿ 8 ರಂದು ಗ್ರಾಮೀಣ ಭಾರತ್ ಬಂದ್‌ ಆಚರಿಸಲು ಕರೆ ನೀಡಿದೆ. 25 ರಾಜ್ಯಗಳ ರೈತ ಸಂಘಟನೆಗಳು ಏಕೀಕೃತ ಆಂದೋಲನವು ರೈತ ಸಮುದಾಯದ ಹಕ್ಕುಗಳಿಗಾಗಿ ಈ ಬಂದ್‌ ಆಚರಿಸಲು ನಿರ್ಧರಿಸಿವೆ.

ದೆಹಲಿಯಲ್ಲಿ ನಡೆದ 25 ರಾಜ್ಯಗಳ 800 ಪ್ರತಿನಿಧಿಗಳು ಭಾಗವಹಿಸಿದ್ದ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ (ಎಐಕೆಎಸ್‌ಸಿಸಿ) 3 ನೇ ರಾಷ್ಟ್ರೀಯ ಸಮಾವೇಶವು ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರು ತಿಳಿಸಿದ್ದಾರೆ.

ಕೇಂದ್ರದ ರೈತ ವಿರೋಧಿ ನೀತಿಗಳು ಮತ್ತು ರೈತರ ಹಕ್ಕೊತ್ತಾಯಗಳನ್ನು ಕಡೆಗಣಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಷ್ಕ್ರಿಯತೆಯನ್ನು ವಿರೋಧಿಸಿ ಬಂದ್‌ ಆಚರಿಸಲಾಗುತ್ತಿದೆ ಎಂದು ಎಐಕೆಎಸ್‌ಸಿಸಿ ತಿಳಿಸಿದೆ.

ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಅಂದರೆ ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸಿನಂತೆ ಸಿ2 + 50% ಖಾತರಿಪಡಿಸುವಲ್ಲಿನ ವಿಫಲತೆ, ಋಣಭಾರದಿಂದ ಸ್ವಾತಂತ್ರ್ಯವನ್ನು ಒದಗಿಸುವಲ್ಲಿ, ಬರ, ಪ್ರವಾಹದ ಸಂದರ್ಭದಲ್ಲಿ ಪರಿಣಾಮಕಾರಿ ಬೆಳೆ ವಿಮೆ ಮತ್ತು ವಿಪತ್ತು ಪರಿಹಾರವನ್ನು ಒದಗಿಸುವಲ್ಲಿ ಸರ್ಕಾರದ ವಿಫಲತೆಯನ್ನು ರೈತ ಮುಖಂಡರು ಎತ್ತಿ ತೋರಿಸಿದ್ದಾರೆ.

ಅರಣ್ಯ ಹಕ್ಕುಗಳ ಕಾಯ್ದೆ, ಎಲ್‌ಎಆರ್‌ಆರ್ ಕಾಯ್ದೆ 2013 ರ ಅನುಷ್ಠಾನ, ಮತ್ತು ಬುಡಕಟ್ಟು ಜನರು ಮತ್ತು ರೈತರನ್ನು ಬಲವಂತವಾಗಿ ಸ್ಥಳಾಂತರಿಸುವುದರ ವಿರುದ್ಧ, ಮುಕ್ತ ವ್ಯಾಪಾರ ಒಪ್ಪಂದಗಳ (ಆರ್‌ಸಿಇಪಿ) ಕಾಯ್ದೆ, ಕೃಷಿ ಉತ್ಪನ್ನಗಳು ಮತ್ತು ಕೃಷಿ ಕ್ಷೇತ್ರದ ಮೇಲೆ ನಿಯಂತ್ರಣ ಸಾಧಿಸಲು ಹೊರಟ ಬಹುರಾಷ್ಟ್ರೀಯ ಕಂಪನಿಗಳಿಗೆ ಅವಕಾಶ ಮಾಡಿಕೊಡುವುದನ್ನು ರೈತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ಕೃಷಿ ಕಾರ್ಮಿಕರ ಮತ್ತು ಷೇರುದಾರರ ಹಕ್ಕುಗಳಿಗಾಗಿ ಸಮಗ್ರ ಶಾಸನ, ಬೆಳೆ ವಿಮೆ ಮತ್ತು ವಿಪತ್ತು ಪರಿಹಾರವನ್ನು ಸಮರ್ಪಕವಾಗಿ ನೀಡಬೇಕು, ಜಮ್ಮು ಕಾಶ್ಮೀರದ ರೈತರು ಅನುಭವಿಸಿದ ನಷ್ಟಕ್ಕೆ ಪರಿಹಾರ ಒದಗಿಸಬೇಕು ಮತ್ತು ಗ್ರಾಮೀಣ ಕಾರ್ಯಪಡೆಗೆ 10,000 ರೂ ಮಾಶಾಸನ ನಿಗಧಿ ಮಾಡಬೇಕು ಎಂದು ಎಐಕೆಎಸ್‌ಸಿಸಿ ಒತ್ತಾಯಿಸಿದೆ.

ಅಲ್ಲದೇ ರೈತರಿಗೆ ಸಂಬಂಧಿಸಿದ 21 ವಿಷಯಗಳನ್ನು ಒಳಗೊಂಡ ರೈತರ ಚಾರ್ಟರ್ ಅನ್ನು ಸಮಾವೇಶದಲ್ಲಿ ಚರ್ಚಿಸಿ ಮಂಡಿಸಲಾಯಿತು ಎಂದು ಎಐಕೆಎಸ್‌ಸಿಸಿ ಸಂಚಾಲಕರಾದ ವಿ.ಎಂ.ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜು ಶೆಟ್ಟಿ, ಹನ್ನನ್ ಮೊಲ್ಲಾ, ಮೇಧಾ ಪಟ್ಕರ್, ಅತುಲ್ ಅಂಜನ್, ಡಾ. ಆಶಿಶ್ ಮಿತ್ತಲ್, ಯೋಗೇಂದ್ರ ಯಾದವ್, ಡಾ.ಸುನಿಲಂ, ರಾಜಾರಾಮ್ ಸಿಂಗ್, ಡಾ. ದರ್ಶನ್ ಪಾಲ್, ಸತ್ಯವಾನ್, ಪ್ರತಿಭಾ ಶಿಂಧೆ, ಅವಿಕ್ ಸಹಾ ಮತ್ತು ಕಿರಣ್ ವಿಸ್ಸಾ ಮುಂತಾದವರು ಭಾಗವಹಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...