Homeಮುಖಪುಟಜನವರಿ 8 ರಂದು ’ಗ್ರಾಮೀಣ ಭಾರತ ಬಂದ್‌’ಗೆ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನಿರ್ಧಾರ..

ಜನವರಿ 8 ರಂದು ’ಗ್ರಾಮೀಣ ಭಾರತ ಬಂದ್‌’ಗೆ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನಿರ್ಧಾರ..

- Advertisement -
- Advertisement -

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು (ಎಐಕೆಎಸ್‌ಸಿಸಿ) ಜನವರಿ 8 ರಂದು ಗ್ರಾಮೀಣ ಭಾರತ್ ಬಂದ್‌ ಆಚರಿಸಲು ಕರೆ ನೀಡಿದೆ. 25 ರಾಜ್ಯಗಳ ರೈತ ಸಂಘಟನೆಗಳು ಏಕೀಕೃತ ಆಂದೋಲನವು ರೈತ ಸಮುದಾಯದ ಹಕ್ಕುಗಳಿಗಾಗಿ ಈ ಬಂದ್‌ ಆಚರಿಸಲು ನಿರ್ಧರಿಸಿವೆ.

ದೆಹಲಿಯಲ್ಲಿ ನಡೆದ 25 ರಾಜ್ಯಗಳ 800 ಪ್ರತಿನಿಧಿಗಳು ಭಾಗವಹಿಸಿದ್ದ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ (ಎಐಕೆಎಸ್‌ಸಿಸಿ) 3 ನೇ ರಾಷ್ಟ್ರೀಯ ಸಮಾವೇಶವು ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರು ತಿಳಿಸಿದ್ದಾರೆ.

ಕೇಂದ್ರದ ರೈತ ವಿರೋಧಿ ನೀತಿಗಳು ಮತ್ತು ರೈತರ ಹಕ್ಕೊತ್ತಾಯಗಳನ್ನು ಕಡೆಗಣಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಷ್ಕ್ರಿಯತೆಯನ್ನು ವಿರೋಧಿಸಿ ಬಂದ್‌ ಆಚರಿಸಲಾಗುತ್ತಿದೆ ಎಂದು ಎಐಕೆಎಸ್‌ಸಿಸಿ ತಿಳಿಸಿದೆ.

ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಅಂದರೆ ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸಿನಂತೆ ಸಿ2 + 50% ಖಾತರಿಪಡಿಸುವಲ್ಲಿನ ವಿಫಲತೆ, ಋಣಭಾರದಿಂದ ಸ್ವಾತಂತ್ರ್ಯವನ್ನು ಒದಗಿಸುವಲ್ಲಿ, ಬರ, ಪ್ರವಾಹದ ಸಂದರ್ಭದಲ್ಲಿ ಪರಿಣಾಮಕಾರಿ ಬೆಳೆ ವಿಮೆ ಮತ್ತು ವಿಪತ್ತು ಪರಿಹಾರವನ್ನು ಒದಗಿಸುವಲ್ಲಿ ಸರ್ಕಾರದ ವಿಫಲತೆಯನ್ನು ರೈತ ಮುಖಂಡರು ಎತ್ತಿ ತೋರಿಸಿದ್ದಾರೆ.

ಅರಣ್ಯ ಹಕ್ಕುಗಳ ಕಾಯ್ದೆ, ಎಲ್‌ಎಆರ್‌ಆರ್ ಕಾಯ್ದೆ 2013 ರ ಅನುಷ್ಠಾನ, ಮತ್ತು ಬುಡಕಟ್ಟು ಜನರು ಮತ್ತು ರೈತರನ್ನು ಬಲವಂತವಾಗಿ ಸ್ಥಳಾಂತರಿಸುವುದರ ವಿರುದ್ಧ, ಮುಕ್ತ ವ್ಯಾಪಾರ ಒಪ್ಪಂದಗಳ (ಆರ್‌ಸಿಇಪಿ) ಕಾಯ್ದೆ, ಕೃಷಿ ಉತ್ಪನ್ನಗಳು ಮತ್ತು ಕೃಷಿ ಕ್ಷೇತ್ರದ ಮೇಲೆ ನಿಯಂತ್ರಣ ಸಾಧಿಸಲು ಹೊರಟ ಬಹುರಾಷ್ಟ್ರೀಯ ಕಂಪನಿಗಳಿಗೆ ಅವಕಾಶ ಮಾಡಿಕೊಡುವುದನ್ನು ರೈತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ಕೃಷಿ ಕಾರ್ಮಿಕರ ಮತ್ತು ಷೇರುದಾರರ ಹಕ್ಕುಗಳಿಗಾಗಿ ಸಮಗ್ರ ಶಾಸನ, ಬೆಳೆ ವಿಮೆ ಮತ್ತು ವಿಪತ್ತು ಪರಿಹಾರವನ್ನು ಸಮರ್ಪಕವಾಗಿ ನೀಡಬೇಕು, ಜಮ್ಮು ಕಾಶ್ಮೀರದ ರೈತರು ಅನುಭವಿಸಿದ ನಷ್ಟಕ್ಕೆ ಪರಿಹಾರ ಒದಗಿಸಬೇಕು ಮತ್ತು ಗ್ರಾಮೀಣ ಕಾರ್ಯಪಡೆಗೆ 10,000 ರೂ ಮಾಶಾಸನ ನಿಗಧಿ ಮಾಡಬೇಕು ಎಂದು ಎಐಕೆಎಸ್‌ಸಿಸಿ ಒತ್ತಾಯಿಸಿದೆ.

ಅಲ್ಲದೇ ರೈತರಿಗೆ ಸಂಬಂಧಿಸಿದ 21 ವಿಷಯಗಳನ್ನು ಒಳಗೊಂಡ ರೈತರ ಚಾರ್ಟರ್ ಅನ್ನು ಸಮಾವೇಶದಲ್ಲಿ ಚರ್ಚಿಸಿ ಮಂಡಿಸಲಾಯಿತು ಎಂದು ಎಐಕೆಎಸ್‌ಸಿಸಿ ಸಂಚಾಲಕರಾದ ವಿ.ಎಂ.ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜು ಶೆಟ್ಟಿ, ಹನ್ನನ್ ಮೊಲ್ಲಾ, ಮೇಧಾ ಪಟ್ಕರ್, ಅತುಲ್ ಅಂಜನ್, ಡಾ. ಆಶಿಶ್ ಮಿತ್ತಲ್, ಯೋಗೇಂದ್ರ ಯಾದವ್, ಡಾ.ಸುನಿಲಂ, ರಾಜಾರಾಮ್ ಸಿಂಗ್, ಡಾ. ದರ್ಶನ್ ಪಾಲ್, ಸತ್ಯವಾನ್, ಪ್ರತಿಭಾ ಶಿಂಧೆ, ಅವಿಕ್ ಸಹಾ ಮತ್ತು ಕಿರಣ್ ವಿಸ್ಸಾ ಮುಂತಾದವರು ಭಾಗವಹಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...