Homeಮುಖಪುಟಜನವರಿ 8 ರಂದು ’ಗ್ರಾಮೀಣ ಭಾರತ ಬಂದ್‌’ಗೆ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನಿರ್ಧಾರ..

ಜನವರಿ 8 ರಂದು ’ಗ್ರಾಮೀಣ ಭಾರತ ಬಂದ್‌’ಗೆ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನಿರ್ಧಾರ..

- Advertisement -
- Advertisement -

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು (ಎಐಕೆಎಸ್‌ಸಿಸಿ) ಜನವರಿ 8 ರಂದು ಗ್ರಾಮೀಣ ಭಾರತ್ ಬಂದ್‌ ಆಚರಿಸಲು ಕರೆ ನೀಡಿದೆ. 25 ರಾಜ್ಯಗಳ ರೈತ ಸಂಘಟನೆಗಳು ಏಕೀಕೃತ ಆಂದೋಲನವು ರೈತ ಸಮುದಾಯದ ಹಕ್ಕುಗಳಿಗಾಗಿ ಈ ಬಂದ್‌ ಆಚರಿಸಲು ನಿರ್ಧರಿಸಿವೆ.

ದೆಹಲಿಯಲ್ಲಿ ನಡೆದ 25 ರಾಜ್ಯಗಳ 800 ಪ್ರತಿನಿಧಿಗಳು ಭಾಗವಹಿಸಿದ್ದ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ (ಎಐಕೆಎಸ್‌ಸಿಸಿ) 3 ನೇ ರಾಷ್ಟ್ರೀಯ ಸಮಾವೇಶವು ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರು ತಿಳಿಸಿದ್ದಾರೆ.

ಕೇಂದ್ರದ ರೈತ ವಿರೋಧಿ ನೀತಿಗಳು ಮತ್ತು ರೈತರ ಹಕ್ಕೊತ್ತಾಯಗಳನ್ನು ಕಡೆಗಣಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಷ್ಕ್ರಿಯತೆಯನ್ನು ವಿರೋಧಿಸಿ ಬಂದ್‌ ಆಚರಿಸಲಾಗುತ್ತಿದೆ ಎಂದು ಎಐಕೆಎಸ್‌ಸಿಸಿ ತಿಳಿಸಿದೆ.

ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಅಂದರೆ ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸಿನಂತೆ ಸಿ2 + 50% ಖಾತರಿಪಡಿಸುವಲ್ಲಿನ ವಿಫಲತೆ, ಋಣಭಾರದಿಂದ ಸ್ವಾತಂತ್ರ್ಯವನ್ನು ಒದಗಿಸುವಲ್ಲಿ, ಬರ, ಪ್ರವಾಹದ ಸಂದರ್ಭದಲ್ಲಿ ಪರಿಣಾಮಕಾರಿ ಬೆಳೆ ವಿಮೆ ಮತ್ತು ವಿಪತ್ತು ಪರಿಹಾರವನ್ನು ಒದಗಿಸುವಲ್ಲಿ ಸರ್ಕಾರದ ವಿಫಲತೆಯನ್ನು ರೈತ ಮುಖಂಡರು ಎತ್ತಿ ತೋರಿಸಿದ್ದಾರೆ.

ಅರಣ್ಯ ಹಕ್ಕುಗಳ ಕಾಯ್ದೆ, ಎಲ್‌ಎಆರ್‌ಆರ್ ಕಾಯ್ದೆ 2013 ರ ಅನುಷ್ಠಾನ, ಮತ್ತು ಬುಡಕಟ್ಟು ಜನರು ಮತ್ತು ರೈತರನ್ನು ಬಲವಂತವಾಗಿ ಸ್ಥಳಾಂತರಿಸುವುದರ ವಿರುದ್ಧ, ಮುಕ್ತ ವ್ಯಾಪಾರ ಒಪ್ಪಂದಗಳ (ಆರ್‌ಸಿಇಪಿ) ಕಾಯ್ದೆ, ಕೃಷಿ ಉತ್ಪನ್ನಗಳು ಮತ್ತು ಕೃಷಿ ಕ್ಷೇತ್ರದ ಮೇಲೆ ನಿಯಂತ್ರಣ ಸಾಧಿಸಲು ಹೊರಟ ಬಹುರಾಷ್ಟ್ರೀಯ ಕಂಪನಿಗಳಿಗೆ ಅವಕಾಶ ಮಾಡಿಕೊಡುವುದನ್ನು ರೈತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ಕೃಷಿ ಕಾರ್ಮಿಕರ ಮತ್ತು ಷೇರುದಾರರ ಹಕ್ಕುಗಳಿಗಾಗಿ ಸಮಗ್ರ ಶಾಸನ, ಬೆಳೆ ವಿಮೆ ಮತ್ತು ವಿಪತ್ತು ಪರಿಹಾರವನ್ನು ಸಮರ್ಪಕವಾಗಿ ನೀಡಬೇಕು, ಜಮ್ಮು ಕಾಶ್ಮೀರದ ರೈತರು ಅನುಭವಿಸಿದ ನಷ್ಟಕ್ಕೆ ಪರಿಹಾರ ಒದಗಿಸಬೇಕು ಮತ್ತು ಗ್ರಾಮೀಣ ಕಾರ್ಯಪಡೆಗೆ 10,000 ರೂ ಮಾಶಾಸನ ನಿಗಧಿ ಮಾಡಬೇಕು ಎಂದು ಎಐಕೆಎಸ್‌ಸಿಸಿ ಒತ್ತಾಯಿಸಿದೆ.

ಅಲ್ಲದೇ ರೈತರಿಗೆ ಸಂಬಂಧಿಸಿದ 21 ವಿಷಯಗಳನ್ನು ಒಳಗೊಂಡ ರೈತರ ಚಾರ್ಟರ್ ಅನ್ನು ಸಮಾವೇಶದಲ್ಲಿ ಚರ್ಚಿಸಿ ಮಂಡಿಸಲಾಯಿತು ಎಂದು ಎಐಕೆಎಸ್‌ಸಿಸಿ ಸಂಚಾಲಕರಾದ ವಿ.ಎಂ.ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜು ಶೆಟ್ಟಿ, ಹನ್ನನ್ ಮೊಲ್ಲಾ, ಮೇಧಾ ಪಟ್ಕರ್, ಅತುಲ್ ಅಂಜನ್, ಡಾ. ಆಶಿಶ್ ಮಿತ್ತಲ್, ಯೋಗೇಂದ್ರ ಯಾದವ್, ಡಾ.ಸುನಿಲಂ, ರಾಜಾರಾಮ್ ಸಿಂಗ್, ಡಾ. ದರ್ಶನ್ ಪಾಲ್, ಸತ್ಯವಾನ್, ಪ್ರತಿಭಾ ಶಿಂಧೆ, ಅವಿಕ್ ಸಹಾ ಮತ್ತು ಕಿರಣ್ ವಿಸ್ಸಾ ಮುಂತಾದವರು ಭಾಗವಹಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...