Homeಮುಖಪುಟಜನವರಿ 8 ರಂದು ’ಗ್ರಾಮೀಣ ಭಾರತ ಬಂದ್‌’ಗೆ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನಿರ್ಧಾರ..

ಜನವರಿ 8 ರಂದು ’ಗ್ರಾಮೀಣ ಭಾರತ ಬಂದ್‌’ಗೆ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನಿರ್ಧಾರ..

- Advertisement -
- Advertisement -

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು (ಎಐಕೆಎಸ್‌ಸಿಸಿ) ಜನವರಿ 8 ರಂದು ಗ್ರಾಮೀಣ ಭಾರತ್ ಬಂದ್‌ ಆಚರಿಸಲು ಕರೆ ನೀಡಿದೆ. 25 ರಾಜ್ಯಗಳ ರೈತ ಸಂಘಟನೆಗಳು ಏಕೀಕೃತ ಆಂದೋಲನವು ರೈತ ಸಮುದಾಯದ ಹಕ್ಕುಗಳಿಗಾಗಿ ಈ ಬಂದ್‌ ಆಚರಿಸಲು ನಿರ್ಧರಿಸಿವೆ.

ದೆಹಲಿಯಲ್ಲಿ ನಡೆದ 25 ರಾಜ್ಯಗಳ 800 ಪ್ರತಿನಿಧಿಗಳು ಭಾಗವಹಿಸಿದ್ದ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ (ಎಐಕೆಎಸ್‌ಸಿಸಿ) 3 ನೇ ರಾಷ್ಟ್ರೀಯ ಸಮಾವೇಶವು ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರು ತಿಳಿಸಿದ್ದಾರೆ.

ಕೇಂದ್ರದ ರೈತ ವಿರೋಧಿ ನೀತಿಗಳು ಮತ್ತು ರೈತರ ಹಕ್ಕೊತ್ತಾಯಗಳನ್ನು ಕಡೆಗಣಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಷ್ಕ್ರಿಯತೆಯನ್ನು ವಿರೋಧಿಸಿ ಬಂದ್‌ ಆಚರಿಸಲಾಗುತ್ತಿದೆ ಎಂದು ಎಐಕೆಎಸ್‌ಸಿಸಿ ತಿಳಿಸಿದೆ.

ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಅಂದರೆ ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸಿನಂತೆ ಸಿ2 + 50% ಖಾತರಿಪಡಿಸುವಲ್ಲಿನ ವಿಫಲತೆ, ಋಣಭಾರದಿಂದ ಸ್ವಾತಂತ್ರ್ಯವನ್ನು ಒದಗಿಸುವಲ್ಲಿ, ಬರ, ಪ್ರವಾಹದ ಸಂದರ್ಭದಲ್ಲಿ ಪರಿಣಾಮಕಾರಿ ಬೆಳೆ ವಿಮೆ ಮತ್ತು ವಿಪತ್ತು ಪರಿಹಾರವನ್ನು ಒದಗಿಸುವಲ್ಲಿ ಸರ್ಕಾರದ ವಿಫಲತೆಯನ್ನು ರೈತ ಮುಖಂಡರು ಎತ್ತಿ ತೋರಿಸಿದ್ದಾರೆ.

ಅರಣ್ಯ ಹಕ್ಕುಗಳ ಕಾಯ್ದೆ, ಎಲ್‌ಎಆರ್‌ಆರ್ ಕಾಯ್ದೆ 2013 ರ ಅನುಷ್ಠಾನ, ಮತ್ತು ಬುಡಕಟ್ಟು ಜನರು ಮತ್ತು ರೈತರನ್ನು ಬಲವಂತವಾಗಿ ಸ್ಥಳಾಂತರಿಸುವುದರ ವಿರುದ್ಧ, ಮುಕ್ತ ವ್ಯಾಪಾರ ಒಪ್ಪಂದಗಳ (ಆರ್‌ಸಿಇಪಿ) ಕಾಯ್ದೆ, ಕೃಷಿ ಉತ್ಪನ್ನಗಳು ಮತ್ತು ಕೃಷಿ ಕ್ಷೇತ್ರದ ಮೇಲೆ ನಿಯಂತ್ರಣ ಸಾಧಿಸಲು ಹೊರಟ ಬಹುರಾಷ್ಟ್ರೀಯ ಕಂಪನಿಗಳಿಗೆ ಅವಕಾಶ ಮಾಡಿಕೊಡುವುದನ್ನು ರೈತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ಕೃಷಿ ಕಾರ್ಮಿಕರ ಮತ್ತು ಷೇರುದಾರರ ಹಕ್ಕುಗಳಿಗಾಗಿ ಸಮಗ್ರ ಶಾಸನ, ಬೆಳೆ ವಿಮೆ ಮತ್ತು ವಿಪತ್ತು ಪರಿಹಾರವನ್ನು ಸಮರ್ಪಕವಾಗಿ ನೀಡಬೇಕು, ಜಮ್ಮು ಕಾಶ್ಮೀರದ ರೈತರು ಅನುಭವಿಸಿದ ನಷ್ಟಕ್ಕೆ ಪರಿಹಾರ ಒದಗಿಸಬೇಕು ಮತ್ತು ಗ್ರಾಮೀಣ ಕಾರ್ಯಪಡೆಗೆ 10,000 ರೂ ಮಾಶಾಸನ ನಿಗಧಿ ಮಾಡಬೇಕು ಎಂದು ಎಐಕೆಎಸ್‌ಸಿಸಿ ಒತ್ತಾಯಿಸಿದೆ.

ಅಲ್ಲದೇ ರೈತರಿಗೆ ಸಂಬಂಧಿಸಿದ 21 ವಿಷಯಗಳನ್ನು ಒಳಗೊಂಡ ರೈತರ ಚಾರ್ಟರ್ ಅನ್ನು ಸಮಾವೇಶದಲ್ಲಿ ಚರ್ಚಿಸಿ ಮಂಡಿಸಲಾಯಿತು ಎಂದು ಎಐಕೆಎಸ್‌ಸಿಸಿ ಸಂಚಾಲಕರಾದ ವಿ.ಎಂ.ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜು ಶೆಟ್ಟಿ, ಹನ್ನನ್ ಮೊಲ್ಲಾ, ಮೇಧಾ ಪಟ್ಕರ್, ಅತುಲ್ ಅಂಜನ್, ಡಾ. ಆಶಿಶ್ ಮಿತ್ತಲ್, ಯೋಗೇಂದ್ರ ಯಾದವ್, ಡಾ.ಸುನಿಲಂ, ರಾಜಾರಾಮ್ ಸಿಂಗ್, ಡಾ. ದರ್ಶನ್ ಪಾಲ್, ಸತ್ಯವಾನ್, ಪ್ರತಿಭಾ ಶಿಂಧೆ, ಅವಿಕ್ ಸಹಾ ಮತ್ತು ಕಿರಣ್ ವಿಸ್ಸಾ ಮುಂತಾದವರು ಭಾಗವಹಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...