Homeಕರ್ನಾಟಕ’ಯಡಿಯೂರಪ್ಪ ಕೋಟುಬೂಟು ಹಾಕಿರುವ ರೈತರ ಪರ’-ಐಕ್ಯ ಹೋರಾಟ ಸಮಿತಿ

’ಯಡಿಯೂರಪ್ಪ ಕೋಟುಬೂಟು ಹಾಕಿರುವ ರೈತರ ಪರ’-ಐಕ್ಯ ಹೋರಾಟ ಸಮಿತಿ

ನಾಳೆ 'ಐಕ್ಯ ಹೋರಾಟ’ ವತಿಯಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ರೈತರು ರಾಜಭವನ ಮುತ್ತಿಗೆ ಹಾಕಲಿದ್ದಾರೆ.

- Advertisement -
- Advertisement -

’ಕೊನೆಗೂ ರೈತರ ವಂಶವನ್ನೇ ಯಡಿಯೂರಪ್ಪ ಸರ್ಕಾರ ನಿರ್ವಂಶ ಮಾಡಿದೆ. ಅವರು ರೈತ ಪರ ಎಂದಿದ್ದು ಕೋಟುಬೂಟು ಹಾಕಿರುವ ರೈತರ ಪರ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಅವರು ಐಕ್ಯ ಹೋರಾಟ ಸಮಿತಿ ವೇದಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೌರ್ಯ ಸರ್ಕಲ್‌ನಲ್ಲಿ ಐಕ್ಯ ಹೋರಾಟ ಸಮಿತಿಯಿಂದ ನಡೆಯುತ್ತಿರುವ ಪ್ರತಿಬಟನೆಯಲ್ಲಿ ಅವರು ಮಾತನಾಡಿದರು. ’ಕಿಕ್ ಬ್ಯಾಕ್ ಕೊಟ್ಟಿರುವರು ಇವರನ್ನು ನಿದ್ದೆ ಮಾಡಲು ಬಿಡದೇ ಇದ್ದಿದ್ದಕ್ಕೆ ತುರಾತುರಿತಲ್ಲಿ ಯಡಿಯೂರಪ್ಪ ಮಸೂದೆ ಪಾಸ್ ಮಾಡಿದ್ದಾರೆ’ ಎಂದಿದ್ದಾರೆ.

ಸದನದಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಬೆಂಬಲ ಸೂಚಿಸಿರುವ ಜೆಡಿಎಸ್ ಕ್ರಮವನ್ನು ಟೀಕಿಸಿರುವ ನಾಗೇಂದ್ರ ಅವರು, ’ಜೆಡಿಎಸ್‌ನವರು ಮಾತಿಗೆ ತಪ್ಪುವುದರಲ್ಲಿ ನಂಬರ್ ಒನ್. ನಮ್ಮೊಂದಿಗೆ ನಿನ್ನೆ ಬಂದು ರೈತರಿಗೆ ಬೆಂಬಲ ಸೂಚಿಸಿ, ಸದನಕ್ಕೆ ಹೋಗಿ ಮಸೂದೆಗೆ ಮತ ಹಾಕಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರ ಬ್ರಹ್ಮಾಂಡ ಭ್ರಷ್ಟಾಚಾರ ಇದೆ’ ಎಂದು ಕಿಡಿಕಾರಿದ್ದಾರೆ.

“ಆದರೆ, ನಿನ್ನೆ  ಸದನದಲ್ಲಿ ಪಾಸಾದ ಮಸೂದೆ ಸುಧಾರಣೆ ಅಲ್ಲ. ಚುನಾವಣೆ ಬಂದಾಗ ಜನರ ಬಳಿ ಮತ ಕೇಳಲು ಹೋಗುವ ಯಡಿಯೂರಪ್ಪ, ಕುಮಾರಸ್ವಾಮಿ, ರೇವಣ್ಣ, ದೇವೇಗೌಡ ಅವರಿಗೆ ರೈತರು ಅನ್ನ ತಿಂತೀಯ ಮಣ್ಣು ತಿಂತೀಯ ಎಂದು ಕೇಳುತ್ತಾರೆ’ ಎಂದಿದ್ದಾರೆ.

ಇದನ್ನು ಓದಿ: ಭಾರತ್‌‌ ಬಂದ್ | ಕರ್ನಾಟಕದಲ್ಲಿ ಯಶಸ್ವಿ; ಜಿಲ್ಲಾವಾರು ಹೋರಾಟದ ಚಿತ್ರಗಳು!

ಕಬ್ಬು ಬೆಳೆಗಾರರ ಸಂಘದ ಮುಖಂಡ, ಕುರುಬೂರು ಶಾಂತಕುಮಾರ್ ಮಾತನಾಡಿ, “ಕೇಂದ್ರ ಹಾಗೂ ರಾಜ್ಯದಲ್ಲಿ ಇರುವುದು ಒಂದೇ ಸರ್ಕಾರ. ರೈತರಿಗೆ ಕಿಸಾನ್ ಸಮ್ಮಾನ್ ಎಂಬ ಯೋಜನೆಯ ಎರಡು ಸಾವಿರ ರೂಪಾಯಿ ಭಿಕ್ಷೆಯ ಹಣ ಕೊಟ್ಟಿದ್ದಾರೆ. ಆದರೆ, ಬಂಡವಾಳಶಾಹಿಗಳಿಗೆ ಕೋಟಿ ಕೋಟಿ ಹಣವನ್ನು ನೀಡಿದ್ದಾರೆ’ ಎಂದು ಟೀಕಿಸಿದ್ದಾರೆ.

“ರೈತವಿರೋಧಿ ಮಸೂದೆಗೆ ಜನತಾದಳ ಕೂಡಾ ಕೈ ಜೋಡಿಸಿದ್ದು, ಅವರ ರೈತ ವಿರೋಧಿ ನೀತಿಯನ್ನು ತೋರಿಸುತ್ತದೆ. ಕರ್ನಾಟಕದಲ್ಲಿ ಇರುವಂತಹ ಭೂಹೀನ ರೈತರಿಗೆ ಈ ಕಾಯ್ದೆಯಿಂದ ಒಂದಿಂಚೂ ಭೂಮಿ ಸಿಗುವುದಿಲ್ಲ, ಲ್ಯಾಂಡ್ ಮಾಫಿಯಾವನ್ನು ಮೆಚ್ಚಿಸಲು ಯಡಿಯೂರಪ್ಪ ಈ ಮಸೂದೆ ಮಂಡಿಸಿದ್ದಾರೆ’ ಎಂದು ದಲಿತ ಸಂಘರ್ಷ ಸಮಿತಿಯ ಕೆ. ಮಾವಳ್ಳಿ ಶಂಕರ್ ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್. ದೊರೆಸ್ವಾಮಿ ಅವರು ಭಾಗವಹಿಸಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ನಾಳೆ ರೈತರ, ದಲಿತ, ಕಾರ್ಮಿಕ, ಜನಪರ ಸಂಘಟನೆಗಳ ‘ಐಕ್ಯ ಹೋರಾಟ’ ವತಿಯಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಪ್ರತಿಭಟನಾಕಾರರು ರಾಜಭವನ ಮುತ್ತಿಗೆ ಹಾಕಲಿದ್ದಾರೆ.

ಕರಾಳ ಕಾನೂನುಗಳ ವಿರುದ್ದ ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ದೌರ್ಜನ್ಯ ವಿರೋಧಿಸಿ ’ಐಕ್ಯ ಹೋರಾಟ’ ವೇದಿಕೆಯ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದೆ.


ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...