Homeಕರ್ನಾಟಕ’ಯಡಿಯೂರಪ್ಪ ಕೋಟುಬೂಟು ಹಾಕಿರುವ ರೈತರ ಪರ’-ಐಕ್ಯ ಹೋರಾಟ ಸಮಿತಿ

’ಯಡಿಯೂರಪ್ಪ ಕೋಟುಬೂಟು ಹಾಕಿರುವ ರೈತರ ಪರ’-ಐಕ್ಯ ಹೋರಾಟ ಸಮಿತಿ

ನಾಳೆ 'ಐಕ್ಯ ಹೋರಾಟ’ ವತಿಯಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ರೈತರು ರಾಜಭವನ ಮುತ್ತಿಗೆ ಹಾಕಲಿದ್ದಾರೆ.

- Advertisement -
- Advertisement -

’ಕೊನೆಗೂ ರೈತರ ವಂಶವನ್ನೇ ಯಡಿಯೂರಪ್ಪ ಸರ್ಕಾರ ನಿರ್ವಂಶ ಮಾಡಿದೆ. ಅವರು ರೈತ ಪರ ಎಂದಿದ್ದು ಕೋಟುಬೂಟು ಹಾಕಿರುವ ರೈತರ ಪರ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಅವರು ಐಕ್ಯ ಹೋರಾಟ ಸಮಿತಿ ವೇದಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೌರ್ಯ ಸರ್ಕಲ್‌ನಲ್ಲಿ ಐಕ್ಯ ಹೋರಾಟ ಸಮಿತಿಯಿಂದ ನಡೆಯುತ್ತಿರುವ ಪ್ರತಿಬಟನೆಯಲ್ಲಿ ಅವರು ಮಾತನಾಡಿದರು. ’ಕಿಕ್ ಬ್ಯಾಕ್ ಕೊಟ್ಟಿರುವರು ಇವರನ್ನು ನಿದ್ದೆ ಮಾಡಲು ಬಿಡದೇ ಇದ್ದಿದ್ದಕ್ಕೆ ತುರಾತುರಿತಲ್ಲಿ ಯಡಿಯೂರಪ್ಪ ಮಸೂದೆ ಪಾಸ್ ಮಾಡಿದ್ದಾರೆ’ ಎಂದಿದ್ದಾರೆ.

ಸದನದಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಬೆಂಬಲ ಸೂಚಿಸಿರುವ ಜೆಡಿಎಸ್ ಕ್ರಮವನ್ನು ಟೀಕಿಸಿರುವ ನಾಗೇಂದ್ರ ಅವರು, ’ಜೆಡಿಎಸ್‌ನವರು ಮಾತಿಗೆ ತಪ್ಪುವುದರಲ್ಲಿ ನಂಬರ್ ಒನ್. ನಮ್ಮೊಂದಿಗೆ ನಿನ್ನೆ ಬಂದು ರೈತರಿಗೆ ಬೆಂಬಲ ಸೂಚಿಸಿ, ಸದನಕ್ಕೆ ಹೋಗಿ ಮಸೂದೆಗೆ ಮತ ಹಾಕಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರ ಬ್ರಹ್ಮಾಂಡ ಭ್ರಷ್ಟಾಚಾರ ಇದೆ’ ಎಂದು ಕಿಡಿಕಾರಿದ್ದಾರೆ.

“ಆದರೆ, ನಿನ್ನೆ  ಸದನದಲ್ಲಿ ಪಾಸಾದ ಮಸೂದೆ ಸುಧಾರಣೆ ಅಲ್ಲ. ಚುನಾವಣೆ ಬಂದಾಗ ಜನರ ಬಳಿ ಮತ ಕೇಳಲು ಹೋಗುವ ಯಡಿಯೂರಪ್ಪ, ಕುಮಾರಸ್ವಾಮಿ, ರೇವಣ್ಣ, ದೇವೇಗೌಡ ಅವರಿಗೆ ರೈತರು ಅನ್ನ ತಿಂತೀಯ ಮಣ್ಣು ತಿಂತೀಯ ಎಂದು ಕೇಳುತ್ತಾರೆ’ ಎಂದಿದ್ದಾರೆ.

ಇದನ್ನು ಓದಿ: ಭಾರತ್‌‌ ಬಂದ್ | ಕರ್ನಾಟಕದಲ್ಲಿ ಯಶಸ್ವಿ; ಜಿಲ್ಲಾವಾರು ಹೋರಾಟದ ಚಿತ್ರಗಳು!

ಕಬ್ಬು ಬೆಳೆಗಾರರ ಸಂಘದ ಮುಖಂಡ, ಕುರುಬೂರು ಶಾಂತಕುಮಾರ್ ಮಾತನಾಡಿ, “ಕೇಂದ್ರ ಹಾಗೂ ರಾಜ್ಯದಲ್ಲಿ ಇರುವುದು ಒಂದೇ ಸರ್ಕಾರ. ರೈತರಿಗೆ ಕಿಸಾನ್ ಸಮ್ಮಾನ್ ಎಂಬ ಯೋಜನೆಯ ಎರಡು ಸಾವಿರ ರೂಪಾಯಿ ಭಿಕ್ಷೆಯ ಹಣ ಕೊಟ್ಟಿದ್ದಾರೆ. ಆದರೆ, ಬಂಡವಾಳಶಾಹಿಗಳಿಗೆ ಕೋಟಿ ಕೋಟಿ ಹಣವನ್ನು ನೀಡಿದ್ದಾರೆ’ ಎಂದು ಟೀಕಿಸಿದ್ದಾರೆ.

“ರೈತವಿರೋಧಿ ಮಸೂದೆಗೆ ಜನತಾದಳ ಕೂಡಾ ಕೈ ಜೋಡಿಸಿದ್ದು, ಅವರ ರೈತ ವಿರೋಧಿ ನೀತಿಯನ್ನು ತೋರಿಸುತ್ತದೆ. ಕರ್ನಾಟಕದಲ್ಲಿ ಇರುವಂತಹ ಭೂಹೀನ ರೈತರಿಗೆ ಈ ಕಾಯ್ದೆಯಿಂದ ಒಂದಿಂಚೂ ಭೂಮಿ ಸಿಗುವುದಿಲ್ಲ, ಲ್ಯಾಂಡ್ ಮಾಫಿಯಾವನ್ನು ಮೆಚ್ಚಿಸಲು ಯಡಿಯೂರಪ್ಪ ಈ ಮಸೂದೆ ಮಂಡಿಸಿದ್ದಾರೆ’ ಎಂದು ದಲಿತ ಸಂಘರ್ಷ ಸಮಿತಿಯ ಕೆ. ಮಾವಳ್ಳಿ ಶಂಕರ್ ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್. ದೊರೆಸ್ವಾಮಿ ಅವರು ಭಾಗವಹಿಸಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ನಾಳೆ ರೈತರ, ದಲಿತ, ಕಾರ್ಮಿಕ, ಜನಪರ ಸಂಘಟನೆಗಳ ‘ಐಕ್ಯ ಹೋರಾಟ’ ವತಿಯಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಪ್ರತಿಭಟನಾಕಾರರು ರಾಜಭವನ ಮುತ್ತಿಗೆ ಹಾಕಲಿದ್ದಾರೆ.

ಕರಾಳ ಕಾನೂನುಗಳ ವಿರುದ್ದ ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ದೌರ್ಜನ್ಯ ವಿರೋಧಿಸಿ ’ಐಕ್ಯ ಹೋರಾಟ’ ವೇದಿಕೆಯ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದೆ.


ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...