Homeಚಳವಳಿಬಾಗಲಕೋಟೆ ವಕೀಲೆ ಮೇಲಿನ ಅಮಾನುಷ ಹಲ್ಲೆಗೆ AILU ಖಂಡನೆ: ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ಒತ್ತಾಯ

ಬಾಗಲಕೋಟೆ ವಕೀಲೆ ಮೇಲಿನ ಅಮಾನುಷ ಹಲ್ಲೆಗೆ AILU ಖಂಡನೆ: ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ಒತ್ತಾಯ

- Advertisement -
- Advertisement -

ಬಾಗಲಕೋಟೆಯ ವಕೀಲೆ ಸಂಗೀತಾ ಶಿಕ್ಕೇರಿ ಮೆಲಿನ ಅಮಾನುಷ ಹಲ್ಲೆಯನ್ನು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ (AILU) ಖಂಡಿಸಿದ್ದು, ವಕೀಲರ ಮೇಲಿನ ಹಲ್ಲೆ ತಡೆಯಲು ರಾಜ್ಯ ಸರ್ಕಾರ ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ತರಬೇಕೆಂದು ಒತ್ತಾಯಿಸಿದೆ.

AILU ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್ ಕುಮಾರ್‌ ಮಾತನಾಡಿ, “ಬಾಗಲಕೋಟೆಯಲ್ಲಿ ವಕೀಲೆಯೊಬ್ಬರ ಮೇಲೆ ಬಿಜೆಪಿ ಬೆಂಬಲಿಗನೊಬ್ಬ ಸಾರ್ವಜನಿಕವಾಗಿ ಹಲ್ಲೆ ಮಾಡಿರುವುದನ್ನು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ತೀವ್ರವಾಗಿ ಖಂಡಿಸುತ್ತದೆ. ಈ ಕೃತ್ಯವನ್ನು ಇಡೀ  ವಕೀಲ ಸಮೂಹ ಖಂಡಿಸಬೇಕು” ಎಂದು ಹೇಳಿದ್ದಾರೆ.

ಇತ್ತೀಚೆಗೆ ವಕೀಲರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ. ಕೆಲವೆಡೆ ಕೊಲೆಗಳು ಸಹ ನಡೆದಿವೆ. ಪ್ರತಿನಿತ್ಯ ಸಾರ್ವಜನಿಕ ಸೇವೆಗಾಗಿ ದುಡಿಯುವ ವಕೀಲರಿಗೆ ಭದ್ರತೆ ಇಲ್ಲವಾಗಿರುವುದು ದುರಂತ. ಹಾಗಾಗಿ ವೈದ್ಯರ ರಕ್ಷಣೆಗೆ ಕಾನೂನು ಇರುವ ಹಾಗೆ ವಕೀಲರ ರಕ್ಷಣೆಗೂ ಸರ್ಕಾರ ಕಾನೂನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆಸ್ತಿ ವಿವಾದದ ಹಲವು ಪ್ರಕರಣಗಳಲ್ಲಿ ಬಡವರು, ಅಶಕ್ತರ ಪರವಾಗಿ ವಕಾಲತ್ತು ವಹಿಸಬಾರದೆಂಬ ಬೆದರಿಕೆಗಳು ಮಾಫಿಯಾಗಳಿಂದ ಬರುತ್ತಿರುತ್ತವೆ. ಆಗ ವಕೀಲುರ ಹಿಂದೆ ಸರಿಯಲು ಸಾಧ್ಯವಿಲ್ಲ. ವಕೀಲರು ಬಡಜನರ ಪರ ವಕಾಲತ್ತು ವಹಿಸಿ ನ್ಯಾಯ ಕೊಡಿಸಿದಾಗ ಹತಾಶೆಯಿಂದ ಮಾಫಿಯಾಗಳು ದಾಳಿ ಮಾಡುವುದುಂಟು. ಹಾಗಾಗಿ ವಕೀಲರ ಮೇಲಿನ ಹಲ್ಲೆಗೆ ಸೂಕ್ತ ಶಿಕ್ಷೆ ಇರುವಂತಹ, ಸಮರ್ಪಕ ಭದ್ರತೆ ಒದಗಿಸುವಂತಹ ಕಾನೂನು ಅಗತ್ಯವಾಗಿದೆ ಎಂದು ಶ್ರೀನಿವಾಸ್ ಕುಮಾರ್‌ ಅಭಿಪ್ರಾಯಪಟ್ಟರು.

ಬಾಗಲಕೋಟೆಯ ಮಹಿಳಾ ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ಮಹಾಂತೇಶ್ ಚೋಳದಗುಡ್ಡ ಎಂಬ ವ್ಯಕ್ತಿ ಸಾರ್ವಜನಿಕರ ಎದುರೆ ಕಾಲಿನಿಂದ ಒದ್ದು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಖಂಡನೆಗಳು ವ್ಯಕ್ತವಾಗಿವೆ.

ಬಿಜೆಪಿ ಮುಖಂಡ ರಾಜು ನಾಯ್ಕರ್ ಎಂಬುವವರ ಕುಮ್ಮಕ್ಕಿನಿಂದ ಬಾಗಲಕೋಟೆಯ ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೋಳದಗುಡ್ಡ ಎಂಬುವವರು ನನ್ನ ಮತ್ತು ನನ್ನ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯಲ್ಲಿ ನನ್ನ ತಲೆ, ಎದೆ ಮತ್ತು ಕಾಲಿಗೆ ಪೆಟ್ಟು ಬಿದ್ದಿದೆ ಎಂದು ಸಂತ್ರಸ್ತ ವಕೀಲೆ ಸಂಗೀತ ಶಿಕ್ಕೇರಿ ಹೇಳಿದ್ದಾರೆ.

ಬಾಗಲಕೋಟೆಯ ವಿನಾಯಕ ನಗರದ ಮೂರನೇ ಕ್ರಾಸ್‌ನಲ್ಲಿ ವಕೀಲೆ ಸಂಗೀತ ಶಿಕ್ಕೇರಿರವರ ಮನೆ ಇದ್ದು, ಅವರ ಕುಟುಂಬದವರಲ್ಲಿ ಮನೆಯ ಯಾರಿಗೆ ಸೇರಬೇಕು ಎಂಬ ವಿವಾದ ಉಂಟಾಗಿ ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು. ಹೀಗಿರುವಾಗಿ ಇಂದು ಬೆಳಿಗ್ಗೆ ಕೆಲವರು ಜೆಸಿಬಿ ತಂದು ಮನೆ ಕೆಡವಲು ಯತ್ನಿಸಲಾಗಿದೆ. ಆ ಸಂದರ್ಭದಲ್ಲಿ ವಕೀಲೆ ಸಂಗೀತಾ ಶಿಕ್ಕೇರಿಯವರು ಪಕ್ಕದ ಮನೆಯವರ ಜೊತೆ ಏಕೆ ಪೊಲೀಸರಿಗೆ ನಮ್ಮ ಮನೆ ತೋರಿಸಿದಿರಿ ಎಂದು ಜಗಳ ಆಡಿದ್ದಾರೆ. ಆ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜು ನಾಯ್ಕರ್ ಎಂಬುವವರ ಕುಮ್ಮಕ್ಕಿನಿಂದ ಮಹಾಂತೇಶ್ ಚೋಳದಗುಡ್ಡ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ವಕೀಲೆ ದೂರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಖಂಡನ ಕುಮ್ಮಕ್ಕು ಆರೋಪ: ಬಾಗಲಕೋಟೆಯಲ್ಲಿ ವಕೀಲೆ ಮೇಲೆ ಅಮಾನುಷ ಹಲ್ಲೆ

ಪ್ರಕರಣ ಕೋರ್ಟ್‌‌ನಲ್ಲಿದ್ದು, ಜಿಲ್ಲಾ ನ್ಯಾಯಾಧೀಶರು ತಡೆಯಾಜ್ಞೆ ನೀಡಿದ್ದರೂ ಸಹ ಕೆಲವರು ಕಾಂಪೌಂಡ್ ಕೆಡವಿದ್ದಾರೆ. ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...