Homeಚಳವಳಿಬಾಗಲಕೋಟೆ ವಕೀಲೆ ಮೇಲಿನ ಅಮಾನುಷ ಹಲ್ಲೆಗೆ AILU ಖಂಡನೆ: ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ಒತ್ತಾಯ

ಬಾಗಲಕೋಟೆ ವಕೀಲೆ ಮೇಲಿನ ಅಮಾನುಷ ಹಲ್ಲೆಗೆ AILU ಖಂಡನೆ: ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ಒತ್ತಾಯ

- Advertisement -
- Advertisement -

ಬಾಗಲಕೋಟೆಯ ವಕೀಲೆ ಸಂಗೀತಾ ಶಿಕ್ಕೇರಿ ಮೆಲಿನ ಅಮಾನುಷ ಹಲ್ಲೆಯನ್ನು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ (AILU) ಖಂಡಿಸಿದ್ದು, ವಕೀಲರ ಮೇಲಿನ ಹಲ್ಲೆ ತಡೆಯಲು ರಾಜ್ಯ ಸರ್ಕಾರ ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ತರಬೇಕೆಂದು ಒತ್ತಾಯಿಸಿದೆ.

AILU ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್ ಕುಮಾರ್‌ ಮಾತನಾಡಿ, “ಬಾಗಲಕೋಟೆಯಲ್ಲಿ ವಕೀಲೆಯೊಬ್ಬರ ಮೇಲೆ ಬಿಜೆಪಿ ಬೆಂಬಲಿಗನೊಬ್ಬ ಸಾರ್ವಜನಿಕವಾಗಿ ಹಲ್ಲೆ ಮಾಡಿರುವುದನ್ನು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ತೀವ್ರವಾಗಿ ಖಂಡಿಸುತ್ತದೆ. ಈ ಕೃತ್ಯವನ್ನು ಇಡೀ  ವಕೀಲ ಸಮೂಹ ಖಂಡಿಸಬೇಕು” ಎಂದು ಹೇಳಿದ್ದಾರೆ.

ಇತ್ತೀಚೆಗೆ ವಕೀಲರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ. ಕೆಲವೆಡೆ ಕೊಲೆಗಳು ಸಹ ನಡೆದಿವೆ. ಪ್ರತಿನಿತ್ಯ ಸಾರ್ವಜನಿಕ ಸೇವೆಗಾಗಿ ದುಡಿಯುವ ವಕೀಲರಿಗೆ ಭದ್ರತೆ ಇಲ್ಲವಾಗಿರುವುದು ದುರಂತ. ಹಾಗಾಗಿ ವೈದ್ಯರ ರಕ್ಷಣೆಗೆ ಕಾನೂನು ಇರುವ ಹಾಗೆ ವಕೀಲರ ರಕ್ಷಣೆಗೂ ಸರ್ಕಾರ ಕಾನೂನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆಸ್ತಿ ವಿವಾದದ ಹಲವು ಪ್ರಕರಣಗಳಲ್ಲಿ ಬಡವರು, ಅಶಕ್ತರ ಪರವಾಗಿ ವಕಾಲತ್ತು ವಹಿಸಬಾರದೆಂಬ ಬೆದರಿಕೆಗಳು ಮಾಫಿಯಾಗಳಿಂದ ಬರುತ್ತಿರುತ್ತವೆ. ಆಗ ವಕೀಲುರ ಹಿಂದೆ ಸರಿಯಲು ಸಾಧ್ಯವಿಲ್ಲ. ವಕೀಲರು ಬಡಜನರ ಪರ ವಕಾಲತ್ತು ವಹಿಸಿ ನ್ಯಾಯ ಕೊಡಿಸಿದಾಗ ಹತಾಶೆಯಿಂದ ಮಾಫಿಯಾಗಳು ದಾಳಿ ಮಾಡುವುದುಂಟು. ಹಾಗಾಗಿ ವಕೀಲರ ಮೇಲಿನ ಹಲ್ಲೆಗೆ ಸೂಕ್ತ ಶಿಕ್ಷೆ ಇರುವಂತಹ, ಸಮರ್ಪಕ ಭದ್ರತೆ ಒದಗಿಸುವಂತಹ ಕಾನೂನು ಅಗತ್ಯವಾಗಿದೆ ಎಂದು ಶ್ರೀನಿವಾಸ್ ಕುಮಾರ್‌ ಅಭಿಪ್ರಾಯಪಟ್ಟರು.

ಬಾಗಲಕೋಟೆಯ ಮಹಿಳಾ ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ಮಹಾಂತೇಶ್ ಚೋಳದಗುಡ್ಡ ಎಂಬ ವ್ಯಕ್ತಿ ಸಾರ್ವಜನಿಕರ ಎದುರೆ ಕಾಲಿನಿಂದ ಒದ್ದು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಖಂಡನೆಗಳು ವ್ಯಕ್ತವಾಗಿವೆ.

ಬಿಜೆಪಿ ಮುಖಂಡ ರಾಜು ನಾಯ್ಕರ್ ಎಂಬುವವರ ಕುಮ್ಮಕ್ಕಿನಿಂದ ಬಾಗಲಕೋಟೆಯ ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೋಳದಗುಡ್ಡ ಎಂಬುವವರು ನನ್ನ ಮತ್ತು ನನ್ನ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯಲ್ಲಿ ನನ್ನ ತಲೆ, ಎದೆ ಮತ್ತು ಕಾಲಿಗೆ ಪೆಟ್ಟು ಬಿದ್ದಿದೆ ಎಂದು ಸಂತ್ರಸ್ತ ವಕೀಲೆ ಸಂಗೀತ ಶಿಕ್ಕೇರಿ ಹೇಳಿದ್ದಾರೆ.

ಬಾಗಲಕೋಟೆಯ ವಿನಾಯಕ ನಗರದ ಮೂರನೇ ಕ್ರಾಸ್‌ನಲ್ಲಿ ವಕೀಲೆ ಸಂಗೀತ ಶಿಕ್ಕೇರಿರವರ ಮನೆ ಇದ್ದು, ಅವರ ಕುಟುಂಬದವರಲ್ಲಿ ಮನೆಯ ಯಾರಿಗೆ ಸೇರಬೇಕು ಎಂಬ ವಿವಾದ ಉಂಟಾಗಿ ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು. ಹೀಗಿರುವಾಗಿ ಇಂದು ಬೆಳಿಗ್ಗೆ ಕೆಲವರು ಜೆಸಿಬಿ ತಂದು ಮನೆ ಕೆಡವಲು ಯತ್ನಿಸಲಾಗಿದೆ. ಆ ಸಂದರ್ಭದಲ್ಲಿ ವಕೀಲೆ ಸಂಗೀತಾ ಶಿಕ್ಕೇರಿಯವರು ಪಕ್ಕದ ಮನೆಯವರ ಜೊತೆ ಏಕೆ ಪೊಲೀಸರಿಗೆ ನಮ್ಮ ಮನೆ ತೋರಿಸಿದಿರಿ ಎಂದು ಜಗಳ ಆಡಿದ್ದಾರೆ. ಆ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜು ನಾಯ್ಕರ್ ಎಂಬುವವರ ಕುಮ್ಮಕ್ಕಿನಿಂದ ಮಹಾಂತೇಶ್ ಚೋಳದಗುಡ್ಡ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ವಕೀಲೆ ದೂರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಖಂಡನ ಕುಮ್ಮಕ್ಕು ಆರೋಪ: ಬಾಗಲಕೋಟೆಯಲ್ಲಿ ವಕೀಲೆ ಮೇಲೆ ಅಮಾನುಷ ಹಲ್ಲೆ

ಪ್ರಕರಣ ಕೋರ್ಟ್‌‌ನಲ್ಲಿದ್ದು, ಜಿಲ್ಲಾ ನ್ಯಾಯಾಧೀಶರು ತಡೆಯಾಜ್ಞೆ ನೀಡಿದ್ದರೂ ಸಹ ಕೆಲವರು ಕಾಂಪೌಂಡ್ ಕೆಡವಿದ್ದಾರೆ. ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...