Homeಚಳವಳಿಬಾಗಲಕೋಟೆ ವಕೀಲೆ ಮೇಲಿನ ಅಮಾನುಷ ಹಲ್ಲೆಗೆ AILU ಖಂಡನೆ: ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ಒತ್ತಾಯ

ಬಾಗಲಕೋಟೆ ವಕೀಲೆ ಮೇಲಿನ ಅಮಾನುಷ ಹಲ್ಲೆಗೆ AILU ಖಂಡನೆ: ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ಒತ್ತಾಯ

- Advertisement -
- Advertisement -

ಬಾಗಲಕೋಟೆಯ ವಕೀಲೆ ಸಂಗೀತಾ ಶಿಕ್ಕೇರಿ ಮೆಲಿನ ಅಮಾನುಷ ಹಲ್ಲೆಯನ್ನು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ (AILU) ಖಂಡಿಸಿದ್ದು, ವಕೀಲರ ಮೇಲಿನ ಹಲ್ಲೆ ತಡೆಯಲು ರಾಜ್ಯ ಸರ್ಕಾರ ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ತರಬೇಕೆಂದು ಒತ್ತಾಯಿಸಿದೆ.

AILU ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್ ಕುಮಾರ್‌ ಮಾತನಾಡಿ, “ಬಾಗಲಕೋಟೆಯಲ್ಲಿ ವಕೀಲೆಯೊಬ್ಬರ ಮೇಲೆ ಬಿಜೆಪಿ ಬೆಂಬಲಿಗನೊಬ್ಬ ಸಾರ್ವಜನಿಕವಾಗಿ ಹಲ್ಲೆ ಮಾಡಿರುವುದನ್ನು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ತೀವ್ರವಾಗಿ ಖಂಡಿಸುತ್ತದೆ. ಈ ಕೃತ್ಯವನ್ನು ಇಡೀ  ವಕೀಲ ಸಮೂಹ ಖಂಡಿಸಬೇಕು” ಎಂದು ಹೇಳಿದ್ದಾರೆ.

ಇತ್ತೀಚೆಗೆ ವಕೀಲರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ. ಕೆಲವೆಡೆ ಕೊಲೆಗಳು ಸಹ ನಡೆದಿವೆ. ಪ್ರತಿನಿತ್ಯ ಸಾರ್ವಜನಿಕ ಸೇವೆಗಾಗಿ ದುಡಿಯುವ ವಕೀಲರಿಗೆ ಭದ್ರತೆ ಇಲ್ಲವಾಗಿರುವುದು ದುರಂತ. ಹಾಗಾಗಿ ವೈದ್ಯರ ರಕ್ಷಣೆಗೆ ಕಾನೂನು ಇರುವ ಹಾಗೆ ವಕೀಲರ ರಕ್ಷಣೆಗೂ ಸರ್ಕಾರ ಕಾನೂನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆಸ್ತಿ ವಿವಾದದ ಹಲವು ಪ್ರಕರಣಗಳಲ್ಲಿ ಬಡವರು, ಅಶಕ್ತರ ಪರವಾಗಿ ವಕಾಲತ್ತು ವಹಿಸಬಾರದೆಂಬ ಬೆದರಿಕೆಗಳು ಮಾಫಿಯಾಗಳಿಂದ ಬರುತ್ತಿರುತ್ತವೆ. ಆಗ ವಕೀಲುರ ಹಿಂದೆ ಸರಿಯಲು ಸಾಧ್ಯವಿಲ್ಲ. ವಕೀಲರು ಬಡಜನರ ಪರ ವಕಾಲತ್ತು ವಹಿಸಿ ನ್ಯಾಯ ಕೊಡಿಸಿದಾಗ ಹತಾಶೆಯಿಂದ ಮಾಫಿಯಾಗಳು ದಾಳಿ ಮಾಡುವುದುಂಟು. ಹಾಗಾಗಿ ವಕೀಲರ ಮೇಲಿನ ಹಲ್ಲೆಗೆ ಸೂಕ್ತ ಶಿಕ್ಷೆ ಇರುವಂತಹ, ಸಮರ್ಪಕ ಭದ್ರತೆ ಒದಗಿಸುವಂತಹ ಕಾನೂನು ಅಗತ್ಯವಾಗಿದೆ ಎಂದು ಶ್ರೀನಿವಾಸ್ ಕುಮಾರ್‌ ಅಭಿಪ್ರಾಯಪಟ್ಟರು.

ಬಾಗಲಕೋಟೆಯ ಮಹಿಳಾ ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ಮಹಾಂತೇಶ್ ಚೋಳದಗುಡ್ಡ ಎಂಬ ವ್ಯಕ್ತಿ ಸಾರ್ವಜನಿಕರ ಎದುರೆ ಕಾಲಿನಿಂದ ಒದ್ದು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಖಂಡನೆಗಳು ವ್ಯಕ್ತವಾಗಿವೆ.

ಬಿಜೆಪಿ ಮುಖಂಡ ರಾಜು ನಾಯ್ಕರ್ ಎಂಬುವವರ ಕುಮ್ಮಕ್ಕಿನಿಂದ ಬಾಗಲಕೋಟೆಯ ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೋಳದಗುಡ್ಡ ಎಂಬುವವರು ನನ್ನ ಮತ್ತು ನನ್ನ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯಲ್ಲಿ ನನ್ನ ತಲೆ, ಎದೆ ಮತ್ತು ಕಾಲಿಗೆ ಪೆಟ್ಟು ಬಿದ್ದಿದೆ ಎಂದು ಸಂತ್ರಸ್ತ ವಕೀಲೆ ಸಂಗೀತ ಶಿಕ್ಕೇರಿ ಹೇಳಿದ್ದಾರೆ.

ಬಾಗಲಕೋಟೆಯ ವಿನಾಯಕ ನಗರದ ಮೂರನೇ ಕ್ರಾಸ್‌ನಲ್ಲಿ ವಕೀಲೆ ಸಂಗೀತ ಶಿಕ್ಕೇರಿರವರ ಮನೆ ಇದ್ದು, ಅವರ ಕುಟುಂಬದವರಲ್ಲಿ ಮನೆಯ ಯಾರಿಗೆ ಸೇರಬೇಕು ಎಂಬ ವಿವಾದ ಉಂಟಾಗಿ ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು. ಹೀಗಿರುವಾಗಿ ಇಂದು ಬೆಳಿಗ್ಗೆ ಕೆಲವರು ಜೆಸಿಬಿ ತಂದು ಮನೆ ಕೆಡವಲು ಯತ್ನಿಸಲಾಗಿದೆ. ಆ ಸಂದರ್ಭದಲ್ಲಿ ವಕೀಲೆ ಸಂಗೀತಾ ಶಿಕ್ಕೇರಿಯವರು ಪಕ್ಕದ ಮನೆಯವರ ಜೊತೆ ಏಕೆ ಪೊಲೀಸರಿಗೆ ನಮ್ಮ ಮನೆ ತೋರಿಸಿದಿರಿ ಎಂದು ಜಗಳ ಆಡಿದ್ದಾರೆ. ಆ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜು ನಾಯ್ಕರ್ ಎಂಬುವವರ ಕುಮ್ಮಕ್ಕಿನಿಂದ ಮಹಾಂತೇಶ್ ಚೋಳದಗುಡ್ಡ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ವಕೀಲೆ ದೂರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಖಂಡನ ಕುಮ್ಮಕ್ಕು ಆರೋಪ: ಬಾಗಲಕೋಟೆಯಲ್ಲಿ ವಕೀಲೆ ಮೇಲೆ ಅಮಾನುಷ ಹಲ್ಲೆ

ಪ್ರಕರಣ ಕೋರ್ಟ್‌‌ನಲ್ಲಿದ್ದು, ಜಿಲ್ಲಾ ನ್ಯಾಯಾಧೀಶರು ತಡೆಯಾಜ್ಞೆ ನೀಡಿದ್ದರೂ ಸಹ ಕೆಲವರು ಕಾಂಪೌಂಡ್ ಕೆಡವಿದ್ದಾರೆ. ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...